Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ‘ಪ್ರಧಾನಿ ಮೋದಿ’ ಭಾಷಣಕ್ಕೂ ಮುನ್ನ ಟ್ರಿನಿಡಾಡ್- ಟೊಬಾಗೋ ಸಂಸತ್ತಿನಲ್ಲಿ ಮೊಳಗಿದ ಭಾರತದ ರಾಷ್ಟ್ರಗೀತೆ : ವಿಡಿಯೋ ವೈರಲ್ |WATCH VIDEO

05/07/2025 1:18 PM

12 ದೇಶಗಳಿಗೆ ಸೋಮವಾರ ಅಮೇರಿಕಾದ ಸುಂಕ ಪತ್ರ ಸಿಗಲಿದೆ: ಟ್ರಂಪ್

05/07/2025 1:15 PM

BIG NEWS : ‘ಮರಾಠಿ’ ಭಾಷೆಗೆ ಮೊದಲ ಆದ್ಯತೆ, ಯಾವುದೇ ಕಾರಣಕ್ಕೂ ‘ಹಿಂದಿ’ ಹೇರಿಕೆ ಸಹಿಸಲ್ಲ : ರಾಜ್ ಠಾಕ್ರೆ ಹೇಳಿಕೆ

05/07/2025 1:15 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ನಗದು ಬಹುಮಾನ: ಕಬ್ಬು ನುರಿಸುವ ಹೊಣೆ ಸರ್ಕಾರದ್ದು- ಸಚಿವ ಶಿವಾನಂದ ಪಾಟೀಲ್ ಘೋಷಣೆ
KARNATAKA

ವಂಚನೆ ದೂರು ನೀಡುವ ರೈತರಿಗೆ 1 ಲಕ್ಷ ನಗದು ಬಹುಮಾನ: ಕಬ್ಬು ನುರಿಸುವ ಹೊಣೆ ಸರ್ಕಾರದ್ದು- ಸಚಿವ ಶಿವಾನಂದ ಪಾಟೀಲ್ ಘೋಷಣೆ

By kannadanewsnow0916/12/2024 8:22 PM

ಬೆಳಗಾವಿ: ರೈತರು ಯಾವುದೇ ಸಕ್ಕರೆ ಕಾರ್ಖಾನೆ ವಿರುದ್ಧ ಸೂಕ್ತ ದಾಖಲೆಗಳೊಂದಿಗೆ ತೂಕದಲ್ಲಿ ವಂಚನೆಯ ದೂರು ದಾಖಲು ಮಾಡಿದರೆ 24 ಗಂಟೆಯೊಳಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಕ್ಕರೆ ಸಚಿವ ಶಿವಾನಂದ ಪಾಟೀಲ ಭರವಸೆ ನೀಡಿದರು.

ದೂರು ದಾಖಲು ಮಾಡಲು ಭಯಪಡುವ ಅಗತ್ಯವಿಲ್ಲ. ತೂಕದಲ್ಲಿ ವಂಚನೆ ಮಾಡಿದ ದೂರು ನೀಡಿದರೆ ಕ್ರಿಮಿನಲ್‌ ಕೇಸು ದಾಖಲಿಸುವುದು ಅಷ್ಟೇ ಅಲ್ಲ, ಸರ್ಕಾರ ರೈತರ ಪರವಾಗಿ ನಿಲ್ಲಲಿದೆ. ವಂಚನೆ ದೂರು ದಾಖಲು ಮಾಡುವ ರೈತನಿಗೆ ಒಂದು ಲಕ್ಷ ರೂ. ನಗದು ಬಹುಮಾನ ನೀಡಲಾಗುವುದು ಹಾಗೂ ಅವರ ಕಬ್ಬನ್ನು ನುರಿಸುವ ಜವಾಬ್ದಾರಿಯನ್ನು ಸರ್ಕಾರ ವಹಿಸಿಕೊಳ್ಳಲಿದೆ ಎಂದು ಹೇಳಿದರು.

ತೂಕದಲ್ಲಿ ವಂಚನೆ ತಡೆಗೆ ತೂಕ ಮತ್ತು ಮಾಪನ ಇಲಾಖೆ ಅಧಿಕಾರಿಗಳು ಎಲ್ಲ ಕಾರ್ಖಾನೆಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದು, ಡಿಜಿಟಲ್‌ ತೂಕದ ಯಂತ್ರ ಅಳವಡಿಸಲು ಕ್ರಮ ಕೈಗೊಳ್ಳಲಾಗಿದೆ. ಸರ್ಕಾರದ ಈ ಕ್ರಮ ಪ್ರಶ್ನಿಸಿ ಕೆಲವು ಕಾರ್ಖಾನೆಗಳು ಕೋರ್ಟಿಗೆ ಹೋಗಿವೆ. ತೂಕದಲ್ಲಿ ವಂಚನೆ ತಡೆ ವಿಚಾರದಲ್ಲಿ ಸರ್ಕಾರದ ನಿರ್ಧಾರ ಅಚಲವಾಗಿದೆ ಎಂದು ಸ್ಪಷ್ಟಪಡಿಸಿದರು.

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕಬ್ಬು ಬೆಳೆಗಾರರು ಸೋಮವಾರ ಸುವರ್ಣ ವಿಧಾನಸೌಧದ ಬಳಿ ಕೈಗೊಂಡಿದ್ದ ಧರಣಿ ಸ್ಥಳಕ್ಕೆ ತೆರಳಿ ಮನವಿ ಪತ್ರ ಸ್ವೀಕರಿಸಿದ ಸಚಿವರು ಸ್ಥಳದಲ್ಲೇ ಕೆಲವು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದರು.

ಸಕ್ಕರೆ ಆಯುಕ್ತರ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರ ಮಾಡಲಾಗುವುದು. ಸ್ಥಗಿತಗೊಂಡಿರುವ ಸಹಕಾರಿ ಕ್ಷೇತ್ರದ ಸಕ್ಕರೆ ಕಾರ್ಖಾನೆಗಳನ್ನು ಸಹಕಾರಿ ವಲಯದಲ್ಲೇ ಉಳಿಸಿ ಪುನರಾರಂಭಕ್ಕೆ ಪ್ರಯತ್ನಿಸಲಾಗುವುದು. ಬಸವರಾಜ ಬೊಮ್ಮಾಯಿ ಅವರು ಮುಖ್ಯಮಂತ್ರಿಗಳಾಗಿದ್ದಾಗ ಕಬ್ಬು ಬೆಳೆಗಾರರಿಗೆ ಪ್ರತಿಟನ್‌ಗೆ ಹೆಚ್ಚುವರಿ 150 ರೂ. ಕೊಡಿಸುವ ಭರವಸೆ ನೀಡಿದ್ದು, ಈ ಹಣ ಕೊಡಿಸಲು ಪ್ರಯತ್ನಿಸಲಾಗುವುದು ಎಂದು ಹೇಳಿದರು.

ರೈತರ ಕಬ್ಬಿನ ಬಿಲ್‌ ಬಾಕಿಯನ್ನು ಸಕ್ಕರೆ ಕಾರ್ಖಾನೆಗಳು ಪೂರ್ಣ ಪ್ರಮಾಣದಲ್ಲಿ ಪಾವತಿ ಮಾಡಲು ಸರ್ಕಾರ ಕ್ರಮ ಕೈಗೊಂಡಿದೆ. ಕಬ್ಬು ಪೂರೈಕೆ ಮಾಡಿದ 15 ದಿನಗಳೊಳಗೆ ಬಿಲ್‌ ಪಾವತಿ ಮಾಡಬೇಕು ಎಂಬುದು ರೈತರ ಬೇಡಿಕೆ. ಆದರೆ ಸಕ್ಕರೆ ಮಾರಾಟಕ್ಕೆ ಕೇಂದ್ರ ಸರ್ಕಾರ ಅನುಮತಿ ನೀಡುವುದು ವಿಳಂಬ ಮಾಡಿದರೆ ಕಬ್ಬು ಬೆಳೆಗಾರರಿಗೆ ಬಿಲ್‌ ಪಾವತಿ ಮಾಡುವುದು ಕಷ್ಟ ಎಂದು ಹೇಳಿದ್ದಾರೆ. ಸಕ್ಕರೆ ಕಾರ್ಖಾನೆಗಳಿಗೆ ಅಡಮಾನ ಸಾಲ ನೀಡಲು ಸರ್ಕಾರ ಬದ್ಧವಿದ್ದು, ಬಿಲ್‌ ಪಾವತಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ರಾಜ್ಯದಲ್ಲಿ 30 ಸಹಕಾರಿ ಸಕ್ಕರೆ ಕಾರ್ಖಾನೆಗಳಿದ್ದು, ಅವುಗಳಲ್ಲಿ 13 ಮಾತ್ರ ಕಬ್ಬು ನುರಿಸುತ್ತಿವೆ. ಹಿಂದಿನ ಸರ್ಕಾರ ನಷ್ಟದಲ್ಲಿರುವ 13 ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಖಾಸಗಿಯವರಿಗೆ ಗುತ್ತಿಗೆ ಆಧಾರದ ಮೇಲೆ ನೀಡಿದೆ. ನಮ್ಮ ಸರ್ಕಾರ ನಷ್ಟದಲ್ಲಿರುವ ಸಹಕಾರಿ ಸಕ್ಕರೆ ಕಾರ್ಖಾನೆಗಳನ್ನು ಸಹಕಾರಿ ವಲಯದಲ್ಲಿಯೇ ಉಳಿಸಿಕೊಂಡು ಪುನಶ್ಚೇತನಗೊಳಿಸಲು ಪ್ರಯತ್ನಿಸಲಿದೆ. ದೇಶಕ್ಕೆ ಮಾದರಿಯಾಗಿದ್ದ ವಿಜಯಪುರ ಜಿಲ್ಲೆಯ ನಂದಿ ಸಹಕಾರಿ ಸಕ್ಕರೆ ಕಾರ್ಖಾನೆ ಕೂಡ ನಷ್ಟದಲ್ಲಿದ್ದು, ಈ ಸಕ್ಕರೆ ಕಾರ್ಖಾನೆಗೆ ಸಾಲ ಕೊಡುವ ಮೂಲಕ ಸಹಕಾರಿ ವಲಯದಲ್ಲಿಯೇ ಉಳಿಸಿಕೊಳ್ಳಲಾಗಿದೆ. ಸರ್ಕಾರದ ಒಡೆತನದಲ್ಲಿರುವ ಮೈಷುಗರ್‌ ಸಕ್ಕರೆ ಕಾರ್ಖಾನೆಯನ್ನು ಉಳಿಸಿಕೊಳ್ಳುವ ಉದ್ದೇಶದಿಂದ ರಾಜ್ಯ ಸರ್ಕಾರವೇ 50 ಕೋಟಿ ರೂ. ನೆರವು ನೀಡಿದೆ ಎಂದು ವಿವರಿಸಿದರು.

ಕಬ್ಬಿನ ಉತ್ಪನ್ನಗಳನ್ನು ಕೇಂದ್ರ ಸರ್ಕಾರ ನಿಯಂತ್ರಣ ಮಾಡಲಿದ್ದು, ಕಳೆದ ಬಾರಿ ಸಕ್ಕರೆ ರಫ್ತು ಮಾಡಲು ಕೇಂದ್ರ ಅನುಮತಿ ನೀಡಿದ ಕಾರಣ ಕಬ್ಬಿಗೆ ಹೆಚ್ಚುವರಿ ಬೆಲೆ ಕೊಡಲು ಸಾಧ್ಯವಾಗಲಿಲ್ಲ. ರೈತರೂ ಕೂಡ 9 ತಿಂಗಳಿಗೆ ಕಬ್ಬು ಕಟಾವು ಮಾಡುವ ಬದಲಿಗೆ ಕನಿಷ್ಟ 12 ತಿಂಗಳ ನಂತರ ಕಟಾವು ಮಾಡಬೇಕು. ಆಗ ಸಕ್ಕರೆ ಇಳುವರಿ ಹೆಚ್ಚಿನ ಪ್ರಮಾಣದಲ್ಲಿ ಬರಲಿದೆ. ಮಹಾರಾಷ್ಟ್ರ ಮತ್ತು ಉತ್ತರಪ್ರದೇಶದಲ್ಲಿ 12ರಿಂದ 13 ತಿಂಗಳ ನಂತರ ಕಟಾವು ಮಾಡುತ್ತಾರೆ ಎಂದು ಹೇಳಿದರು.

ಕಾಂಗ್ರೆಸ್‌ ಸರ್ಕಾರ ಅಧಿಕಾರಕ್ಕೆ ಬಂದ ನಂತರ ಸಕ್ಕರೆ ಕಾರ್ಖಾನೆಗಳ ಮೇಲೆ ನಿಯಂತ್ರಣ ಸಾಧಿಸಿದ ನಂತರ ಇಳುವರಿ ಪ್ರಮಾಣ ಹೆಚ್ಚಾಗಿದೆ. ಕಬ್ಬು ನುರಿಸುವುದುನ್ನು ಆರಂಭಿಸುವ ಪೂರ್ವದಲ್ಲಿ ಸಕ್ಕರೆ ಕಾರ್ಖಾನೆಗಳು ರೈತರೊಂದಿಗ ಸಂವಾದ ಏರ್ಪಡಿಸಬೇಕಿದೆ ಎಂದರು.

ಎಪಿಎಂಸಿ ಕಾಯ್ದೆ ಮರುಸ್ಥಾಪನೆ

ರಾಜ್ಯ ಸರ್ಕಾರ ಎಪಿಎಂಸಿ ಕಾಯ್ದೆಯನ್ನು ಮರುಸ್ಥಾಪನೆ ಮಾಡಿದ್ದು, ಈ ಕ್ರಮದಿಂದ ಈ ಹಿಂದೆ 180 ಕೋಟಿ ರೂ.ಗಳಷ್ಟಿದ್ದ ಆದಾಯ ಈಗ 300 ಕೋಟಿ ರೂ. ದಾಟಿದೆ. ಈ ಹಣವನ್ನು ರೈತರ ಹಿತಕ್ಕಾಗಿಯೇ ವಿನಿಯೋಗ ಮಾಡಲಾಗುವುದು. ರಾಜ್ಯದಲ್ಲಿ ಮೂರು ಖಾಸಗಿ ಎಪಿಎಂಸಿಗಳಿದ್ದು, ಅವುಗಳನ್ನು ಬಂದ್‌ ಮಾಡಿಸಲಾಗುವುದು ಎಂದು ಭರವಸೆ ನೀಡಿದರು.
ಬಿಜೆಪಿ ಅಧಿಕಾರದಲ್ಲಿರುವ ರಾಜ್ಯಗಳಲ್ಲಿ ಎಪಿಎಂಸಿ ಕಾಯ್ದೆಯನ್ನು ಮರುಸ್ಥಾಪನೆ ಮಾಡಿಲ್ಲ. ಆದರೆ ಇತರ ರಾಜ್ಯಗಳಲ್ಲಿ ಈ ಮೊದಲಿನ ಕಾಯ್ದೆಯನ್ನು ಮರುಸ್ಥಾಪನೆ ಮಾಡಲಾಗಿದೆ ಎಂದರು.

ಆರೋಗ್ಯ ಇಲಾಖೆ, ಕಂದಾಯ ಇಲಾಖೆ, ಅರಣ್ಯ ಇಲಾಖೆ, ಗೃಹ ಇಲಾಖೆಗಳಿಗೆ ಸಂಬಂಧಿಸಿದ ಬೇಡಿಕೆಗಳನ್ನು ಸಂಬಂಧಪಟ್ಟ ಸಚಿವರ ಗಮನಕ್ಕೆ ತರಲಾಗುವುದು. ಈ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲಾಗುವುದು ಎಂದು ಭರವಸೆ ನೀಡಿದರು.

ಶಾಸಕರಾದ ಎನ್ ಹೆಚ್.‌ ಕೋನರೆಡ್ಡಿ,ದರ್ಶನ್‌ ಪುಟ್ಟಣ್ಣಯ್ಯ, ರೈತ ಮುಖಂಡರಾದ ಚೂನಪ್ಪ ಉದ್ದಪ್ಪ ಪೂಜೇರಿ, ಪಚ್ಚೆ ನಂಜುಂಡಸ್ವಾಮಿ, ಶಶಿಕಾಂತ ನಾಯಕ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.

BIG NEWS: ವಿಫಲ ಕೊಳವೆ ಬಾವಿಗಳನ್ನು ಮುಚ್ಚದೇ ಇದ್ದಲ್ಲಿ 1 ವರ್ಷ ಜೈಲು 25 ಸಾವಿರ ದಂಡ: ವಿಧಾನಸಭೆಯಲ್ಲಿ ವಿಧೇಯಕ ಅಂಗೀಕಾರ

ALERT : ಸಾರ್ವಜನಿಕರೇ ಎಚ್ಚರ : ಮೊಬೈಲ್ ನಲ್ಲಿ ಈ `ಗೇಮ್’ ಆಡಿದ್ರೆ ನಿಮ್ಮ ಖಾತೆಯಲ್ಲಿ ಹಣ ಖಾಲಿಯಾಗೋದು ಗ್ಯಾರಂಟಿ.!

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದ `ಪೊಲೀಸ್ ಸಿಬ್ಬಂದಿಗಳಿಗೆ’ ವಾರ್ಷಿಕ ಆರೋಗ್ಯ ತಪಾಸಣೆ ವೆಚ್ಚ 1,500 ರೂ. ಹೆಚ್ಚಳ : ಸರ್ಕಾರ ಮಹತ್ವದ ಆದೇಶ.!

05/07/2025 1:14 PM2 Mins Read

BIG NEWS : ಕಲಬುರ್ಗಿ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಯ ಗ್ಲುಕೋಸ್ ಪೈಪ್ ಕಳಚಿ ರಕ್ತಸ್ರಾವ : ವೈದ್ಯರಿಂದ ಉಡಾಫೆ ಉತ್ತರ

05/07/2025 12:47 PM1 Min Read

BREAKING : ಯುವತಿ ಮೇಲೆ ಅತ್ಯಾಚಾರ ಎಸಗಿ ವಂಚನೆ ಪ್ರಕರಣ : ಕೊನೆಗೂ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್!

05/07/2025 12:40 PM1 Min Read
Recent News

BIG NEWS : ‘ಪ್ರಧಾನಿ ಮೋದಿ’ ಭಾಷಣಕ್ಕೂ ಮುನ್ನ ಟ್ರಿನಿಡಾಡ್- ಟೊಬಾಗೋ ಸಂಸತ್ತಿನಲ್ಲಿ ಮೊಳಗಿದ ಭಾರತದ ರಾಷ್ಟ್ರಗೀತೆ : ವಿಡಿಯೋ ವೈರಲ್ |WATCH VIDEO

05/07/2025 1:18 PM

12 ದೇಶಗಳಿಗೆ ಸೋಮವಾರ ಅಮೇರಿಕಾದ ಸುಂಕ ಪತ್ರ ಸಿಗಲಿದೆ: ಟ್ರಂಪ್

05/07/2025 1:15 PM

BIG NEWS : ‘ಮರಾಠಿ’ ಭಾಷೆಗೆ ಮೊದಲ ಆದ್ಯತೆ, ಯಾವುದೇ ಕಾರಣಕ್ಕೂ ‘ಹಿಂದಿ’ ಹೇರಿಕೆ ಸಹಿಸಲ್ಲ : ರಾಜ್ ಠಾಕ್ರೆ ಹೇಳಿಕೆ

05/07/2025 1:15 PM

BIG NEWS : ರಾಜ್ಯದ `ಪೊಲೀಸ್ ಸಿಬ್ಬಂದಿಗಳಿಗೆ’ ವಾರ್ಷಿಕ ಆರೋಗ್ಯ ತಪಾಸಣೆ ವೆಚ್ಚ 1,500 ರೂ. ಹೆಚ್ಚಳ : ಸರ್ಕಾರ ಮಹತ್ವದ ಆದೇಶ.!

05/07/2025 1:14 PM
State News
KARNATAKA

BIG NEWS : ರಾಜ್ಯದ `ಪೊಲೀಸ್ ಸಿಬ್ಬಂದಿಗಳಿಗೆ’ ವಾರ್ಷಿಕ ಆರೋಗ್ಯ ತಪಾಸಣೆ ವೆಚ್ಚ 1,500 ರೂ. ಹೆಚ್ಚಳ : ಸರ್ಕಾರ ಮಹತ್ವದ ಆದೇಶ.!

By kannadanewsnow5705/07/2025 1:14 PM KARNATAKA 2 Mins Read

ಬೆಂಗಳೂರು : ರಾಜ್ಯದ ಪೊಲೀಸ್ ಸಿಬ್ಬಂದಿಗಳಿಗೆ ವಾರ್ಷಿಕ ಆರೋಗ್ಯ ತಪಾಸಣೆಯ ವೆಚ್ಚವನ್ನು ಹೆಚ್ಚಿಸಿ ರಾಜ್ಯ ಸರ್ಕಾರವು ಮಹತ್ವದ ಆದೇಶ ಹೊರಡಿಸಿದೆ.…

BIG NEWS : ಕಲಬುರ್ಗಿ ಜಿಮ್ಸ್ ಆಸ್ಪತ್ರೆಯಲ್ಲಿ ರೋಗಿಯ ಗ್ಲುಕೋಸ್ ಪೈಪ್ ಕಳಚಿ ರಕ್ತಸ್ರಾವ : ವೈದ್ಯರಿಂದ ಉಡಾಫೆ ಉತ್ತರ

05/07/2025 12:47 PM

BREAKING : ಯುವತಿ ಮೇಲೆ ಅತ್ಯಾಚಾರ ಎಸಗಿ ವಂಚನೆ ಪ್ರಕರಣ : ಕೊನೆಗೂ ಪುತ್ತೂರು ಬಿಜೆಪಿ ಮುಖಂಡನ ಪುತ್ರ ಅರೆಸ್ಟ್!

05/07/2025 12:40 PM

ಹೆಣ್ಣು ಮಕ್ಕಳ ಪೋಷಕರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಿಂದಲೇ `ಸುಕನ್ಯಾ ಸಮೃದ್ಧಿ ಖಾತೆ’ ತೆರೆಯಬಹುದು.!

05/07/2025 12:20 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.