ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಿಂದಾಗಿ ಹಾನಿಯಾಗುತ್ತಿದೆ. ಮನೆ ಹಾನಿ ಸೇರಿದಂತೆ ಇತರೆ ಹಾನಿಗಳಿಗೆ ಪರಿಹಾರ ನೀಡಲು ರಾಜ್ಯ ಸರ್ಕಾರ ಕ್ರಮ ಕೈಗೊಳ್ಳುವುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದರು.
ರಾಜ್ಯದಲ್ಲಿ ಮಳೆಯಿಂದಾಗಿ ಅನಾಹುತಗಳು ನಡೆಯುತ್ತಿದ್ದು, ಈ ಬಗ್ಗೆ ಸರ್ಕಾರದ ಕ್ರಮದ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ, ಮಳೆಯಿಂದಾಗಿ ಸಂಭವಿಸುವ ಅನಾಹುತಗಳಿಗೆ ಪರಿಹಾರ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಇನ್ನು ಮುಂದೆ ಬೆಂಗಳೂರು – ಗ್ರೇಟರ್ ಬೆಂಗಳೂರು ಆಗಲಿದೆ. ಗ್ರೇಟರ್ ಬೆಂಗಳೂರು ಪ್ರದೇಶದಲ್ಲಿ ಕನಿಷ್ಠ ಮೂರು ಪಾಲಿಕೆ ರಚನೆಯಾಗುವ ಸಾಧ್ಯತೆಯಿದೆ. ರಾಜ್ಯದ ಮುಖ್ಯಮಂತ್ರಿಗಳು ಪ್ರಾಧಿಕಾರದ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಲಿದ್ದು, ಮುಂದಿನ ದಿನಗಳಲ್ಲಿ ಈ ಬಗ್ಗೆ ಸೂಕ್ತ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
BIG NEWS : ರಾಜ್ಯದ ʻಆಸ್ತಿʼ ಮಾಲೀಕರಿಗೆ ಗುಡ್ ನ್ಯೂಸ್ : ʻಬಿ-ಖಾತಾʼ ನೀಡುವ ಅವಧಿ 3 ತಿಂಗಳು ವಿಸ್ತರಣೆ.!