Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಧಾರವಾಡದಲ್ಲಿ ಪ್ರೀತಿಸಿದ ಯುವಕನೊಂದಿಗೆ ಮದ್ವೆ ಆಗಲು ಪೋಷಕರ ವಿರೋಧ : ವಿಷ ಸೇವಿಸಿ ಯುವತಿ ಆತ್ಮಹತ್ಯೆ!

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಗೆ ಕರೆ ಮಾಡಿ ಶುಭಕೋರಿದ CM ಸಿದ್ದರಾಮಯ್ಯ : ವಿಡಿಯೋ ವೈರಲ್ | WATCH VIDEO

BIG NEWS : ಪ್ರಧಾನಿ ಮೋದಿ ಹೇಳಿಕೆಯಿಂದ ಗೋಲ್ಡ್ ಕಂಪನಿಗಳಿಗೆ ಭಾರಿ ಹೊಡೆತ : ಕುಸಿದ ಚಿನ್ನದ ಷೇರುಗಳು!

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿಗೆ ಪುರಸ್ಕಾರ : ನನಗೆ IPL ಟಿಕೆಟ್ ಬೇಡವೇ ಬೇಡ ಎಂದ ಸುರೇಶ್ ಕುಮಾರ್!
KARNATAKA

ಸಮಾಜವಾದಿ ಸರ್ಕಾರದಲ್ಲಿ ವಿಐಪಿ ಸಂಸ್ಕೃತಿಗೆ ಪುರಸ್ಕಾರ : ನನಗೆ IPL ಟಿಕೆಟ್ ಬೇಡವೇ ಬೇಡ ಎಂದ ಸುರೇಶ್ ಕುಮಾರ್!

By ಸುರೇಶ್‌

ಬೆಂಗಳೂರು : ಐಪಿಎಲ್ ನಡೆಯುವಾಗ ಶಾಸಕರಿಗೆ ಕೇವಲ ಒಂದು ಟಿಕೆಟ್ ಮಾತ್ರ ನೀಡಲಾಗುತ್ತದೆ ನಮಗೆ ಒಂದು ಟಿಕೆಟ್ ನಲ್ಲಿ ನಾವು ಕುಟುಂಬದವರನ್ನು ಹೇಗೆ ಕಳುಹಿಸಬೇಕು ಎಂದು ಸದನದಲ್ಲಿ ಕಾಂಗ್ರೆಸ್ ಶಾಸಕ ವಿಜಯಾನಂದ ಕಾಶಪ್ಪನವರ ಸೇರಿದಂತೆ ಬಿಜೆಪಿ ನಾಯಕರು ಕೂಡ ಹೆಚ್ಚುವರಿ ಟಿಕೆಟ್ ಗಾಗಿ ಬೇಡಿಕೆ ಇಟ್ಟಿದ್ದರು. ಅದರ ಬೆನ್ನಲ್ಲೆ ಕೆಎಸ್ಸಿಎ ಎರಡು ಟಿಕೆಟ್ ನೀಡುವುದಾಗಿ ಯೋಚನೆ ಮಾಡಿತು.

ಆದರೆ ಇದೀಗ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ರಾಜಾಜಿನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್‌ ಕುಮಾರ್‌ ಸ್ಪೀಕರ್‌ ಯುಟಿ ಖಾದರ್‌ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ.

ಸಮಾಜವಾದಿ ಎಂದು ಹೇಳಿಕೊಳ್ಳುವ ಸರ್ಕಾರದ ಆಡಳಿತದಲ್ಲಿ ಈ ವಿಐಪಿ ಸಂಸ್ಕೃತಿಗೆ ಪುರಸ್ಕಾರ ಸಿಗುತ್ತಿರುವುದು ಆಘಾತಕಾರಿಯಾಗಿದೆ. ವಿಧಾನಸಭೆಯಲ್ಲಿ ಗ್ರೇಟರ್ ಬೆಂಗಳೂರು ಅಥಾರಿಟಿ (GBA) ವ್ಯಾಪ್ತಿಯಲ್ಲಿ ಜನಸಾಮಾನ್ಯರು ಅನುಭವಿಸುತ್ತಿರುವ ಜ್ವಲಂತ ಸಮಸ್ಯೆಗಳ ಬಗ್ಗೆ ಚರ್ಚೆ ನಡೆಯುತ್ತಿದ್ದಾಗ ದಿಢೀರನೆ ಚಿನ್ನಸ್ವಾಮಿ ಸ್ಟೇಡಿಯಂನ ಐಪಿಎಲ್ ಪಂದ್ಯ, ಶಾಸಕರಿಗೆ ಟಿಕೆಟ್ ಹಂಚಿಕೆ ಹಾಗೂ ಶಾಸಕರ ಮರ್ಯಾದೆಯ ಕುರಿತು ಚರ್ಚೆಗಳು ಪ್ರಾರಂಭವಾದದ್ದು ತಮಗೆ ತಿಳಿದೇ ಇದೆ.

ಜನಸಾಮಾನ್ಯರ ಅದೆಷ್ಟೋ ಗಂಭೀರ ಪ್ರಶ್ನೆಗಳಿಗೆ, ಸಮಸ್ಯೆಗಳಿಗೆ ವರ್ಷಾನುಗಟ್ಟಲೆ ಪರಿಹಾರ ಸಿಗುವುದಿಲ್ಲ. ಆದರೆ ಶಾಸಕರ ಸೌಲಭ್ಯ, ಟಿಕೆಟ್ ವಿಚಾರ ಬಂದಾಗ 24 ಗಂಟೆಯೊಳಗೆ ಸ್ಪಂದಿಸುವ ಉತ್ಸುಕತೆಯನ್ನು ಸರ್ಕಾರ ತೋರಿರುವುದು ಜನಸಾಮಾನ್ಯರಲ್ಲಿ ಆಶ್ಚರ್ಯ ಹಾಗೂ ಜನಪ್ರತಿನಿಧಿಗಳ ಬಗ್ಗೆ ತಿರಸ್ಕಾರ ಮೂಡುವಂತೆ ಮಾಡಿದೆ.

ಮಾಧ್ಯಮಗಳ ವರದಿ ಪ್ರಕಾರ ಶಾಸಕರಿಗೆ ತಲಾ ಎರಡು ಹಾಗೂ ಮುಂದಿನ ದಿನಗಳಲ್ಲಿ ಐದು ಟಿಕೆಟ್/ಪಾಸ್ ನೀಡಲು ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ. ಸಮಾಜವಾದಿ ಎಂದು ಹೇಳಿಕೊಳ್ಳುವ ಸರ್ಕಾರದ ಆಡಳಿತದಲ್ಲಿ ಈ ʼವಿಐಪಿ ಸಂಸ್ಕೃತಿ’ಗೆ ಪುರಸ್ಕಾರ ಸಿಗುತ್ತಿರುವುದು ಆಘಾತಕಾರಿಯಾಗಿದೆ.

ಈ ಎಲ್ಲಾ ಹಿನ್ನೆಲೆಯಲ್ಲಿ ಹಾಗೂ ನನ್ನ ಆತ್ಮಸಾಕ್ಷಿಗೆ ಅನುಗುಣವಾಗಿ, ಸರ್ಕಾರ ಅಥವಾ ಕೆಎಸ್‌ಸಿಎ ವತಿಯಿಂದ ಶಾಸಕರಿಗೆ ನೀಡಲಾಗುವ ಐಪಿಎಲ್ ಪಂದ್ಯದ ಯಾವುದೇ ಪಾಸ್ ಅಥವಾ ಟಿಕೆಟ್‌ಗಳನ್ನು ನಾನು ಸವಿನಯವಾಗಿ ನಿರಾಕರಿಸುತ್ತಿದ್ದೇನೆ. ಆದ್ದರಿಂದ ದಯವಿಟ್ಟು ಮುಂಬರುವ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದಂತೆ ನನ್ನ ಹೆಸರಿನಲ್ಲಿ ಯಾವುದೇ ಟಿಕೆಟ್ ಅಥವಾ ಪಾಸ್‌ಗಳನ್ನು ವಿತರಿಸಬಾರದೆಂದು ಈ ಮೂಲಕ ತಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ ಎಂದು ಮನವಿ ಮಾಡಿದ್ದಾರೆ.

Share. Facebook Twitter LinkedIn WhatsApp Email

Related Posts

ಧಾರವಾಡದಲ್ಲಿ ಪ್ರೀತಿಸಿದ ಯುವಕನೊಂದಿಗೆ ಮದ್ವೆ ಆಗಲು ಪೋಷಕರ ವಿರೋಧ : ವಿಷ ಸೇವಿಸಿ ಯುವತಿ ಆತ್ಮಹತ್ಯೆ!

1 Min Read

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಗೆ ಕರೆ ಮಾಡಿ ಶುಭಕೋರಿದ CM ಸಿದ್ದರಾಮಯ್ಯ : ವಿಡಿಯೋ ವೈರಲ್ | WATCH VIDEO

1 Min Read

ಸುಪ್ರೀಂ ಕೋರ್ಟ್ ಪ್ರಕರಣಗಳ ವಿಲೇವಾರಿಗೆ ‘ಸಮಾಧಾನ ಸಮಾರೋಹ’: ಸಾರ್ವಜನಿಕರು ಸದುಪಯೋಗ ಪಡೆಯಲು ಮನವಿ

3 Mins Read
Recent News

ಧಾರವಾಡದಲ್ಲಿ ಪ್ರೀತಿಸಿದ ಯುವಕನೊಂದಿಗೆ ಮದ್ವೆ ಆಗಲು ಪೋಷಕರ ವಿರೋಧ : ವಿಷ ಸೇವಿಸಿ ಯುವತಿ ಆತ್ಮಹತ್ಯೆ!

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಗೆ ಕರೆ ಮಾಡಿ ಶುಭಕೋರಿದ CM ಸಿದ್ದರಾಮಯ್ಯ : ವಿಡಿಯೋ ವೈರಲ್ | WATCH VIDEO

BIG NEWS : ಪ್ರಧಾನಿ ಮೋದಿ ಹೇಳಿಕೆಯಿಂದ ಗೋಲ್ಡ್ ಕಂಪನಿಗಳಿಗೆ ಭಾರಿ ಹೊಡೆತ : ಕುಸಿದ ಚಿನ್ನದ ಷೇರುಗಳು!

BREAKING : ಸೋಮನಾಥ ದೇಗುಲದ ಅಮೃತ ಮಹೋತ್ಸವದಲ್ಲಿ `ಕುಂಭಾಭಿಷೇಕ’ ನೆರವೇರಿಸಿದ ಪ್ರಧಾನಿ ಮೋದಿ : ವಿಡಿಯೋ ವೈರಲ್ | WATCH VIDEO

State News
KARNATAKA

ಧಾರವಾಡದಲ್ಲಿ ಪ್ರೀತಿಸಿದ ಯುವಕನೊಂದಿಗೆ ಮದ್ವೆ ಆಗಲು ಪೋಷಕರ ವಿರೋಧ : ವಿಷ ಸೇವಿಸಿ ಯುವತಿ ಆತ್ಮಹತ್ಯೆ!

By ಸುರೇಶ್‌ KARNATAKA 1 Min Read

ಧಾರವಾಡ : ಪ್ರೀತಿಸಿದವನ ಜೊತೆ ಮದುವೆಯಾಗಲು ಕುಟುಂಬಸ್ಥರು ವಿರೋಧ ವ್ಯಕ್ತಪಡಿಸಿದ ಹಿನ್ನೆಲೆ ಮನನೊಂದು ಯುವತಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ…

ತಮಿಳುನಾಡು ಮುಖ್ಯಮಂತ್ರಿ ವಿಜಯ್ ಗೆ ಕರೆ ಮಾಡಿ ಶುಭಕೋರಿದ CM ಸಿದ್ದರಾಮಯ್ಯ : ವಿಡಿಯೋ ವೈರಲ್ | WATCH VIDEO

ಸುಪ್ರೀಂ ಕೋರ್ಟ್ ಪ್ರಕರಣಗಳ ವಿಲೇವಾರಿಗೆ ‘ಸಮಾಧಾನ ಸಮಾರೋಹ’: ಸಾರ್ವಜನಿಕರು ಸದುಪಯೋಗ ಪಡೆಯಲು ಮನವಿ

ಬೆಂಗಳೂರಲ್ಲಿ ಅಡ್ಡ ಬಂದ ನಾಯಿಯನ್ನು ರಕ್ಷಿಸಲು ಹೋಗಿ ಮರಕ್ಕೆ ಕಾರು ಡಿಕ್ಕಿ : 5 ಮಂದಿಗೆ ಗಂಭೀರ ಗಾಯ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.