Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ದರ್ಪ, ದುರಂಹಕಾರಕ್ಕೆ ಮತಹಾಕುವ ಜನರೇ ಬುದ್ಧಿ ಕಲಿಸುತ್ತಾರೆ: ಧಮ್ಕಿ ಡಿಕೆಶಿ ಎಂದ ಜೆಡಿಎಸ್

14/12/2025 2:52 PM

ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದ ಪಂಕಜ್ ಚೌಧರಿ ಆಯ್ಕೆ

14/12/2025 2:46 PM

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ವಿಷಯಕ್ಕೆ ಬಿಜೆಪಿಗರು ತಲೆ ಕೆಡಿಸಿಕೊಂಡಿರುವುದು ಹಾಸ್ಯಾಸ್ಪದ: ಸಚಿವ ಹೆಚ್.ಸಿ ಮಹದೇವಪ್ಪ

14/12/2025 2:41 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ₹11,000 ಕೋಟಿ ಹೂಡಿಕೆ; ಕರ್ನಾಟಕ ಸರ್ಕಾರದ ಜೊತೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ
KARNATAKA

ನವೀಕರಿಸಬಹುದಾದ ಇಂಧನ ಕ್ಷೇತ್ರದಲ್ಲಿ ₹11,000 ಕೋಟಿ ಹೂಡಿಕೆ; ಕರ್ನಾಟಕ ಸರ್ಕಾರದ ಜೊತೆ ಹೀರೊ ಫ್ಯೂಚರ್ ಎನರ್ಜಿಸ್ ಒಪ್ಪಂದ

By kannadanewsnow0901/12/2024 5:06 PM

ಲಂಡನ್: ಕರ್ನಾಟಕದ ಕೈಗಾರಿಕಾ ಮತ್ತು ನವೀಕರಿಸಬಹುದಾದ ಇಂಧನ ವಲಯಗಳನ್ನು ಮುನ್ನಡೆಸುವ ನಿಟ್ಟಿನಲ್ಲಿ ಹೀರೊ ಫ್ಯೂಚರ್ ಎನರ್ಜೀಸ್‌ ಪ್ರೈವೇಟ್ ಲಿಮಿಟೆಡ್ (ಎಚ್ಎಫ್ಇಪಿಎಲ್) ಇಲ್ಲಿ ಕರ್ನಾಟಕ ಸರ್ಕಾರದ ಜೊತೆಗೆ ₹ 11,000 ಕೋಟಿ ಮೊತ್ತದ ಬಂಡವಾಳ ಹೂಡಿಕೆ ಒಪ್ಪಂದಕ್ಕೆ (ಎಂಒಯು) ಸಹಿ ಹಾಕಿದೆ.

ಜಾಗತಿಕ ಹೂಡಿಕೆದಾರರ ಸಮಾವೇಶದ ಪೂರ್ವಸಿದ್ಧತೆ ಅಂಗವಾಗಿ ಲಂಡನ್‌ನಲ್ಲಿ ನಡೆಯುತ್ತಿರುವ ಅಂತರರಾಷ್ಟ್ರೀಯ ರೋಡ್‌ ಷೋದಲ್ಲಿ ಈ ಒಪ್ಪಂದ ಕಾರ್ಯಗತಗೊಂಡಿದೆ.

ʼಕರ್ನಾಟಕದಲ್ಲಿ ನವೀಕರಿಸಬಹುದಾದ ಇಂಧನ, ಪರಿಸರ ಸ್ನೇಹಿ ಪರಿಶುದ್ಧ ಜಲಜನಕ ಮತ್ತು ಅದರ ಉತ್ಪನ್ನಗಳಿಗೆ ಸಂಬಂಧಿಸಿದ ಯೋಜನೆಗಳಿಗೆ ₹11,000 ಕೋಟಿ ಬಳಕೆ ಆಗಲಿದೆ. ಎಚ್ಎಫ್ಇಪಿಎಲ್- ನ ಈ ಪ್ರಸ್ತಾವಿತ ಯೋಜನೆಗಳು ರಾಜ್ಯದಲ್ಲಿ 2025-26 ರಿಂದ ಕಾರ್ಯಾರಂಭಗೊಳ್ಳಲಿವೆ. 2 ರಿಂದ 3 ವರ್ಷಗಳಲ್ಲಿ ಈ ಮೊತ್ತದ ಹೂಡಿಕೆ ಆಗಲಿದೆ. ಈ ಒಪ್ಪಂದದ ಫಲವಾಗಿ ಕರ್ನಾಟಕದಲ್ಲಿ ಸುಮಾರು 3,000 ಉದ್ಯೋಗಗಳು ಸೃಷ್ಟಿಯಾಗುವ ನಿರೀಕ್ಷೆಯಿದೆʼ ಎಂದು ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ.

ʼಪರಿಸರ ಸ್ನೇಹಿ ಇಂಧನ ಪರಿಹಾರ ಮತ್ತು ಸುಸ್ಥಿರ ಕೈಗಾರಿಕಾ ಬೆಳವಣಿಗೆ ಸಾಧಿಸಲು ರಾಜ್ಯವು ಮುಂಚೂಣಿಯಲ್ಲಿ ಇರುವುದನ್ನು ಮತ್ತು ಬಂಡವಾಳ ಹೂಡಿಕೆಯ ಆದ್ಯತಾ ತಾಣವಾಗಿರುವುದಕ್ಕೆ ಈ ಒಪ್ಪಂದವು ಇನ್ನೊಂದು ನಿದರ್ಶನವಾಗಿದೆ. ಕಾಲಮಿತಿ ಒಳಗೆ ಈ ಯೋಜನೆಗಳನ್ನು ಕಾರ್ಯಗತಗೊಳಿಸಲು ಅಗತ್ಯವಾದ ಉತ್ತೇಜನಾ ಕ್ರಮಗಳನ್ನು ರಾಜ್ಯ ಸರ್ಕಾರ ಒದಗಿಸಲಿದೆʼ ಎಂದು ಸಚಿವರು ಹೇಳಿದ್ದಾರೆ.

ಸಚಿವ ಎಂ.ಬಿ.ಪಾಟೀಲ ಅವರ ಸಮ್ಮುಖದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ. ಎಸ್.ಸೆಲ್ವಕುಮಾರ್ ಮತ್ತು ಹೀರೊ ಫ್ಯೂಚರ್ ಎನರ್ಜಿಯ ಮುಖ್ಯ ಹಣಕಾಸು ಅಧಿಕಾರಿ ಬೆಂಜಮಿನ್ ಪೌಲ್ ಫ್ರೇಸ̧ರ್‌ ಅವರು ಒಪ್ಪಂದ ಪತ್ರಗಳನ್ನು ವಿನಿಮಯ ಮಾಡಿಕೊಂಡರು.

ಹೊಸ ತಲೆಮಾರಿನ ಇಂಧನಗಳಿಗಾಗಿ ಅಸಾಮಾನ್ಯ ಸ್ವರೂಪದ ಹವಾಮಾನ ಸವಾಲುಗಳು ದಿಟ್ಟ ಹಾಗೂ ದೃಢ ನಿರ್ಧಾರದ ಕ್ರಮಗಳನ್ನು ಕೈಗೊಳ್ಳಬೇಕಾದ ಅಗತ್ಯ ಇರುವುದನ್ನು ಹೀರೊ ಫ್ಯೂಚರ್‌ ಎನರ್ಜೀಸ್‌ ಗುರುತಿಸಿದೆ. 6ಕ್ಕೂ ಹೆಚ್ಚು ಗಿಗಾವಾಟ್‌ನಷ್ಟು ನವೀಕರಿಸಬಹುದಾದ ಇಂಧನ ಸಾಮರ್ಥ್ಯದೊಂದಿಗೆ ನಾವು ಮಾಲಿನ್ಯ ತಗ್ಗಿಸುವ ನಮ್ಮ ಪ್ರಯತ್ನಗಳನ್ನು ಸಾರಿಗೆ ಮತ್ತು ಭಾರಿ ಎಂಜಿನಿಯರಿಂಗ್ ತಯಾರಿಕೆಯಂತಹ ಕೈಗಾರಿಕೆಗಳಿಗೆ ವಿಸ್ತರಿಸುತ್ತಿದ್ದೇವೆʼ ಎಂದು ಕಂಪನಿಯ ಮುಖ್ಯಸ್ಥರು ಒಪ್ಪಂದಕ್ಕೆ ಸಹಿ ಹಾಕುವ ಸಂದರ್ಭದಲ್ಲಿ ತಿಳಿಸಿದ್ದಾರೆ.

ಎಚ್ಎಫ್ಇಪಿಎಲ್ ಅನ್ನು ಕಂಪನಿಯ ಅಧ್ಯಕ್ಷ ಮತ್ತು ವ್ಯವಸ್ಥಾಪಕ ನಿರ್ದೇಶಕ ಆಗಿರುವ ರಾಹುಲ್ ಮುಂಜಾಲ್ ಅವರು 2012 ರಲ್ಲಿ ಸ್ಥಾಪಿಸಿದ್ದಾರೆ. ಇದು ಹೀರೊ ಗ್ರೂಪ್‌ನ ಭಾಗವಾಗಿದೆ.

ಕೈಗಾರಿಕಾ ಇಲಾಖೆ ಆಯುಕ್ತರಾದ ಗುಂಜನ್ ಕೃಷ್ಣ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಸಯ್ಯದ್ ಮೋದಿ ಇಂಟರ್ನ್ಯಾಷನಲ್ 2024 ಫೈನಲ್: ಭಾರತದ ಶಟ್ಲರ್ ಪಿ.ವಿ.ಸಿಂಧು ಭರ್ಜರಿ ಗೆಲುವು | PV Sindhu

BREAKING : ಪಶ್ಚಿಮ ಘಟ್ಟ ಪ್ರದೇಶದಲ್ಲಿ ‘ಭೂ ಕಂಪನ’ : ಶಿರಸಿ ಸೇರಿ ಹಲವೆಡೆ 3 ಸೆಕೆಂಡ್ ವರೆಗೆ ಕಂಪಿಸಿದ ಭೂಮಿ

Share. Facebook Twitter LinkedIn WhatsApp Email

Related Posts

ನಿಮ್ಮ ದರ್ಪ, ದುರಂಹಕಾರಕ್ಕೆ ಮತಹಾಕುವ ಜನರೇ ಬುದ್ಧಿ ಕಲಿಸುತ್ತಾರೆ: ಧಮ್ಕಿ ಡಿಕೆಶಿ ಎಂದ ಜೆಡಿಎಸ್

14/12/2025 2:52 PM1 Min Read

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ವಿಷಯಕ್ಕೆ ಬಿಜೆಪಿಗರು ತಲೆ ಕೆಡಿಸಿಕೊಂಡಿರುವುದು ಹಾಸ್ಯಾಸ್ಪದ: ಸಚಿವ ಹೆಚ್.ಸಿ ಮಹದೇವಪ್ಪ

14/12/2025 2:41 PM1 Min Read

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

14/12/2025 2:38 PM1 Min Read
Recent News

ನಿಮ್ಮ ದರ್ಪ, ದುರಂಹಕಾರಕ್ಕೆ ಮತಹಾಕುವ ಜನರೇ ಬುದ್ಧಿ ಕಲಿಸುತ್ತಾರೆ: ಧಮ್ಕಿ ಡಿಕೆಶಿ ಎಂದ ಜೆಡಿಎಸ್

14/12/2025 2:52 PM

ಉತ್ತರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷರಾಗಿ ಸಂಸದ ಪಂಕಜ್ ಚೌಧರಿ ಆಯ್ಕೆ

14/12/2025 2:46 PM

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ವಿಷಯಕ್ಕೆ ಬಿಜೆಪಿಗರು ತಲೆ ಕೆಡಿಸಿಕೊಂಡಿರುವುದು ಹಾಸ್ಯಾಸ್ಪದ: ಸಚಿವ ಹೆಚ್.ಸಿ ಮಹದೇವಪ್ಪ

14/12/2025 2:41 PM

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

14/12/2025 2:38 PM
State News
KARNATAKA

ನಿಮ್ಮ ದರ್ಪ, ದುರಂಹಕಾರಕ್ಕೆ ಮತಹಾಕುವ ಜನರೇ ಬುದ್ಧಿ ಕಲಿಸುತ್ತಾರೆ: ಧಮ್ಕಿ ಡಿಕೆಶಿ ಎಂದ ಜೆಡಿಎಸ್

By kannadanewsnow0914/12/2025 2:52 PM KARNATAKA 1 Min Read

ಬೆಂಗಳೂರು; ನೀವು ಉಪ ಮುಖ್ಯಮಂತ್ರಿಯೋ ಅಥವಾ ಬೀದಿ ರೌಡಿಯೋ? ಪ್ರಜಾಪ್ರಭುತ್ವದಲ್ಲಿ ಪ್ರಶ್ನಿಸುವ ಹಕ್ಕು ಎಲ್ಲಾ ಜನಸಾಮಾನ್ಯರಿಗೆ ಇದೆ ಎಂಬುದಾಗಿ ಜೆಡಿಎಸ್…

ಕಾಂಗ್ರೆಸ್ ಪಕ್ಷದ ಮುಖ್ಯಮಂತ್ರಿ ವಿಷಯಕ್ಕೆ ಬಿಜೆಪಿಗರು ತಲೆ ಕೆಡಿಸಿಕೊಂಡಿರುವುದು ಹಾಸ್ಯಾಸ್ಪದ: ಸಚಿವ ಹೆಚ್.ಸಿ ಮಹದೇವಪ್ಪ

14/12/2025 2:41 PM

ಬೆಂಗಳೂರಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಕಾರ್ಯಸಾಧ್ಯತಾ ವರದಿಗೆ ಟೆಂಡರ್ ಆಹ್ವಾನ

14/12/2025 2:38 PM

ಚಿಕ್ಕಮಗಳೂರಲ್ಲಿ ಕಾಫಿ ಕಳ್ಳರ ಗ್ಯಾಂಗ್ ಆಕ್ಟೀವ್: ಬೆಳೆಗಾರನ ಮೇಲೆ ಅಟ್ಯಾಕ್ ಮಾಡಿದ ಖದೀಮರು ಅರೆಸ್ಟ್

14/12/2025 2:34 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.