Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದ ನಿವೃತ್ತ `ಸರ್ಕಾರಿ ನೌಕರರೇ’ ಗಮನಿಸಿ : `ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ
KARNATAKA

ರಾಜ್ಯದ ನಿವೃತ್ತ `ಸರ್ಕಾರಿ ನೌಕರರೇ’ ಗಮನಿಸಿ : `ಪಿಂಚಣಿ’ ಬಗ್ಗೆ ಸರ್ಕಾರದಿಂದ ಮಹತ್ವದ ಆದೇಶ

By kannadanewsnow5716/07/2025 10:11 AM

ಬೆಂಗಳೂರು : 80 ವರ್ಷ ಪೂರೈಸಿದ ಮತ್ತು ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ ಕುಟುಂಬ ಪಿಂಚಣಿಯನ್ನು ಮಂಜೂರು ಮಾಡುವ ವಿಧಾನವನ್ನು ಸರಳೀಕೃತಗೊಳಿಸುವ ಬಗ್ಗೆ ರಾಜ್ಯ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.

ಮೇಲೆ ಓದಲಾದ (1) ರ ಆದೇಶದಲ್ಲಿ, ದಿನಾಂಕ:01.07.1993 ಕ್ಕಿಂತ ಮುಂಚಿತವಾಗಿ ನಿವೃತ್ತರಾದವರ ಅಥವಾ ಸೇವೆಯಲ್ಲಿರುವಾಗಲೇ ಮೃತರಾದ ಸರ್ಕಾರಿ ನೌಕರರ : ಪ್ರಕರಣಗಳಲ್ಲಿ 80 ರಿಂದ 85, 85 ರಿಂದ 90 ಮತ್ತು 95 ವರ್ಷ ವಯಸ್ಸು ಮೀರಿದವರಿಗೆ ದಿನಾಂಕ 01.04.2006 ರಿಂದ ಜಾರಿಗೆ ಬರುವಂತೆ ಕ್ರಮವಾಗಿ ಅವರ ಮೂಲ ನಿವೃತ್ತಿ ವೇತನ/ಕುಟುಂಬ ನಿವೃತ್ತಿ ವೇತನದ ಶೇಕಡ 20, ಶೇಕಡ 30 ಮತ್ತು ಶೇಕಡ 50 ರಷ್ಟು ಪಿಂಚಣಿಯನ್ನು ಹೆಚ್ಚಿಸಿ ಆದೇಶ ಹೊರಡಿಸಲಾಗಿದೆ.

2. ಮೇಲೆ ಓದಲಾದ (2)ರ ಅಧಿಕೃತ ಜ್ಞಾಪನದಲ್ಲಿ, ಪಿಂಚಣಿದಾರ/ಕುಟುಂಬ ಪಿಂಚಣಿದಾರನ ಜನ್ಮ ದಿನಾಂಕವು ಪಿಂಚಣಿ ಪಾವತಿ ಆದೇಶ (ಪಿ.ಪಿ.ಓ.) ದಲ್ಲಿ ಲಭ್ಯವಿಲ್ಲದಿದ್ದಲ್ಲಿ ಪಿಂಚಣಿ ಪಾವತಿ ಪ್ರಾಧೀಕಾರವು ಈ ಬಗ್ಗೆ ಸಂಬಂಧಪಟ್ಟ ಪಿಂಚಣಿದಾರ/ಕುಟುಂಬ ಪಿಂಚಣಿದಾರರಿಗೆ ತಿಳಿಸಿ, ಅವರಿಂದ ಈ ಕೆಳಕಂಡ ಯಾವುದಾದರು’ ದಾಖಲೆಗಳನ್ನು ಪತ್ರಾಂಕಿತ ಅಧಿಕಾರಿ/ಎಂ.ಎಲ್.ಎ. ರವರಿಂದ ದೃಢೀಕರಿಸಿಕೊಂಡು ಪಡೆಯತಕ್ಕದ್ದು ಎಂದು ತಿಳಿಸಿದ್ದು, ನಂತರ ಸಂಬಂಧಿಸಿದ ದಾಖಲೆಯನ್ನು ಮಹಾಲೇಖಪಾಲರ ಕಛೇರಿಗೆ ಕಳುಹಿಸಿ, ಅವರಿಂದ ಔಪಚಾರಿಕ ಪ್ರಾಧೀಕರಣವನ್ನು ಪಡೆದು, ದಿ:13.10.2010ರ ಆದೇಶದ ಪ್ರಕಾರ ಹೆಚ್ಚುವರಿ ಪಿಂಚಣಿ/ಕುಟುಂಬ ಪಿಂಚಣಿಯನ್ನು ಪಾವತಿಸಲು ಕ್ರಮ ಕೈಗೊಳ್ಳತಕ್ಕದ್ದು ಎಂದು ತಿಳಿಸಲಾಗಿರುತ್ತದೆ:-

1. ಎಸ್.ಎಸ್.ಎಲ್.ಸಿ. ಸರ್ಟಿಫಿಕೇಟ್ (ಹುಟ್ಟಿದ ದಿನಾಂಕ ಒಳಗೊಂಡಂತೆ)

2. ಪ್ಯಾನ್ ಕಾರ್ಡ್

3. ಪಾಸ್ ಪೋರ್ಟ್

4. ಡ್ರೈವಿಂಗ್ ಲೈಸೆನ್ಸ್ (ಹುಟ್ಟಿದ ದಿನಾಂಕ ಒಳಗೊಂಡಿದ್ದರೆ)

5. ಎಲೆಕ್ಷನ್ ಐ.ಡಿ.ಕಾರ್ಡ್

3. ಮೇಲೆ ಓದಲಾದ (3)ರ ಸರ್ಕಾರದ ಆದೇಶದಲ್ಲಿ, 80 ವರ್ಷ ಪೂರೈಸಿದ ಹಾಗೂ ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿದ ಸರ್ಕಾರಿ ಪಿಂಚಣಿದಾರರು/ಕುಟುಂಬ ಪಿಂಚಣಿದಾರರಿಗೆ ದಿನಾಂಕ:01.1.2019ರಿಂದ ಜಾರಿಗೆ ಬರುವಂತೆ ಹೆಚ್ಚುವರಿ ನಿವೃತ್ತಿ ವೇತನ /ಕುಟುಂಬ ನಿವೃತ್ತಿ ವೇತನವನ್ನು ಮಂಜೂರು ಮಾಡಿ ಆದೇಶಿಸಲಾಗಿದೆ ಹಾಗೂ ಪಿಂಚಣಿದಾರರು/ಕುಟುಂಬ ಪಿಂಚಣಿದಾರರು 80 ವರ್ಷ ಪೂರೈಸಿದ ಅಥವಾ ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿದಾಗ ಹೆಚ್ಚುವರಿ ಪಿಂಚಣಿ ಮೊತ್ತವನ್ನು ಸದರಿ ಆದೇಶದಲ್ಲಿ ಸೂಚಿಸಿರುವ ದರದಂತೆ ಪಾವತಿಸಲು ಆದೇಶಿಸಲಾಗಿರುತ್ತದೆ.

4. ಪ್ರಸ್ತುತ ಕುಟುಂಬ ಪಿಂಚಣಿದಾರರ ಜನ್ಮ ದಿನಾಂಕವು ಪಿಂಚಣಿ ಪಾವತಿ ಆದೇಶ (ಪಿ.ಪಿ.ಓ.) ದಲ್ಲಿ ಲಭ್ಯವಿಲ್ಲದಿರುವ ಸಂದರ್ಭದಲ್ಲಿ, ಕುಟುಂಬ ಪಿಂಚಣಿದಾರರರಿಗೆ ಹೆಚ್ಚುವರಿ ಪಿಂಚಣಿ ಮಂಜೂರು ಮಾಡಲು ಇರುವ ವಿಧಾನವನ್ನು ಸರಳೀಕರಣಗೊಳಿಸುವ ಕುರಿತು ಸ್ವೀಕೃತವಾಗುತ್ತಿರುವ ಮನವಿಗಳನ್ನು ಪರಿಶೀಲಿಸಿ ಈ ಕೆಳಕಂಡಂತೆ ಆದೇಶಿಸಿದೆ.

80 ವರ್ಷ ಪೂರೈಸಿರುವ ಹಾಗೂ ಅದಕ್ಕೂ ಮೇಲ್ಮಟ್ಟ ವಯಸ್ಸನ್ನು ಪೂರ್ಣಗೊಳಿಸಿರುವ ರಾಜ್ಯ ಸರ್ಕಾರಿ ಕುಟುಂಬ ಪಿಂಚಣಿದಾರರಿಗೆ ಹೆಚ್ಚುವರಿ ಕುಟುಂಬ ಪಿಂಚಣಿಯನ್ನು ಮಂಜೂರು ಮಾಡಲು ಪಿಂಚಣಿ ಪಾವತಿ ಆದೇಶ (ಪಿಪಿಒ) ದಲ್ಲಿ ಜನ್ಮ ದಿನಾಂಕವು ಲಭ್ಯವಿಲ್ಲದಿದ್ದಲ್ಲಿ ಈ ಕೆಳಕಂಡಂತೆ ಕ್ರಮಕೈಗೊಳ್ಳಲು ಆದೇಶಿಸಿದೆ:

1. ಸರ್ಕಾರದ ಆದೇಶ ಸಂಖ್ಯೆ: ಆಇ-ಪಿಇಎನ್/262/2024, ದಿನಾಂಕ:28.08.2024 ರ ಕಂಡಿಕೆ 11.1 ರಲ್ಲಿ ಸೂಚಿಸಿರುವಂತೆ ನಿವೃತ್ತಿ ವೇತನ ಮತ್ತು ಕುಟುಂಬ ನಿವೃತ್ತಿ ವೇತನ ಜೊತೆಯಾಗಿ ಲಭ್ಯವಿರುವ ಪಿಂಚಣಿದಾರರ ಪ್ರಕರಣಗಳಲ್ಲಿ ಸಂದರ್ಭಾನುಸಾರ ದಿನಾಂಕ:11.01.2019ರ ಆದೇಶದನ್ವಯ ಲಭ್ಯವಿರುವ ಹೆಚ್ಚುವರಿ ಪಿಂಚಣಿಯ ಸೌಲಭ್ಯವು ಜೀವಂತ ಸದಸ್ಯನ ಪರಿಷ್ಕೃತ ನಿವೃತ್ತಿ ವೇತನಕ್ಕೆ ಮಾತ್ರ ಸೀಮಿತಗೊಳಿಸತಕ್ಕದ್ದು.

2. ಕುಟುಂಬ ಪಿಂಚಣಿಯನ್ನು ಮಾತ್ರ ಪಡೆಯುತ್ತಿರುವ ಕುಟುಂಬ ಪಿಂಚಣಿದಾರರ ಜನ್ಮ ದಿನಾಂಕವು ಪಿಂಚಣಿ ಪಾವತಿ ಆದೇಶ(ಪಿ.ಪಿ.ಓ.)ದಲ್ಲಿ ಲಭ್ಯವಿಲ್ಲದಿದ್ದಲ್ಲಿ, ಅವರು ಕುಟುಂಬ ಪಿಂಚಣಿ ಪಡೆಯುತ್ತಿರುವ ಸಾರ್ವಜನಿಕ ಬ್ಯಾಂಕ್ ಖಾತೆಗೆ ಸಂಬಂಧಿಸಿದಂತೆ ಬ್ಯಾಂಕುಗಳು ನಿರ್ವಹಿಸಿರುವ KYC ಯಲ್ಲಿ, ಸರ್ಕಾರದ ಅಧಿಕೃತ ಜ್ಞಾಪನ ಸಂಖ್ಯೆ: ಆಇ(ವಿ) 27 ಪಿಇಎನ್ 2007. ದಿನಾಂಕ:06.01.2011 ರಲ್ಲಿ ಸೂಚಿಸಿರುವ ದಾಖಲೆಗಳು ಲಭ್ಯವಿದ್ದಲ್ಲಿ, ಸದರಿ ದಾಖಲೆಗಳಲ್ಲಿ ಲಭ್ಯವಿರುವ ಜನ್ಮ ದಿನಾಂಕವನ್ನು ಪರಿಗಣಿಸಿ, ಸದರಿ ಮಾಹಿತಿಯನ್ನು ಖಜಾನೆಗಳಿಗೆ ನೀಡಲು ಬ್ಯಾಂಕುಗಳು ಕ್ರಮ ಕೈಗೊಳ್ಳುವುದು. ಖಜಾನೆಗಳು, ಖಜಾನೆ-2ರ ಪಿಂಚಣಿ ಡೇಟಾಬೇಸ್‌ನಲ್ಲಿ ಹಾಗೂ ಖಜಾನೆಗಳ ಕೆ.ಟಿ.ಸಿ. ವಹಿ-45 ರಲ್ಲಿ ವಿವರಗಳನ್ನು ದಾಖಲಿಸಿ ಮತ್ತು ದೃಢೀಕರಿಸಿ, ಮಾಹಿತಿಯನ್ನು ಮಹಾಲೇಖಪಾಲರಿಗೆ ನೀಡುವುದು.

3. ಮೇಲ್ಕಂಡ (2)ರ ಅವಕಾಶ ಅನ್ವಯವಾಗದ ಪ್ರಕರಣಗಳಿಗೆ ಸಂಬಂಧಿಸಿದಂತೆ, ಖಜಾನೆಗಳು ದಿನಾಂಕ:06.01.2011ರ ಸರ್ಕಾರದ ಅಧಿಕೃತ ಜ್ಞಾಪನದಲ್ಲಿ ಸೂಚಿಸಿರುವ ವಿಧಾನವನ್ನು ಅನುಸರಿಸುವಂತೆ ತಿಳಿಸಿದೆ.

Retired government employees of the state take note: Important order from the government regarding pension
Share. Facebook Twitter LinkedIn WhatsApp Email

Related Posts

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM1 Min Read

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM2 Mins Read

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM2 Mins Read
Recent News

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

10/04/2026 10:34 PM

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM
State News
KARNATAKA

ಬೇಸಿಗೆಯ ಬಿಸಿಲಿಗೆ ತತ್ತರಿಸುವ ಮೂಕ ಪ್ರಾಣಿಗಳ ರಕ್ಷಣೆಗೆ ಮುಂದಾಗಿ: ಸಚಿವ ಕೆ.ಜೆ. ಜಾರ್ಜ್ ಕರೆ

By kannadanewsnow0910/04/2026 10:34 PM KARNATAKA 1 Min Read

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ದಿನದಿಂದ ದಿನಕ್ಕೆ ತಾಪಮಾನ ಏರುತ್ತಿದ್ದು, ಬಿಸಿಲಿನ ಬೇಗೆಯಿಂದ ಕೇವಲ ಮನುಷ್ಯರಷ್ಟೇ ಅಲ್ಲದೆ ಪ್ರಾಣಿ-ಪಕ್ಷಿಗಳು ಕೂಡ…

ಸಾಗರ ತಾಲ್ಲೂಕು ಪಿಯುಸಿ ಫಲಿತಾಂಶ: ಸರ್ಕಾರಿ ಕಾಲೇಜು ಸೇರಿ ವಿವಿಧ ಖಾಸಗಿ ಕಾಲೇಜುಗಳ ವಿದ್ಯಾರ್ಥಿಗಳು ಭರ್ಜರಿ ಸಾಧನೆ!

10/04/2026 10:22 PM

ಸಾಗರ ವಿಜ್ಞಾನ ವೇದಿಕೆಯಿಂದ ರಾಜ್ಯ ಮಟ್ಟದ ವಸತಿಸಹಿತ ವಿಜ್ಞಾನ ಬೇಸಿಗೆ ಶಿಬಿರ: ಏಪ್ರಿಲ್ 13ರಿಂದ ಚಾಲನೆ

10/04/2026 10:03 PM

ಖರ್ಗೆ ಪ್ರಚೋದನಾಕಾರಿ ಭಾಷಣ: ಸಾಗರದಲ್ಲಿ ಬಿಜೆಪಿ ವತಿಯಿಂದ ಡಿವೈಎಸ್‌ಪಿಗೆ ಸೂಕ್ತ ಕ್ರಮಕ್ಕೆ ಮನವಿ ಸಲ್ಲಿಕೆ

10/04/2026 9:55 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.