Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕುದುರೆಮುಖ ಅರಣ್ಯದಿಂದ ಕುಟುಂಬಗಳ ಸ್ಥಳಾಂತರ: ಸಚಿವ ಈಶ್ವರ ಖಂಡ್ರೆ

10/12/2025 6:36 PM

ತುಮಕೂರು ಬಳಿ ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

10/12/2025 6:27 PM

BREAKING: ‘ಧರ್ಮಸ್ಥಳ ಷಡ್ಯಂತ್ರ’ ಕೇಸ್: ರಾಜ್ಯದ ಪ್ರಭಾವಿ ಸ್ವಾಮೀಜಿ ಭೇಟಿಯಾಗಿದ್ದ ‘ಬುರುಡೆ ಗ್ಯಾಂಗ್’

10/12/2025 6:20 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆ ವೈದ್ಯರಿಂದ ಅಪರೂಪದ ಪೂರ್ವಭಾವಿ ಕಿಡ್ನಿ ಕಸಿ: 14 ವರ್ಷದ ಯೆಮೆನ್ ಬಾಲಕನಿಗೆ ಮರುಜೀವ
KARNATAKA

ಬೆಂಗಳೂರಿನ ಸ್ಪರ್ಶ್‌ ಆಸ್ಪತ್ರೆ ವೈದ್ಯರಿಂದ ಅಪರೂಪದ ಪೂರ್ವಭಾವಿ ಕಿಡ್ನಿ ಕಸಿ: 14 ವರ್ಷದ ಯೆಮೆನ್ ಬಾಲಕನಿಗೆ ಮರುಜೀವ

By kannadanewsnow0917/11/2025 2:48 PM

ಬೆಂಗಳೂರು : ತೀವ್ರ ಆಯಾಸ, ಕುಂಠಿತ ಬೆಳವಣಿಗೆ ಮತ್ತು ಪುನರಾವರ್ತಿತ ಮೂತ್ರದ ಸೋಂಕಿನ ಲಕ್ಷಣಗಳನ್ನು ಹೊಂದಿದ್ದ ಯೆಮೆನ್‌ನ 14 ವರ್ಷದ ಬಾಲಕನೊಬ್ಬನಿಗೆ ಅತ್ಯಂತ ಸಂಕೀರ್ಣವಾಗಿದ್ದ ಆರೋಗ್ಯ ಸ್ಥಿತಿ ನಡುವೆಯೂ ಸ್ಪರ್ಶ್‌ ಯಶವಂತಪುರ ಆಸ್ಪತ್ರೆ ವೈದ್ಯರು ಯಶಸ್ವಿ ಕಿಡ್ನಿ ಕಸಿ ಮಾಡುವ ಮೂಲಕ ಆತನಿಗೆ ಮರು ಜೀವ ಮತ್ತು ಜೀವನವನ್ನು ನೀಡಿದ್ದಾರೆ.

ಬಾಲಕನ ಪರಿಸ್ಥಿತಿಯನ್ನು ಕಂಡು ತೀವ್ರ ಆತಂಕಗೊಳಗಾಗಿದ್ದ ಯೆಮೆನ್‌ ದೇಶದ ಪೋಷಕರು ಕುಟುಂಬದ ಸ್ನೇಹಿತರೊಬ್ಬರ ಸಲಹೆಯ ಮೇರೆಗೆ ಸ್ಪರ್ಶ್‌ ಯಶವಂತಪುರ ಆಸ್ಪತ್ರೆಯನ್ನು ಸಂಪರ್ಕಿಸಿದ್ದರು. ವೈದ್ಯಕೀಯ ತನಿಖೆಗಳು ಗಂಭೀರವಾದ ಮೂತ್ರ ಕೋಶ ಸಮಸ್ಯೆ ಇರುವುದನ್ನು ದೃಢಪಡಿಸಿದವು – ವೆಸಿಕೌರೆಟೆರಲ್ ರಿಫ್ಲಕ್ಸ್ (VUR), ಮೂತ್ರವು ಮೂತ್ರಕೋಶದಿಂದ ಮೂತ್ರಪಿಂಡಗಳಿಗೆ ಹಿಮ್ಮುಖವಾಗಿ ಹರಿಯುವ ಸ್ಥಿತಿ, ಇದಾಗಿದ್ದು ಸುಧಾರಿಸಲಾಗದ ಮೂತ್ರಪಿಂಡದ ಹಾನಿಗೆ ಕಾರಣವಾಗುತ್ತದೆ.

ಸ್ಪರ್ಶ್‌ ಆಸ್ಪತ್ರೆಗೆ ಬಾಲಕನನ್ನು ಚಿಕಿತ್ಸೆಗೆಂದು ಕರೆ ತಂದ ಸಂದರ್ಭದಲ್ಲಿ ಆತನ ಪರಿಸ್ಥಿತಿ ಅತ್ಯಂತ ಕ್ಲಿಷ್ಟಕರವಾಗಿತ್ತು. ವೈದ್ಯರಿಗೆ ಈತನಿಗೆ ಚಿಕಿತ್ಸೆ ನೀಡುವುದೇ ಬಹುದೊಡ್ಡ ಸವಾಲಾಗಿತ್ತು. ಮೂತ್ರ ಪಿಂಡ ಕಸಿ ಹೊರತಾಗಿ ಅನ್ಯ ಮಾರ್ಗಗಳಿರಲಿಲ್ಲ. ಇಂಗ್ಲಿಷ್‌ ಭಾಷೆಯನ್ನೂ ಅರಿಯದ ಈ ಯೆಮೆನಿ ಕುಟುಂಬಕ್ಕೆ ಪರಿಸ್ಥಿತಿಯ ಗಂಭೀರತೆಯನ್ನು ಅರ್ಥ ಮಾಡಿಕೊಡುವುದೂ ಕೂಡಾ ಅತ್ಯಂತ ದೊಡ್ಡ ಸವಾಲಾಗಿತ್ತು. ಈ ಸಂದರ್ಭದಲ್ಲಿ ಸಮಾನಾಂತರ ಭಾಷಾಂತರಕಾರರ ಸಹಾಯದೊಂದಿಗೆ ಪರಿಸ್ಥಿತಿಯನ್ನು ಕುರಿತು ತಿಳುವಳಿಕೆ ಮೂಡಿಸಿದ ವೈದ್ಯರು ಚಿಕಿತ್ಸೆ ಆರಂಭಿಸಿದರು.

ದೀರ್ಘಾವಧಿಯ ವೆಸಿಕೌರೆಟೆರಲ್ ರಿಫ್ಲಕ್ಸ್ (VUR)ನಿಂದಾಗಿ ಬಾಲಕನ ಕಿಡ್ನಿಗಳೆರಡೂ ವಿಫಲವಾಗಿರುವುದು ಮೊದಲಿಗೆ ಪತ್ತೆ ಮಾಡಿದ ವೈದ್ಯರು ಸಂಕೀರ್ಣವಾದ ಶಸ್ತ್ರ ಚಿಕಿತ್ಸೆಗೆ ತಜ್ಞ ಶಸ್ತ್ರ ಚಿಕಿತ್ಸಕರು ಮತ್ತು ವೈದ್ಯರ ತಂಡ ರಚಿಸಿ ಮೂತ್ರ ಪಿಂಡ ಕಸಿಗೆ ಮುಂದಾದರು. ಆದರೆ ಮೂತ್ರ ಪಿಂಡ ಕಸಿ ಅಷ್ಟು ಸುಲಭವಾಗಿರಲಿಲ್ಲ. ಸ್ವತ: ಬಾಲಕನ ತಾಯಿಯೇ (೩೯ ವರ್ಷ) ಮೂತ್ರ ಪಿಂಡ ದಾನಕ್ಕೆ ಮುಂದಾದರೂ ಅವರು ಈಗಾಗಲೇ ಬೆನ್ನು ಮೂಳೆಯ ಗಂಭೀರ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದುದರಿಂದ ಅವರ ಕಿಡ್ನಿಗಳನ್ನು ತೆಗೆದು ಕಸಿ ಮಾಡುವುದೂ ಕೂಡ ಬಹುದೊಡ್ಡ ಸವಾಲಾಗಿತ್ತು.

“ಇದೊಂದು ಅತ್ಯಂತ ಕಠಿಣ ಸವಾಲಾಗಿತ್ತು. ಬಾಲಕನ ಕ್ಷೀಣಗೊಂಡ ಬೆಳವಣಿಗೆ, ಮೂಳೆಗಳ ಅಸಹಜ ಬೆಳವಣಿಗೆಯಿಂದಾದ ವೈಕಲ್ಯಗಳು ಜೊತೆಗೆ ಕಿಡ್ನಿ ದಾನಿಯು ಮೊದಲೇ ಒಳಗಾಗಿದ್ದ ಶಸ್ತ್ರ ಚಿಕಿತ್ಸೆ ಮೊದಲಾದ ಬಹು ಹಂತದ ಸವಾಲುಗಳನ್ನು ಎದುರಿಸಬೇಕಾಗಿತ್ತು. ಡಯಾಲಿಸಿಸ್‌ಗೂ ಮುನ್ನ ಕಸಿ ಮಾಡುವ ನಮ್ಮ ನಿರ್ಧಾರವು ಬಾಲಕನು ಶೀಘ್ರ ಸಹಜ ಸ್ಥಿತಿಗೆ ಮರಳುವುದರ ಜೊತೆಗೆ ಬಾಲಕನ ಮುಂದಿನ ದಿನಗಳಲ್ಲಿ ಎಲ್ಲರಂತೆ ಕಾರ್ಯ ಚಟುವಟಿಕೆಗಳನ್ನು ನಡೆಸಲು ಸಾಧ್ಯವಾಗುವಂತೆ ಮಾಡಿತು” ಎಂದು ಹಿರಿಯ ಮೂತ್ರಪಿಂಡ ಶಾಸ್ತ್ರಜ್ಞ ಮತ್ತು ಕಿಡ್ನಿ ಕಸಿ ಚಿಕಿತ್ಸಕ ಡಾ.ಅರುಣ್‌ ಕುಮಾರ್‌ ಎನ್‌ ತಿಳಿಸಿದರು. ಹಿರಿಯ ಸಮಾಲೋಚಕ ಮತ್ತು ಶಸ್ತ್ರ ಚಿಕಿತ್ಸಕ ಮೂತ್ರ ಕೋಶ ಮತ್ತು ಮೂತ್ರಪಿಂಡ ಕಸಿ ತಜ್ಞ ಡಾ. ಪ್ರಶಾಂತ್‌ ಗಣೇಶ್‌ ಈ ಕ್ಲಿಷ್ಟಕರವಾದ ಶಸ್ತ್ರಚಿಕಿತ್ಸೆ ನಡೆಸಿದ್ದರು.

ರಸ್ತೆ ಅಗಲೀಕರಣ ಕಾಮಗಾರಿ ಹಿನ್ನಲೆ: ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ‘ವಿದ್ಯುತ್ ವ್ಯತ್ಯಯ’ | Power Cut

BIG BREAKING: ಬಾಂಗ್ಲಾದ ಮಾಜಿ ಪ್ರಧಾನಿ ಶೇಖ್ ಹಸೀನಾಗೆ ಗಲ್ಲು ಶಿಕ್ಷೆ | Sheikh Hasina Verdict

Share. Facebook Twitter LinkedIn WhatsApp Email

Related Posts

ಕುದುರೆಮುಖ ಅರಣ್ಯದಿಂದ ಕುಟುಂಬಗಳ ಸ್ಥಳಾಂತರ: ಸಚಿವ ಈಶ್ವರ ಖಂಡ್ರೆ

10/12/2025 6:36 PM1 Min Read

ತುಮಕೂರು ಬಳಿ ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

10/12/2025 6:27 PM3 Mins Read

BREAKING: ‘ಧರ್ಮಸ್ಥಳ ಷಡ್ಯಂತ್ರ’ ಕೇಸ್: ರಾಜ್ಯದ ಪ್ರಭಾವಿ ಸ್ವಾಮೀಜಿ ಭೇಟಿಯಾಗಿದ್ದ ‘ಬುರುಡೆ ಗ್ಯಾಂಗ್’

10/12/2025 6:20 PM1 Min Read
Recent News

ಕುದುರೆಮುಖ ಅರಣ್ಯದಿಂದ ಕುಟುಂಬಗಳ ಸ್ಥಳಾಂತರ: ಸಚಿವ ಈಶ್ವರ ಖಂಡ್ರೆ

10/12/2025 6:36 PM

ತುಮಕೂರು ಬಳಿ ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

10/12/2025 6:27 PM

BREAKING: ‘ಧರ್ಮಸ್ಥಳ ಷಡ್ಯಂತ್ರ’ ಕೇಸ್: ರಾಜ್ಯದ ಪ್ರಭಾವಿ ಸ್ವಾಮೀಜಿ ಭೇಟಿಯಾಗಿದ್ದ ‘ಬುರುಡೆ ಗ್ಯಾಂಗ್’

10/12/2025 6:20 PM

ಬ್ಯಾಂಕು-ವಿಮಾ ಕಂಪನಿಗಳಲ್ಲಿ ಹಕ್ಕುದಾರರೇ ಇಲ್ಲದೆ ಲಕ್ಷ ಕೋಟಿ ಹಣ ಉಳಿದಿದೆ ; ಸ್ವತಃ ‘ಪ್ರಧಾನಿ ಮೋದಿ’ಯಿಂದ ಈ ಮನವಿ!

10/12/2025 6:14 PM
State News
KARNATAKA

ಕುದುರೆಮುಖ ಅರಣ್ಯದಿಂದ ಕುಟುಂಬಗಳ ಸ್ಥಳಾಂತರ: ಸಚಿವ ಈಶ್ವರ ಖಂಡ್ರೆ

By kannadanewsnow0910/12/2025 6:36 PM KARNATAKA 1 Min Read

ಬೆಳಗಾವಿ ಸುವರ್ಣ ವಿಧಾನಸೌಧ : ಕುದುರೆಮುಖ ರಾಷ್ಟ್ರೀಯ ಉದ್ಯಾನ ವನದೊಳಗೆ ನೆಲೆಸಿರುವ 1382 ಕುಟುಂಬಗಳ ಪೈಕಿ 670 ಕುಟುಂಬಗಳು ಸ್ವಯಂ…

ತುಮಕೂರು ಬಳಿ ರೈಲ್ವೆ ಕಾಮಗಾರಿ ಹಿನ್ನಲೆ: ಈ ರೈಲುಗಳ ಸಂಚಾರ ರದ್ದು, ಮಾರ್ಗ ಬದಲಾವಣೆ, ನಿಯಂತ್ರಣ

10/12/2025 6:27 PM

BREAKING: ‘ಧರ್ಮಸ್ಥಳ ಷಡ್ಯಂತ್ರ’ ಕೇಸ್: ರಾಜ್ಯದ ಪ್ರಭಾವಿ ಸ್ವಾಮೀಜಿ ಭೇಟಿಯಾಗಿದ್ದ ‘ಬುರುಡೆ ಗ್ಯಾಂಗ್’

10/12/2025 6:20 PM

BREAKING: ಸಾಗರದ ‘ಮಾರಿಕಾಂಬ ದೇವಿ ನ್ಯಾಸ ಪ್ರತಿಷ್ಠಾನ’ದ ಚುನಾವಣೆಗೆ ನೀಡಿದ್ದ ತಡೆಯಾಜ್ಞೆ ಹೈಕೋರ್ಟ್ ತೆರವು

10/12/2025 6:12 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.