ಬೆಂಗಳೂರು: ನಗರದಲ್ಲಿ ಬಿಕ್ಲು ಶಿವ ಆಲಿಯಾಸ್ ಶಿವಕುಮಾರ್ ನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿತ್ತು. ಈ ಪ್ರಕರಣಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಬೆಂಗಳೂರಲ್ಲಿ ರೌಡಿ ಶೀಟರ್ ಶಿವಕುಮಾರ್ ಬರ್ಬರ ಹತ್ಯೆ ಪ್ರಕರಣ ಸಂಬಂಧ ಈಗಾಗಲೇ ತಾವೇ ಮಾಡಿದ್ದಾಗಿ ಪೊಲೀಸರ ಮುಂದೆ ಆರೋಪಿಗಳು ಶರಣಾಗಿದ್ದಾರೆ. ಈ ಬೆನ್ನಲ್ಲೇ ಬಿಗ್ ಟ್ವಿಸ್ಟ್ ಎನ್ನುವಂತೆ ಬಿಕ್ಲು ಶಿವ ಹತ್ಯೆಗೆ ಸುಪಾರಿ ಪಡೆದಿದ್ದಂತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ.
ಕೋಲಾರ ಜಿಲ್ಲೆಯ ಮಾಲೂರು ಮೂಲದ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಎಸಿಪಿ ರಂಗಪ್ಪ ನೇತೃತ್ವದ ತಂಡದಿಂದ ನಾಲ್ವರು ಆರೋಪಿಗಳನ್ನು ಬಂಧಿಸಲಾಗಿದೆ.
ರಾಜ್ಯದ ಮೀನುಗಾರರಿಗೆ ಗುಡ್ ನ್ಯೂಸ್: ವಿವಿಧ ಯೋಜನೆಯಡಿ ಸಹಾಯಧನಕ್ಕೆ ಅರ್ಜಿ ಆಹ್ವಾನ
ಸಾಗರ ತಾಲ್ಲೂಕಿನ ಗಂಗಾಮತಸ್ಥರು, ಮಡಿವಾಳ, ಈಡಿಗ ಸಮುದಾಯದವರಿಗೆ ಗುಡ್ ನ್ಯೂಸ್