Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot
Morning habits to avoid

ಬೆಳಗೆದ್ದು ಈ ಕೆಲಸ ಮಾಡಿ ದಿನವಿಡೀ ಉತ್ಸಾಹಭರಿತರಾಗಿ ಇರ್ತೀರಾ.! ಈ ಸ್ಮಾರ್ಟ್ ಟಿಪ್ಸ್ ನಿಮ್ಮ ಜೀವನ ಬದಲಿಸುತ್ತೆ

22/08/2025 9:58 PM

BREAKING : ವಾಹನ ಸವಾರರಿಗೆ ಬಿಗ್ ಶಾಕ್ ; 20 ವರ್ಷಕ್ಕಿಂತ ಹಳೆ ವಾಹನಗಳ ‘ನೋಂದಣಿ ಶುಲ್ಕ’ ಹೆಚ್ಚಳ

22/08/2025 9:49 PM

BREAKING : ಸೆಪ್ಟೆಂಬರ್ 3,4ರಂದು ನವದೆಹಲಿಯಲ್ಲಿ ‘GST ಮಂಡಳಿಯ 56ನೇ ಸಭೆ’ ನಿಗದಿ |GST Council Meeting

22/08/2025 9:36 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾಜ್ಯದಲ್ಲಿ ʻSC-STʼ ಅಭಿವೃದ್ಧಿಗೆ 39,121 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ
KARNATAKA

ರಾಜ್ಯದಲ್ಲಿ ʻSC-STʼ ಅಭಿವೃದ್ಧಿಗೆ 39,121 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ

By kannadanewsnow5714/07/2024 6:02 AM

ಬೆಂಗಳೂರು : ಈ ವರ್ಷ ಬಜೆಟ್‌ನಲ್ಲಿ ಅಭಿವೃದ್ಧಿಗಾಗಿ 1.60 ಲಕ್ಷ ಕೋಟಿ ಅನುದಾನವನ್ನು ಒದಗಿಸಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ 39,121 ಕೋಟಿ ಹಣವನ್ನು ಒದಗಿಸಿದ್ದೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸಮಾಜ ಕಲ್ಯಾಣ ಇಲಾಖೆ ಮತ್ತು ಡಾ. ಬಾಬು ಜಗಜೀವನ ರಾಮ್ ಸಂಶೋಧನಾ ಸಂಸ್ಥೆ ವತಿಯಿಂದ ಬೆಂಗಳೂರಿನ ಮಾಗಡಿ ರಸ್ತೆಯಲ್ಲಿರುವ ನಿರಾಶ್ರಿತರ ಪರಿಹಾರ ಕೇಂದ್ರದಲ್ಲಿ ಆಯೋಜಿಸಿದ್ದ ಹಸಿರು ಕ್ರಾಂತಿಯ ಹರಿಕಾರ, ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನ ರಾಮ್ ಭವನವನ್ನು ಉದ್ಘಾಟಿಸಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಅಭಿವೃದ್ಧಿಗಾಗಿ, ಅವರಿಗೆ ಆರ್ಥಿಕವಾಗಿ ಮತ್ತು ಸಾಮಾಜಿಕವಾಗಿ ಶಕ್ತಿ ತುಂಬಲು, ಅವರ ಜನಸಂಖ್ಯೆಗೆ ಅನುಗುಣವಾಗಿ ಅಭಿವೃದ್ಧಿ ಅನುದಾನವನ್ನು ಖರ್ಚು ಮಾಡಲು ನಾವು ಹಿಂದಿನ ಬಾರಿ ಅಧಿಕಾರದಲ್ಲಿದ್ದಾಗ ಕಾಯ್ದೆ ರೂಪಿಸಿದ್ದೆವು. 2011ರ ಜನಗಣತಿ ಪ್ರಕಾರ ರಾಜ್ಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಒಟ್ಟು ಜನಸಂಖ್ಯೆ ಶೇ.24.01 ರಷ್ಟಿದೆ. ಈ ವರ್ಷ ಬಜೆಟ್‌ನಲ್ಲಿ ಅಭಿವೃದ್ಧಿಗಾಗಿ 1.60 ಲಕ್ಷ ಕೋಟಿ ಅನುದಾನವನ್ನು ಒದಗಿಸಿದ್ದು, ಇದರಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ 39,121 ಕೋಟಿ ಹಣವನ್ನು ಒದಗಿಸಿದ್ದೇವೆ. ಈ ಕುರಿತು ಕಾಯ್ದೆ ರಚಿಸದಿದ್ದರೆ, ಇಷ್ಟು ದೊಡ್ಡ ಅನುದಾನವನ್ನು ಒದಗಿಸಲು ನಮಗೆ ಸಾಧ್ಯವಾಗುತ್ತಿರಲಿಲ್ಲ. ಈ ಕಾಯ್ದೆ ಮಾಡಿರುವುದರಿಂದ ಜನಸಂಖ್ಯೆಗೆ ಅನುಗುಣವಾಗಿ ಹಣ ಖರ್ಚು ಮಾಡಲು ಸಾಧ್ಯವಾಗಿದೆ. ಇಡೀ ದೇಶದಲ್ಲಿ ಕರ್ನಾಟಕ, ಆಂಧ್ರಪ್ರದೇಶ ಹಾಗೂ ತೆಲಂಗಾಣ ರಾಜ್ಯದಲ್ಲಿ ಮಾತ್ರ ಈ ರೀತಿ ಜನಸಂಖ್ಯೆಗೆ ಅನುಗುಣವಾಗಿ ಅನುದಾನ ಒದಗಿಸುವ ವ್ಯವಸ್ಥೆಯಿದೆ. ಆದರೆ ಇಷ್ಟು ಪ್ರಗತಿದಾಯಕವಾದ ಕಾನೂನು ಬೇರೆಲ್ಲಿಯೂ ಇಲ್ಲ ಎಂದು ಹೇಳಿದರು.

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರಿಗೆ ಗುತ್ತಿಗೆಯಲ್ಲಿ ಮೀಸಲಾತಿ ಕರ್ನಾಟಕ ಬಿಟ್ಟು ಬೇರೆ ಯಾವ ರಾಜ್ಯದಲ್ಲಿಯೂ ಇಲ್ಲ. ಪಿಟಿಸಿಎಲ್ ಕಾಯ್ದೆಗೆ ತಿದ್ದುಪಡಿ ತರುವ ಅಗತ್ಯಬಿದ್ದರೆ ಖಂಡಿತವಾಗಿಯೂ ತಿದ್ದುಪಡಿ ತರಲಾಗುವುದು. ಬ್ಯಾಂಕ್ ಗಳಲ್ಲಿ ಕೆ.ಎಸ್.ಎಫ್.ಸಿ ಉದ್ಯಮಿಗಳಿಗೆ 10 ಕೋಟಿವರೆಗೆ 4% ಬಡ್ಡಿಗೆ ಸಾಲ ದೊರೆಯಬೇಕೆಂಬ ಸೌಲಭ್ಯ ಒದಗಿಸಿದ್ದು ನಮ್ಮ ಸರ್ಕಾರ. ಎಸ್.ಸಿ.ಎಸ್ ಪಿ /ಟಿ. ಎಸ್.ಪಿ ಕಾಯ್ದೆಯಡಿ 7(ಡಿ) ಕೈಬಿಡಲು ಸಲಹೆ ಬಂದ ಮೇರೆಗೆ ಕಾಯ್ದೆಗೆ ತಿದ್ದುಪಡಿ ತಂದು ಅದನ್ನು ಕೈಬಿಡಲಾಗಿದೆ. ಇನ್ನೂ ಬದಲಾವಣೆಗಳು ಅಗತ್ಯವಿದ್ದರೆ ಮಾಡುತ್ತೇವೆ. ನಮಗೆ ಯಾವುದೇ ಸಂಪ್ರದಾಯವಾದಿ ಧೋರಣೆಗಳಿಲ್ಲ. ಪರಿಶಿಷ್ಟರ, ಸಾಮಾಜಿಕ ನ್ಯಾಯದ ವಿರುದ್ಧವಾದ ನಿಲುವು ಸರ್ಕಾರಕ್ಕಿಲ್ಲ.

ದಲಿತ ಸಂಘಟನೆಗಳು 70ರ ದಶಕದಲ್ಲಿ ಸಾರಾಯಿ ಅಂಗಡಿಗಳು ಬೇಡ, ವಸತಿ ಶಾಲೆಗಳು ಬೇಕು ಎಂದು ಬೇಡಿಕೆ ಸಲ್ಲಿಸಿದ್ದರಿಂದ ವಸತಿ ಶಾಲೆಗಳನ್ನು ಪ್ರಾರಂಭ ಮಾಡಲಾಗಿದೆ. 94-95 ರಲ್ಲಿ ನಾನು ಹಣಕಾಸು ಸಚಿವನಾಗಿದ್ದಾಗ ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಪ್ರಾರಂಭ ಮಾಡಿದೆ. ಇಂದು 821 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ತೆರೆಯಲಾಗಿದೆ. ಹೋಬಳಿಗೊಂದು ವಸತಿ ಶಾಲೆ ತೆರೆಯುವ ನಿರ್ಧಾರ ಸರ್ಕಾರ ಮಾಡಿದೆ. 2024-25 ರಲ್ಲಿ 20 ವಸತಿ ಶಾಲೆಗಳನ್ನು ತೆರೆಯಲಾಗುವುದು. ಒಟ್ಟು 905 ವಸತಿ ಶಾಲೆಗಳು ರಾಜ್ಯದಲ್ಲಿ ಕಾರ್ಯನಿರ್ವಹಿಸಲಿವೆ. ವಸತಿ ಶಾಲೆಗಳಲ್ಲಿ 2,11,000 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ಕ್ರೈಸ್ ವಸತಿ ನಿಲಯದ ವಿದ್ಯಾರ್ಥಿ 625ಕ್ಕೆ 625 ಅಂಕಗಳನ್ನು ಗಳಿಸಿ ಸಾಧನೆ ಮಾಡಿದ್ದಾರೆ.

ದಲಿತರಿಗೆ ಸಾಮಾಜಿಕ ಆರ್ಥಿಕ ಶಕ್ತಿ ಬರಬೇಕು, ಆಗ ಮಾತ್ರ ಅವರು ಮುಂಚೂಣಿಗೆ ಬರಲು ಸಾಧ್ಯವಾಗುತ್ತದೆ. ಬಸವಣ್ಣ, ಬಾಬು ಜಗಜೀವನ್ ರಾಮ್ ಅವರು ಕಂಡಿದ್ದ ಕನಸು ನನಸಾಗಲು ಆರ್ಥಿಕ ಸಾಮಾಜಿಕ ಶಕ್ತಿ ಬರಬೇಕು, ಎಲ್ಲರೂ ವಿದ್ಯಾವಂತರಾಗಬೇಕು. ಶಿಕ್ಷಣ, ಸಂಘಟನೆ ಹೋರಾಟಕ್ಕೆ ಕರೆ ಕೊಟ್ಟಿದ್ದ ಅಂಬೇಡ್ಕರ್, ಜಗಜೀವನ್ ರಾಮ್ ಅವರು ಜಾತಿ ವಿನಾಶವಾಗಬೇಕು. ಜಾತಿ ವಿನಾಶವಾಗದಿದ್ದರೆ ಸಮಾನತೆ ಬರುವುದಿಲ್ಲ ಎಂದಿದ್ದರು. ಹಂತ ಹಂತವಾಗಿ ಇದನ್ನು ನಾವು ಮಾಡಬೇಕು. ಮಾಡದೆ ಇರುವವರನ್ನು ಪ್ರಶ್ನಿಸುವ ನೈತಿಕತೆಯನ್ನು ಬೆಳೆಸಿಕೊಳ್ಳಬೇಕು.

ಸಂವಿಧಾನದ ವಿರುದ್ಧವಾಗಿರುವರನ್ನು ಪ್ರಶ್ನಿಸಬೇಕು. ಎಲ್ಲಾ ವ್ಯವಸ್ಥೆಗಳಲ್ಲಿ ಎಲ್ಲಾ ಜನಾಂಗದವರು ಬರಬೇಕು. ಅವಕಾಶ ವಂಚಿತರಿಗೆ ಅವಕಾಶ ಕಲ್ಪಿಸುವ ಕೆಲಸ ನಾವು ಮಾಡುತ್ತೇವೆ. ಬಾಬು ಜಗಜೀವನ್ ರಾಮ್ ಸಂಶೋಧನಾ ಸಂಸ್ಥೆ ವತಿಯಿಂದ ಬೇರೆ ಬೇರೆ ಕೆಲಸಗಳು ಕೂಡ ಆಗಬೇಕು. ಪರಿಶಿಷ್ಟ ಜಾತಿಗೆ ಸೇರಿದವರಿಗೆ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ ನೀಡಬೇಕು. ವಸತಿ ಸೌಲಭ್ಯವನ್ನೂ ಕಲ್ಪಿಸಿದರೆ ಅನುಕೂಲವಾಗುತ್ತದೆ. ಬಾಬು ಜಗಜೀವನ್ ರಾಮ್ ಅವರ ದೂರದೃಷ್ಟಿಯಂತೆ ಸಂಸ್ಥೆಯ ಸದುಪಯೋಗವಾಗಬೇಕು. ಸಮ ಸಮಾಜ ನಿರ್ಮಾಣ ಮಾಡುವತ್ತ ನಾವು ಹೆಜ್ಜೆ ಇಡಬೇಕು.

ಭವನದ ನಿರ್ಮಾಣಕ್ಕೆ ಮಾಜಿ ಸಚಿವರಾದ ಆಂಜನೇಯ ಅವರು ಪ್ರಮುಖ ಕಾರಣಕರ್ತರು.ಇಂತಹ ಬೃಹತ್‌ ಸಂಶೋಧನಾ ಭವನವನ್ನು 5 ಎಕರೆ ಪ್ರರ್ದೇಶದಲ್ಲಿ ನಿರ್ಮಾಣ ಮಾಡಲಾಗಿದೆ. ಜಗಜೀವನ ರಾಮ್ ಹೆಸರಿನಲ್ಲಿ ಬಹುಶಃ ದೇಶದಲ್ಲಿಯೇ ಇಂತಹ ಭವನ ನಿರ್ಮಾಣವಾಗಿರುವುದು ಇದೇ ಮೊದಲು. ಇದು ಹೆಮ್ಮೆಯ ವಿಷಯ. ಇದರ ಸಮರ್ಪಕ ನಿರ್ವಹಣೆ ಮತ್ತು ಸದುಪಯೋಗವಾಗಬೇಕಿದೆ. ಇದಕ್ಕಾಗಿ ಸಮಾಜ ಕಲ್ಯಾಣ ಇಲಾಖೆ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಬೇಕು. ಅದುವೇ ನಾವು ಬಾಬು ಜಗಜೀವನ ರಾಮ್ ಅವರಿಗೆ ಸಲ್ಲಿಸುವ ಗೌರವವಾಗಿದೆಎಂದರು.

ನಾವು ಒದಗಿಸಿರುವ ಅನುದಾನ ಅದೇ ವರ್ಷ ಶೇಕಡಾ ನೂರರಷ್ಟು ವೆಚ್ಚವಾಗಬೇಕು. ಯಾವುದೇ ಕಾರಣಕ್ಕೂ ಈ ಅನುದಾನ ಲೋಪವಾಗಲು ಅವಕಾಶ ನೀಡಬಾರದು. ಯಾವುದಾದರೂ ಸಕಾರಣದಿಂದ ಅನುದಾನ ಸಂಪೂರ್ಣ ವೆಚ್ಚವಾಗದೇ ಉಳಿದರೆ, ಆ ಅನುದಾನ ಮುಂದಿನ ವರ್ಷಕ್ಕೂ ಮುಂದುವರೆಯುತ್ತದೆ. ಕೇಂದ್ರದಲ್ಲಿಯೂ ಇಂತಹ ಕಾಯ್ದೆಯನ್ನು ಜಾರಿಗೊಳಿಸಲು ಎಲ್ಲರೂ ಒತ್ತಡ ಹೇರಬೇಕು. ದೇಶಕ್ಕೆ ಸ್ವಾತಂತ್ರ್ಯ ಬಂದದ್ದು ಸಾರ್ಥಕ ಆಗಬೇಕಾದರೆ ಆರ್ಥಿಕ, ಸಾಮಾಜಿಕ ಸ್ವಾತಂತ್ರ್ಯ ಸಿಕ್ಕಿದಾಗ ಮಾತ್ರ ಈ ದೇಶದಲ್ಲಿ ಸಮಾನತೆ ಬರಲು ಸಾಧ್ಯವಾಗುತ್ತದೆ. ಸಾಮಾಜಿಕ ನ್ಯಾಯ ಸಾಧನೆಗೆ ಆರ್ಥಿಕ, ಸಾಮಾಜಿಕ ಶಕ್ತಿ ಕೊಡುವ ಕಾರ್ಯಕ್ರಮ ಜಾರಿ ಮಾಡಿದಾಗ ಮಾತ್ರ ಅದು ಸಾರ್ಥಕವಾಗುತ್ತದೆ. ಈ ಬಗ್ಗೆ ಬಾಬಾ ಸಾಹೇಬ್‌ ಅಂಬೇಡ್ಕರ್‌ ನಮ್ಮನ್ನು ಎಚ್ಚರಿಸಿದ್ದರು.

ಜಗಜೀವನ್‌ ರಾಮ್‌ ಅವರು ದಕ್ಷ ಆಡಳಿತಗಾರ, ಸಮಾನತೆ, ಜಾತಿ ವಿನಾಶದ ಕನಸು ಕಂಡವರು. ಸಮಾಜದಲ್ಲಿ ಅಸಮಾನತೆ ಇರುವ ವರೆಗೆ ಸಮ ಸಮಾಜ ನಿರ್ಮಾಣ ಸಾಧ್ಯವಿಲ್ಲ. ಅವರು ಮಿತಭಾಷಿ ಆದರೆ ಉತ್ತಮ ಆಡಳಿತಗಾರ. ಅವರ ನಿಲುವು, ಬದ್ಧತೆಯಲ್ಲಿ ಬದಲಾವಣೆ ಇರಲಿಲ್ಲ. ಅವರು ಆಹಾರ, ರೈಲ್ವೆ, ರಕ್ಷಣಾ, ಕಾರ್ಮಿಕ ಮಂತ್ರಿಯಾಗಿ ಅವರದೇ ಹೆಜ್ಜೆ ಗುರುತು ಬಿಟ್ಟು ಹೋಗಿದ್ದಾರೆ. ನವದೆಹಲಿಯಲ್ಲಿ ವಿವಿಧ ನಾಗರಿಕ ಸೇವಾ ಪರೀಕ್ಷೆಗಳಿಗೆ ತರಬೇತಿ ಪಡೆಯುತ್ತಿರುವ ಅಭ್ಯರ್ಥಿಗಳಿಗೆ ನೀಡಲಾಗುವ ನೆರವಿನ ಮೊತ್ತ 10 ಸಾವಿರ ರೂ. ಗಳಿಂದ 15 ರೂ. ಗಳಿಗೆ ಹೆಚ್ಚಿಸಲು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಇದರೊಂದಿಗೆ ನವದೆಹಲಿಯಲ್ಲಿ ಈ ಅಭ್ಯರ್ಥಿಗಳಿಗೆ ಹಾಸ್ಟೆಲ್‌ ನಿರ್ಮಿಸಲು ತೀರ್ಮಾನಿಸಲಾಗಿದೆ. ಮುಂಬಡ್ತಿಯಲ್ಲಿ ಮೀಸಲಾತಿ ವಿರುದ್ಧ ಸುಪ್ರೀಂ ಕೋರ್ಟ್‌ ತೀರ್ಪು ನೀಡಿತ್ತು. ನಮ್ಮ ರಾಜ್ಯದಲ್ಲಿ ರತ್ನಪ್ರಭಾ ಎಂಬ ಅಧಿಕಾರಿಯ ನೇತೃತ್ವದಲ್ಲಿ ಸಮಿತಿ ರಚಿಸಿ, ವರದಿ ಆಧರಿಸಿ, ಕಾನೂನು ಜಾರಿ ಮಾಡಿ, ಮುಂಬಡ್ತಿ ನೀಡಲಾಯಿತು. ಸುಪ್ರೀಂ ಕೋರ್ಟ್‌ ಈ ಕಾನೂನನ್ನು ಎತ್ತಿ ಹಿಡಿಯಿತು ಎಂದರು.

ಅವಕಾಶ ವಂಚಿತರಿಗೆ ಮುಂಚೂಣಿಗೆ ಬರಲು ಅವಕಾಶ ನೀಡುವ ಕೆಲಸವನ್ನು ನಾವು ಮಾಡುತ್ತಿದ್ದೇವೆ. ಗುತ್ತಿಗೆದಾರರಿಗೆ ಒಂದು ಕೋಟಿ ರೂ. ವರೆಗಿನ ಕಾಮಗಾರಿಯಲ್ಲಿ ಮೀಸಲಾತಿ ನೀಡಲಾಗಿದೆ. ಅಂಬೇಡ್ಕರ್‌ ಅವರು ನೀಡಿದ ಸಂವಿಧಾನಕ್ಕೆ ತಕ್ಕಂತೆ ನಡೆದುಕೊಳ್ಳಬೇಕೆಂಬ ಬದ್ಧತೆ ನನಗಿದೆ ಎಂದು ತಿಳಿಸಿದ್ದಾರೆ.

121 crore has been allocated for the development of SC-ST in the state. Reservation: CM Siddaramaiah 121 ಕೋಟಿ ರೂ. ಮೀಸಲು : ಸಿಎಂ ಸಿದ್ದರಾಮಯ್ಯ Rs 39 ರಾಜ್ಯದಲ್ಲಿ ʻSC-STʼ ಅಭಿವೃದ್ಧಿಗೆ 39
Share. Facebook Twitter LinkedIn WhatsApp Email

Related Posts

BREAKING NEWS: ಮಗಳು ಇದ್ದದ್ದು ಸುಳ್ಳು. ಸತ್ತದ್ದು ಸುಳ್ಳು. ಎಲ್ಲವೂ ಸುಳ್ಳು ತಪ್ಪು ಒಪ್ಪಿಕೊಂಡ – ಸುಜಾತ ಭಟ್

22/08/2025 9:30 PM1 Min Read

ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ

22/08/2025 8:49 PM2 Mins Read

recruitment of Agniveer : ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 8:13 PM1 Min Read
Recent News
Morning habits to avoid

ಬೆಳಗೆದ್ದು ಈ ಕೆಲಸ ಮಾಡಿ ದಿನವಿಡೀ ಉತ್ಸಾಹಭರಿತರಾಗಿ ಇರ್ತೀರಾ.! ಈ ಸ್ಮಾರ್ಟ್ ಟಿಪ್ಸ್ ನಿಮ್ಮ ಜೀವನ ಬದಲಿಸುತ್ತೆ

22/08/2025 9:58 PM

BREAKING : ವಾಹನ ಸವಾರರಿಗೆ ಬಿಗ್ ಶಾಕ್ ; 20 ವರ್ಷಕ್ಕಿಂತ ಹಳೆ ವಾಹನಗಳ ‘ನೋಂದಣಿ ಶುಲ್ಕ’ ಹೆಚ್ಚಳ

22/08/2025 9:49 PM

BREAKING : ಸೆಪ್ಟೆಂಬರ್ 3,4ರಂದು ನವದೆಹಲಿಯಲ್ಲಿ ‘GST ಮಂಡಳಿಯ 56ನೇ ಸಭೆ’ ನಿಗದಿ |GST Council Meeting

22/08/2025 9:36 PM

BREAKING NEWS: ಮಗಳು ಇದ್ದದ್ದು ಸುಳ್ಳು. ಸತ್ತದ್ದು ಸುಳ್ಳು. ಎಲ್ಲವೂ ಸುಳ್ಳು ತಪ್ಪು ಒಪ್ಪಿಕೊಂಡ – ಸುಜಾತ ಭಟ್

22/08/2025 9:30 PM
State News
KARNATAKA

BREAKING NEWS: ಮಗಳು ಇದ್ದದ್ದು ಸುಳ್ಳು. ಸತ್ತದ್ದು ಸುಳ್ಳು. ಎಲ್ಲವೂ ಸುಳ್ಳು ತಪ್ಪು ಒಪ್ಪಿಕೊಂಡ – ಸುಜಾತ ಭಟ್

By kannadanewsnow0722/08/2025 9:30 PM KARNATAKA 1 Min Read

ಬೆಂಗಳೂರು: ಮಗಳು ಇದ್ದದ್ದು ಸುಳ್ಳು. ಸತ್ತದ್ದು ಸುಳ್ಳು. ಎಲ್ಲವೂ ಸುಳ್ಳು ಅಂತ ಕಳೆದ ಒಂದು ತಿಂಗಳಿನಿಂದ ಸುದ್ದಿಯಲ್ಲಿದ್ದ ಸುಜಾತ ಭಟ್…

ಮದ್ದೂರು ತಾಲೂಕು ಕಂದಾಯ ಇಲಾಖೆ ನೌಕರರ ಸಂಘದ ನೂತನ ಅಧ್ಯಕ್ಷರಾಗಿ ವಿ.ಎ.ಮುರಳೀಧರ

22/08/2025 8:49 PM

recruitment of Agniveer : ಅಗ್ನಿವೀರ್ ನೇಮಕಾತಿಗೆ ಅರ್ಜಿ ಆಹ್ವಾನ

22/08/2025 8:13 PM

ಬೀದಿ ನಾಯಿ ಪ್ರಕರಣ: ಇಂದಿನ ಸುಪ್ರೀಂ ಕೋರ್ಟ್ ತೀರ್ಪಿನ 10 ಪ್ರಮುಖ ಅಂಶಗಳು ಇಲ್ಲಿವೆ

22/08/2025 8:02 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.