Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM

BREAKING: ಪಾಕಿಸ್ತಾನಕ್ಕೆ ‘ಐಎಂಎಫ್ ಬೇಲ್ ಔಟ್ ಪ್ಯಾಕೇಜ್’ಗೆ ಭಾರತ ಆಕ್ಷೇಪ

09/05/2025 9:56 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಅರಣ್ಯ ಪದವೀಧರ ವಿಧ್ಯಾರ್ಥಿಗಳ ಮನವಿಗೆ ಸ್ಪಂದನೆ; ಶೀಘ್ರವೇ ತಜ್ಞರ ಸಮಿತಿ ರಚನೆ – ಈಶ್ವರ ಖಂಡ್ರೆ
KARNATAKA

ಅರಣ್ಯ ಪದವೀಧರ ವಿಧ್ಯಾರ್ಥಿಗಳ ಮನವಿಗೆ ಸ್ಪಂದನೆ; ಶೀಘ್ರವೇ ತಜ್ಞರ ಸಮಿತಿ ರಚನೆ – ಈಶ್ವರ ಖಂಡ್ರೆ

By kannadanewsnow0729/02/2024 2:05 PM

ಬೆಂಗಳೂರು: ಅರಣ್ಯ ಪದವೀಧರ ವಿದ್ಯಾರ್ಥಿಗಳು ಫ್ರೀಡಂ ಪಾರ್ಕ್‍ನಲ್ಲಿ ಮುಷ್ಕರ ನಡೆಸುತ್ತಿರುವ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಮಾತನಾಡಿದ ಅರಣ್ಯ ಸಚಿವರಾದ ಈಶ್ವರ ಖಂಡ್ರೆ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಂಸದರಾದ ಡಿ.ಕೆ.ಸುರೇಶ್ ಅವರು ತಮ್ಮ ಬೇಡಿಕೆಗಳ ಬಗ್ಗೆ ದೂರವಾಣಿ ಮುಖಾಂತರ ಮಾತನಾಡಿದ್ದಾರೆ.

ಪ್ರಕೃತಿ ಪರಿಸರ, ಅರಣ್ಯ ಸಂರಕ್ಷಣೆ ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಅರಣ್ಯ ಸಂರಕ್ಷಣೆ, ವನ್ಯ ಜೀವಿ ಸಂರಕ್ಷಣೆ, ಎಲ್ಲಾ ಕಡೆ ಮಾಲಿನ್ಯ ಇದೆ. ನೀರಿನಲ್ಲಿ ಮಾಲಿನ್ಯ, ಗಾಳಿಯಲ್ಲೂ ಮಾಲಿನ್ಯ, ಹೀಗಾಗಿ ಜಾಗತಿಕ ತಾಪಮಾನ ಹೆಚ್ಚಾಗಿ ಅನೇಕ ರೋಗ ರುಜಿನಗಳು ಬರುತ್ತಿವೆ. ಇರುವಂತಹ ಒಂದೇ ಭೂಮಿಯಲ್ಲಿ ಪರಿಸರವನ್ನು ಸಂರಕ್ಷಣೆ ಮಾಡಿ ಆರೋಗ್ಯಕರವಾಗಿ ಮುಂದಿನ ಪೀಳಿಗೆಗೆ ಹಸ್ತಾಂತರಿಸಬೇಕಾಗಿದೆ. ಅಂತಹ ಒಂದು ಜವಾಬ್ದಾರಿ ನಿಮ್ಮ ಮೇಲಿದೆ.

ನಿಮ್ಮ ಬೇಡಿಕೆಗಳಾದ ಉಪವಲಯ ಅರಣ್ಯಾಧಿಕಾರಿಗಳಲ್ಲಿ ಶೇ.50 ಪ್ರತಿಶತ ಅರಣ್ಯ ಪದವೀಧರರಿಗೆ ಮೀಸಲು ಇರಿಸಲಾಗಿತ್ತು. ಆಡಳಿತ ಸಮಿತಿಯ ವರದಿಯಲ್ಲಿ 100 % ಮುಂಬಡ್ತಿ ಮುಖಾಂತರ ತುಂಬಲು ಶಿಫಾರಸ್ಸು ಮಾಡಿರುತ್ತಾರೆ. ಅದೇ ರೀತಿ ಒಪ್ಪಿಕೊಂಡರೆ ಅರಣ್ಯ ಪದವೀಧರರಿಗೆ ನೌಕರಿ ಅವಕಾಶ ಇಲ್ಲದಂತಾಗುತ್ತದೆ.

ಆದ್ದರಿಂದ ನಮ್ಮ ಸರ್ಕಾರ ಆಡಳಿತ ಸುಧಾರಣಾ ವರದಿಯನ್ನು ಜಾರಿಗೆ ತರುವುದಿಲ್ಲ. ವಲಯ ಅರಣ್ಯಾಧಿಕಾರಿ ಸೇರಿದಂತೆ ಉಳಿದ ಬೇಡಿಕೆಗಳಿಗೆ ತಜ್ಞರ ಸಮಿತಿಯನ್ನು ರಚಿಸಿ ಬೇರೆ ಬೇರೆ ರಾಜ್ಯಗಳಿಂದ ವರದಿಗಳನ್ನು ತರಿಸಿ, ತಜ್ಞರ ಸಮಿತಿ ವರದಿ ತಯಾರಿಸಿ ನಿಮ್ಮ ಎಲ್ಲಾ ಬೇಡಿಕೆಗಳನ್ನು ಈಡೇರಿಸಲಾಗುವುದು. ಸರ್ಕಾರ ನಿಮ್ಮ ಪರವಾಗಿದೆ. ನಿಮ್ಮ ಬೇಡಿಕೆ ಈಡೇರಿಸಲು ಸರ್ಕಾರ ಬದ್ಧವಾಗಿದೆ. ಆದ್ದರಿಂದ ನಿಮ್ಮ ಮುಷ್ಕರ ಕೈಬಿಡಲು ಮನವಿ ಮಾಡುತ್ತೇನೆ ಎಂದು ತಿಳಿಸಿದರು.

ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಎ.ಎಸ್.ಪೆÇನ್ನಣ್ಣ ಅವರು ಮಾತನಾಡಿ, ಆಡಳಿತಾತ್ಮಕ ಸುಧಾರಣಾ ಸಮಿತಿಯು ನೀಡಿದ ವರದಿಯನ್ನು ಖಂಡಿತವಾಗಿ ಪರಿಶೀಲನೆ ಮಾಡಬೇಕಾಗಿದೆ. 2022 ರಲ್ಲಿ ಆಗಿರುವ ತಿದ್ದುಪಡಿ ಮತ್ತು ಕಡ್ಡಾಯ ಮೀಸಲಾತಿ ಯಾವತ್ತು ಇರಲಿಲ್ಲ. ಆದರೂ ನೀವು ಕೇಳುತ್ತಿರುವುದು ತಾಂತ್ರಿಕವಾಗಿ ಸರಿ ಇದೆ ಎಂದು ಪರಿಶೀಲನೆ ಮಾಡಬೇಕಾಗಿರುತ್ತದೆ ಎಂದು ಹೇಳಿರುತ್ತಾರೆ. ಅದಕ್ಕೆ ತಜ್ಞರು ಸಮಿತಿ ರಚನೆ ಮಾಡಬೇಕೆಂದು ಮನವಿ ಮಾಡಿದ್ದೇನೆ. ಸರ್ಕಾರ ನಿಮ್ಮ ಬಳಿ ಬಂದಿವೆ. ಇದು ನಿಮಗೆ ಸಂದ ಜಯವಾಗಿದೆ. ನಮ್ಮ ತಜ್ಞರ ವರದಿ ಆಧಾರದ ಮೇಲೆ ನಿಮ್ಮ ಬೇಡಿಕೆಗಳನ್ನು ಈಡೇರಿಸಲಾಗುವುದು. ಆದ್ದರಿಂದ ಮುಷ್ಕರವನ್ನು ಕೈಬಿಡಲು ವಿನಂತಿಸುತ್ತೇನೆ ಎಂದು ಹೇಳಿದರು.
ಈ ಸಂದÀರ್ಭದಲ್ಲಿ ಶಾಸಕರಾದ ರಂಗನಾಥ, ರಾಜುಗೌಡ, ರವಿಶಂಕರ ಅವರು ಭಾಗವಹಿಸಿದ್ದರು.

response to requests from forest graduate students; Expert committee to be set up soon: Ishwar Khandre
Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM1 Min Read

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM1 Min Read

ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

09/05/2025 9:26 PM1 Min Read
Recent News

BREAKING: ಭಾರತ-ಪಾಕ್ ಉದ್ವಿಗ್ನತೆ ನಡುವೆ ‘ಆಪರೇಷನ್ ಸಿಂಧೂರ್’ ಸಿನಿಮಾ ಘೋಷಣೆ; ಮೊದಲ ಪೋಸ್ಟರ್ ರಿಲೀಸ್

09/05/2025 10:14 PM

BREAKING: ಪಂಜಾಬ್ ನ ಫಿರೋಜ್ ಪುರ್ ನಲ್ಲಿ ಮನೆಗೆ ಅಪ್ಪಳಿಸಿದ ಡ್ರೋನ್: 2-3 ಜನರಿಗೆ ಗಾಯ

09/05/2025 10:09 PM

BREAKING: ಪಾಕಿಸ್ತಾನಕ್ಕೆ ‘ಐಎಂಎಫ್ ಬೇಲ್ ಔಟ್ ಪ್ಯಾಕೇಜ್’ಗೆ ಭಾರತ ಆಕ್ಷೇಪ

09/05/2025 9:56 PM

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

09/05/2025 9:51 PM
State News
KARNATAKA

ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ ತಜ್ಞ ಡಾ.ಬಾಲಕೃಷ್ಣ ಸರ್ಕಾರಿ ಸೇವೆಯಿಂದ ವಜಾ

By kannadanewsnow0909/05/2025 9:51 PM KARNATAKA 1 Min Read

ಬೆಂಗಳೂರು: ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿದಂತ ಮಗುವನ್ನು ಮತ್ತೊಬ್ಬರಿಗೆ ಮಾರಾಟ ಮಾಡಿದ ಪ್ರಕರಣದಲ್ಲಿ ಸಿಕ್ಕಿಬಿದ್ದಂತ ಚಿಕ್ಕಮಗಳೂರು ಸಾರ್ವಜನಿಕ ಆಸ್ಪತ್ರೆಯ ಪ್ರಸೂತಿ…

BIG NEWS: ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ: ಸಾರ್ವತ್ರಿಕ ವರ್ಗಾವಣೆಗೆ ಮಾರ್ಗಸೂಚಿ ಪ್ರಕಟ

09/05/2025 9:28 PM

ಅಂಗವಿಕಲರಿಗೆ ಗುಡ್ ನ್ಯೂಸ್: ಮುಂಬಡ್ತಿಯಲ್ಲಿ ಶೇ.4ರಷ್ಟು ಮೀಸಲಾತಿಗೆ ರಾಜ್ಯ ಸಚಿವ ಸಂಪುಟ ಅನುಮೋದನೆ

09/05/2025 9:26 PM

ಮಂಡ್ಯದಲ್ಲಿ ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಪೋಸ್ಟ್: ಆರೋಪಿ ಜಾವೀದ್ ಬಂಧನ

09/05/2025 9:10 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.