ಬೆಂಗಳೂರು : ಚಿತ್ರದುರ್ಗದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪದಲ್ಲಿ ನಟ ದರ್ಶನ್ ಅರೆಸ್ಟ್ ಆಗಿದ್ದು, ಇದೀಗ ದರ್ಶನ್ ಇರುವ ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಯಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮಾರಾಗಳ ದೃಶ್ಯವಳಿ ಒದಗಿಸುವಂತೆ ಮಾಹಿತಿ ಹಕ್ಕು ಕಾಯ್ದೆಯಡಿ ವಕೀಲರಿಬ್ಬರು ಅರ್ಜಿ ಸಲ್ಲಿಸಿದ್ದಾರೆ.
ಅನ್ನಪೂರ್ಣೇಶ್ವರಿ ಪೊಲೀಸ್ ಠಾಣೆಗೆ ವಿಶೇಷ ಸೌಲಭ್ಯದ ಆರೋಪ ಹಿನ್ನೆಲೆಯಲ್ಲಿ ಠಾಣೆಯಲ್ಲಿ ಅಳವಡಿಸಿರುವ ಸಿಸಿಟಿವಿ ಕ್ಯಾಮೆರಾಗಳ 48 ಗಂಟೆಗಳ ದೃಶ್ಯಾವಳಿ ಒದಗಿಸುವಂತೆ ಕೋರಿ ಮಾಹಿತಿ ಹಕ್ಕು ಕಾಯ್ದೆ ಯಡಿ ಇಬ್ಬರು ವಕೀಲರು ಮನವಿ ಸಲ್ಲಿಸಿದ್ದಾರೆ.
ಅನ್ನ ಪೂರ್ಣೇಶ್ವರಿ ನಗರ ಠಾಣೆಗೆ ಭೇಟಿ ನೀಡಿದ ವಕೀಲರಾದ ನರಸಿಂಹ ಮೂರ್ತಿ ಹಾಗೂ ಉಮಾಪತಿ ಅವರು, ದರ್ಶನ್ ಬಂಧನ ಬಳಿಕದ 48 ಗಂಟೆಗಳ ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿ ಒದಗಿಸುವಂತೆ ಠಾಣಾಧಿಕಾರಿಗೆ ಂನವಿ ಮಾಡಿದ್ದಾರೆ.