ಬೆಂಗಳೂರು : ನಟ ದರ್ಶನ್ ಗೆ ಜೈಲಿನಲ್ಲಿ ಕನಿಷ್ಠ ಸೌಲಭ್ಯ ಕಲ್ಪಿಸುವ ವಿಚಾರವಾಗಿ 57ನೇ ಸಿಸಿಎಚ್ ಕೋರ್ಟ್ ಗೆ ಕಾನೂನು ಸೇವೆಗಳ ಪ್ರಾಧಿಕಾರ ವರದಿ ಸಲ್ಲಿಸಿದೆ. ಪ್ರಾಧಿಕಾರ ಸದಸ್ಯ ಕಾರ್ಯದರ್ಶಿ ನ್ಯಾ. ವರದರಾಜ ಸಲ್ಲಿಸಿದ ವರದಿಯಲ್ಲಿ ಹಲವು ಮಾಹಿತಿಗಳು ಇದೀಗ ಲಭ್ಯವಾಗಿದೆ.
ನಟ ದರ್ಶನ್ ಪರ ವಕೀಲರು ಎತ್ತಿದ್ದ ಎಲ್ಲಾ ತಕರಾರುಗಳನ್ನು ಪರಿಶೀಲನೆ ಮಾಡಲಾಗಿದೆ. ದರ್ಶನ್ ಬ್ಯಾರಕ್ ನಲ್ಲಿ ಒಂದು ಇಂಡಿಯನ್ ಒಂದು ವೆಸ್ಟರ್ನ್ ಟಾಯ್ಲೆಟ್ ಇದೆ. ದರ್ಶನ್ಗೆ ಹಾಸಿಗೆ ದಿಂಬು ಕೊಟ್ಟಿಲ್ಲವೆಂಬ ಆರೋಪ ವಿಚಾರವಾಗಿ ಕೊಲೆ ಆರೋಪಿ ವಿಚಾರಣಾಧೀನ ಕೈದಿಗೆ ಹಾಸಿಗೆ ದಿಂಬಿಗೆ ಅವಕಾಶವಿಲ್ಲ. ಇತರೆ ಕೈದಿಗಳಂತೆ ಬಿಸಿಲಲ್ಲಿ ದರ್ಶನ್ ನಡೆದಾಡಲು ಬಿಟ್ಟಿಲ್ಲವೆಂಬ ಆರೋಪದ ವಿಚಾರವಾಗಿ ನಿಯಮದಂತೆ 1 ಗಂಟೆ ವಾಕಿಂಗ್ ಆಟವಾಡಲು ಅವಕಾಶ ನೀಡಬಹುದು.
ದರ್ಶನ ಸೆಲೆಬ್ರಿಟಿ ಆಗಿರುವುದರಿಂದ ಓಡಾಡಿದರೆ ಇತರೆ ಕೈದಿಗಳು ಕಿರುಚುತ್ತಾರೆ, ಅಕ್ಕ ಪಕ್ಕದ ಅಪಾರ್ಟ್ಮೆಂಟ್ ಗಳಿಂದ ಫೋಟೋ ತೆಗೆಯುತ್ತಾರೆ ಎಂದು ದರ್ಶನ್ ಪರ ವಕೀಲರ ಆಕ್ಷೇಪಕ್ಕೆ, ಹೊರಗಡೆ ಓಡಾಡಲು ಅವಕಾಶ ನೀಡಬೇಕು ಈ ವೇಳೆ ಟಿವಿ ನೀಡಲ್ಲ ಎಂದು ದರ್ಶನ್ ತಕರಾರು ತೆಗೆದಿದ್ದು, ಟಿವಿ ನೋಡಲು ಕೈದಿಗಳಿಗೆ ಅವಕಾಶ ನೀಡಬಹುದು ಆದರೆ ಪ್ರತಿ ಬ್ಯಾರಕ್ ಗೆ ಟಿವಿ ನೀಡಬೇಕೆಂಬ ನಿಯಮವಿಲ್ಲ.
ಫೋನಿನಲ್ಲಿ ಮಾತನಾಡುವಾಗ ಸ್ಪೀಕರ್ ಆನ್ ಮಾಡಿಸುತ್ತಾರೆ ಎಂದು ತಕರಾರು ಇದ್ದು, ಆರೋಪಿಗಳ ಮೇಲೆ ನಿಗಾ ಇಡುವ ದೃಷ್ಟಿಯಿಂದ ಅವಕಾಶವಿದೆ. ಆರೋಪಿಗಳಿಗೆ ತಿಳಿಸಿ ಫೋನ್ ಕಾಲ್ ರೆಕಾರ್ಡಿಗೆ ಅವಕಾಶವಿದೆ. ಈ ಬಗ್ಗೆ ಜೈಲು ಅಧಿಕಾರಿಗಳು ನಿಯಮ ರೂಪಿಸಿದ್ದಾರೆ. ಬೆಳಕಿಲ್ಲದೆ ಕಾಲಿಗೆ ಫಂಗಸ್ ಬಂದಿದೆ ಎಂದು ದರ್ಶನ್ ಆರೋಪಿಸಿದ್ದರು. ಆದರೆ ಕಾಲಿನಲ್ಲಿ ಯಾವುದೇ ಫಂಗಸ್ ಬಂದಿಲ್ಲ ಹಿಮ್ಮಡಿಯಲ್ಲಿ ಬಿರುಕು ಬಿಟ್ಟಿದೆ ಅಷ್ಟೇ ಈ ಬಗ್ಗೆ ಚರ್ಮರೋಗ ತಜ್ಞೆ ಜ್ಯೋತಿಬಾಯಿ ಪರಿಶೀಲನೆ ಮಾಡಿದ್ದಾರೆ.
ವೈದ್ಯಾಧಿಕಾರಿಗಳು ಎರಡು ದಿನಕ್ಕೊಮ್ಮೆ ಬ್ಯಾರಕ್ ಭೇಟಿ ನೀಡುತ್ತಿದ್ದಾರೆ ದರ್ಶನ್ಗೆ ಫಿಜಿಯೋಥೆರಪಿ ವ್ಯವಸ್ಥೆ ಕಲ್ಪಿಸಲಾಗಿದೆ. ಸೊಳ್ಳೆಬತ್ತಿ, ಕನ್ನಡಿ, ಬಾಚಣಿಗೆ ನೀಡಿಲ್ಲವೆಂದು ಆರೋಪಿಸಿದ್ದು ಸಜಾ ಬಂಧಿಗಳಿಗೆ ಮಾತ್ರ ಇವುಗಳನ್ನು ಕೊಡಬಹುದು ವಿಚಾರಣಾಧೀನ ಕೈದಿಗೆ ಕೊಡಲು ಜೈಲು ನಿಯಮದಲ್ಲಿ ಅವಕಾಶವಿಲ್ಲ. ಜೈಲು ಅಧಿಕಾರಿಗಳು ಕೈಪಿಡಿಯಲ್ಲಿನ ನಿಯಮ ಪಾಲಿಸಿದ್ದಾರೆ ಆದರೆ ಸೂರ್ಯನ ಬೆಳಕಿನಲ್ಲಿ ನಡೆದಾಡುವಂತೆ ವ್ಯವಸ್ಥೆ ಕಲ್ಪಿಸಬೇಕಿದೆ ಎಂದು ವರದಿಯಲ್ಲಿ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾ.ವರದರಾಜ ಅವರು ಉಲ್ಲೇಖಿಸಿದ್ದಾರೆ.