Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಹಾಯಧನ.!

11/01/2026 11:15 AM

BREAKING: ಥಿಯೇಟರ್‌ನಲ್ಲಿ ‘ರಾಜಾಸಾಬ್’ ಆರ್ಭಟ: ಅಭಿಮಾನಿಗಳ ಅತಿಯಾದ ಸಂಭ್ರಮಕ್ಕೆ ಹೊತ್ತಿ ಉರಿಯಿತು ಸ್ಕ್ರೀನ್ | Watch video

11/01/2026 11:11 AM

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಮಹಿಳೆಯ ಮೇಲೆ ಗ್ಯಾಂಗ್ ರೇಪ್,ವಿಡಿಯೋ ಹರಿಬಿಟ್ಟು ಬ್ಲ್ಯಾಕ್ ಮೇಲ್.!

11/01/2026 11:03 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ
KARNATAKA

RCB ಸಂಭ್ರಮಾಚರಣೆ ವೇಳೆ ಕಾಲ್ತುಳಿತ; ಡಿಸಿಎಂ DKS ವಿಷಾದ, ಮೃತಪಟ್ಟವರಿಗೆ ಸಂತಾಪ

By kannadanewsnow0904/06/2025 8:50 PM

ಬೆಂಗಳೂರು : “ಈ ದುರ್ಘಟನೆ ಆಗಬಾರದಿತ್ತು ಆಗಿದೆ. ನಾವು ಮುಂಜಾಗೃತಾ ಕ್ರಮವಾಗಿ ಮೆರವಣಿಗೆಯನ್ನು ರದ್ದು ಮಾಡಿದ್ದೆವು. ಈ ದುರ್ಘಟನೆ ನಡೆದಿರುವುದಕ್ಕೆ ವಿಷಾದ ವ್ಯಕ್ತಪಡಿಸುತ್ತೇನೆ. ಮೃತರಿಗೆ ಸಂತಾಪ ಸೂಚಿಸುತ್ತೇನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ ತಿಳಿಸಿದ್ದಾರೆ.

ಬೌರಿಂಗ್ ಅಸ್ಪತ್ರೆಯಲ್ಲಿ ಗಾಯಾಳುಗಳನ್ನು ಭೇಟಿ ಬಳಿಕ ಡಿಸಿಎಂ ಡಿ.ಕೆ. ಶಿವಕುಮಾರ್ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

“ದುರ್ಘಟನೆ ಬಗ್ಗೆ ಪೊಲೀಸ್ ಆಯುಕ್ತರ ಜತೆ ಚರ್ಚೆ ಮಾಡಿದ್ದೇನೆ. ಲಕ್ಷಾಂತರ ಜನ ಸೇರಿದ್ದು, ಕೆಲವರು ಕ್ರೀಡಾಂಗಣದ ಗೇಟ್ ಅನ್ನು ಮುರಿಯುವ ಪ್ರಯತ್ನ ಮಾಡಲಾಗಿದೆ. ಬೌರಿಂಗ್ ಆಸ್ಪತ್ರೆಯಲ್ಲಿ 6 ಜನ ಮೃತಪಟ್ಟಿದ್ದು, 11-12 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಗಾಯಾಳುಗಳು ಅಪಾಯದಿಂದ ಪಾರಾಗಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ. ಜನರು ಆತಂಕಕ್ಕೆ ಒಳಗಾಗದೇ, ಶಾಂತರಾಗಿ ಸಹಕಾರ ನೀಡಬೇಕು. ಆರ್ ಸಿಬಿ ತಂಡದ ಸಂಭ್ರಮಾಚಾರಣೆಯನ್ನು 10 ನಿಮಿಷಕ್ಕೆ ಮೊಟಕುಗೊಳಿಸಲಾಗಿದೆ” ಎಂದು ತಿಳಿಸಿದರು.

“ಮೆಟ್ರೋಗಳಲ್ಲೂ ಜನದಟ್ಟಣೆ ಹೆಚ್ಚಾಗಿದೆ. ಪೊಲೀಸರು ಎಲ್ಲಾ ರೀತಿಯ ಕ್ರಮ ಕೈಗೊಂಡಿದ್ದರು. ಆದರೆ ಅನಿರೀಕ್ಷಿತವಾಗಿ ಜನ ಸೇರಿದ್ದಾರೆ” ಎಂದು ತಿಳಿಸಿದರು.

ವಿರೋಧ ಪಕ್ಷಗಳ ಟೀಕೆ ಬಗ್ಗೆ ಕೇಳಿದಾಗ, “ಅವರ ಆಡಳಿತ ಅವಧಿಯಲ್ಲಿದ್ದ ಪೊಲೀಸರೇ ಈಗಲೂ ಇದ್ದಾರೆ” ಎಂದು ತಿಳಿಸಿದರು.

ಮೃತರಿಗೆ ಸಂತಾಪ

ಎಕ್ಸ್ ಖಾತೆಯಲ್ಲಿ ಸಂತಾಪ ಸೂಚಿಸಿರುವ ಶಿವಕುಮಾರ್ ಅವರು, “ಆರ್‌ಸಿಬಿಯ ಐಪಿಎಲ್ ಗೆಲುವಿನ ಸಂಭ್ರಮಾಚರಣೆಗೆ ಸಾಕ್ಷಿಯಾಗಬೇಕಿದ್ದ ಜನರು ದುರಂತಕ್ಕೆ ಒಳಗಾಗಿ, ಮೃತಪಟ್ಟಿರುವುದು ತೀವ್ರ ನೋವು ಮತ್ತು ಆಘಾತ ತಂದಿದೆ. ಮೃತರಿಗೆ ನನ್ನ ಸಂತಾಪಗಳು. ಅವರ ಕುಟುಂಬಕ್ಕೆ ನನ್ನ ಸಾಂತ್ವನಗಳು.

ಅಭಿಮಾನ ಇರಲಿ, ಆದರೆ ಜೀವಕ್ಕಿಂತ ದೊಡ್ಡದಲ್ಲ. ದಯವಿಟ್ಟು ಎಲ್ಲರೂ ಸುರಕ್ಷಿತವಾಗಿರಿ ಎಂದು ಮನವಿ ಮಾಡಿಕೊಳ್ಳುತ್ತೇನೆ” ಎಂದು ಮನವಿ ಮಾಡಿದರು.

ರಾಜ್ಯಕ್ಕೆ ಹೆಮ್ಮೆ ತಂದ ಆರ್ ಸಿಬಿ ತಂಡಕ್ಕೆ ಜನರ ಪರವಾಗಿ ಅಭಿನಂದನೆಗಳು

ಇದಕ್ಕೂ ಮುನ್ನ ಸದಾಶಿವನಗರ ನಿವಾಸ ಹಾಗೂ ಕನಕಪುರದಲ್ಲಿ ಮಾಧ್ಯಮಗಳು, ಆರ್ ಸಿಬಿ ತಂಡ ಐಪಿಎಲ್ ಟೂರ್ನಿ ಗೆದ್ದಿರುವ ಬಗ್ಗೆ ಕೇಳಿದಾಗ, “ನಮ್ಮ ಆರ್ ಸಿಬಿ ತಂಡ ಐಪಿಎಲ್ ಟೂರ್ನಿಯನ್ನು ಗೆದ್ದಿದ್ದು, ನಮ್ಮ ರಾಜ್ಯಕ್ಕೆ ಹೆಮ್ಮೆ ತಂದಿದ್ದಾರೆ. ರಾಜ್ಯದ ಜನರ ಪರವಾಗಿ ಅವರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತೇನೆ” ಎಂದು ಶುಭಕೋರಿದರು.

“ಕಳೆದ 18 ವರ್ಷಗಳಿಂದ ಆರ್ ಸಿಬಿ ತಂಡ ಈ ಟ್ರೋಫಿ ಗೆಲ್ಲಲು ಬಹಳಷ್ಟು ಪ್ರಯತ್ನ ಮಾಡಿದ್ದರು. ಎಷ್ಟೇ ಕಷ್ಟ ಎದುರಾದರೂ ವಿರಾಟ್ ಕೊಹ್ಲಿ ನಮ್ಮ ತಂಡವನ್ನು ಬಿಡದೇ ತಂಡದ ಕಷ್ಟ ಹಾಗೂ ಸುಖದಲ್ಲಿ ಭಾಗಿಯಾಗಿದ್ದಾರೆ. ಹೀಗಾಗಿ ಇದೊಂದು ವಿಶೇಷ ಸಂದರ್ಭ” ಎಂದು ತಿಳಿಸಿದರು.

ವಿರಾಟ್ ಕೊಹ್ಲಿ ಭಾವುಕರಾದ ಬಗ್ಗೆ ಕೇಳಿದಾಗ, “ಕಣ್ಣೀರು ದುಃಖಕ್ಕೂ ಬರಿತ್ತದೆ, ಸಂತೋಷಕ್ಕೂ ಬರುತ್ತದೆ. ಎಲ್ಲಿ ಶ್ರಮ ಇದೆಯೋ ಅಲ್ಲಿ ಫಲವಿದೆ. ನಾನು ಐಪಿಎಲ್ ಅನ್ನು ನೋಡುತ್ತಾ ಬಂದಿದ್ದೇನೆ. ಫೈನಲ್ ಪಂದ್ಯ ವೀಕ್ಷಿಸಲು ನನ್ನ ಸ್ನೇಹಿತರು ವಿಮಾನ ಟಿಕೆಟ್ ಕೂಡ ಬುಕ್ ಮಾಡಿದ್ದರು. ಆದರೆ ನಾನು ಹೋಗಲು ಆಗಲಿಲ್ಲ” ಎಂದು ತಿಳಿಸಿದರು.

ಸುರಕ್ಷತೆ ದೃಷ್ಟಿಯಿಂದ ಮೆರವಣಿಗೆ ರದ್ದು

ಸರ್ಕಾರದಿಂದ ಸನ್ಮಾನ ಕಾರ್ಯಕ್ರಮದ ಬಗ್ಗೆ ಕೇಳಿದಾಗ, “ಆರ್ ಸಿಬಿ ತಂಡದವರು ತೆರೆದ ವಾಹನದಲ್ಲಿ ಪರೇಡ್ ನಡೆಸಲು ಮನವಿ ಮಾಡಿದ್ದರು. ಆದರೆ ಕಾನೂನು ಸುವ್ಯವಸ್ಥೆ, ತಂಡದ ಆಟಗಾರರು ಹಾಗೂ ಜನರ ಸುರಕ್ಷತೆ ಹಿನ್ನೆಲೆಯಲ್ಲಿ ನಾನು ಹಾಗೂ ಸಿಎಂ ಚರ್ಚೆ ಮಾಡಿದ್ದು ಪೊಲೀಸರು ಮೆರವಣಿಗೆಗೆ ಅನುಮತಿ ನೀಡಿಲ್ಲ” ಎಂದು ತಿಳಿಸಿದರು.

ಪೂರ್ವತಯಾರಿ ಇಲ್ಲದೇ ಹುಡುಗಾಟಿಕೆ ಮಾಡಿದ್ದರಿಂದ ಕಾಲ್ತುಳಿತ ದುರ್ಘಟನೆ: ಬಿವೈ ವಿಜಯೇಂದ್ರ ಕಿಡಿ

ಪಿಎಂ ಕಿಸಾನ್ 20 ನೇ ಕಂತು: ಬಿಡುಗಡೆ ದಿನಾಂಕ, ಫಲಾನುಭವಿ ಪಟ್ಟಿ ಮತ್ತು ಸಂಪೂರ್ಣ ಯೋಜನೆಯ ವಿವರಗಳನ್ನು ಪರಿಶೀಲಿಸಿ | PM kisan

Share. Facebook Twitter LinkedIn WhatsApp Email

Related Posts

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಹಾಯಧನ.!

11/01/2026 11:15 AM1 Min Read

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಮಹಿಳೆಯ ಮೇಲೆ ಗ್ಯಾಂಗ್ ರೇಪ್,ವಿಡಿಯೋ ಹರಿಬಿಟ್ಟು ಬ್ಲ್ಯಾಕ್ ಮೇಲ್.!

11/01/2026 11:03 AM1 Min Read

BIG NEWS : ಸಾರ್ವಜನಿಕರೇ ಗಮನಿಸಿ : `ಸೈಟ್’ ಖರೀದಿಸುವಾಗ ಈ 7 ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ.!

11/01/2026 10:59 AM2 Mins Read
Recent News

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಹಾಯಧನ.!

11/01/2026 11:15 AM

BREAKING: ಥಿಯೇಟರ್‌ನಲ್ಲಿ ‘ರಾಜಾಸಾಬ್’ ಆರ್ಭಟ: ಅಭಿಮಾನಿಗಳ ಅತಿಯಾದ ಸಂಭ್ರಮಕ್ಕೆ ಹೊತ್ತಿ ಉರಿಯಿತು ಸ್ಕ್ರೀನ್ | Watch video

11/01/2026 11:11 AM

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಮಹಿಳೆಯ ಮೇಲೆ ಗ್ಯಾಂಗ್ ರೇಪ್,ವಿಡಿಯೋ ಹರಿಬಿಟ್ಟು ಬ್ಲ್ಯಾಕ್ ಮೇಲ್.!

11/01/2026 11:03 AM

BIG NEWS : ಸಾರ್ವಜನಿಕರೇ ಗಮನಿಸಿ : `ಸೈಟ್’ ಖರೀದಿಸುವಾಗ ಈ 7 ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ.!

11/01/2026 10:59 AM
State News
KARNATAKA

ರಾಜ್ಯದ ಜನತೆಗೆ ಗುಡ್ ನ್ಯೂಸ್ : ಟ್ರ್ಯಾಕ್ಟರ್, ಟ್ಯಾಕ್ಸಿ, ಆಟೋ ರಿಕ್ಷಾ, ಗುಡ್ಸ್ ವಾಹನ ಖರೀದಿಗೆ ಸರ್ಕಾರದಿಂದ ಸಿಗಲಿದೆ 4 ಲಕ್ಷ ರೂ. ಸಹಾಯಧನ.!

By kannadanewsnow5711/01/2026 11:15 AM KARNATAKA 1 Min Read

ಬೆಂಗಳೂರು : ರಾಜ್ಯ ಸರ್ಕಾರವು ಪರಿಶಿಷ್ಟ ಪಂಗಡದ ಯುವಕ / ಯುವತಿಯರಲ್ಲಿ ಸ್ವ-ಉದ್ಯೋಗವನ್ನು ಉತ್ತೇಜಿಸಲು ಸ್ವಾವಲಂಬಿ ಸಾರಥಿ ಯೋಜನೆ ಆರಂಭಿಸಿದ್ದು,…

SHOCKING : ರಾಜ್ಯದಲ್ಲಿ ಮತ್ತೊಂದು `ಪೈಶಾಚಿಕ ಕೃತ್ಯ’ : ಮಹಿಳೆಯ ಮೇಲೆ ಗ್ಯಾಂಗ್ ರೇಪ್,ವಿಡಿಯೋ ಹರಿಬಿಟ್ಟು ಬ್ಲ್ಯಾಕ್ ಮೇಲ್.!

11/01/2026 11:03 AM

BIG NEWS : ಸಾರ್ವಜನಿಕರೇ ಗಮನಿಸಿ : `ಸೈಟ್’ ಖರೀದಿಸುವಾಗ ಈ 7 ದಾಖಲೆಗಳು ಸರಿ ಇದೆಯಾ ಒಮ್ಮೆ ಚೆಕ್ ಮಾಡಿಕೊಳ್ಳಿ.!

11/01/2026 10:59 AM

ವಾರಕ್ಕೆ 3 ಬಾರಿ ಈ ‘ಮ್ಯಾಜಿಕ್ ಗಂಜಿ’ ಕುಡಿದ್ರೆ ಸಾಕು : ಮಧುಮೇಹ -ಬೊಜ್ಜಿಗೆ ಗುಡ್ ಬೈ.!

11/01/2026 10:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.