ಬೆಂಗಳೂರು : ಇಂದಿನಿಂದ ರಾಜ್ಯದಲ್ಲಿ ಓಲಾ ಉಬರ್ ಬೈಕ್ ಟ್ಯಾಕ್ಸಿ ಓಡಾಡದಂತೆ ನಿರ್ಬಂಧ ವಿಧಿಸಲಾಗಿದ್ದು, ಈ ವಿಚಾರವಾಗಿ ಬೈಕ್ ಟ್ಯಾಕ್ಸಿಯ ಅ ಅಸೋಸಿಯೇಷನ್ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಪತ್ರ ಬರೆದು, ಬೈಕ್ ಟ್ಯಾಕ್ಸಿಸ್ವಿಯನ್ನು ನಿಷೇಧ ಮಾಡದಂತೆ ಮನವಿ ಮಾಡಿದೆ.
ಪತ್ರದಲ್ಲಿ ಉದ್ಯೋಗ ಇಲ್ಲದವರು ಬೈಕ್ ಟ್ಯಾಕ್ಸಿ ಚಾಲಕರಾಗಿ ಕೆಲಸ ಮಾಡುತ್ತಿದ್ದಾರೆ. ಕೋವಿಡ್ ನಂತರ ಬೇರೆ ಯಾವುದೇ ಉದ್ಯೋಗ ಸಿಗಲಿಲ್ಲ. ಬೈಕ್ ಟ್ಯಾಕ್ಸಿ ಚಾಲಕರಾಗಿ 1 ಲಕ್ಷಕ್ಕೂ ಹೆಚ್ಚು ಜನರು ದುಡಿಯುತ್ತಿದ್ದಾರೆ. ಏಕಾಏಕಿ ಬೈಕ್ ಟ್ಯಾಕ್ಸಿ ಸೇವೆಯನ್ನು ನಿಷೇಧ ಮಾಡದಂತೆ ಸಿಎಂ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಹೇಗೆ ಪತ್ರ ಬರೆದು ಮನವಿ ಮಾಡಿದ್ದಾರೆ.
ಈ ವಿಚಾರವಾಗಿ ಪರವಾನಿಗೆ, ತರಬೇತಿ ಹಾಗು ನಿಯಮವನ್ನು ಇಲಾಖೆ ರೂಪಿಸಬೇಕಿತ್ತು. ಅದು ಬಿಟ್ಟು ಆದಾಯದ ಮೂಲವನ್ನೇ ನಿಷೇಧಿಸಲು ಇಲಾಖೆ ಹೊರಟಿದೆ. ಬೈಕ್ ಟ್ಯಾಕ್ಸಿ ನಿಷೇಧಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ರಾಹುಲ್ ಗಾಂಧಿ ಅವರಿಗೆ ಬೈಕ್ ಟ್ಯಾಕ್ಸಿ ಅಸೋಸಿಯೇಷನ್ ಅಧ್ಯಕ್ಷರಾಗಿರುವ ಮಹಮ್ಮದ್ ಸಲೀಂ ಮನವಿ ಮಾಡಿದ್ದಾರೆ.