ಬೆಂಗಳೂರು: ರಾಜ್ಯದ ಕಾನೂನು ವಿಶ್ವವಿದ್ಯಾಲಯಕ್ಕೆ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭಿಸಲಾಗುವುದು. ಕಾನೂನು ವಿಶ್ವವಿದ್ಯಾಲಯದಲ್ಲಿ ಕೋರ್ಸು ಸೀಟುಗಳ ಸಂಖ್ಯೆ 180 ರಿಂದ 300ಕ್ಕೆ ಹೆಚ್ಚಿಸಲು ನಿರ್ಧರಿಸಲಾಗಿದೆ. ಮೂಲಸೌಲಭ್ಯಕ್ಕಾಗಿ ₹ 70 ಕೋಟಿ ಅನುದಾನ ಒದಗಿಸಲು ಅನುಮೋದನೆ ನೀಡಲಾಗಿದೆ. ಇದರಲ್ಲಿ ಆಡಳಿತ ಭವನ, ಗ್ರಂಥಾಲಯ, ಕ್ಯಾಂಟೀನ್, ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣವಾಗಲಿವೆ ಎಂದು ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್ ತಿಳಿಸಿದ್ದಾರೆ.
ನ್ನೂ ಮೊರಾರ್ಜಿ, ಕಿತ್ತೂರು ರಾಣಿ ಚೆನ್ನಮ್ಮ ಸೇರಿ ಸಮಾಜ ಕಲ್ಯಾಣ ಇಲಾಖೆಯ ವಸತಿ ಶಾಲೆಗಳ ಮಕ್ಕಳಿಗೆ ಆಧುನಿಕ ಶಿಕ್ಷಣದ ಸೌಲಭ್ಯ ಕಲ್ಪಿಸಲು ನಿರ್ಧರಿಸಲಾಗಿದೆ. ಪ್ರತಿ ವಸತಿ ಶಾಲೆಯಲ್ಲೂ ಕನಿಷ್ಠ ಒಂದು ಕೊಠಡಿಯನ್ನು ಸ್ಮಾರ್ಟ್ ತರಗತಿಗೆ ಸಜ್ಜುಗೊಳಿಸಲಾಗುವುದು. ವಿಡಿಯೋ, ಆನ್ಲೈನ್ ಆಧಾರಿತ ಪ್ರಾತ್ಯಕ್ಷಿಕೆಗಳ ಮೂಲಕ ಪಾಠಗಳನ್ನು ಕಲಿಸಲು ವ್ಯವಸ್ಥೆ ಮಾಡಲಾಗುವುದು ಎಂದು ಸಮಾಜ ಕಲ್ಯಾಣ ಸಚಿವ ಎಚ್.ಸಿ. ಮಹದೇವಪ್ಪ ತಿಳಿಸಿದ್ದಾರೆ.ಕಾನೂನು ವಿಶ್ವವಿದ್ಯಾಲಯಕ್ಕೆ ಬೋಧಕರು ಮತ್ತು ಬೋಧಕೇತರ ಸಿಬ್ಬಂದಿ ನೇಮಕಾತಿ ಪ್ರಕ್ರಿಯೆ ಶೀಘ್ರದಲ್ಲೇ ಆರಂಭಿ