Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮಳೆ ಪೀಡಿತ ಪ್ರದೇಶಗಳಲ್ಲಿ ನನ್ನ ಭೇಟಿಗಿಂತ ಪರಿಹಾರ ಕಾರ್ಯ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್
KARNATAKA

ಮಳೆ ಪೀಡಿತ ಪ್ರದೇಶಗಳಲ್ಲಿ ನನ್ನ ಭೇಟಿಗಿಂತ ಪರಿಹಾರ ಕಾರ್ಯ ಮುಖ್ಯ: ಡಿಸಿಎಂ ಡಿ.ಕೆ. ಶಿವಕುಮಾರ್

By kannadanewsnow0922/10/2024 1:45 PM

ಬೆಂಗಳೂರು: “ಕಳೆದ 48 ಗಂಟೆಗಳಿಂದ ನಮ್ಮ ಅಧಿಕಾರಿಗಳ ತಂಡ ಮಳೆ ಪೀಡಿತ ಪ್ರದೇಶಗಳಲ್ಲಿ ನಿರಂತರವಾಗಿ ಪರಿಹಾರ ಕಾರ್ಯದಲ್ಲಿ ನಿರತರಾಗಿದ್ದಾರೆ. ಈಗ ಪರಿಹಾರ ಕಾರ್ಯ ನಡೆಯುವುದು ಮುಖ್ಯವೇ ಹೊರತು, ನಾನು ಸ್ಥಳಕ್ಕೆ ಭೇಟಿ ನೀಡುವುದಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯಿಸಿದರು.

ಬೆಂಗಳೂರಿನಲ್ಲಿ ಮಳೆಯಿಂದ ಹೆಚ್ಚಿನ ಹಾನಿಯಾಗಿದ್ದು, ನೀವು ಹಾನಿಗೊಳಗಾದ ಪ್ರದೇಶಗಳಿಗೆ ಭೇಟಿ ನೀಡುತ್ತಿಲ್ಲ ಎನ್ನುವ ವಿರೋಧ ಪಕ್ಷಗಳ ಆರೋಪದ ಬಗ್ಗೆ ಕೇಳಿದಾಗ, “ನಾನು ಭೇಟಿ ನೀಡುವುದಷ್ಟೇ ಮುಖ್ಯವಲ್ಲ. ಕೆಲಸಗಳು ಆಗಬೇಕು. ನಾನು ಭೇಟಿ ಮಾಡಿದರೆ ಪ್ರಚಾರ ಸಿಗುತ್ತದೆ. ನಮಗೆ ಪ್ರಚಾರ ಮುಖ್ಯವಲ್ಲ. ಇಂತಹ ಪರಿಸ್ಥಿತಿ ಎದುರಿಸುತ್ತಿರುವ ಸ್ಥಳಗಳನ್ನು ಗುರುತಿಸಿ ಶಾಶ್ವತ ಪರಿಹಾರ ನೀಡಲು ನಾವು ಸಮಿತಿ ರಚಿಸಲಾಗಿದೆ. ಆ ಸಮಿತಿ ವರದಿ ನೀಡಲಿದೆ” ಎಂದು ತಿಳಿಸಿದರು.

“ನಾನು ಕೂಡ ಸೋಮವಾರ ಸಂಜೆ ಮಳೆಯಲ್ಲಿ ಸಿಲುಕಿದ್ದೆ. ಚಳ್ಳಕೆರೆಯಿಂದ ಬರುವಾಗ ನೆಲಮಂಗಲದ ಬಳಿ ಸೇತುವೆ ಮೇಲೆ 2 ಅಡಿ ನೀರಿತ್ತು. ನಮ್ಮ ಅಧಿಕಾರಿಗಳು ದಿನದ 24 ಗಂಟೆಗಳ ಕಾಲ ಶ್ರಮಿಸುತ್ತಿದ್ದು, ಕಳೆದ 48 ಗಂಟೆಗಳಿಂದ ಅವರು ಮಳೆ ಪೀಡಿತ ಪ್ರದೇಶಗಳಲ್ಲಿ ಇದ್ದಾರೆ. ಈ ಸಮಯದಲ್ಲಿ ಅವರನ್ನು ಮುಜುಗರಕ್ಕೀಡು ಮಾಡಲು ನನಗೆ ಇಷ್ಟವಿಲ್ಲ” ಎಂದು ತಿಳಿಸಿದರು.

“ಚೌಡೇಶ್ವರಿ ನಗರದಲ್ಲಿ 150 ಎಂಎಂ ಮಳೆಯಾಗಿದೆ. ಇನ್ನು ಕೆಲವು ಕಡೆಗಳಲ್ಲಿ ವಾಡಿಕೆಗಿಂತ ಶೇ 300ರಷ್ಟು ಹೆಚ್ಚಿನ ಮಳೆಯಾಗಿದೆ. ಈ ವಿಚಾರವಾಗಿ ಅಧಿಕಾರಿಗಳು ವರದಿ ನೀಡಿದ್ದಾರೆ. ಕೆಲವು ಪ್ರದೇಶದ ಜನರಿಗೆ ಸ್ಥಳಾಂತರ ಮಾಡಲು ಹೇಳಿದ್ದೇವೆ. ಕೇಂದ್ರಿಯ ವಿದ್ಯಾಲಯ ಹಾಗೂ ಟಾಟಾನಗರದಿಂದ ಸುಮಾರು 600 ಕುಟುಂಬಗಳನ್ನು ಸ್ಥಳಾಂತರಗೊಳಿಸಲು ಹೇಳಿದ್ದೇವೆ. 5 ಎಸ್ ಡಿಆರ್ ಎಫ್ ಹಾಗೂ ಎನ್ ಡಿಆರ್ ಎಫ್ ತಂಡಗಳ ನಿಯೋಜನೆ ಮಾಡಲಾಗಿದೆ” ಎಂದು ಮಾಹಿತಿ ನೀಡಿದರು.

“ಕೆಲವು ಅಪಾರ್ಟ್ಮೆಂಟ್ ಗಳನ್ನು 8 ದಿನಗಳ ಕಾಲ ಮುಚ್ಚಲು ಸೂಚನೆ ನೀಡಲಾಗಿದೆ. 20-25 ಹೆಚ್ ಪಿ ಯಂತ್ರಗಳನ್ನು ಹಾಕಿ ಚರಂಡಿ ಸ್ವಚ್ಛಗೊಳಿಸಲಾಗುತ್ತಿದೆ. 20 ಕಡೆಗಳಲ್ಲಿ ನೀರನ್ನು ತೆಗೆಯಲಾಗುತ್ತಿದೆ. ಪ್ರಕೃತಿಯನ್ನು ತಡೆದು ನಿಲ್ಲಿಸಲು ಆಗುವುದಿಲ್ಲ. ದುಬೈನಲ್ಲಿ ಪ್ರವಾಹ, ದೆಹಲಿಯಲ್ಲಿ ಮಾಲಿನ್ಯದ ವಿಚಾರ ನೀವು ನೋಡುತ್ತಿದ್ದೀರಿ. ನಮ್ಮ ತಂಡ ಹಗಲಿರುಳು ಶ್ರಮಿಸುತ್ತಿದೆ. ನಾನು ಕೂಡ ಪರಿಹಾರ ಕಾರ್ಯಗಳ ಪರಿಶೀಲನೆ ಮಾಡಿದ್ದೇನೆ. ಪಶ್ಚಿಮ ಮತ್ತು ದಕ್ಷಿಣ ಭಾಗದಲ್ಲಿ ಹೆಚ್ಚು ಸಮಸ್ಯೆಯಾಗಿದೆ. ದಾಸರಹಳ್ಳಿಯಲ್ಲಿ ಟ್ಯಾಂಕ್ ಒಡೆದಿದೆ. ಮಹದೇವಪುರ ವಲಯದಲ್ಲಿ 5 ಬಡಾವಣೆಗಳು ಸಮಸ್ಯೆಗೆ ಸಿಲುಕಿವೆ. ಈ ಎಲ್ಲಾ ಸಮಸ್ಯೆಗಳನ್ನು ನಾವು ಬಗೆಹರಿಸುತ್ತೇವೆ” ಎಂದರು.

ಇಬ್ಬರು ಮಕ್ಕಳು ಕೆರೆಯಲ್ಲಿ ಕೊಚ್ಚಿ ಹೋಗಿರುವ ಬಗ್ಗೆ ಕೇಳಿದಾಗ, “ನಾನು ಈ ವಿಚಾರ ನೋಡಿದೆ. ಆ ತಾಯಿಯ ಗೋಳು ಕಂಡೆ. ಮಕ್ಕಳ ಶೋಧ ಕಾರ್ಯ ನಡೆಯುತ್ತಿದೆ” ಎಂದು ತಿಳಿಸಿದರು.

BREAKING: ದೆಹಲಿ, ಹೈದರಾಬಾದ್ CRPF ಶಾಲೆಗಳಿಗೆ ಇ-ಮೇಲ್ ಮೂಲಕ ಬಾಂಬ್ ಬೆದರಿಕೆ | CRPF Schools Receive Bomb Threats

SHOCKING : ನಾಯಿ ದಾಳಿಯಿಂದ ತಪ್ಪಿಸಿಕೊಳ್ಳಲು 3ನೇ ಮಹಡಿಯಿಂದ ಬಿದ್ದು ಯುವಕ ದುರಂತ ಸಾವು! Video Viral

Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.