ಬೆಂಗಳೂರು: ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್ ಸೇರಿದಂತೆ ನಾಲ್ವರು ಆರೋಪಿಗಳ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಲಿರುವಂತ ಬೆಂಗಳೂರಿನ 24ನೇ ಎಸಿಎಂಎಂ ಕೋರ್ಟ್ ನ್ಯಾಯಾಂಗ ಬಂಧನಕ್ಕೆ ನೀಡುತ್ತೋ ಅಥವಾ ಪೊಲೀಸ್ ಕಸ್ಟಡಿಗೆ ಮತ್ತೆ ನೀಡುತ್ತೋ ಎಂಬುದನ್ನು ಕಾದು ನೋಡಬೇಕಿದೆ.
ಚಿತ್ರದುರ್ಗದಿಂದ ರೇಣುಕಾಸ್ವಾಮಿಯನ್ನು ಪವಿತ್ರಾ ಗೌಡ ಅವರಿಗೆ ಅಶ್ಲೀಸ ಸಂದೇಶ ಕಳುಹಿಸುತ್ತಿದ್ದಂತ ಕಾರಣ ನಟ ದರ್ಶನ್ ಅಂಡ್ ಗ್ಯಾಂಗ್ ಅಪಹರಿಸಿಕೊಂಡು ಬಂದು, ಬೆಂಗಳೂರಲ್ಲಿ ಚಿತ್ರ ಹಿಂಸೆ ನೀಡಿ ಹತ್ಯೆಗೈದಿತ್ತು. ಈ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಇತರೆ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದರು.
ಈ ಪ್ರಕರಣದಲ್ಲಿ ನಟ ದರ್ಶನ್ ಅವರನ್ನು ಕೋರ್ಟ್ ರೇಣುಕಾಸ್ವಾಮಿ ಪ್ರಕರಣದಲ್ಲಿ ಹೆಚ್ಚಿನ ವಿಚಾರಣೆ, ಸ್ಥಳ ಮಹಜರು ನಡೆಸೋದಕ್ಕೆ ಪೊಲೀಸ್ ಕಸ್ಟಡಿಗೆ ನೀಡಲಾಗಿತ್ತು. ಇಂದು ಅವರ ಪೊಲೀಸ್ ಕಸ್ಟಡಿ ಅವಧಿ ಮುಗಿದ ಕಾರಣ, ಬೆಂಗಳೂರಿನ 24ನೇ ಎಸಿಎಂಎಂ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದರು.
ಬೆಂಗಳೂರಿನ 5ನೇ ಎಸಿಎಂಎಂ ಕೋರ್ಟ್ ನ ನ್ಯಾಯಾಧೀಶರಾದಂತ ವಿಜಯ್ ಕುಮಾರ್ ಚಾಟ್ಲಾ ಅವರು ಪ್ರಕರಣದ ವಿಚಾರಣೆ ನಡೆಸುತ್ತಿದ್ದಾರೆ. ಈ ಬಳಿಕ ನಟ ದರ್ಶನ್, ವಿನಯ್, ಪ್ರದೋಷ್ ಹಾಗೂ ಧನರಾಜ್ ಅವರಿಗೆ ಜೈಲೋ, ಪೊಲೀಸ್ ಕಸ್ಟಡಿಯೋ ಅಂತ ನಿರ್ಧಾರವಾಗಲಿದೆ.
BREAKING: ಕೋಲಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ: ಓರ್ವ ಸಾಮೀಜಿ ಕೊಲೆ | Swamiji Murder
Good News: ದ್ವಿತೀಯ ಪಿಯುಸಿ ಪರೀಕ್ಷೆ-3ಕ್ಕೆ ಉಚಿತವಾಗಿ ‘KSRTC ಬಸ್’ನಲ್ಲಿ ಪ್ರಯಾಣಿಸಲು ವಿದ್ಯಾರ್ಥಿಗಳಿಗೆ ಅವಕಾಶ