Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING: ಕೇರಳ ನಟಿಯ ಮೇಲೆ ಸಾಮೂಹಿತ ಅತ್ಯಾಚಾರ ಕೇಸ್: ಪಲ್ಸರ್ ಸುನಿ ಸೇರಿ ಇತರೆ ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

12/12/2025 5:06 PM

ಪ್ರತಿ ಪಾಲಿಕೆಗೆ 200 ಕೋಟಿ ರೂ: ಸರ್ಕಾರದಿಂದ ಐತಿಹಾಸಿಕ ನಿರ್ಧಾರ- ಸಚಿವ ಬೈರತಿ ಸುರೇಶ್

12/12/2025 4:48 PM

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಸಚಿವ ಬೈರತಿ ಸುರೇಶ್

12/12/2025 4:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಪ್ರತಿ ಪಾಲಿಕೆಗೆ 200 ಕೋಟಿ ರೂ: ಸರ್ಕಾರದಿಂದ ಐತಿಹಾಸಿಕ ನಿರ್ಧಾರ- ಸಚಿವ ಬೈರತಿ ಸುರೇಶ್
KARNATAKA

ಪ್ರತಿ ಪಾಲಿಕೆಗೆ 200 ಕೋಟಿ ರೂ: ಸರ್ಕಾರದಿಂದ ಐತಿಹಾಸಿಕ ನಿರ್ಧಾರ- ಸಚಿವ ಬೈರತಿ ಸುರೇಶ್

By kannadanewsnow0912/12/2025 4:48 PM

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿರುವ 12 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂಪಾಯಿಯಂತೆ ಒಟ್ಟು 2400 ಕೋಟಿ ರೂಪಾಯಿಗಳನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಿಡುಗಡೆ ಮಾಡಿ ಐತಿಹಾಸಿಕ ನಿರ್ಧಾರವನ್ನು ಕೈಗೊಂಡಿದೆ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ತಿಳಿಸಿದ್ದಾರೆ.

ಶುಕ್ರವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ಬಿಜೆಪಿ ಸದಸ್ಯ ಸುರೇಶ್ ಗೌಡ ಅವರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಇಂತಹ ದಿಟ್ಟ ನಿರ್ಧಾರವನ್ನು ಕೈಗೊಂಡಿರುವುದು ರಾಜ್ಯದ ಇತಿಹಾಸದಲ್ಲಿ ಇದೇ ಪ್ರಥಮ ಎಂದು ಹೇಳಿದರು.

ಈ ಹಿಂದೆ ಯಾವುದೇ ಸರ್ಕಾರವಾಗಲೀ, ಮುಖ್ಯಮಂತ್ರಿಗಳಾಗಲೀ ಮಹಾನಗರ ಪಾಲಿಕೆಗಳಿಗೆ ಇಷ್ಟೊಂದು ಪ್ರಮಾಣದ ಅನುದಾನವನ್ನು ನೀಡಿರಲಿಲ್ಲ. ಸರ್ಕಾರದ ಈ ವಿಶೇಷ ಅನುದಾನ ಪ್ರತಿಯೊಂದು ಪಾಲಿಕೆಗಳಿಗೂ ತಲುಪಲಿದ್ದು, ಸರ್ವಾಂಗೀಣ ಅಭಿವೃದ್ಧಿಗೆ ನೆರವಾಗಲಿದೆ ಎಂದರು.

ಇದಕ್ಕೂ ಮುನ್ನ ಸದಸ್ಯ ದಿನಕರ್ ಕೇಶವ್ ಶೆಟ್ಟಿ ಅವರ ಪ್ರಶ್ನೆಗೆ ಪೌರಾಡಳಿತ ಸಚಿವ ರಹೀಂಖಾನ್ ಅವರ ಪರವಾಗಿ ಉತ್ತರ ನೀಡಿದ ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು, ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರವನ್ನು ಪಟ್ಟಣ ಪಂಚಾಯತ್ ನಿಂದ ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಾಧ್ಯವಿಲ್ಲ ಎಂದರು.

2011 ರ ಜನಗಣತಿ ಪ್ರಕಾರ ಈ ಪಟ್ಟಣದಲ್ಲಿ 19 ಸಾವಿರ ಜನಸಂಖ್ಯೆ ಇದೆ. ಆದರೆ, ಪುರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು 20 ರಿಂದ 50 ಸಾವಿರ ಜನಸಂಖ್ಯೆ ಇರಬೇಕು. ಈ ಮಾನದಂಡದ ಆಧಾರದ ಮೇಲೆ ಪೌರಾಡಳಿತ ಇಲಾಖೆ ಪ್ರಸ್ತಾವನೆಯನ್ನು ತಿರಸ್ಕರಿಸಿದೆ ಎಂದು ವಿವರಿಸಿದರು.

ಹೀಗಿದ್ದರೂ, ಇನ್ನೊಮ್ಮೆ ಜಿಲ್ಲಾಧಿಕಾರಿಗಳಿಂದ ವರದಿ ತರಿಸಿಕೊಂಡು ಪರಿಶೀಲನೆ ನಡೆಸಿ ಮತ್ತೊಮ್ಮೆ ಪ್ರಸ್ತಾವನೆ ಸಲ್ಲಿಸುವ ಬಗ್ಗೆ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವರು ತಿಳಿಸಿದರು.

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಸಚಿವ ಬೈರತಿ ಸುರೇಶ್

Alert : ಈ `ಬ್ಲಡ್ ಗ್ರೂಪ್’ ಹೊಂದಿರುವವರಿಗೆ `ಕ್ಯಾನ್ಸರ್’ ಅಪಾಯ ಹೆಚ್ಚು.!

Share. Facebook Twitter LinkedIn WhatsApp Email

Related Posts

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಸಚಿವ ಬೈರತಿ ಸುರೇಶ್

12/12/2025 4:47 PM1 Min Read

BREAKING : ಬೆಂಗಳೂರಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ!

12/12/2025 4:39 PM1 Min Read

Watch Video: ಮಂಡ್ಯದಲ್ಲಿ ‘ರೈತರ ಮಕ್ಕಳಿಗೆ ಹೆಣ್ಣು’ ನೀಡಲು ಪ್ರೋತ್ಸಾಹಕ್ಕಾಗಿ ವಿನೂತನ ಪ್ರತಿಭಟನೆ

12/12/2025 4:24 PM1 Min Read
Recent News

BREAKING: ಕೇರಳ ನಟಿಯ ಮೇಲೆ ಸಾಮೂಹಿತ ಅತ್ಯಾಚಾರ ಕೇಸ್: ಪಲ್ಸರ್ ಸುನಿ ಸೇರಿ ಇತರೆ ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

12/12/2025 5:06 PM

ಪ್ರತಿ ಪಾಲಿಕೆಗೆ 200 ಕೋಟಿ ರೂ: ಸರ್ಕಾರದಿಂದ ಐತಿಹಾಸಿಕ ನಿರ್ಧಾರ- ಸಚಿವ ಬೈರತಿ ಸುರೇಶ್

12/12/2025 4:48 PM

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಸಚಿವ ಬೈರತಿ ಸುರೇಶ್

12/12/2025 4:47 PM

BREAKING ; ‘ಕೇಂದ್ರ ಸಂಪುಟ ಸಭೆ’ಯಲ್ಲಿ ತೆಗೆದುಕೊಂಡ ಮಹತ್ವದ ‘ಮೂರು ನಿರ್ಧಾರ’ಗಳ ಮಾಹಿತಿ ಇಲ್ಲಿದೆ.!

12/12/2025 4:40 PM
State News
KARNATAKA

ಪ್ರತಿ ಪಾಲಿಕೆಗೆ 200 ಕೋಟಿ ರೂ: ಸರ್ಕಾರದಿಂದ ಐತಿಹಾಸಿಕ ನಿರ್ಧಾರ- ಸಚಿವ ಬೈರತಿ ಸುರೇಶ್

By kannadanewsnow0912/12/2025 4:48 PM KARNATAKA 1 Min Read

ಬೆಳಗಾವಿ ಸುವರ್ಣಸೌಧ : ರಾಜ್ಯದಲ್ಲಿರುವ 12 ಮಹಾನಗರ ಪಾಲಿಕೆಗಳಿಗೆ ತಲಾ 200 ಕೋಟಿ ರೂಪಾಯಿಯಂತೆ ಒಟ್ಟು 2400 ಕೋಟಿ ರೂಪಾಯಿಗಳನ್ನು…

ಹುಬ್ಬಳ್ಳಿ- ಧಾರವಾಡ ಮಹಾನಗರ ಪಾಲಿಕೆ ವಿಭಜನೆಗೆ ಕ್ರಮ: ಸಚಿವ ಬೈರತಿ ಸುರೇಶ್

12/12/2025 4:47 PM

BREAKING : ಬೆಂಗಳೂರಲ್ಲಿ ಮತ್ತೆ ಚಿರತೆ ಪ್ರತ್ಯಕ್ಷ : ಸ್ಥಳೀಯರಲ್ಲಿ ಹೆಚ್ಚಿದ ಆತಂಕ!

12/12/2025 4:39 PM

Watch Video: ಮಂಡ್ಯದಲ್ಲಿ ‘ರೈತರ ಮಕ್ಕಳಿಗೆ ಹೆಣ್ಣು’ ನೀಡಲು ಪ್ರೋತ್ಸಾಹಕ್ಕಾಗಿ ವಿನೂತನ ಪ್ರತಿಭಟನೆ

12/12/2025 4:24 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.