ಶಿವಪುರ ಸ್ಮಾರಕ ಪುನರುಜ್ಜೀವನಕ್ಕೆ 2 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ: ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ

ಮಂಡ್ಯ: ಜಿಲ್ಲೆಯ ಮದ್ದೂರಿನ ಶಿವಪುರದ ಧ್ವಜ ಸತ್ಯಾಗ್ರಹ ಸ್ಮಾರಕ ಸೌಧ ಪುನರುಜ್ಜೀವನ ಮಾಡಲು 2 ಕೋಟಿ ರೂ. ಅನುದಾನ ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಆರ್ಥಿಕ ಇಲಾಖೆ ಮುಖ್ಯ ಕಾರ್ಯದರ್ಶಿಗೆ ಆದೇಶಿಸಿದ್ದಾರೆ. ತಾವು ಸಲ್ಲಿಸಿದ ಮನವಿಗೆ ಸಿಎಂ ಸ್ಪಂದಿಸಿ, ಸ್ಮಾರಕದ ನವೀಕರಣಕ್ಕೆ ಕ್ರಮ ವಹಿಸಿದ್ದು, ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರಿಗೆ ಅಭಿನಂದನೆಗಳು ಎಂದು ಮಂಡ್ಯ ಸ್ಥಳೀಯ ಸಂಸ್ಥೆಗಳ ಕ್ಷೇತ್ರದ ವಿಧಾನ ಪರಿಷತ್‌ ಶಾಸಕ ದಿನೇಶ ಗೂಳಿಗೌಡ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. 1937 ರಲ್ಲಿ ಶಿವಪುರದಲ್ಲಿ ಹೋರಾಟಗಾರರಾದ … Continue reading ಶಿವಪುರ ಸ್ಮಾರಕ ಪುನರುಜ್ಜೀವನಕ್ಕೆ 2 ಕೋಟಿ ರೂ. ಬಿಡುಗಡೆಗೆ ಸಿಎಂ ಆದೇಶ: ಶಾಸಕ ದಿನೇಶ್ ಗೂಳಿಗೌಡ ಅಭಿನಂದನೆ