Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್

07/07/2025 2:41 PM

ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

07/07/2025 2:35 PM

BIG NEWS: ಆರ್ಥಿಕ ಸ್ಥಿತಿ ಸುಧಾರಣೆಯಾದ್ರೆ ಗಂಡಸರಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ: ಬಸವರಾಜ ರಾಯರೆಡ್ಡಿ

07/07/2025 2:30 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಇಂದು ರಾಜ್ಯಾದ್ಯಂತ ʻರಾಷ್ಟ್ರೀಯ ಲೋಕ ಅದಾಲತ್‌ʼ : ಈ ಸಮಸ್ಯೆಗಳಿಗೆ ಸ್ಥಳದಲ್ಲೇ ಸಿಗಲಿದೆ ಪರಿಹಾರ!
KARNATAKA

ಇಂದು ರಾಜ್ಯಾದ್ಯಂತ ʻರಾಷ್ಟ್ರೀಯ ಲೋಕ ಅದಾಲತ್‌ʼ : ಈ ಸಮಸ್ಯೆಗಳಿಗೆ ಸ್ಥಳದಲ್ಲೇ ಸಿಗಲಿದೆ ಪರಿಹಾರ!

By kannadanewsnow5713/07/2024 6:18 AM

ಬೆಂಗಳೂರು : ರಾಜ್ಯ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ವತಿಯಿಂದ ಜುಲೈ, 13 ರಂದು ರಾಜ್ಯದ ಜಿಲ್ಲೆಯ ವಿವಿಧ ಹಂತದ ಎಲ್ಲಾ ನ್ಯಾಯಾಲಯಗಳಲ್ಲಿ ‘ರಾಷ್ಟ್ರೀಯ ಲೋಕ್ ಅದಾಲತ್’ ನಡೆಯಲಿದೆ.

ಸಾರ್ವಜನಿಕರು ತಮ್ಮ ವ್ಯಾಜ್ಯ ಪೂರ್ವ ಮತ್ತು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳಿಗೆ ತಕ್ಷಣ ಪರಿಹಾರ ಪಡೆದುಕೊಳ್ಳಲು ರಾಷ್ಟ್ರೀಯ ಲೋಕ ಅದಾಲತ್ ಸುವರ್ಣ ಅವಕಾಶವಾಗಿದೆ.

ವ್ಯಾಜ್ಯ ಪೂರ್ವ ಪ್ರಕರಣಗಳು

ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಉದ್ಯೋಗದಲ್ಲಿ ಪುನರ್ ಸ್ಥಾಪಿಸಲ್ಪಡುವ ಪ್ರಕರಣಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ಇತರೆ ಪ್ರಕರಣಗಳು (ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ವೈವಾಹಿಕ ಪ್ರಕರಣಗಳು ಮತ್ತು ಇತರೆ ಸಿವಿಲ್ ಪ್ರಕರಣಗಳು ಮತ್ತಿತರ), ಕರ್ನಾಟಕ ರಿಯಲ್ ಎಸ್ಟೇಟ್ ಪ್ರಾಧಿಕಾರಕ್ಕೆ ಸಂಬಂಧಪಟ್ಟ ಪ್ರಕರಣಗಳು, ಜಿಲ್ಲಾ ಗ್ರಾಹಕರ ವೇದಿಕೆಯಲ್ಲಿನ ಪ್ರಕರಣಗಳು, ಸಾಲ ವಸೂಲಾತಿ ನ್ಯಾಯಾಧೀಕರಣದ ಪ್ರಕರಣಗಳು, ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗ, ಖಾಯಂ ಜನತಾ ನ್ಯಾಯಾಲಯದಲ್ಲಿನ ಪ್ರಕರಣಗಳು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳು

ರಾಜಿಯಾಗಬಲ್ಲ ಅಪರಾಧಿಕ ಪ್ರಕರಣಗಳು, ಚೆಕ್ ಅಮಾನ್ಯದ ಪ್ರಕರಣಗಳು, ಬ್ಯಾಂಕ್ ವಸೂಲಾತಿ ಪ್ರಕರಣಗಳು, ಮೋಟಾರು ಅಪಘಾತ ಪರಿಹಾರ ನ್ಯಾಯಾಧೀಕರಣದ ಪ್ರಕರಣಗಳು, ಕಾರ್ಮಿಕ ವಿವಾದಗಳು, ವಿದ್ಯುತ್ ಹಾಗೂ ನೀರಿನ ಶುಲ್ಕಗಳು, ವೈವಾಹಿಕ ಪ್ರಕರಣಗಳು, ಭೂಸ್ವಾಧೀನ ಪ್ರಕರಣಗಳು, ವೇತನ ಮತ್ತು ಭತ್ಯೆಗಳಿಗೆ ಸಂಬಂಧಿಸಿದ ಸೇವಾ ಪ್ರಕರಣಗಳು ಹಾಗೂ ಪಿಂಚಣಿ ಪ್ರಕರಣಗಳು, ಕಂದಾಯ ಪ್ರಕರಣಗಳು ಹಾಗೂ ರಾಜೀಯಾಗಬಲ್ಲ ಸಿವಿಲ್ ಮತ್ತು ಇತರೆ ಪ್ರಕರಣಗಳು ಇತ್ಯರ್ಥಪಡಿಸಿಕೊಳ್ಳಬಹುದಾಗಿದೆ.

ನ್ಯಾಯಾಲಯದಲ್ಲಿ ಉಭಯ ಪಕ್ಷಕಾರರು ರಾಜೀ ಮಾಡಿಕೊಳ್ಳಲು ಸೂಕ್ತ ಮಾರ್ಗದರ್ಶನ ಮಾಡಲಾಗುವುದು. ಇಬ್ಬರಿಗೂ ಒಪ್ಪಿಗೆಯಾಗುವಂತೆ ಪ್ರಕರಣವು ತೀರ್ಮಾನವಾಗುವುದರಿಂದ ಬಾಂಧವ್ಯವು ಉಳಿದು ವಿವಾದವು ತೀರ್ಮಾನವಾಗುತ್ತದೆ. ನ್ಯಾಯಾಲಯದಲ್ಲಿ ದಾಖಲಾಗದೇ ಇರುವ ಪ್ರಕರಣಗಳನ್ನು ಸಹ ರಾಜೀ ಸಂಧಾನದ ಮೂಲಕ ಬಗೆಹರಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ. ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಂಡಲ್ಲಿ ನ್ಯಾಯಾಲಯಕ್ಕೆ ಪಾವತಿಸಲಾದ ನ್ಯಾಯಾಲಯ ಶುಲ್ಕವನ್ನು ಪೂರ್ಣವಾಗಿ ಮರು ಪಾವತಿಸಲಾಗುವುದು. ಸಂಧಾನಕಾರರು ಸೂಚಿಸುವ ಪರಿಹಾರ ಒಪ್ಪಿಗೆಯಾದಲ್ಲಿ ಮಾತ್ರ ರಾಜೀ ಮಾಡಿಕೊಳ್ಳಬಹುದು. ಕಡಿಮೆ ಖರ್ಚಿನಲ್ಲಿ ಶೀಘ್ರ ತೀರ್ಮಾನಕ್ಕಾಗಿ ಇದೊಂದು ವಿಶೇಷ ಅವಕಾಶವಾಗಿದೆ.

ಪ್ರತಿದಿನ ರಾಜ್ಯದ ಎಲ್ಲಾ ನ್ಯಾಯಾಲಯಗಳಲ್ಲಿ ಹಾಗೂ ಖಾಯಂ ಜನತಾ ನ್ಯಾಯಾಲಯಗಳಲ್ಲಿ ಲೋಕ್ ಅದಾಲತ್‍ಗೆ ಸಂಬಂಧಿಸಿದಂತೆ ಪೂರ್ವಭಾವಿ ಬೈಠಕ್‍ಗಳು ಭೌತಿಕ ಹಾಗೂ ವೀಡಿಯೋ ಕಾನ್ಫೆರೆನ್ಸ್ ಮೂಲಕ ಗೌರವಾನ್ವಿತ ಉಚ್ಛ ನ್ಯಾಯಾಲಯ ಎಸ್‍ಒಪಿ ನಿಯಮಗಳಂತೆ ನಡೆಯುತ್ತದೆ.

ಹೆಚ್ಚಿನ ಮಾಹಿತಿಗೆ ದೂ.ಸಂ.08272-222373, ಟೋಲ್ ಫ್ರೀ ಸಂಖ್ಯೆ 180042590900 ನ್ನು ಸಂಪರ್ಕಿಸಬಹುದು.

'Rashtriya Lok Adalat' to be held across the state today: On-the-spot solution to these problems ಇಂದು ರಾಜ್ಯಾದ್ಯಂತ ʻರಾಷ್ಟ್ರೀಯ ಲೋಕ್ ಅದಾಲತ್ʼ : ಈ ಪ್ರಕರಣಗಳಿಗೆ ಸ್ಥಳದಲ್ಲೇ ಸಿಗಲಿದೆ ಪರಿಹಾರ
Share. Facebook Twitter LinkedIn WhatsApp Email

Related Posts

BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್

07/07/2025 2:41 PM1 Min Read

ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

07/07/2025 2:35 PM3 Mins Read

BIG NEWS: ಆರ್ಥಿಕ ಸ್ಥಿತಿ ಸುಧಾರಣೆಯಾದ್ರೆ ಗಂಡಸರಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ: ಬಸವರಾಜ ರಾಯರೆಡ್ಡಿ

07/07/2025 2:30 PM1 Min Read
Recent News

BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್

07/07/2025 2:41 PM

ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

07/07/2025 2:35 PM

BIG NEWS: ಆರ್ಥಿಕ ಸ್ಥಿತಿ ಸುಧಾರಣೆಯಾದ್ರೆ ಗಂಡಸರಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ: ಬಸವರಾಜ ರಾಯರೆಡ್ಡಿ

07/07/2025 2:30 PM

SHOCKING: ಕಲಬುರ್ಗಿಯಲ್ಲೂ ರೇಣುಕಾಸ್ವಾಮಿ ರೀತಿಯ ಕೊಲೆ: ರಾಘವೇಂದ್ರ ನಾಯಕ್ ಬರ್ಬರ ಹತ್ಯೆ

07/07/2025 2:23 PM
State News
KARNATAKA

BIG NEWS: ರಾಜ್ಯಾಧ್ಯಂತ 200ಕ್ಕೂ ಹೆಚ್ಚು ಅಕ್ರಮ ಬಾಂಗ್ಲಾ ವಲಸಿಗರ ಗಡಿಪಾರ: ಗೃಹ ಸಚಿವ ಡಾ.ಜಿ ಪರಮೇಶ್ವರ್

By kannadanewsnow0907/07/2025 2:41 PM KARNATAKA 1 Min Read

ಬೆಂಗಳೂರು: ಅಕ್ರಮ ಬಾಂಗ್ಲಾ ವಲಸಿಗರನ್ನು ಗಡಿಪಾರು ಮಾಡುವ ಪ್ರಕ್ರಿಯೆ ನಿರಂತರವಾಗಿ ನಡೆಯುತ್ತದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು…

ಸಂವಿಧಾನ ಉಳಿದರೆ ಮಾತ್ರ ಪತ್ರಿಕಾ ಸ್ವಾತಂತ್ರ್ಯವೂ ಉಳಿಯುತ್ತದೆ: ಸಿಎಂ ಮಾಧ್ಯಮ ಸಲಹೆಗಾರ ಕೆ.ವಿ ಪ್ರಭಾಕರ್

07/07/2025 2:35 PM

BIG NEWS: ಆರ್ಥಿಕ ಸ್ಥಿತಿ ಸುಧಾರಣೆಯಾದ್ರೆ ಗಂಡಸರಿಗೂ ‘ಉಚಿತ ಬಸ್ ಪ್ರಯಾಣ’ಕ್ಕೆ ಅವಕಾಶ: ಬಸವರಾಜ ರಾಯರೆಡ್ಡಿ

07/07/2025 2:30 PM

SHOCKING: ಕಲಬುರ್ಗಿಯಲ್ಲೂ ರೇಣುಕಾಸ್ವಾಮಿ ರೀತಿಯ ಕೊಲೆ: ರಾಘವೇಂದ್ರ ನಾಯಕ್ ಬರ್ಬರ ಹತ್ಯೆ

07/07/2025 2:23 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.