ಮಾ.2ರಂದು ಶರಾವತಿ ಮುಳುಗಡೆ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ: ತೀ.ನಾ ಶ್ರೀನಿವಾಸ್

ಶಿವಮೊಗ್ಗ : ಮಾ. 2ರಂದು ಬೆಳಿಗ್ಗೆ 11ಕ್ಕೆ ಸಿಗಂದೂರು ಸೇತುವೆ ಪ್ರವೇಶದ ರಾಷ್ಟ್ರೀಯ ಹೆದ್ದಾರಿ ತಡೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಮಲೆನಾಡು ರೈತ ಹೋರಾಟ ಸಮಿತಿ ಜಿಲ್ಲಾ ಸಂಚಾಲಕ ತೀ.ನ.ಶ್ರೀನಿವಾಸ್ ತಿಳಿಸಿದರು. ಇಂದು ಶಿವಮೊಗ್ಗದ ಸಾಗರದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಶರಾವತಿ ಮುಳುಗಡೆ ಸಂತ್ರಸ್ತರು ಹಾಗೂ ಅರಣ್ಯಭೂಮಿ ಸಾಗುವಳಿದಾರರ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಹಮ್ಮಿಕೊಂಡಿರುವ ಹಕ್ಕೊತ್ತಾಯದ ಹೋರಾಟ ಇದಾಗಿದೆ ಎಂದು ಹೇಳಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಮಲೆನಾಡು ರೈತರ ಭೂಹಕ್ಕು ಸಮಸ್ಯೆ ನಿವಾರಣೆ … Continue reading ಮಾ.2ರಂದು ಶರಾವತಿ ಮುಳುಗಡೆ ಸಂತ್ರಸ್ತರ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ರಸ್ತೆ ತಡೆ ಪ್ರತಿಭಟನೆ: ತೀ.ನಾ ಶ್ರೀನಿವಾಸ್