Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹೈದರಾಬಾದ್ ಭೀಕರ ಅಗ್ನಿ ದುರಂತದಲ್ಲಿ 17 ಮಂದಿ ಸಾವು : ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

18/05/2025 11:50 AM

ಕೆನಡಾ: ಮರು ಎಣಿಕೆಯಲ್ಲಿ ಆಡಳಿತಾರೂಢ ‘ಲಿಬರಲ್ ಪಕ್ಷಕ್ಕೆ’ ಬಹುಮತದ ಕೊರತೆ

18/05/2025 11:50 AM

BIG NEWS : ರಾಜ್ಯದ ಕಾರ್ಮಿಕರೇ ಗಮನಿಸಿ : `ಪಿಂಚಣಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

18/05/2025 11:44 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ವಿಧಾನಸಭೆ, ಪರಿಷತ್ತಿನಲ್ಲಿ ‘NEET ವಿರುದ್ಧ’ದ ನಿರ್ಣಯ ಅಂಗೀಕಾರ: ಇನ್ಮುಂದೆ ಕರ್ನಾಟಕದಲ್ಲಿ ‘CET ಫೈನಲ್’
KARNATAKA

BIG NEWS: ವಿಧಾನಸಭೆ, ಪರಿಷತ್ತಿನಲ್ಲಿ ‘NEET ವಿರುದ್ಧ’ದ ನಿರ್ಣಯ ಅಂಗೀಕಾರ: ಇನ್ಮುಂದೆ ಕರ್ನಾಟಕದಲ್ಲಿ ‘CET ಫೈನಲ್’

By kannadanewsnow0925/07/2024 4:35 PM

ಬೆಂಗಳೂರು : ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಕೋರ್ಸುಗಳ ಪ್ರವೇಶಾತಿಗಾಗಿ ನಡೆಸುವ ರಾಷ್ಟ್ರೀಯ ಅರ್ಹತಾ ಪ್ರವೇಶ ಪರೀಕ್ಷೆ (NEET)ಯನ್ನು ರದ್ದುಪಡಿಸಿ ಹಳೆಯ ಸಾಮಾನ್ಯ ಪ್ರವೇಶ ಪರೀಕ್ಷೆ (CET) ವ್ಯವಸ್ಥೆಯನ್ನೇ ಮುಂದುವರೆಸುವ ಮಹತ್ವದ ನಿರ್ಣಯವನ್ನು ವಿಧಾಮಂಡಲದ ಉಭಯ ಸದನಗಳಲ್ಲಿ ಗುರುವಾರ ಮಂಡಿಸಿ ಅಂಗೀಕರಿಸಲಾಗಿದೆ.

ಪ್ರತಿಪಕ್ಷಗಳ ಸದಸ್ಯರ ವಿರೋಧ ನಡುವೆಯೂ ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಅವರು ವಿಧಾನಸಭೆಯಲ್ಲಿ ಹಾಗೂ ವಿಧಾನಪರಿಷತ್ ನಲ್ಲಿ ಉಪಮುಖ್ಯಮಂತ್ರಿಯೂ ಆಗಿರುವ ಡಿ.ಕೆ.ಶಿವಕುಮಾರ್ ಅವರು ನೀಟ್ ಪರೀಕ್ಷೆಯ ವಿರುದ್ಧ ನಿರ್ಣಯವನ್ನು ಮಂಡನೆ ಮಾಡಿದರು. ಪ್ರತಿಪಕ್ಷಗಳ ಸದಸ್ಯರು ಈ ನಿರ್ಣಯಕ್ಕೆ ವಿರೋಧ ವ್ಯಕ್ತಪಡಿಸಿದರೆ ಆಡಳಿತ ಪಕ್ಷದ ಸದಸ್ಯರು ಬೆಂಬಲ ಸೂಚಿಸಿದ ನಂತರ ಸದನವು ಅಂಗೀಕರ ನೀಡಿತು.

ವಿಧಾನಸಭೆಯಲ್ಲಿ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ನಿರ್ಣಯದ ಮೇಲೆ ಮಾತನಾಡಿ, ನೀಟ್ ಪರೀಕ್ಷಾ ವ್ಯವಸ್ಥೆಯು ಗ್ರಾಮೀಣ ಬಡ ಮಕ್ಕಳ ವೈದ್ಯಕೀಯ ಶಿಕ್ಷಣ ಅವಕಾಶಗಳ ಮೇಲೆ ತೀವ್ರ ಪರಿಣಾಮ ಬೀರುತ್ತಿದೆ ಹಾಗೂ ಶಾಲಾ ಶಿಕ್ಷಣ ವ್ಯವಸ್ಥೆಯನ್ನು ನಿರರ್ಥಕಗೊಳಿಸುತ್ತಿದೆ. ರಾಜ್ಯ ಸರ್ಕಾರದ ವೈದ್ಯಕೀಯ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಪ್ರವೇಶ ನೀಡುವ ರಾಜ್ಯ ಸರ್ಕಾರದ ಹಕ್ಕುಗಳನ್ನು ಕಸಿದುಕೊಳ್ಳಲಾಗುತ್ತಿದೆ. ಹೀಗಾಗಿ ನೀಟ್ ಪರೀಕ್ಷೆಯನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.

ನೀಟ್ ಪರೀಕ್ಷೆಯಿಂದ ಕರ್ನಾಟಕಕ್ಕೆ ವಿನಾಯಿತಿ ನೀಡಬೇಕು, ಶಾಲಾ ಶಿಕ್ಷಣದಲ್ಲಿ ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರವು ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ-ಸಿಇಟಿ ಅಂಕಗಳನ್ನು ಆಧರಿಸಿ ವೈದ್ಯಕೀಯ ಕಾಲೇಜುಗಳಿಗೆ ಪ್ರವೇಶಾತಿ ನೀಡಬೇಕೆಂದು ಮತ್ತು ನೀಟ್ ಪರೀಕ್ಷೆಯಲ್ಲಿ ಆಗುತ್ತಿರುವ ಪುನರಾವರ್ತಿತ ಅಕ್ರಮಗಳನ್ನು ಪರಿಗಣಿಸಿ ರಾಷ್ಟ್ರೀಯ ಮಟ್ಟದಲ್ಲಿ ನೀಟ್ ವ್ಯವಸ್ಥೆಯನ್ನು ರದ್ದುಪಡಿಸುವುದು. ಜೊತೆಗೆ ಕೇಂದ್ರ ಸರ್ಕಾರವು ರಾಷ್ಟ್ರೀಯ ವೈದ್ಯಕೀಯ ಆಯೋಗ ಅದಿನಿಯಮ 2019ರಲ್ಲಿ ಅಗತ್ಯ ತಿದ್ದುಪಡಿಗಳನ್ನು ಮಾಡಬೇಕು ಎಂದು ಮನವಿ ಮಾಡಿದರು.

ಸಭಾಧ್ಯಕ್ಷ ಯು ಟಿ ಖಾದರ್ ನಿರ್ಣಯ ಸರ್ವಾನುಮತದಿಂದ ಅಂಗೀಕಾರಗೊಂಡಿದೆ ಎಂದು ಪ್ರಕಟಿಸಿದರು.

ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ನೀಟ್ ಪರೀಕ್ಷೆಯನ್ನು ರದ್ದು ಮಾಡಿ ಕರ್ನಾಟಕ ಸರ್ಕಾರದ ವತಿಯಿಂದಲೇ ವೈದ್ಯಕೀಯ ಹಾಗೂ ದಂತ ವೈದ್ಯಕೀಯ ಪ್ರವೇಶಕ್ಕಾಗಿ ನಡೆಯುವ ಸಿಇಟಿಯನ್ನೇ ಮುಂದುವರಿಸುವ ನಿರ್ಣಯಕ್ಕೆ ವಿಧಾನಪರಿಷತ್ನಲ್ಲೂ ಅಂಗೀಕಾರ ಸಿಕ್ಕಿದೆ.

ವೈದ್ಯಕೀಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ್ ಪಾಟೀಲ್ ಪರವಾಗಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ನಿರ್ಣಯವನ್ನು ಮಂಡಿಸಿದರು. ಪ್ರತಿಪಕ್ಷಗಳು ವಿರೋಧದ ನಡುವೆಯೂ ಸಭಾಪತಿ ಬಸವರಾಜ ಹೊರಟ್ಟಿಯವರು ನಿರ್ಣಯ ಅಂಗೀಕಾರವಾಗಿದೆ ಎಂದು ಘೋಷಣೆ ಮಾಡಿದರು.

ಇದಕ್ಕೂ ಮುನ್ನ ನಿರ್ಣಯದ ಮೇಲೆ ಮಾತನಾಡಿದ ಶಿವಕುಮಾರ್ ಅವರು, ಇತ್ತೀಚೆಗೆ ದೇಶಾದ್ಯಂತ ನಡೆದಿದ್ದ ನೀಟ್ ಪರೀಕ್ಷೆಯಲ್ಲಿ ಸಾಕಷ್ಟು ಲೋಪದೋಷಗಳು ಉಂಟಾಗಿ ಲಕ್ಷಾಂತರ ವಿದ್ಯಾರ್ಥಿಗಳಿಗೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಹಿನ್ನಲೆಯಲ್ಲಿ ನೀಟ್ನಿಂದ ವಿನಾಯ್ತಿ ನೀಡಿ ಕರ್ನಾಟಕ ಸರ್ಕಾರ ಪ್ರತಿ ವರ್ಷ ವೈದ್ಯಕೀಯ ಕಾಲೇಜುಗಳ ಪ್ರವೇಶಾತಿಗೆ ನಡೆಯುವ ಸಿಇಟಿಯನ್ನು ಮುಂದುವರೆಸಲು ಅನುವು ಮಾಡಿಕೊಡಬೇಕೆಂದು ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿದರು.

ಇನ್ಮುಂದೆ ನಿಮ್ಮ ಭೂಮಿಗೂ ಸಿಗುತ್ತೆ ʻಆಧಾರ್‌ʼ : ʻಭೂ ಆಧಾರ್‌ʼ ಕುರಿತು ಇಲ್ಲಿದೆ ಮಾಹಿತಿ | Bhu Aadhar yojana

BIG NEWS: ಆ.1ರಿಂದ ‘ಆರೋಗ್ಯ ಇಲಾಖೆ’ಯ ನೌಕರರು ‘ರಿಯಲ್ ಟೈಮ್ ಅಟೆಂಡೆನ್ಸ್ ಸಿಸ್ಟಮ್ ಹಾಜರಾತಿ’ ದಾಖಲು ಕಡ್ಡಾಯ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ ಕಾರ್ಮಿಕರೇ ಗಮನಿಸಿ : `ಪಿಂಚಣಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

18/05/2025 11:44 AM1 Min Read

BIG NEWS : ಹುಲಿಗೆಮ್ಮ ದೇವಿ ವಾರ್ಷಿಕ ಜಾತ್ರೆ: ಪ್ರಾಣಿ ಬಲಿ ನಿಷೇಧ : ತಹಶೀಲ್ದಾರ ಆದೇಶ

18/05/2025 11:40 AM1 Min Read

BIG NEWS : ಒಳ ಮೀಸಲಾತಿ ಸಮೀಕ್ಷೆಗೆ ಅಡ್ಡಿಪಡಿಸಿದ್ರೆ ಕಾನೂನು ಕ್ರಮ ಫಿಕ್ಸ್.!

18/05/2025 11:04 AM1 Min Read
Recent News

BREAKING : ಹೈದರಾಬಾದ್ ಭೀಕರ ಅಗ್ನಿ ದುರಂತದಲ್ಲಿ 17 ಮಂದಿ ಸಾವು : ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ.ಪರಿಹಾರ ಘೋಷಿಸಿದ ಪ್ರಧಾನಿ ಮೋದಿ

18/05/2025 11:50 AM

ಕೆನಡಾ: ಮರು ಎಣಿಕೆಯಲ್ಲಿ ಆಡಳಿತಾರೂಢ ‘ಲಿಬರಲ್ ಪಕ್ಷಕ್ಕೆ’ ಬಹುಮತದ ಕೊರತೆ

18/05/2025 11:50 AM

BIG NEWS : ರಾಜ್ಯದ ಕಾರ್ಮಿಕರೇ ಗಮನಿಸಿ : `ಪಿಂಚಣಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

18/05/2025 11:44 AM

BREAKING : ಹೈದರಾಬಾದ್ನ ಚಾರ್ಮಿನಾರ್ ಬಳಿ ಕಟ್ಟಡದಲ್ಲಿ ಅಗ್ನಿ ಅವಘಡ: 17 ಮಂದಿ ಸಾವು |firebreaks

18/05/2025 11:40 AM
State News
KARNATAKA

BIG NEWS : ರಾಜ್ಯದ ಕಾರ್ಮಿಕರೇ ಗಮನಿಸಿ : `ಪಿಂಚಣಿ’ ಸೌಲಭ್ಯಕ್ಕೆ ಅರ್ಜಿ ಸಲ್ಲಿಸಲು ಈ ದಾಖಲೆಗಳು ಕಡ್ಡಾಯ.!

By kannadanewsnow5718/05/2025 11:44 AM KARNATAKA 1 Min Read

ಬೆಂಗಳೂರು : 60 ವರ್ಷ ದಾಟಿದ ನೋಂದಾಯಿತ ಕಾರ್ಮಿಕರಿಗೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿಯು…

BIG NEWS : ಹುಲಿಗೆಮ್ಮ ದೇವಿ ವಾರ್ಷಿಕ ಜಾತ್ರೆ: ಪ್ರಾಣಿ ಬಲಿ ನಿಷೇಧ : ತಹಶೀಲ್ದಾರ ಆದೇಶ

18/05/2025 11:40 AM

BIG NEWS : ಒಳ ಮೀಸಲಾತಿ ಸಮೀಕ್ಷೆಗೆ ಅಡ್ಡಿಪಡಿಸಿದ್ರೆ ಕಾನೂನು ಕ್ರಮ ಫಿಕ್ಸ್.!

18/05/2025 11:04 AM

BREAKING : ಧರ್ಮಸ್ಥಳ ಮೂಲದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು : ಕೊಲೆ ಶಂಕೆ.!

18/05/2025 10:44 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.