ಬೆಂಗಳೂರು : ಇಂಡಿಯನ್ ಪ್ರೀಮಿಯರ್ ಲೀಗ್ ಇತಿಹಾಸದಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮೊದಲ ಬಾರಿಗೆ ಚಾಂಪಿಯನ್ ಪಟ್ಟ ಅಲಂಕರಿಸಿದ್ದು, ತಂಡದ ಈ ಸಾಧನೆ ಕುರಿತು ಮಾಜಿ ಮಾಲೀಕ ವಿಜಯ್ ಮಲ್ಯ ತಂಡಕ್ಕೆ ಮಹತ್ವದ ಸಂದೇಶ ರವಾನಿಸಿದ್ದಾರೆ.
ಹೌದು ನಿನ್ನೆ ಗುಜರಾತಿನ ಅಹಮದಾಬಾದ್ ನಲ್ಲಿ ನರೇಂದ್ರ ಮೋದಿ ಸ್ಟೇಡಿಯಂ ನಲ್ಲಿ ಪಂಜಾಬ್ ವಿರುದ್ಧ 6 ರಂಗಳ ಭರ್ಜರಿ ಗೆಲುವು ದಾಖಲಿಸಿ ಸ್ವಚ್ಛದ ಐಪಿಎಲ್ ಟ್ರೋಫಿಯನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನದಾಗಿಸಿಕೊಂಡಿತು. ಕಳೆದ 17 ವರ್ಷಗಳಿಂದ ಕಪ್ ಬರ ಎದುರಿಸುತ್ತಿದ್ದ ಆರ್ಸಿಬಿ ಇದೀಗ ಆ ಒಂದು ಬರವನ್ನು ನೀಗಿಸಿಕೊಂಡಿದೆ. ಇನ್ನು ಆರ್ಸಿಬಿ ಕಪ್ ಗೆದ್ದ ಬೆನ್ನಲ್ಲೇ ಮಾಜಿ ಮಾಲಿಕ ವಿಜಯ ಮಲ್ಯ ಮಹತ್ವದ ಸಂದೇಶ ನೀಡಿದ್ದಾರೆ.
ಈ ಕುರಿತು ಎಕ್ಸ್ ನಲ್ಲಿ ಟ್ವೀಟ್ ಮಾಡಿರುವ ವಿಜಯ್ ಮಲ್ಯ, ’18 ವರ್ಷಗಳ ನಂತರ ಆರ್ಸಿಬಿ ಅಂತಿಮವಾಗಿ ಐಪಿಎಲ್ ಚಾಂಪಿಯನ್ ಆಗಿದೆ. 2025 ರ ಪಂದ್ಯಾವಳಿಯಾದ್ಯಂತ ಅದ್ಭುತ ಅಭಿಯಾನ. ಅತ್ಯುತ್ತಮ ತರಬೇತಿ ಮತ್ತು ಸಹಾಯಕ ಸಿಬ್ಬಂದಿಯೊಂದಿಗೆ ಉತ್ತಮ ಸಮತೋಲನ ಹೊಂದಿರುವ ತಂಡ. ಅನೇಕ ಅಭಿನಂದನೆಗಳು! ಈ ಸಲ ಕಪ್ ನಮ್ದೆ !! ಎಂದು ಟ್ವೀಟ್ ಮಾಡಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ, ‘ನಾನು ಆರ್ಸಿಬಿಯನ್ನು ಸ್ಥಾಪಿಸಿದಾಗ ಬೆಂಗಳೂರಿಗೆ ಐಪಿಎಲ್ ಟ್ರೋಫಿ ಬರಬೇಕು ಎಂಬುದು ನನ್ನ ಕನಸಾಗಿತ್ತು. ಯುವಕನಾಗಿದ್ದಾಗ ದಂತಕಥೆಯ ಕಿಂಗ್ ಕೊಹ್ಲಿಯನ್ನು ಆಯ್ಕೆ ಮಾಡುವ ಸೌಭಾಗ್ಯ ನನಗಿತ್ತು ಮತ್ತು ಅವರು 18 ವರ್ಷಗಳ ಕಾಲ ಆರ್ಸಿಬಿಯೊಂದಿಗೆ ಇದ್ದಾರೆ ಎಂಬುದು ಗಮನಾರ್ಹ.
ಆರ್ಸಿಬಿ ಇತಿಹಾಸದ ಅಳಿಸಲಾಗದ ಭಾಗವಾಗಿ ಉಳಿದಿರುವ ಕ್ರಿಸ್ ಗೇಲ್ ಮತ್ತು ಮಿಸ್ಟರ್ 360 ಎಬಿ ಡಿವಿಲ್ಲರ್ಸ್ ಅವರನ್ನು ಆಯ್ಕೆ ಮಾಡುವ ಗೌರವವೂ ನನಗೆ ಸಿಕ್ಕಿತು. ಅಂತಿಮವಾಗಿ, ಐಪಿಎಲ್ ಟ್ರೋಫಿ ಬೆಂಗಳೂರಿಗೆ ಆಗಮಿಸುತ್ತಿದೆ. ನನ್ನ ಕನಸನ್ನು ನನಸಾಗಿಸಿದ ಎಲ್ಲರಿಗೂ ಅಭಿನಂದನೆಗಳು ಮತ್ತು ಮತ್ತೊಮ್ಮೆ ಧನ್ಯವಾದಗಳು. ಆರ್ಸಿಬಿ ಅಭಿಮಾನಿಗಳು ಅತ್ಯುತ್ತಮರು ಮತ್ತು ಅವರು ಐಪಿಎಲ್ ಟ್ರೋಫಿಗೆ ಅರ್ಹರು. ಈ ಸಲಾ ಕಪ್ ಬೆಂಗಳೂರಿಗೆ ಬರುತೆ! ಎಂದು ಟ್ವೀಟ್ ಮಾಡಿದ್ದಾರೆ.
RCB are IPL Champions finally after 18 years. Superb campaign right through the 2025 tournament. A well balanced team Playing Bold with outstanding coaching and support staff. Many congratulations ! Ee sala cup namde !!
— Vijay Mallya (@TheVijayMallya) June 3, 2025