ಕೋಲಾರ : ಜಿಲ್ಲೆಯ ಮಾಲೂರಿನ ಮಾರಿಕಾಂಬ ರಸ್ತೆಯಲ್ಲಿ ಕ್ಷುಲಕ್ಕ ಕಾರಣಕ್ಕೆ ಆರ್ಎಸ್ಎಸ್ ಪ್ರಮುಖನ ಮೇಲೆ ಚಾಕು ಇರಿತ ಘಟನೆ ಬೆಳಕಿಗೆ ಬಂದಿದೆ
ಮಧ್ಯಾಹ್ನ ಅಂಗಡಿ ಮುಂದೆ ಬೈಕ್ ಟಚ್ ಆಗಿದ್ದಕ್ಕೆ ಜಗಳವಾಗಿತ್ತು. ಜಗಳ ಬಿಡಿಸಲು ಮುಂದಾದ ರವಿಗೆ ಇಬ್ಬರು ವ್ಯಕ್ತಿಗಳಿಂದ ಚಾಕು ಇರಿದಿದ್ದಾರೆ. ಆರ್ಎಸ್ಎಸ್ ಪ್ರಮಖ ರವಿ ಮುಖಕ್ಕೆ ಚಾಕು ಇರಿತ, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.
ಆರೋಪಿಯ ಬಂಧನಕ್ಕೆ ಆಗ್ರಹಿಸಿ, ಮಾಲೂರು ಬಸ್ ನಿಲ್ದಾಣದ ಎದುರು ಆರ್ಎಸ್ಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಕೋಲಾರ ಜಿಲ್ಲೆಯ ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.