ಬಳ್ಳಾರಿ : ಸಾಮಾನ್ಯವಾಗಿ ಮಂಗಳ ಮುಖಿಯರೆಂದರೆ ಸಮಾಜದಲ್ಲಿ ಮೂಗು ಮುರಿಯುವವರೇ ಜಾಸ್ತಿ. ಆದರೆ ಇಲ್ಲೊಬ್ಬ ಮಂಗಳ ಮುಖಿಯರು ಭಿಕ್ಷೆ ಬೇಡಿದ ಹಣದಿಂದ ವಿದ್ಯಾರ್ಥಿಗಳ ಸಮವಸ್ತ್ರಕ್ಕೆ ಬಟ್ಟೆ ಪುಸ್ತಕ ಹಾಗೂ ಇನ್ನಿತರ ಸಾಮಗ್ರಿಗಾಳಿಗೆ ದಾನ ಮಾಡಿ ಇಡೀ ಸಮಾಜಕ್ಕೆ ಮಾದರಿಯಾಗಿದ್ದಾರೆ ಇವರ ಈ ಒಂದು ಸಮಾಜಮುಖಿ ಕಾರ್ಯಕ್ಕೆ ಸಿಎಂ ಸಿದ್ದರಾಮಯ್ಯ ಅವರು ಕೂಡ ಪತ್ರ ಬರೆದು ಅಭಿನಂದಿಸಿದ್ದಾರೆ.
ಹೌದು ಭಿಕ್ಷೆ ಬೇಡಿದ ಹಣವನ್ನು ವಿದ್ಯಾರ್ಥಿಗಳ ಸಮವಸ್ತ್ರಕ್ಕಾಗಿ ದಾನ ಮಾಡಿದ ಕಂಪ್ಲಿ ತಾಲೂಕಿನ ಸುಗ್ಗೇನಹಳ್ಳಿಯ ಮಂಗಳಮುಖಿ ಪಿ.ರಾಜಮ್ಮ ಅವರನ್ನು ಸಿಎಂ ಸಿದ್ದರಾಮಯ್ಯ ಅಭಿನಂದಿಸಿದ್ದಾರೆ.ಈ ಬಗ್ಗೆ ಪತ್ರ ಬರೆದಿರುವ ಸಿಎಂ, ರಾಜಮ್ಮರ ಸಾಮಾಜಿಕ ಕಳಕಳಿ ಅನನ್ಯ, ಅವರು ಎದುರಿಸುವ ಸವಾಲಿನ ನಡುವೆಯೂ ಸೇವೆ ಆದರ್ಶವಾದ್ದು ಎಂದು ಕೊಂಡಾಡಿದ್ದಾರೆ. ಸಮಾಜದಲ್ಲಿ ಸಕಾರಾತ್ಮಕ ಬದಲಾವಣೆಗೆ ರಾಜಮ್ಮ ಅವರ ನಿಸ್ವಾರ್ಥ ಸೇವೆ ಮಾದರಿ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.