Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

09/04/2026 10:56 PM

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ: ಸಿಎಂ ಸಿದ್ದರಾಮಯ್ಯ ಕರೆ
KARNATAKA

RSS ನವರು ಅಂಬೇಡ್ಕರ್ ಸಂವಿಧಾನವನ್ನು ವಿರೋಧಿಸಿದ್ದರು, ಇವರ ಬಗ್ಗೆ ಎಚ್ಚರ ಇರಲಿ: ಸಿಎಂ ಸಿದ್ದರಾಮಯ್ಯ ಕರೆ

By kannadanewsnow0918/10/2025 2:24 PM

ಮೈಸೂರು: ಸಂಘ ಪರಿವಾರ ಮತ್ತು RSS ನವರು ಅಂಬೇಡ್ಕರ್ ಅವರ ಸಂವಿಧಾನವನ್ನು ವಿರೋಧಿಸಿದ್ದರು. ಈಗಲೂ ವಿರೋಧಿಸುತ್ತಿದ್ದಾರೆ. ಹೀಗಾಗಿ ಇವರ ಬಗ್ಗೆ ಎಚ್ಚರಿಕೆ ಇಂದ ಇರಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆಕೊಟ್ಟರು.

ಮೈಸೂರು ವಿಶ್ವ ವಿದ್ಯಾಲಯದ ರಜತ ಮಹೋತ್ಸವ ಹಾಗೂ ನೂತನ ಜ್ಞಾನ ದರ್ಶನ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ. ಇವರು ಸಮಾಜವನ್ನು ಅರ್ಥ ಮಾಡಿಕೊಳ್ಳಲು ಜ್ಞಾನ‌ ಸಂಪಾದನೆ ಮಾಡಿದರು. ಬಳಿಕ ತಮ್ಮ ಜ್ಞಾನವನ್ನು ಬದುಕಿನುದ್ದಕ್ಕೂ ಸಮಾಜದ ಬದಲಾವಣೆಗೆ ಬಳಸಿದರು ಎಂದು ಮೆಚ್ಚುಗೆ ಸೂಚಿಸಿದರು.

ಅಂಬೇಡ್ಕರ್ ಅವರ ಹೆಸರಲ್ಲಿ ಬಿಜೆಪಿಯವರು, ಸಂಘ ಪರಿವಾರದವರು ಅಪಪ್ರಚಾರ ಮಾಡುತ್ತಿದ್ದಾರೆ. ಅವರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಕಾಂಗ್ರೆಸ್ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ಆದರೆ, ಸತ್ಯ ಏನೆಂದರೆ “ನನ್ನನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಮತ್ತು ಡಾಂಗೆ” ಎಂದು ಸ್ವತಃ ಅಂಬೇಡ್ಕರ್ ಅವರೇ ತಮ್ಮದೇ ಹಸ್ತಾಕ್ಷರದಲ್ಲಿ ಬರೆದಿದ್ದಾರೆ. ಇಂಥಾ ಸತ್ಯಗಳನ್ನು ಸಮಾಜದ ಮುಂದಿಟ್ಟು ಸಂಘ ಪರಿವಾರದ ಸುಳ್ಳುಗಳನ್ನು ಬಹಿರಂಗಗೊಳಿಸಬೇಕು ಎಂದು ಕರೆ ನೀಡಿದರು.

ಅಂಬೇಡ್ಕರ್ ಸ್ಕೂಲ್ ಆಫ್ ಎಕನಾಮಿಕ್ಸ್ ಅನ್ನು ನಾನು ಸ್ಥಾಪಿಸಿದ್ದು ಏಕೆಂದರೆ ಅವರನ್ನು ಓದಿಕೊಂಡವರು ಅವರ ಮಾರ್ಗದಲ್ಲಿ ನಡೆಯಲಿ ಉದ್ದೇಶದಿಂದ. ಅಂಬೇಡ್ಕರ್ ಅವರಿಗೆ ಅಂಬೇಡ್ಕರ್ ಅವರೇ ಸಾಟಿ. ಮತ್ತೊಬ್ಬ ಅಂಬೇಡ್ಕರ್ ಬರಲು ಸಾಧ್ಯವಿಲ್ಲ. ಆದರೆ ಪ್ರತಿಯೊಬ್ಬರೂ ಅವರ ಆದರ್ಶಗಳನ್ನು ಪಾಲಿಸಿ ಅವರ ಹಾದಿಯಲ್ಲಿ ನಡೆಯಬೇಕು ಎಂದರು.

ವಿಶ್ವದ ಎಲ್ಲಾ ಸಂವಿಧಾನಗಳನ್ನು ಓದಿ, ಜೀರ್ಣಿಸಿಕೊಂಡು ಭಾರತೀಯ ಸಮಾಜಕ್ಕೆ ಅನ್ವಯ ಆಗುವ ವಿಶ್ವ ಶ್ರೇಷ್ಠ ಸಂವಿಧಾನವನ್ನು ಅಂಬೇಡ್ಕರ್ ಅವರು ಭಾರತಕ್ಕೆ ಕೊಟ್ಟರು ಎಂದು ವಿವರಿಸಿದರು.

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರ ಮೇಲೆ ಸನಾತನಿ ಒಬ್ಬ ಶೂ ಎಸೆದಿರುವುದು ಸನಾತನಿಗಳು , ಪಟ್ಟಭದ್ರರು ಸಮಾಜದಲ್ಲಿ ಇನ್ನೂ ಇದ್ದಾರೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಶೂ ಎಸೆತವನ್ನು ದಲಿತರಷ್ಟೇ ಅಲ್ಲ. ಪ್ರತಿಯೊಬ್ಬರೂ ವಿರೋಧಿಸಬೇಕು. ಹೀಗಾದಾಗ ಮಾತ್ರ ಸಮಾಜ ಬದಲಾವಣೆಯ ಹಾದಿಯಲ್ಲಿದೆ ಎಂದು ಸಮಾಧಾನ ಪಟ್ಟುಕೊಳ್ಳಬಹುದು ಎಂದರು.

ನಾನು ಬುದ್ದ, ಬಸವ, ಅಂಬೇಡ್ಕರ್ ವಿಚಾರದಲ್ಲಿ ನಂಬಿಕೆ ಇಟ್ಟುಕೊಂಡಿದ್ದೀನಿ. ಈ ಕಾರಣಕ್ಕೇ ವೈಚಾರಿಕತೆ, ವೈಜ್ಞಾನಿಕತೆ ಬೆಳೆಯಬೇಕು ಎಂದು ಆಶಿಸುತ್ತೇನೆ. ವಿಜ್ಞಾನ ಓದಿಯೂ ಮೂಢ ನಂಬಿಕೆ ಆಚರಿಸುವವರಾಗಬೇಡಿ ಎಂದರು.

ಮೈಸೂರು ವಿವಿಯಲ್ಲಿ ಅಂಬೇಡ್ಕರ್ ಅಧ್ಯಯನ‌ ಕೇಂದ್ರ ಆಗಿ 25 ವರ್ಷಗಳಾಗಿವೆ. ಈ ಸಂದರ್ಭದಲ್ಲಿ “ವಿಶ್ವ ಜ್ಞಾನಿ ಅಂಬೇಡ್ಕರ್ ಸಭಾ ಭವನ” ಲೋಕಾರ್ಪಣೆ ಆಗುತ್ತಿರುವುದು ಸ್ವಾಗತಾರ್ಹ ಎಂದರು.

ಎಲ್ಲರಿಗೂ ಸಮಾನ ಅವಕಾಶಗಳು ಸಿಗದೇ ಇದ್ದುದರಿಂದ ಅಸಮಾನತೆ ಸೃಷ್ಟಿಯಾಗಿದೆ.
ವಿದ್ಯೆ ಯಾರಪ್ಪನ ಮನೆ ಆಸ್ತಿ ಅಲ್ಲ. ಅವಕಾಶಗಳು ಸಿಗಬೇಕು ಅಷ್ಟೆ. ಅವಕಾಶ ಸಿಕ್ಕಾಗ ವಿದ್ವಾಂಸರಾಗುತ್ತಾರೆ, ಜ್ಞಾನಿ ಆಗುತ್ತಾರೆ. ಅಂಬೇಡ್ಕರ್ ಅವರು ತಮ್ಮ ಜ್ಞಾನವನ್ನು ಸಮಾಜದ ಬದಲಾವಣೆಗೆ ಬಳಸಿದ ಮಹಾನ್ ಚೇತನ ಎಂದರು.

ನಿಮ್ಮ ಸಹವಾಸ ಸರಿಯಾಗಿರಲಿ

ಸಮಾಜದ ಪರವಾಗಿ ಇರುವವರ ಜೊತೆ ನಿಮ್ಮ ಸಹವಾಸ ಇರಲಿ. ಸಮಾಜ ಬದಲಾವಣೆಯ ವಿರೋಧಿಗಳ, ಸನಾತನಿಗಳ ಸಹವಾಸ ಬೇಡ ಎಂದು ಕರೆ ನೀಡಿದರು.

Share. Facebook Twitter LinkedIn WhatsApp Email

Related Posts

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

09/04/2026 10:56 PM1 Min Read

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM2 Mins Read

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM3 Mins Read
Recent News

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

09/04/2026 10:56 PM

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

BREAKING: ಮುಂಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಟರ್ಮಿನಲ್-1ರಲ್ಲಿ ಅಗ್ನಿ ಅವಘಡ

09/04/2026 9:07 PM
State News
KARNATAKA

ಶಿವಮೊಗ್ಗ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉಳವಿಯ ಕಾನಹಳ್ಳಿಯ ವಿದ್ಯಾರ್ಥಿನಿ ಶುಭಮಂಗಳ 600ಕ್ಕೆ 569 ಅಂಕ

By kannadanewsnow0909/04/2026 10:56 PM KARNATAKA 1 Min Read

ಶಿವಮೊಗ್ಗ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಪರೀಕ್ಷಾ ಫಲಿತಾಂಶದಲ್ಲಿ ಸಾಗರದ ಎಂಡಿಎಫ್ (MDF) ಸ್ವತಂತ್ರ ವಿಜ್ಞಾನ ಹಾಗೂ ವಾಣಿಜ್ಯ ಪದವಿ…

ಗ್ರೇಟರ್ ಬೆಂಗಳೂರು ಜೆಡಿಎಸ್ ಸಮಾವೇಶಕ್ಕೆ ಬರದ ಸಿದ್ಧತೆ: ಮಹಿಳಾ ವಿಭಾಗದ ಸಭೆ ನಡೆಸಿದ ಹೆಚ್.ಎಂ.ರಮೇಶ್ ಗೌಡ

09/04/2026 9:44 PM

40ನೇ ರಾಜ್ಯ ಪತ್ರಕರ್ತರ ಸಮ್ಮೇಳನಕ್ಕೆ ಸರ್ವ ಸಜ್ಜಾದ ಬೀದರ್: ಏ.11ರಂದು ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿಕೆಶಿ ಉದ್ಘಾಟನೆ

09/04/2026 9:38 PM

ಹೊಸದುರ್ಗದ ಕಬ್ಬಳ ಗ್ರಾಮದಲ್ಲಿ ಕತ್ತಿಕಲ್ಲಾಂಭ ದೇವಿಯ ಅದ್ದೂರಿ ರಥೋತ್ಸವ: ಭಕ್ತಿಭಾವದ ಸಿಡಿ ಉತ್ಸವಕ್ಕೆ ಸಾಕ್ಷಿಯಾದ ಸಾವಿರಾರು ಭಕ್ತರು

09/04/2026 8:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.