Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಖ್ಯಾತ ವಿದ್ವಾಂಸ, ಬರಹಗಾರ ದಾಜಿ ಪನ್ಶಿಕರ್ ನಿಧನ| Daji Panshikar passes away

07/06/2025 10:38 AM

ಈದ್‌ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ

07/06/2025 10:24 AM

ನಿರೀಕ್ಷಣಾ ಜಾಮೀನು ಯಾಂತ್ರಿಕವಾಗಿ ನೀಡಬಾರದು: ಸುಪ್ರೀಂ ಕೋರ್ಟ್ | Anticipatory bail

07/06/2025 10:18 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಬಾಕಿ ಉಳಿದ ರೈತರ ಖಾತೆಗೆ 2 ಸಾವಿರ ರೂ. ‘ಬೆಳೆ ಹಾನಿ ಪರಿಹಾರ’ ಜಮಾ
KARNATAKA

ಬಾಕಿ ಉಳಿದ ರೈತರ ಖಾತೆಗೆ 2 ಸಾವಿರ ರೂ. ‘ಬೆಳೆ ಹಾನಿ ಪರಿಹಾರ’ ಜಮಾ

By kannadanewsnow5714/05/2024 5:53 AM

ಧಾರವಾಡ : ಧಾರವಾಡ ಜಿಲ್ಲೆಯಲ್ಲಿ ಈಗಾಗಲೇ ಹತ್ತು ಹಂತಗಳಲ್ಲಿ ಒಟ್ಟು 1.06,707 ರೈತರಿಗೆ 108.12 ಕೋಟಿ ರೂ.ಗಳ ಇನಪುಟ್ ಸಬ್ಸಿಡಿ ಬಿಡುಗಡೆಯಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

2023 ನೇ ಸಾಲಿನ ಮುಂಗಾರು ಹಂಗಾಮಿನ ಬರ ಪರಿಸ್ಥಿತಿಯಿಂದ ಉಂಟಾದ ಬೆಳೆಹಾನಿಗೆ ಎಸ್‍ಡಿಆರ್‍ಎಫ್ ಅಥವಾ ಎನ್‍ಡಿಆರ್‍ಎಫ್ ಮಾರ್ಗಸೂಚಿಯಂತೆ ಅರ್ಹತೆಯ ಅನುಗುಣವಾಗಿ ಈಗಾಗಲೇ ಅರ್ಹ ರೈತರಿಗೆ ಗರಿಷ್ಟ 2 ಸಾವಿರ ರೂ.ಗಳವರೆಗೆ ಪಾವತಿಸಿರುವ ಬೆಳೆಹಾನಿ ಪರಿಹಾರ ಮೊತ್ತವನ್ನು ಪರಿಗಣನೆಗೆ ತೆಗೆದುಕೊಂಡು, ಅರ್ಹತೆಯಂತೆ ಇನ್ನುಳಿದ ಬಾಕಿ ಬೆಳೆಹಾನಿ ಪರಿಹಾರ ಮೊತ್ತವನ್ನು ಪಾವತಿಸಲು ಅನುದಾನ ಬಿಡುಗಡೆ ಮಾಡಿ, ಸರ್ಕಾರವು ಆದೇಶಿಸಿದೆ.

ಬೆಳೆ ಸಮೀಕ್ಷೆ ದತ್ತಾಂಶದ ಮಾಹಿತಿಯ ಆಧಾರ ಮೇಲೆ (FRUITS ID) ಪ್ರೂಟ್ಸ್ ಐಡಿ ಹೊಂದಿರುವ ರೈತರಿಗೆ ಪರಿಹಾರ ತಂತ್ರಾಂಶದ ಮೂಲಕ ಹಂತ-ಹಂತವಾಗಿ ಪರಿಹಾರ ವಿತರಣೆ ಮಾಡಲಾಗುತ್ತಿದೆ. ಸರ್ಕಾರದಿಂದ ನೇರವಾಗಿ ರೈತರ ಬ್ಯಾಂಕ್ ಖಾತೆಗಳಿಗೆ ಪರಿಹಾರ ಧನವನ್ನು ಜಮೆ ಮಾಡಲಾಗಿದೆ. ಬಾಕಿ ಉಳಿದ ಅರ್ಹ ರೈತರಿಗೆ ಹಂತ ಹಂತವಾಗಿ ಪರಿಹಾರ ಪಾವತಿಸುವ ಕಾರ್ಯವು ಪ್ರಗತಿಯ ಹಂತದಲ್ಲಿದ್ದು ತುರ್ತಾಗಿ ಕ್ರಮಕೈಗೊಳ್ಳಲಾಗುವುದೆಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ಈಗಾಗಲೇ ಅನುಮೊದನೆ ನೀಡಿರುವ ರೈತರ ಮಾಹಿತಿಯ ಪಟ್ಟಿಯನ್ನು ನಾಡ ಕಚೇರಿಗಳು, ಗ್ರಾಮ ಪಂಚಾಯತಿಗಳು, ರೈತ ಸಂಪರ್ಕ ಕೇಂದ್ರಗಳು ಹಾಗೂ ತಹಶೀಲ್ದಾರ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಚುರಪಡಿಸಲಾಗಿದೆ.
ಬೆಳೆ ಹಾನಿ ಪರಿಹಾರ ಪಡೆದುಕೊಳ್ಳಲು (FRUITS ID) ಪ್ರೂಟ್ಸ್ ಐಡಿ ಕಡ್ಡಾಯವಾಗಿರುವುದರಿಂದ ಇದುವರೆಗೂ ಪ್ರೂಟ್ಸ್ ಐಡಿ ಮಾಡಿಸಿಕೊಳ್ಳದೇ ಇರುವ ರೈತರು ನಿಗದಿತ ಅವಧಿಯಲ್ಲಿ ತಮ್ಮ ಆಧಾರ್, ಬ್ಯಾಂಕ್ ಖಾತೆಯ ವಿವರ ಹಾಗೂ ಪಹಣಿ ಮಾಹಿತಿಯನ್ನು ಗ್ರಾಮ ಆಡಳಿತ ಅಧಿಕಾರಿಗಳಿಗೆ ಅಥವಾ ರೈತ ಸಂಪರ್ಕ ಕೇಂದ್ರಗಳಿಗೆ ಭೇಟಿ ನೀಡಿ (FRUITS ID) ಪ್ರೂಟ್ಸ್ ಐಡಿ ಸೃಜಿಸಿಕೊಳ್ಳಬಹುದು. (FRUITS ID) ಪ್ರೂಟ್ಸ್ ಐಡಿ ಇಲ್ಲದ ರೈತರು ಬೆಳೆ ಪರಿಹಾರ ಪಡೆಯಲು ಸಾಧ್ಯಾವಾಗುವುದಿಲ್ಲವೆಂದು ಅವರು ತಿಳಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ರೈತರು ಈ ಕೆಳಕಂಡ ಸಹಾಯವಾಣಿಗಳಿಗೆ ಸಂಪರ್ಕಿಸಬಹುದು. ಧಾರವಾಡ ಜಿಲ್ಲಾಧಿಕಾರಿಗಳ ಕಾರ್ಯಾಲಯ 0836-2233840, 1077, ಉಪವಿಭಾಗಾಧಿಕಾರಿಗಳ ಕಾರ್ಯಾಲಯ ಧಾರವಾಡ -0836-2233860, ಕೃಷಿ ಇಲಾಖೆಯ ಜಂಟಿ ನಿರ್ದೇಶಕರ ಕಾರ್ಯಾಲಯ -0836-2447517, ತೊಟಗಾರಿಕೆ ಇಲಾಖೆಯ ಉಪನಿರ್ದೇಶಕರ ಕಾರ್ಯಾಲಯ -0836-2746334, ಧಾರವಾಡ ತಾಲ್ಲೂಕು ತಹಶೀಲ್ದಾರ ಕಾರ್ಯಾಲಯ -0836-2233822, ಹುಬ್ಬಳ್ಳಿ ತಾಲೂಕು ತಹಶೀಲ್ದಾರ ಕಾರ್ಯಾಲಯ -0836-2233844, ಹುಬ್ಬಳ್ಳಿ ನಗರ ತಹಶೀಲ್ದಾರ ಕಾರ್ಯಾಲಯ -0836-2358035, ಕುಂದಗೋಳ ತಾಲೂಕು ತಹಶೀಲ್ದಾರ ಕಾರ್ಯಾಲಯ -08304-290239, ಕಲಘಟಗಿ ತಾಲ್ಲೂಕು ತಹಶೀಲ್ದಾರ ಕಾರ್ಯಾಲಯ -08970-284535, ನವಲಗುಂದ ತಾಲೂಕು ತಹಶೀಲ್ದಾರ ಕಾರ್ಯಾಲಯ – 0830-229240, ಅಣ್ಣಿಗೇರಿ ತಾಲ್ಲೂಕು ತಹಶೀಲ್ದಾರ ಕಾರ್ಯಾಲಯ – 9008249921 ಹಾಗೂ ಅಳ್ನಾವರ ತಾಲ್ಲೂಕು ತಹಶೀಲ್ದಾರ ಕಾರ್ಯಾಲಯ -0836-2385544 ಗೆ ಸಂಪರ್ಕಿಸಿ ಬೆಳೆ ಪರಿಹಾರ ಮಾಹಿತಿಯನ್ನು ಪಡೆಯಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

000 will be deposited in the accounts of the remaining farmers. 'Crop damage compensation' deposited Rs 2 ಬಾಕಿ ಉಳಿದ ರೈತರ ಖಾತೆಗೆ 2 ಸಾವಿರ ರೂ. ‘ಬೆಳೆ ಹಾನಿ ಪರಿಹಾರ’ ಜಮಾ
Share. Facebook Twitter LinkedIn WhatsApp Email

Related Posts

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

07/06/2025 8:47 AM1 Min Read

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM3 Mins Read

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM1 Min Read
Recent News

ಖ್ಯಾತ ವಿದ್ವಾಂಸ, ಬರಹಗಾರ ದಾಜಿ ಪನ್ಶಿಕರ್ ನಿಧನ| Daji Panshikar passes away

07/06/2025 10:38 AM

ಈದ್‌ ಸಂಭ್ರಮ: ಶುಭಾಶಯ ಕೋರಿದ ಪ್ರಧಾನಿ ಮೋದಿ

07/06/2025 10:24 AM

ನಿರೀಕ್ಷಣಾ ಜಾಮೀನು ಯಾಂತ್ರಿಕವಾಗಿ ನೀಡಬಾರದು: ಸುಪ್ರೀಂ ಕೋರ್ಟ್ | Anticipatory bail

07/06/2025 10:18 AM

ಆರ್ಬಿಐ ನೀತಿ ಕಡಿತದ ನಂತರ ಸಾಲದ ದರಗಳು 30 ಬಿಪಿಎಸ್ ಕಡಿಮೆಯಾಗಲಿವೆ: SBI ವರದಿ

07/06/2025 9:42 AM
State News
KARNATAKA

ಬೆಂಗಳೂರು ಕಾಲ್ತುಳಿತ ದುರಂತ: ಸಿಎಂ, ಡಿಸಿಎಂ ವಿರುದ್ಧ ಕ್ರಮಕ್ಕೆ ಹರತಾಳು ಹಾಲಪ್ಪ ಆಗ್ರಹ

By kannadanewsnow0907/06/2025 8:47 AM KARNATAKA 1 Min Read

ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯ ಕಾಲ್ತುಳಿತ ದುರಂತದಲ್ಲಿ ಸರ್ಕಾರ ನುಣುಚಿಕೊಳ್ಳಲು ಅಧಿಕಾರಿಗಳ ಮೇಲೆ ಕ್ರಮ ಕೈಗೊಂಡಿದೆ. ಈ ದುರಂತ…

ಈ ಮಂತ್ರವನ್ನು ಪಠಿಸಿ, ನಿಮ್ಮೊಂದಿಗೆ ಯಾವಾಗಲೂ ಕುಲದೇವತೆ ಇರುತ್ತದೆ, ನಿಮ್ಮನ್ನು ರಕ್ಷಿಸುತ್ತದೆ

07/06/2025 8:35 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಮತ್ತೊಂದು `FIR’ ದಾಖಲು.!

07/06/2025 8:02 AM

BREAKING : ಬೆಂಗಳೂರು `ಕಾಲ್ತುಳಿತ ದುರಂತ’ ಪ್ರಕರಣ : ಮಾನವ ಹಕ್ಕುಗಳ ಆಯೋಗದಿಂದ 2 ‘ಸುಮೋಟೋ ಕೇಸ್’ ದಾಖಲು.!

07/06/2025 7:54 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.