Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ-ಪಾಕ್ ಕದನ ವಿರಾಮ ಒಪ್ಪಂದ ವಿಸ್ತರಣೆ: ವಿಶ್ವಾಸ ವೃದ್ಧಿ ಕ್ರಮ ಮುಂದುವರಿಸಲು ಡಿಜಿಎಂಒ ಒಪ್ಪಿಗೆ

15/05/2025 8:42 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು!

15/05/2025 8:38 PM

BREAKING: ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು ‘ಭಾರತ-ಪಾಕ್ ಡಿಜಿಎಂಒ’ಗಳು ಒಪ್ಪಿಗೆ

15/05/2025 8:33 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಯನಾಡಿನ ಭೂಕುಸಿತ ಸಂತ್ರಸ್ತರಿಗೆ ‘ರಿಲಯನ್ಸ್ ಫೌಂಡೇಷನ್’ ನೆರವು: ಅಗತ್ಯ ವಸ್ತುಗಳನ್ನು ರವಾನೆ
INDIA

ವಯನಾಡಿನ ಭೂಕುಸಿತ ಸಂತ್ರಸ್ತರಿಗೆ ‘ರಿಲಯನ್ಸ್ ಫೌಂಡೇಷನ್’ ನೆರವು: ಅಗತ್ಯ ವಸ್ತುಗಳನ್ನು ರವಾನೆ

By kannadanewsnow0906/08/2024 9:06 PM

ನವದೆಹಲಿ: ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೂ ಕುಸಿತದಿಂದ ಸಂತ್ರಸ್ತರಾದವರಿಗೆ ಸಹಾಯ ಮಾಡಲು ರಿಲಯನ್ಸ್ ಫೌಂಡೇಷನ್ ಮುಂದಾಗಿದೆ. ದುರಂತವನ್ನು ಎದುರಿಸುತ್ತಿರುವ ಜನರಿಗೆ ದೀರ್ಘಾವಧಿಯ ಪರಿಹಾರವನ್ನು ಒದಗಿಸುವುದಕ್ಕೆ ಸ್ಥಳೀಯ ಆಡಳಿತದ ಸಹಯೋಗದೊಂದಿಗೆ ರಿಲಯನ್ಸ್ ಫೌಂಡೇಷನ್ ಯೋಜನೆಯನ್ನು ಮಾಡಿದೆ. ಫೌಂಡೇಷನ್ ನಿಂದ ಸಂತ್ರಸ್ತರಿಗೆ ತಕ್ಷಣದ ಪರಿಹಾರವಾಗಿ ಆಹಾರ ಪದಾರ್ಥಗಳು, ಒಣಹಣ್ಣುಗಳು, ಹಾಲು, ಪಡಿತರ, ಅಡುಗೆ ಪಾತ್ರೆಗಳು, ಕುಡಿಯುವ ನೀರು, ಮೂಲಭೂತ ನೈರ್ಮಲ್ಯ ವಸ್ತುಗಳು, ಟೆಂಟ್‌ಗಳು, ಹಾಸಿಗೆಗಳು, ಸೋಲಾರ್ ಚಾಲಿತ ಸಾಧನಗಳು ಮತ್ತು ಟಾರ್ಚ್‌ಗಳಂತಹ ವಸ್ತುಗಳನ್ನು ಒದಗಿಸುತ್ತಿದೆ.

ಸಂತ್ರಸ್ತ ಕುಟುಂಬಗಳಿಗೆ ಬೀಜಗಳು, ಮೇವು, ಉಪಕರಣಗಳು ಮತ್ತು ವೃತ್ತಿಪರ ತರಬೇತಿಯನ್ನು ನೀಡಲಾಗುವುದು, ಇದರಿಂದ ಅವರ ಜೀವನವು ಮತ್ತೆ ಹಳಿಗೆ ಮರಳುತ್ತದೆ. ಮಕ್ಕಳ ಶಿಕ್ಷಣಕ್ಕೆ ಯಾವುದೇ ಅಡೆತಡೆಗಳು ಆಗದಿರುವಂತೆ ರಿಲಯನ್ಸ್ ಫೌಂಡೇಷನ್ ನಿಂದ ಪುಸ್ತಕಗಳು ಮತ್ತು ಕ್ರೀಡಾ ಸಾಮಗ್ರಿಗಳನ್ನು ಒಳಗೊಂಡಂತೆ ಶಿಕ್ಷಣಕ್ಕೆ ಬೇಕಾದ ಬೆಂಬಲವನ್ನು ನೀಡುತ್ತದೆ. ರಕ್ಷಣಾ ಕಾರ್ಯಕರ್ತರು ಮತ್ತು ವಿಪತ್ತು ನಿರ್ವಹಣಾ ತಂಡಗಳ ಸುಗಮ ಕಾರ್ಯನಿರ್ವಹಣೆಗಾಗಿ ರಿಲಯನ್ಸ್ ಜಿಯೋ ವಿಶೇಷ ಟವರ್‌ಗಳನ್ನು ಸ್ಥಾಪಿಸಿದೆ. ಇದರಿಂದ ಸಂವಹನವನ್ನು ಸುಧಾರಿಸಬಹುದು ಮತ್ತು ವಿಪತ್ತು ನಿರ್ವಹಣೆಯನ್ನು ಸುವ್ಯವಸ್ಥಿತಗೊಳಿಸಬಹುದು. ಮಾನಸಿಕ-ಸಾಮಾಜಿಕ ಆಘಾತದಿಂದ ಪೀಡಿತ ವ್ಯಕ್ತಿಗಳಿಗೆ ರಿಲಯನ್ಸ್ ಫೌಂಡೇಷನ್ ತಜ್ಞರ ಸಹಾಯವನ್ನು ಸಹ ಒದಗಿಸುತ್ತಿದೆ.

ಕೇರಳದಲ್ಲಿ ನಡೆದ ಈ ದುರಂತ ಘಟನೆಯ ಕುರಿತು ರಿಲಯನ್ಸ್ ಫೌಂಡೇಷನ್ ಸಂಸ್ಥಾಪಕಿ ಮತ್ತು ಅಧ್ಯಕ್ಷೆ ನೀತಾ ಅಂಬಾನಿ ಮಾತನಾಡಿ, “ವಯನಾಡಿನ ಜನರ ನೋವು ಮತ್ತು ಭೂಕುಸಿತದಿಂದ ಉಂಟಾದ ಅಪಾರ ನಷ್ಟದಿಂದ ನಾವೂ ದುಃಖಿತರಾಗಿದ್ದೇವೆ. ಈ ದುಃಖದ ಸಮಯದಲ್ಲಿ, ಘಟನೆಯಿಂದ ಬಾಧಿತರಾದ ಪ್ರತಿ ವ್ಯಕ್ತಿ ಮತ್ತು ಕುಟುಂಬದೊಂದಿಗೆ ನಾವಿದ್ದೇವೆ.” ಎಂದಿದ್ದಾರೆ. ಮುಂದುವರಿದು, ನಮ್ಮ ರಿಲಯನ್ಸ್ ಫೌಂಡೇಷನ್ ತಂಡಗಳು ಹಗಲು- ರಾತ್ರಿ ಕೆಲಸ ಮಾಡುತ್ತಿವೆ. ಈ ಕಷ್ಟದ ಸಮಯದಲ್ಲಿ ನಾವು ಕೇರಳದ ಜನರೊಂದಿಗೆ ನಿಲ್ಲುತ್ತೇವೆ ಎಂದು ಹೇಳಿದ್ದಾರೆ.

ಕಂಪನಿ ಹೇಳಿಕೆ ಪ್ರಕಾರ, ಪರಿಹಾರ ಸಾಮಗ್ರಿಗಳೊಂದಿಗೆ ಸಮಸ್ಯೆ ಆದ ಸ್ಥಳದಲ್ಲಿ ರಿಲಯನ್ಸ್ ಫೌಂಡೇಷನ್ ತಂಡಗಳಿವೆ. ರಾಜ್ಯದ ಅಧಿಕಾರಿಗಳು ಮತ್ತು ಸ್ಥಳೀಯ ಆಡಳಿತದೊಂದಿಗೆ ನಿರಂತರ ಚರ್ಚೆ ನಡೆಸಲಾಗುತ್ತಿದೆ. ಪ್ರತಿಯೊಂದು ಕಾರ್ಯವನ್ನು ರಾಜ್ಯ ಸರ್ಕಾರ ಮತ್ತು ಇತರ ವಿಪತ್ತು ನಿರ್ವಹಣಾ ಸಂಸ್ಥೆಗಳ ಸಮನ್ವಯದಲ್ಲಿ ಕಾರ್ಯಗತಗೊಳಿಸಲಾಗುತ್ತಿದೆ. ಇದರಿಂದ ಸಹಾಯವು ಸಮಯಕ್ಕೆ ತಲುಪುತ್ತದೆ. ರಿಲಯನ್ಸ್ ಫೌಂಡೇಷನ್ ದೀರ್ಘಾವಧಿಯಲ್ಲಿ ವಯನಾಡಿನ ಜನರನ್ನು ಬೆಂಬಲಿಸಲು ಬದ್ಧವಾಗಿದೆ.

BREAKING: KPTCL ಇಂಜಿನಿಯರ್ ಶಾಂತಕುಮಾರ ಸ್ವಾಮಿ ವಿರುದ್ಧ ಮಾನನಷ್ಟ ಮೊಕದ್ದಮ್ಮೆ: ಶಾಸಕ ಬೇಳೂರು ಗೋಪಾಲಕೃಷ್ಣ

BREAKING : ದೇಶದಿಂದ ಪರಾರಿಯಾಗಲು ಯತ್ನಿಸಿದ್ದ ಬಾಂಗ್ಲಾದೇಶದ ಮಾಜಿ ‘ಐಟಿ ಸಚಿವ’ ಅರೆಸ್ಟ್

BIG NEWS: ಇಂಜಿನಿಯರ್ ‘ಶಾಂತಕುಮಾರ ಸ್ವಾಮಿ’ಗೆ ಬೆದರಿಕೆ, ಸುಳ್ಳು ಕೇಸ್ ಆರೋಪ: ಸಾಗರ ಶಾಸಕ, DYSP ಹೇಳಿದ್ದೇನು?

Share. Facebook Twitter LinkedIn WhatsApp Email

Related Posts

ಭಾರತ-ಪಾಕ್ ಕದನ ವಿರಾಮ ಒಪ್ಪಂದ ವಿಸ್ತರಣೆ: ವಿಶ್ವಾಸ ವೃದ್ಧಿ ಕ್ರಮ ಮುಂದುವರಿಸಲು ಡಿಜಿಎಂಒ ಒಪ್ಪಿಗೆ

15/05/2025 8:42 PM1 Min Read

BREAKING: ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು ‘ಭಾರತ-ಪಾಕ್ ಡಿಜಿಎಂಒ’ಗಳು ಒಪ್ಪಿಗೆ

15/05/2025 8:33 PM1 Min Read

ಟ್ರಂಪ್ ಆಕ್ಷೇಪಣೆಯ ಹೊರತಾಗಿಯೂ ಭಾರತದಲ್ಲಿ ಐಫೋನ್ ಉತ್ಪಾದನೆ ಹೆಚ್ಚಿಸಲು ಆಪಲ್ ನಿರ್ಧಾರ: ಮೂಲಗಳು | Apple

15/05/2025 8:14 PM2 Mins Read
Recent News

ಭಾರತ-ಪಾಕ್ ಕದನ ವಿರಾಮ ಒಪ್ಪಂದ ವಿಸ್ತರಣೆ: ವಿಶ್ವಾಸ ವೃದ್ಧಿ ಕ್ರಮ ಮುಂದುವರಿಸಲು ಡಿಜಿಎಂಒ ಒಪ್ಪಿಗೆ

15/05/2025 8:42 PM

BREAKING : ಯಾದಗಿರಿಯಲ್ಲಿ ಘೋರ ದುರಂತ : ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು!

15/05/2025 8:38 PM

BREAKING: ವಿಶ್ವಾಸ ವೃದ್ಧಿ ಕ್ರಮಗಳನ್ನು ಮುಂದುವರಿಸಲು ‘ಭಾರತ-ಪಾಕ್ ಡಿಜಿಎಂಒ’ಗಳು ಒಪ್ಪಿಗೆ

15/05/2025 8:33 PM

ಮೇ.17, 23ರಂದು ಬೆಂಗಳೂರಲ್ಲಿ IPL ಪಂದ್ಯಾವಳಿ: ಮಧ್ಯರಾತ್ರಿವರೆಗೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ | Namma Metro

15/05/2025 8:23 PM
State News
KARNATAKA

BREAKING : ಯಾದಗಿರಿಯಲ್ಲಿ ಘೋರ ದುರಂತ : ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವು!

By kannadanewsnow0515/05/2025 8:38 PM KARNATAKA 1 Min Read

ಯಾದಗಿರಿ : ಯಾದಗಿರಿಯಲ್ಲಿ ಘೋರವಾದ ದುರಂತ ಒಂದು ಸಂಭವಿಸಿದ್ದು, ಕಾಲು ಜಾರಿ ಬಾವಿಗೆ ಬಿದ್ದು ಇಬ್ಬರು ಯುವತಿಯರು ಸಾವನಪ್ಪಿರುವ ಘಟನೆ…

ಮೇ.17, 23ರಂದು ಬೆಂಗಳೂರಲ್ಲಿ IPL ಪಂದ್ಯಾವಳಿ: ಮಧ್ಯರಾತ್ರಿವರೆಗೆ ನಮ್ಮ ಮೆಟ್ರೋ ಸೇವೆ ವಿಸ್ತರಣೆ | Namma Metro

15/05/2025 8:23 PM

BREAKING : ಲಕ್ಷದ್ವೀಪಕ್ಕೆ ಹೊರಟಿದ್ದ ಮಂಗಳೂರಿನ ಹಡಗು ಮುಳುಗಡೆ : 6 ಸಿಬ್ಬಂದಿಗಳು ಪ್ರಾಣಾಪಾಯದಿಂದ ಪಾರು

15/05/2025 8:12 PM

ನಿಮ್ಮ ಸ್ವಂತ ಮನೆ ಕೆಲಸ ನಿಂತು ಹೋಗಿದ್ಯಾ? ಹೀಗೆ ಭೂ ವರಾಹ ಸ್ವಾಮಿ ಪೂಜಿಸಿ, ಮುಕ್ತಾಯ ಗ್ಯಾರಂಟಿ

15/05/2025 7:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.