ಚಿತ್ರದುರ್ಗ: ಮುರುಘಾ ಮಠದ ಡಾ.ಶಿವಮೂರ್ತಿ ಶಿವಶರಣರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣ ಸಂಬಂಧ, ಬಾಲಕಿಯರ ಹೇಳಿಕೆಯನ್ನು ನ್ಯಾಯಾಧೀಶರ ಮುಂದೆ ನಿನ್ನೆ ದಾಖಲಿಸಲಾಗಿತ್ತು. ಈ ಬೆನ್ನಲ್ಲೇ, ಮಾಜಿ ಶಾಸಕ ಎಸ್ ಕೆ ಬಸವರಾಜನ್ ವಿರುದ್ಧದ ರೇಪ್ ಕೇಸ್ ಪ್ರಕರಣದ ತನಿಖೆಯನ್ನು ಪೊಲೀಸರು ಚುರುಕುಗೊಳಿಸಿದ್ದಾರೆ. ಈ ಪ್ರಕರಣದಲ್ಲಿ ಸ್ಥಳ ಮಹಜರ್ ಅನ್ನು ಇಂದು ನಡೆಸಿದ್ದಾರೆ.
BIGG NEWS: ಮಂಡ್ಯದಲ್ಲಿ ‘ ಭಾವೈಕ್ಯತೆಯ ಗಣೇಶ ಪ್ರತಿಷ್ಠಾಪನೆ ‘ : ಮುಸ್ಲಿಮರೇ ‘ಪ್ರಸಾದ ತಯಾರಿಸಿ ಭಕ್ತರಿಗೆ ‘ ವಿತರಣೆ
ಇಂದು ಮುರುಘಾ ಮಠದ ಆಡಳಿತಾಧಿಕಾರಿ ಎಸ್ ಕೆ ಬಸವರಾಜನ್ ವಿರುದ್ಧದ ಅತ್ಯಾಚಾರ ಪ್ರಕರಣ ಸಂಬಂಧ ತನಿಖೆ ಚುರುಕು ಪೆಡದಿದೆ. ತನಿಖಾಧಿಕಾರಿ ಅನಿಲ್ ಕುಮಾರ್ ನೇತೃತ್ವದ ಪೊಲೀಸರ ತಂಡ ಹಾಗೂ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷ ಹಾಗೂ ನ್ಯಾಯಾಧೀಶರಾದಂತ ಬಿ.ವಿ ಗಿರೀಶ್, ತಾಲೂಕು ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿ ಓ ಪರಮೇಶ್ವರ್ ಅವರು, ಮಠದ ವಸತಿ ನಿಲಯಕ್ಕೆ ಭೇಟಿ ನೀಡಿ, ಸ್ಥಳ ಪರಿಶೀಲನೆ ನಡೆಸಿದರು. ಮಾಜಿ ಶಾಸಕ ಎಸ್ ಕೆ ಬಸವರಾಜನ್ ಅತ್ಯಾಚಾರ ನಡೆಸಿದ್ದಾರೆ ಎನ್ನಲಾದಂತ ಸ್ಥಳ ಪರಿಶೀಲನೆ ನಡೆಸಿ, ಮಾಹಿತಿಯನ್ನು ಪಡೆದರು.
ಅಂದಹಾಗೇ ಮುರುಘಾ ಶ್ರೀ ವಿರುದ್ಧ ಪೋಕ್ಸೋ ಕೇಸ್ ದಾಖಲಾಗುತ್ತಿದ್ದರೇ, ಮಠದ ಆಡಾಳಿತಾಧಿಕಾರಿ ಎಸ್ ಕೆ ಬಸವರಾಜನ್ ಹಾಗೂ ಅವರ ಪತ್ನಿ ಸೌಭಾಗ್ಯ ವಿರುದ್ಧ ಮುರುಘಾ ಮಠದ ವಾರ್ಡನ್ ಚಿತ್ರದುರ್ಗ ಗ್ರಾಮಾಂತರ ಠಾಣಗೆ ಲೈಂಗಿಕ ದೌರ್ಜನ್ಯ ವೆಸಗಿದ್ದಾರೆ ಎಂದು ದೂರು ನೀಡಿದ್ದರು. ಈ ದೂರಿನ ಹಿನ್ನಲೆಯಲ್ಲಿ ಎಸ್ ಕೆ ಬಸವರಾಜನ್ ವಿರುದ್ಧ ರೇಪ್ ಕೇಸ್ ದಾಖಲಾಗಿತ್ತು.
BIGG NEWS : ಹಾವೇರಿಯಲ್ಲಿ ಅಕ್ರಮವಾಗಿ ಹಣ ಸಾಗಿಸುತ್ತಿದ್ದ ಖದೀಮರು : 85 ಲಕ್ಷ ಹಣ ಜಪ್ತಿ ಮಾಡಿ ಪೊಲೀಸರು