Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ALERT : ರಾತ್ರಿ ವೇಳೆ ಅತಿಯಾಗಿ ಬೆವರುತ್ತಿದ್ದೀರಾ? ಇದು ಈ 7 ಗಂಭೀರ ಕಾಯಿಲೆಗಳ ಮುನ್ಸೂಚನೆಯಾಗಿರಬಹುದು ಎಚ್ಚರ!

SHOCKING : ವಿಜಯಪುರದಲ್ಲಿ ಘೋರ ಕೃತ್ಯ : ಬಾಲಕನ ಮೇಲೆ ದಾಳಿ ಮಾಡಿದಕ್ಕೆ, ಬೀದಿ ನಾಯಿಗಳಿಗೆ ವಿಷ ಹಾಕಿದ ಕಿಡಿಗೇಡಿಗಳು!

BREAKING : ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಪೋಟಕ ಪತ್ತೆ ಕೇಸ್ : ಪ್ರಕರಣ ‘NIA’ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್
BUSINESS

ಈಶಾನ್ಯ ರಾಜ್ಯಗಳಿಗೆ 75 ಸಾವಿರ ಕೋಟಿ ರೂಪಾಯಿ ಹೂಡಿಕೆ ಗುರಿ ನಿಗದಿಪಡಿಸಿದೆ ರಿಲಯನ್ಸ್

By ವಸಂತ ಬಿ ಈಶ್ವರಗೆರೆ

ನವದೆಹಲಿ : ರಿಲಯನ್ಸ್ ಇಂಡಸ್ಟ್ರೀಸ್ ಅಧ್ಯಕ್ಷ ಮುಕೇಶ್ ಅಂಬಾನಿ ಅವರು ಈಶಾನ್ಯ ರಾಜ್ಯಗಳಲ್ಲಿ ತಮ್ಮ ಹೂಡಿಕೆಯನ್ನು 75 ಸಾವಿರ ಕೋಟಿ ರೂಪಾಯಿಗಳಿಗೆ ಹೆಚ್ಚಿಸುವ ಗುರಿಯನ್ನು ಹೊಂದಿದ್ದಾರೆ. ಸದ್ಯಕ್ಕೆ ಕಂಪನಿಯು ಈ ರಾಜ್ಯಗಳಲ್ಲಿ ಸುಮಾರು 30 ಸಾವಿರ ಕೋಟಿ ರೂಪಾಯಿ ಹೂಡಿಕೆಯನ್ನು ಹೊಂದಿದೆ. ಅಂದರೆ, ಮುಂದಿನ ಐದು ವರ್ಷಗಳಲ್ಲಿ, ಈ ರಾಜ್ಯಗಳಲ್ಲಿ ಸುಮಾರು 45 ಸಾವಿರ ಕೋಟಿ ರೂಪಾಯಿಗಳ ಹೊಸ ಹೂಡಿಕೆಯನ್ನು ರಿಲಯನ್ಸ್ ಮಾಡಲಿದೆ. ದೆಹಲಿಯ ಭಾರತ್ ಮಂಟಪದಲ್ಲಿ ನಡೆಯುತ್ತಿರುವ ‘ರೈಸಿಂಗ್ ನಾರ್ಥ್ ಈಸ್ಟ್ ಇನ್ವೆಸ್ಟರ್ಸ್ ಸಮ್ಮಿಟ್’ನಲ್ಲಿ ಮುಕೇಶ್ ಅಂಬಾನಿ ಮಾತನಾಡಿದರು. ಸಶಸ್ತ್ರ ಪಡೆಗಳ ಅಪ್ರತಿಮ ಶೌರ್ಯದಿಂದಾಗಿ ಯಶಸ್ವಿಯಾದ ಆಪರೇಷನ್ ಸಿಂಧೂರ್‌ಗೆ ಪ್ರಧಾನಿ ಮೋದಿ ಮತ್ತು ದೇಶವನ್ನು ಅಭಿನಂದಿಸುವ ಮೂಲಕ ಮುಕೇಶ್ ಅಂಬಾನಿ ತಮ್ಮ ಭಾಷಣವನ್ನು ಪ್ರಾರಂಭಿಸಿದರು.

ಈ ಪ್ರಸ್ತಾವಿತ ಹೂಡಿಕೆಯು 25 ಲಕ್ಷಕ್ಕೂ ಹೆಚ್ಚು ನೇರ ಮತ್ತು ಪರೋಕ್ಷ ಉದ್ಯೋಗಾವಕಾಶ ಸೃಷ್ಟಿಸುತ್ತದೆ ಎಂದು ಅಂಬಾನಿ ಹೇಳಿದರು. ಈಶಾನ್ಯ ರಾಜ್ಯಗಳಲ್ಲಿ 350 ಜೈವಿಕ ಅನಿಲ ಸ್ಥಾವರಗಳನ್ನು ಸ್ಥಾಪಿಸುವ ಬದ್ಧತೆಯನ್ನು ಮುಕೇಶ್ ವ್ಯಕ್ತಪಡಿಸಿದರು. ಜಿಯೋ ಬಗ್ಗೆ ಉಲ್ಲೇಖಿಸಿದ ಮುಕೇಶ್ ಅಂಬಾನಿ, ರಿಲಯನ್ಸ್ ಜಿಯೋದ 5ಜಿ ನೆಟ್‌ವರ್ಕ್ ಈಶಾನ್ಯ ರಾಜ್ಯಗಳ ಜನಸಂಖ್ಯೆಯ ಸುಮಾರು ಶೇಕಡಾ 90ರಷ್ಟನ್ನು ತಲುಪಿದೆ ಎಂದು ಹೇಳಿದರು. 50 ಲಕ್ಷ ಜನರು ಜಿಯೋ 5ಜಿ ನೆಟ್‌ವರ್ಕ್‌ಗೆ ಸಂಪರ್ಕ ಹೊಂದಿದ್ದು, ಈ ವರ್ಷ ಈ ಸಂಖ್ಯೆ ದ್ವಿಗುಣಗೊಳ್ಳಲಿದೆ. ರೈತರ ಆದಾಯವನ್ನು ಹೆಚ್ಚಿಸಲು ರಿಲಯನ್ಸ್ ರೀಟೇಲ್ ನೇರ ಖರೀದಿಯನ್ನು ಪ್ರೋತ್ಸಾಹಿಸುತ್ತದೆ. ಪ್ರಧಾನ ಮಂತ್ರಿಯವರನ್ನು ಈ ಸಂದರ್ಭದಲ್ಲಿ ಶ್ಲಾಘಿಸಿದ ಮುಕೇಶ್ ಅಂಬಾನಿ, ನಿಮ್ಮ ಪ್ರಯತ್ನಗಳಿಂದಾಗಿ ಈಶಾನ್ಯವು ತುದಿಯಿಂದ ಹೊರಬಂದು ಭಾರತದ ಅಭಿವೃದ್ಧಿ ನಕ್ಷೆಯಲ್ಲಿ ಹೊರಹೊಮ್ಮಿದೆ ಎಂದು ಹೇಳಿದರು.

ಆರೋಗ್ಯ ಕ್ಷೇತ್ರದಲ್ಲಿ ರಿಲಯನ್ಸ್ ಫೌಂಡೇಷನ್‌ನ ಕೆಲಸದ ಬಗ್ಗೆ ಮಾಹಿತಿ ನೀಡಿದ ಅವರು, ರಿಲಯನ್ಸ್ ಫೌಂಡೇಷನ್ ಮಣಿಪುರದಲ್ಲಿ 150 ಹಾಸಿಗೆಗಳ ಕ್ಯಾನ್ಸರ್ ಆಸ್ಪತ್ರೆಯನ್ನು ಸ್ಥಾಪಿಸಿದೆ. ಇದರೊಂದಿಗೆ, ಜೀನೋಮಿಕ್ ಡೇಟಾವನ್ನು ಬಳಸಿಕೊಂಡು ಸ್ತನ ಕ್ಯಾನ್ಸರ್ ಆರೈಕೆಯನ್ನು ಮುನ್ನಡೆಸಲು ಫೌಂಡೇಷನ್ ಮಿಜೋರಾಂ ವಿಶ್ವವಿದ್ಯಾಲಯದೊಂದಿಗೆ ಸಹಕರಿಸುತ್ತಿದೆ ಎಂದರು. ಗುವಾಹತಿಯಲ್ಲಿ ಸುಧಾರಿತ ಆನ್ವಿಕ ರೋಗನಿರ್ಣಯ ಮತ್ತು ಸಂಶೋಧನಾ ಪ್ರಯೋಗಾಲಯವನ್ನು ಸ್ಥಾಪಿಸಿದೆ. ಇದು ಭಾರತದಲ್ಲಿ ಅತಿ ದೊಡ್ಡ ಜೀನೋಮ್ ಅನುಕ್ರಮ ಸಾಮರ್ಥ್ಯಗಳೊಂದಿಗೆ ಸಜ್ಜುಗೊಳ್ಳಲಿದೆ. ಈಶಾನ್ಯ ರಾಜ್ಯಗಳಲ್ಲಿ, ರಿಲಯನ್ಸ್ ಫೌಂಡೇಷನ್ ಎಲ್ಲ ಎಂಟು ರಾಜ್ಯಗಳೊಂದಿಗೆ ಒಟ್ಟಾಗಿ ಒಲಿಂಪಿಕ್ ತರಬೇತಿ ಕೇಂದ್ರಗಳನ್ನು ಸ್ಥಾಪಿಸುತ್ತದೆ, ಇಲ್ಲಿಂದ ತರಬೇತಿ ಪಡೆದು ಬರುವ ಯುವಕರು ಒಲಿಂಪಿಕ್ಸ್‌ನಲ್ಲಿ ಪದಕ ವಿಜೇತರಾಗಲು ಸಾಧ್ಯವಾಗುತ್ತದೆ ಎಂದರು.

ಇವರೇನು ಶಾಶ್ವತವಾಗಿ ಅಧಿಕಾರದಲ್ಲಿ ಇರುತ್ತಾರಾ?: ರಾಮನಗರ ಹೆಸರು ಬದಲಿಸಿದ್ದಕ್ಕೆ HDK ಕೆಂಡ

ಉದ್ಯೋಗವಾರ್ತೆ: 51,000 ಅತಿಥಿ ಶಿಕ್ಷಕರ ನೇಮಕಕ್ಕೆ ರಾಜ್ಯ ಸರ್ಕಾರದಿಂದ ಆದೇಶ , ಇಲ್ಲಿದೆ ಸಂಪೂರ್ಣ ಮಾಹಿತಿ..!

Share. Facebook Twitter LinkedIn WhatsApp Email

Related Posts

SHOCKING : ಸಾರ್ವಜನಿಕ ಸ್ಥಳದಲ್ಲೇ ಲೈಂಗಿಕ ಕ್ರಿಯೆಯಲ್ಲಿ ಮುಳುಗಿದ ಜೋಡಿ : ವೀಡಿಯೋ ವೈರಲ್ |WATCH VIDEO

1 Min Read

BREAKING : ಗಂಡನ ಇನ್‌ಸ್ಟಾಗ್ರಾಮ್‌ ಖಾತೆ ಅನ್‌ಫಾಲೋ ಮಾಡಿದ ‘ನಾಗಿಣಿ’ ಮೌನಿ ರಾಯ್ : ಡಿವೋರ್ಸ್ ಹಾದಿಯಲ್ಲಿ ಸ್ಟಾರ್ ಜೋಡಿ?!

2 Mins Read

BREAKING : ವಿದ್ಯಾರ್ಥಿಗಳಿಗೆ ಬಿಗ್ ಶಾಕ್: ಮೇ 3ರಂದು ದೇಶಾದ್ಯಂತ ನಡೆದಿದ್ದ ‘NEET’ ಪರೀಕ್ಷೆ ರದ್ದು!

1 Min Read
Recent News

ALERT : ರಾತ್ರಿ ವೇಳೆ ಅತಿಯಾಗಿ ಬೆವರುತ್ತಿದ್ದೀರಾ? ಇದು ಈ 7 ಗಂಭೀರ ಕಾಯಿಲೆಗಳ ಮುನ್ಸೂಚನೆಯಾಗಿರಬಹುದು ಎಚ್ಚರ!

SHOCKING : ವಿಜಯಪುರದಲ್ಲಿ ಘೋರ ಕೃತ್ಯ : ಬಾಲಕನ ಮೇಲೆ ದಾಳಿ ಮಾಡಿದಕ್ಕೆ, ಬೀದಿ ನಾಯಿಗಳಿಗೆ ವಿಷ ಹಾಕಿದ ಕಿಡಿಗೇಡಿಗಳು!

BREAKING : ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಪೋಟಕ ಪತ್ತೆ ಕೇಸ್ : ಪ್ರಕರಣ ‘NIA’ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

State News
KARNATAKA

ALERT : ರಾತ್ರಿ ವೇಳೆ ಅತಿಯಾಗಿ ಬೆವರುತ್ತಿದ್ದೀರಾ? ಇದು ಈ 7 ಗಂಭೀರ ಕಾಯಿಲೆಗಳ ಮುನ್ಸೂಚನೆಯಾಗಿರಬಹುದು ಎಚ್ಚರ!

By kannadanewsnow57 KARNATAKA 2 Mins Read

ನಮ್ಮ ದೇಹದ ಉಷ್ಣಾಂಶವನ್ನು ಸಮತೋಲನದಲ್ಲಿಡಲು ಬೆವರುವುದು ಅತ್ಯಗತ್ಯ. ಆದರೆ ಯಾವುದೇ ಕಾರಣವಿಲ್ಲದೆ ರಾತ್ರಿಯ ಸಮಯದಲ್ಲಿ ನೀವು ಅತಿಯಾಗಿ ಬೆವರುತ್ತಿದ್ದರೆ, ಅದನ್ನು…

SHOCKING : ವಿಜಯಪುರದಲ್ಲಿ ಘೋರ ಕೃತ್ಯ : ಬಾಲಕನ ಮೇಲೆ ದಾಳಿ ಮಾಡಿದಕ್ಕೆ, ಬೀದಿ ನಾಯಿಗಳಿಗೆ ವಿಷ ಹಾಕಿದ ಕಿಡಿಗೇಡಿಗಳು!

BREAKING : ಮೋದಿ ಸಂಚರಿಸುವ ಮಾರ್ಗದಲ್ಲಿ ಸ್ಪೋಟಕ ಪತ್ತೆ ಕೇಸ್ : ಪ್ರಕರಣ ‘NIA’ ತನಿಖೆಗೆ : ಗೃಹ ಸಚಿವ ಜಿ.ಪರಮೇಶ್ವರ್

ALERT : ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರುವ 5 ಕೆಟ್ಟ ಅಭ್ಯಾಸಗಳಿವು: ಇಂದೇ ಬಿಟ್ಟುಬಿಡಿ | 5 Bad Habits

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.