Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಭಾರತಕ್ಕೆ ವೆನೆಜುವೆಲಾದ ತೈಲ ರಪ್ತು ಮಾಡಲು ಅಮೆರಿಕ ಸರ್ಕಾರದಿಂದ ಗ್ರೀನ್ ಸಿಗ್ನಲ್.!

10/01/2026 8:51 AM

ಯುನೆಸ್ಕೋ ಪ್ರಧಾನ ಕಚೇರಿಯಲ್ಲಿ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಗೆ ಗೌರವ ನಮನ ಸಲ್ಲಿಸಿದ ವಿದೇಶಾಂಗ ಸಚಿವ ಜೈಶಂಕರ್

10/01/2026 8:34 AM

SHOCKING : ಕ್ರಿಕೆಟ್ ಆಡುವಾಗ ಮೈದಾನದಲ್ಲೇ `ಹೃದಯಾಘಾತ’ದಿಂದ ಭಾರತೀಯ ಕ್ರಿಕೆಟಿಗ ಸಾವು.!

10/01/2026 8:33 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ‘ರಿಲಯನ್ಸ್ ಸ್ಮಾರ್ಟ್- ಸ್ಮಾರ್ಟ್ ಬಜಾರ್’ ಗ್ರಾಹಕರಲ್ಲಿ ಭಾರೀ ಹೆಚ್ಚಳ; ಇಲ್ಲಿದೆ ಯಾವ ವಸ್ತುಗಳಿಗೆ ಹೆಚ್ಚಿನ ಬೇಡಿಕೆ
BUSINESS

‘ರಿಲಯನ್ಸ್ ಸ್ಮಾರ್ಟ್- ಸ್ಮಾರ್ಟ್ ಬಜಾರ್’ ಗ್ರಾಹಕರಲ್ಲಿ ಭಾರೀ ಹೆಚ್ಚಳ; ಇಲ್ಲಿದೆ ಯಾವ ವಸ್ತುಗಳಿಗೆ ಹೆಚ್ಚಿನ ಬೇಡಿಕೆ

By kannadanewsnow0924/04/2024 5:05 PM

ಮುಂಬೈ : ರಿಲಯನ್ಸ್ ರೀಟೇಲ್ ನ ಸ್ಮಾರ್ಟ್- ಸ್ಮಾರ್ಟ್ ಬಜಾರ್ ಗೆ ಬರುವಂಥ ಗ್ರಾಹಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿದೆ ಎಂಬ ಅಂಶ ಇತ್ತೀಚಿನ ರಿಲಯನ್ಸ್ ಇಂಡಸ್ಟ್ರೀಸ್ ತ್ರೈಮಾಸಿಕ ಫಲಿತಾಂಶದಿಂದ ತಿಳಿದುಬಂದಿದೆ. ರಿಲಯನ್ಸ್ ರೀಟೇಲ್ ದಿನಸಿ ಮೂಲಕ ಬರುವ ಆದಾಯ ಪ್ರಮಾಣ ಶೇ 31ರಷ್ಟು ಹೆಚ್ಚಾಗಿದೆ. ಸ್ಮಾರ್ಟ್- ಸ್ಮಾರ್ಟ್ ಬಜಾರ್ ನಿಂದ ನಡೆದ ಫುಲ್ ಪೈಸಾ ವಸೂಲ್ ಸೇಲ್ ನಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ಶೇ 21ರಷ್ಟು ಮಾರಾಟ ಹೆಚ್ಚಾಗಿದೆ. ಸಾಮಾನ್ಯವಾಗಿ ದೀಪಾವಳಿ ಸಂದರ್ಭದಲ್ಲಿ ಮಾರಾಟ ಬಹಳ ಹೆಚ್ಚಿರುತ್ತದೆ. ಆದರೆ ಹೋಳಿ ಹಬ್ಬದ ಮುಂಚಿನ ಮಾರಾಟವು ದೀಪಾವಳಿ ಸಂದರ್ಭವನ್ನು ಸಹ ಮೀರಿಸಿದೆ.

ಅಂದ ಹಾಗೆ, ರಿಲಯನ್ಸ್ ಇಂಡಸ್ಟ್ರೀಸ್ ನಿಂದ ನಾಲ್ಕನೇ ತ್ರೈಮಾಸಿಕ ಫಲಿತಾಂಶ ಈಚೆಗಷ್ಟೇ ಹೊರಬಂದಿದ್ದು, ಕಂಪನಿಯ ರೀಟೇಲ್ ವ್ಯವಹಾರದ ಅಂಗವಾದ ರಿಲಯನ್ಸ್ ರೀಟೇಲ್ ಬೆಳವಣಿಗೆ ಬಗ್ಗೆ ಹೂಡಿಕೆದಾರರಲ್ಲಿ ಹಾಗೂ ಗ್ರಾಹಕರಲ್ಲಿ ಕುತೂಹಲ ಮೂಡಿಸುವಂಥ ಬೆಳವಣಿಗೆಗಳು ಕಂಡುಬಂದಿವೆ. ಅವುಗಳ ಅಂಕಿ- ಅಂಶಗಳನ್ನು ನಿಮ್ಮೆದುರು ಇಡಲಾಗುತ್ತಿದೆ. ರಿಲಯನ್ಸ್ ರೀಟೇಲ್ ಇ-ಕಾಮರ್ಸ್ ಪ್ಲಾಟ್ ಫಾರ್ಮ್ ಆದ ಜಿಯೋಮಾರ್ಟ್ ತನ್ನ ಮಾರ್ಕೆಟ್ ಪ್ಲೇಸ್ ಕೊಡುಗೆಗಳನ್ನು ವಿಸ್ತರಿಸಿದ್ದು, ಕಳೆದ ಒಂದು ವರ್ಷದಲ್ಲಿ ಮಾರಾಟಗಾರರ ನೆಲೆ ಶೇ 94ರಷ್ಟು ಹೆಚ್ಚಾಗಿದೆ.

ದಿನಸಿ ವಿಭಾಗದಲ್ಲಿ ಆರ್ಡರ್ ಮೌಲ್ಯವು ಬಹಳ ಆರೋಗ್ಯಪೂರ್ಣವಾಗಿ ಹೆಚ್ಚಾಗಿದೆ. ಕ್ಯಾಟಲಾಗ್ (ಲಭ್ಯ ಇರುವ ವಸ್ತುಗಳ ಪಟ್ಟಿ) ವಿಸ್ತರಣೆಯು ಮುಂದುವರಿದಿದ್ದು, ಇ-ಕಾಮರ್ಸ್ ಪ್ಲಾಟ್ ಫಾರ್ಮ್ ತಿಳಿಸಿರುವಂತೆ, ವರ್ಷದಿಂದ ವರ್ಷಕ್ಕೆ ಆಯ್ಕೆಗಳ ಸಂಖ್ಯೆಯಲ್ಲಿ ಶೇಕಡಾ 32ರಷ್ಟು ಹೆಚ್ಚಾಗಿದೆ. ಸರಾಸರಿ ಆರ್ಡರ್ ಮೌಲ್ಯವು ವರ್ಷದಿಂದ ವರ್ಷಕ್ಕೆ ಶೇಕಡಾ 30ರಷ್ಟು ಹೆಚ್ಚಾಗಿದ್ದು, ಪ್ರತಿ ಆರ್ಡರ್ ಗೆ ಸರಾಸರಿ ಯೂನಿಟ್ ಪ್ರಮಾಣ ವರ್ಷದಿಂದ ವರ್ಷಕ್ಕೆ ಶೇಕಡಾ 37ರಷ್ಟು ಹೆಚ್ಚಾಗಿದೆ. ಎಲೆಕ್ಟ್ರಾನಿಕ್ಸ್, ದಿನಸಿ, ಫ್ಯಾಷನ್ ಈ ವಿಭಾಗದಲ್ಲಿ ಗ್ರಾಹಕರ ಬೇಡಿಕೆ ಹೆಚ್ಚಾಗಿದೆ. ಇನ್ನು ಖರೀದಿ ಆಯ್ಕೆ ಕೂಡ ಬಹಳ ದೊಡ್ಡ ಪ್ರಮಾಣದಲ್ಲಿ ಹೆಚ್ಚಾಗಿದೆ.

‘ಹೋಲಿ ರೆಡಿ’ ಹಾಗೂ ‘ರಿಪಬ್ಲಿಕ್ ಡೇ’ ಇಂಥ ಸಂದರ್ಭದಲ್ಲಿ ಗ್ರಾಹಕರು ಹೆಚ್ಚು ಸಮಯ ಭಾಗಿದ್ದು, ಸೆಷನ್ ಗಳು ಕೂಡ ಜಾಸ್ತಿಯಿದೆ ಮತ್ತು ಗ್ರಾಸ್ ಮರ್ಕಂಡೈಸ್ ವ್ಯಾಲ್ಯೂ ಹೆಚ್ಚಿದೆ. ಖರೀದಿ ಅನುಭವವನ್ನು ಉತ್ತಮಗೊಳಿಸುವುದಕ್ಕಾಗಿ “ಬೈ ಎಗೇಯ್ನ್” ಎಂಬ ಆಯ್ಕೆ ನೀಡಲಾಗಿದ್ದು, ಉತ್ಪನ್ನಗಳಿಗೆ ಗ್ರಾಹಕರು ರೇಟಿಂಗ್ ಸಹ ನೀಡಬಹುದು.

ರಿಲಯನ್ಸ್ ರೀಟೇಲ್ ದಿನಸಿಯ ಹೊಸ ವಾಣಿಜ್ಯ ಸೆಗ್ಮೆಂಟ್ ಗಮನಾರ್ಹವಾದ ಬೆಳವಣಿಗೆಯನ್ನು ದಾಖಲಿಸಿದೆ. ಮೆಟ್ರೋ ಕಿರಾಣಾ ಉತ್ಸವದಂಥ ಉಪಕ್ರಮಗಳು ಇದಕ್ಕೆ ಕೊಡುಗೆ ನೀಡಿವೆ. ಹೋಟೆಲ್-ರೆಸ್ಟೋರೆಂಟ್-ಕೆಫೆ ಈ ಸೆಗ್ಮೆಂಟ್ ನಲ್ಲಿ ಮಾಡಿಕೊಂಡ ಸಾಂಸ್ಥಿಕ ಸಹಭಾಗಿತ್ವವು ವೈವಿಧ್ಯಮಯ ಆದಾಯ ಮೂಲದ ಹರಿವಿಗೆ ಕಾರಣವಾಗಿವೆ.

ರಿಲಯನ್ಸ್ ರೀಟೇಲ್ ಫಲಿತಾಂಶ ಘೋಷಣೆ ವೇಳೆಯೇ ಕಂಪನಿಯ ಸಿಎಫ್ಒ ಆದ ದಿನೇಶ್ ತಲುಜಾ ಅವರು ಗಮನ ಸೆಳೆದ ಅಂಶವೊಂದನ್ನು ಇಲ್ಲಿ ಸ್ಮರಿಸಬೇಕು. ದೇಶದಲ್ಲಿ ನಾವು ತುಂಬ ಆಳವಾಗಿ ಪ್ರಾದೇಶಿಕವಾದ ಮಳಿಗೆಗಳ ಜಾಲವನ್ನು ಕಟ್ಟುತ್ತಿದ್ದೇವೆ ಎಂದು ಹೇಳಿದರು. ರೀಟೇಲ್ ವಿಭಾಗದಲ್ಲಿ ರಿಲಯನ್ಸ್ ಗಟ್ಟಿ ಹೆಜ್ಜೆಗಳನ್ನು ಈ ಮಾತುಗಳು ಪ್ರತಿಬಿಂಬಿಸುತ್ತವೆ.

ರಿಲಯನ್ಸ್ ರೀಟೇಲ್ ನಾಲ್ಕನೇ ತ್ರೈಮಾಸಿಕದಲ್ಲಿ 2,698 ಕೋಟಿ ರೂಪಾಯಿ ನಿವ್ವಳ ಲಾಭ ಗಳಿಸಿದೆ. ಒಂದು ವರ್ಷದ ಹಿಂದಿನ ಅವಧಿಗೆ ಹೋಲಿಸಿದರೆ ಶೇ 11.7ರಷ್ಟು ಹೆಚ್ಚಾಗಿದೆ. 2020ನೇ ಇಸವಿಯಲ್ಲಿ ರಿಲಯನ್ಸ್ ರೀಟೇಲ್ ನ ಇ-ಟೇಲ್ ಅಂಗವಾಗಿ ಜಿಯೋಮಾರ್ಟ್ ಅಸ್ತಿತ್ವಕ್ಕೆ ಬಂತು, ಇದೀಗ ಭಾರತದ ದೇಶೀಯ ಅತಿದೊಡ್ಡ ಇ-ಮಾರ್ಕೆಟ್ ಪ್ಲೇಸ್ ಗಳಲ್ಲಿ ಒಂದು ಎನಿಸಿಕೊಂಡಿದೆ.

‘ಕೊಟಕ್ ಮಹೀಂದ್ರಾ ಬ್ಯಾಂಕ್’ಗೆ ‘ಹೊಸ ಕ್ರೆಡಿಟ್ ಕಾರ್ಡ್’ ನೀಡದಂತೆ ‘RBI ನಿರ್ಬಂಧ’

‘ನಾನು ಆ ರೀತಿ ಹೇಳಿಲ್ಲ’ : ಸಂಪತ್ತಿನ ಮರುಹಂಚಿಕೆ ವಿವಾದದ ಕುರಿತು ‘ರಾಹುಲ್ ಗಾಂಧಿ’ ಸ್ಪಷ್ಟನೆ

Share. Facebook Twitter LinkedIn WhatsApp Email

Related Posts

BREAKING : ಭಾರತಕ್ಕೆ ವೆನೆಜುವೆಲಾದ ತೈಲ ರಪ್ತು ಮಾಡಲು ಅಮೆರಿಕ ಸರ್ಕಾರದಿಂದ ಗ್ರೀನ್ ಸಿಗ್ನಲ್.!

10/01/2026 8:51 AM1 Min Read

ಯುನೆಸ್ಕೋ ಪ್ರಧಾನ ಕಚೇರಿಯಲ್ಲಿ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಗೆ ಗೌರವ ನಮನ ಸಲ್ಲಿಸಿದ ವಿದೇಶಾಂಗ ಸಚಿವ ಜೈಶಂಕರ್

10/01/2026 8:34 AM1 Min Read

SHOCKING : ಕ್ರಿಕೆಟ್ ಆಡುವಾಗ ಮೈದಾನದಲ್ಲೇ `ಹೃದಯಾಘಾತ’ದಿಂದ ಭಾರತೀಯ ಕ್ರಿಕೆಟಿಗ ಸಾವು.!

10/01/2026 8:33 AM1 Min Read
Recent News

BREAKING : ಭಾರತಕ್ಕೆ ವೆನೆಜುವೆಲಾದ ತೈಲ ರಪ್ತು ಮಾಡಲು ಅಮೆರಿಕ ಸರ್ಕಾರದಿಂದ ಗ್ರೀನ್ ಸಿಗ್ನಲ್.!

10/01/2026 8:51 AM

ಯುನೆಸ್ಕೋ ಪ್ರಧಾನ ಕಚೇರಿಯಲ್ಲಿ ಬಾಬಾ ಸಾಹೇಬ್ ಭೀಮರಾವ್ ಅಂಬೇಡ್ಕರ್ ಗೆ ಗೌರವ ನಮನ ಸಲ್ಲಿಸಿದ ವಿದೇಶಾಂಗ ಸಚಿವ ಜೈಶಂಕರ್

10/01/2026 8:34 AM

SHOCKING : ಕ್ರಿಕೆಟ್ ಆಡುವಾಗ ಮೈದಾನದಲ್ಲೇ `ಹೃದಯಾಘಾತ’ದಿಂದ ಭಾರತೀಯ ಕ್ರಿಕೆಟಿಗ ಸಾವು.!

10/01/2026 8:33 AM

ಹೃದಯ ಸ್ಪರ್ಶಿ ವಿಡಿಯೋ: ಜಮ್ಮುವಿನಲ್ಲಿ ಚಳಿ: ಹುತಾತ್ಮ ಮಗನ ಪ್ರತಿಮೆಗೆ ಕಂಬಳಿ ಹೊದಿಸಿದ ತಾಯಿ | Watch video

10/01/2026 8:19 AM
State News
KARNATAKA

SHOCKING : ಉಪನ್ಯಾಸಕನಿಂದ ಅಪಹಾಸ್ಯ : ಬೆಂಗಳೂರಲ್ಲಿ `ಡೆಂಟಲ್ ವಿದ್ಯಾರ್ಥಿನಿ’ ಆತ್ಮಹತ್ಯೆಗೆ ಶರಣು.!

By kannadanewsnow5710/01/2026 8:18 AM KARNATAKA 1 Min Read

ಬೆಂಗಳೂರು : ಬೆಂಗಳೂರಿನಲ್ಲಿ ಕಾಲೇಜು ಆಡಳಿತ ಮಂಡಳಿ ಕಿರುಕುಳಕ್ಕೆ ಬೇಸತ್ತು ಡೆಂಟಲ್ ವಿದ್ಯಾರ್ಥಿನಿ ಆತ್ಮಹತ್ಯೆ ಶರಣಾಗಿರುವ ಘಟನೆ ವರದಿಯಾಗಿದೆ. ಬೆಂಗಳೂರು…

SHOCKING : ಬೆಂಗಳೂರಿನಲ್ಲಿ `ಆಘಾತಕಾರಿ ಕೃತ್ಯ’ : ಹಾಡಹಗಲೇ ಯುವತಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ ‘ಡೆಲಿವರಿ ಬಾಯ್’.!

10/01/2026 7:48 AM

SHOCKING : ಬೆಂಗಳೂರಲ್ಲಿ ಮತ್ತೊಂದು ಆಘಾತಕಾರಿ ಘಟನೆ: `ಡೆಲಿವರಿ ಬಾಯ್’ ಮೇಲೆ ದುಷ್ಕರ್ಮಿಗಳಿಂದ ಹಲ್ಲೆ | Watch Video

10/01/2026 7:34 AM

ALERT : ಪುರುಷರೇ ಗಮನಿಸಿ : 30 ವರ್ಷದ ಮೇಲೆ ತಪ್ಪದೇ ಈ 8 `ಆರೋಗ್ಯ ಪರೀಕ್ಷೆ’ಗಳನ್ನು ಮಾಡಿಸಿಕೊಳ್ಳಲೇಬೇಕು.!

10/01/2026 6:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.