Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಪ್ರತಿಷ್ಢಿತ ಔಟ್ ಲುಕ್- ಐಕೇರ್ (ICARE): ಕುವೆಂಪು ವಿವಿಗೆ 30ನೇ Rank

20/08/2025 2:20 PM

ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ

20/08/2025 1:58 PM

‘ಚಲನಚಿತ್ರ ಶೀರ್ಷಿಕೆಗಳಿಗೆ ಹಕ್ಕುಸ್ವಾಮ್ಯ ರಕ್ಷಣೆ ಇಲ್ಲ’: ನಿರ್ಮಾಪಕರ ಮನವಿ ತಿರಸ್ಕರಿಸಿದ ಹೈಕೋರ್ಟ್

20/08/2025 1:50 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ
KARNATAKA

ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ

By kannadanewsnow0920/08/2025 1:58 PM

ಶಿವಮೊಗ್ಗ: ಶಾಸಕ ಗೋಪಾಲಕೃಷ್ಣ ಬೇಳೂರು ಅವರು ತಮ್ಮ ಸಾಗರ-ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ ಮುಖ್ಯಮಂತ್ರಿ, ಡಿಸಿಎಂ ಅವರ ಅನುದಾನದಡಿ ಈಗಾಗಲೇ 100 ಕೋಟಿ ಅನುದಾನವನ್ನು ಮಂಜೂರು ಮಾಡಿಸಿಕೊಂಡು ಬಂದಿದ್ದರು. ಈಗ ಮುಂದುವರೆದು ಸಾಗರ, ಹೊಸನಗರದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅಭಿವೃದ್ಧಿ ಪರ್ವಕ್ಕೆ ನಾಂದಿ ಹಾಡಿದ್ದಾರೆ. ಸುಮಾರು 1 ಕೋಟಿಯನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸರ್ಕಾರದಿಂದ ಮಂಜೂರಾತಿಯನ್ನು ಪಡೆದಿದ್ದಾರೆ.

ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯಿಂದ 2025-26ನೇ ಸಾಲಿನ ಉಳಿಕೆ ಅನುದಾನದಡಿಯಲ್ಲಿ ಕಾಮಗಾರಿಗಳನ್ನು ಕೈಗೊಳ್ಳಲು ಸಾಗರ, ಹೊಸನಗರ ವಿಧಾನಸಭಾ ಕ್ಷೇತ್ರಕ್ಕೆ 1 ಕೋಟಿ ಕ್ರಿಯಾ ಯೋಜನೆಗೆ ಅನುಮತಿಯನ್ನು ಸರ್ಕಾರದಿಂದ ನೀಡಲಾಗಿದೆ.

1 ಕೋಟಿ ಅನುದಾನದಡಿ ಯಾವೆಲ್ಲ ಕಾಮಗಾರಿ ಕೈಗೊಳ್ಳಲಾಗುತ್ತದೆ ಗೊತ್ತಾ? ಇಲ್ಲಿದೆ ಪಟ್ಟಿ

ಸಾಗರ ವಿಧಾನಸಭಾ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನಂತೆ, ರಾಜ್ಯ ಸರ್ಕಾರವು 2025-26ನೇ ಸಾಲಿನ ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿಯ ಉಳಿಕೆ ಅನುದಾನದಡಿಯಲ್ಲಿ ಈ ಕೆಳಕಂಡ ಅಭಿವೃದ್ಧಿ ಕಾಮಗಾರಿಗಳನ್ನು 1 ಕೋಟಿ ಅನುದಾನದ ಅಡಿಯಲ್ಲಿ ಕೈಗೆತ್ತಿಕೊಳ್ಳಲಾಗುತ್ತಿದೆ.

  • 5 ಲಕ್ಷ ಅನುದಾನದಡಿ ಸಾಗರ ತಾಲ್ಲೂಕಿನ ಬೇಳೂರು ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣ
  • 10 ಲಕ್ಷ ಅನುದಾನದಡಿ ಸಾಗರ ನಗರ ಶ್ರೀಮತಿ ಇಂದಿರಾಗಾಂಧಿ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜು ಹತ್ತಿರ ಮತ್ತೊಂದು ಬಸ್ ನಿಲ್ದಾಣ ಕಾಮಗಾರಿ
  • 5 ಲಕ್ಷ ಅನುದಾನದಡಿ ಸಾಗರ ತಾಲ್ಲೂಕು ಹುಲಿದೇವರಬನ ಸರ್ಕಲ್ ಬಳಿ ಬಸ್ ನಿಲ್ದಾಣ.
  • 5 ಲಕ್ಷ ಅನುದಾನದಡಿ ಸಾಗರ ತಾಲ್ಲೂಕು ಬಾಳೂರು ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣ
  • 5 ಲಕ್ಷದಲ್ಲಿ ಹೊಸನಗರ ತಾಲ್ಲೂಕು ಮಾರುತಿಪುರ ಗ್ರಾಮ ಪಂಚಾಯ್ತಿಯ ಮಾರುತಿಪುರ ಹೈಸ್ಕೂಲ್ ಮುಂಭಾಗ ಬಸ್ ನಿಲ್ದಾಣ
  • 5 ಲಕ್ಷದಲ್ಲಿ ಸಾಗರ ತಾಲ್ಲೂಕಿನ ಕೆಳದಿ ಗ್ರಾಮ ಪಂಚಾಯ್ತಿಯ ಹಳ್ಳಿಬೈಲು ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣ
  • 5 ಲಕ್ಷದಲ್ಲಿ ಹೊಸನಗರ ತಾಲ್ಲೂಕು ನಿಟ್ಟೂರು ಗ್ರಾಮದ ಬಳಿ ಬಸ್ ನಿಲ್ದಾಣ ನಿರ್ಮಾಣ
  • 5 ಲಕ್ಷದಲ್ಲಿ ಸಾಗರ ತಾಲ್ಲೂಕು ತ್ಯಾಗರ್ತಿ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣ
  • 5 ಲಕ್ಷದಲ್ಲಿ ಸಾಗರ ತಾಲ್ಲೂಕಿನ ಎಡೇಹಳ್ಳಿ ಗ್ರಾಮ ಪಂಚಾಯ್ತಿಯ ಎಡೇಹಳ್ಳಿ ಸರ್ಕಲ್ ಬಳಿ ಬಸ್ ನಿಲ್ದಾಣ ನಿರ್ಮಾಣ
  • 5 ಲಕ್ಷದಲ್ಲಿ ಸಾಗರ ತಾಲ್ಲೂಕು ಮಾಸೂರು ಪಂಚಾಯ್ತಿಯ ಮಾಸೂರು ಸರ್ಕಲ್ ಬಳಿ ಮುಂದುವರೆದ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ
  • 5 ಲಕ್ಷದಲ್ಲಿ ಸಾಗರ ತಾಲ್ಲೂಕು ಕೊಂಜವಳ್ಳಿ ಗ್ರಾಮದಲ್ಲಿ ಬಸ್ ನಿಲ್ದಾಣ ನಿರ್ಮಾಣ ಕಾಮಗಾರಿ
  • 5 ಲಕ್ಷದಲ್ಲಿ ಹೊಸನಗರ ತಾಲ್ಲೂಕು ಹರ್ತಾಳು ಗ್ರಾಮದ ಬಳಿ ಬಸ್ ನಿಲ್ದಾಣ ನಿರ್ಮಾಣ
  • 10 ಲಕ್ಷದಲ್ಲಿ ಹೊಸನಗರ ತಾಲ್ಲೂಕು ನಿಟ್ಟೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ದುರಸ್ಥಿ ಹಾಗೂ ಮೂಲಭೂತ ಸೌಕರ್ಯ ಕಾಮಗಾರಿ.
  • 8 ಲಕ್ಷದಲ್ಲಿ ಹೊಸನಗರ ತಾಲ್ಲೂಕು ರಿಪ್ಪನಪೇಟೆ ಒಕ್ಕಲಿಗರ ಸಮುದಾಯ ಭವನ ಕಟ್ಟ ಮುಂದುವರೆದ ಕಾಮಗಾರಿ.
  • 6 ಲಕ್ಷದಲ್ಲಿ ಹೊಸನಗರ ತಾಲ್ಲೂಕು ಆರ್ಯ ಈಡಿಗ ಸಂಘದ ಸಮುದಾಯ ಭವನ ಕಟ್ಟಡದ ಮುಂದುವರೆದ ಕಾಮಗಾರಿ.
  • 5 ಲಕ್ಷದಲ್ಲಿ ಹೊಸನಗರ ತಾಲ್ಲೂಕು ನಗರ ಹೋಬಳಿ ಹೊಸೂರು-ಸಂಪೆಕಟ್ಟೆ ಸಂಸೆಕೈ ಗ್ರಾಮದ ಕಾಲೋನಿ ಅಭಿವೃದ್ಧಿ ಕಾಮಗಾರಿ.
  • 8 ಲಕ್ಷ ಮೊತ್ತದಲ್ಲಿ ಸಾಗರ ಟೌನ್ ಒಕ್ಕಲಿಗರ ಸಂಘದ ವತಿಯಿಂದ ನಿರ್ಮಾಣವಾಗುತ್ತಿರುವ ಸಮುದಾಯ ಭವನ ಕಟ್ಟಡದ ಮುಂದುವರೆದ ಕಾಮಗಾರಿ.

ಒಟ್ಟಾರೆಯಾಗಿ 1 ಕೋಟಿ ವೆಚ್ಚದಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರ ಶಿಫಾರಸ್ಸಿನ ಮೇರೆಗೆ ರಾಜ್ಯ ಸರ್ಕಾರವು ಸಾಗರ, ಹೊಸನಗರ ತಾಲ್ಲೂಕಿನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಲು ಅನುದಾನ ಮಂಜೂರಾತಿ ನೀಡಿದೆ. ಈ ಮೂಲಕ ಸಾಗರ ವಿಧಾನಸಭಾ ಕ್ಷೇತ್ರದಲ್ಲಿ ಅಭಿವೃದ್ಧಿಯ ಪರ್ವಕ್ಕೆ ಶಾಸಕ ಗೋಪಾಲಕೃಷ್ಣ ಬೇಳೂರು ನಾಂದಿ ಹಾಡಿದಂತೆ ಆಗಿದೆ.

ವರದಿ; ವಸಂತ ಬಿ ಈಶ್ವರಗೆರೆ, ಸಂಪಾದಕರು..

Share. Facebook Twitter LinkedIn WhatsApp Email

Related Posts

ಪ್ರತಿಷ್ಢಿತ ಔಟ್ ಲುಕ್- ಐಕೇರ್ (ICARE): ಕುವೆಂಪು ವಿವಿಗೆ 30ನೇ Rank

20/08/2025 2:20 PM1 Min Read

ಅರಸಾಳು, ಕುಂಸಿ ನಿಲ್ದಾಣಗಳಲ್ಲಿ ಈ ರೈಲುಗಳನ್ನು ತಾತ್ಕಾಲಿಕವಾಗಿ ನಿಲುಗಡೆ ಮುಂದುವರಿಕೆ

20/08/2025 1:32 PM1 Min Read

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/08/2025 1:28 PM2 Mins Read
Recent News

ಪ್ರತಿಷ್ಢಿತ ಔಟ್ ಲುಕ್- ಐಕೇರ್ (ICARE): ಕುವೆಂಪು ವಿವಿಗೆ 30ನೇ Rank

20/08/2025 2:20 PM

ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ

20/08/2025 1:58 PM

‘ಚಲನಚಿತ್ರ ಶೀರ್ಷಿಕೆಗಳಿಗೆ ಹಕ್ಕುಸ್ವಾಮ್ಯ ರಕ್ಷಣೆ ಇಲ್ಲ’: ನಿರ್ಮಾಪಕರ ಮನವಿ ತಿರಸ್ಕರಿಸಿದ ಹೈಕೋರ್ಟ್

20/08/2025 1:50 PM

BREAKING : ದೆಹಲಿಯಲ್ಲಿ ಕಟ್ಟಡ ಕುಸಿದು ಘೋರ ದುರಂತ : ಮೂವರು ಸಾವು, ಹಲವರು ಸಿಲುಕಿರುವ ಶಂಕೆ.!

20/08/2025 1:35 PM
State News
KARNATAKA

ಪ್ರತಿಷ್ಢಿತ ಔಟ್ ಲುಕ್- ಐಕೇರ್ (ICARE): ಕುವೆಂಪು ವಿವಿಗೆ 30ನೇ Rank

By kannadanewsnow0920/08/2025 2:20 PM KARNATAKA 1 Min Read

ಶಿವಮೊಗ್ಗ: ಇತ್ತೀಚೆಗೆ ಪ್ರತಿಷ್ಠಿತ ಮ್ಯಾಗಜಿನ್ ಔಟ್ ಲುಕ್- ಐಕೇರ್ ಸಂಸ್ಥೆ ಬಿಡುಗಡೆ ಮಾಡಿರುವ ದೇಶದ ಸಾರ್ವಜನಿಕ ವಿಶ್ವವಿದ್ಯಾಲಯದ ರ್ಯಾಂಕಿಂಗ್ ನಲ್ಲಿ…

ಸಾಗರ, ಹೊಸನಗರದಲ್ಲಿ ಅಭಿವೃದ್ಧಿ ಪರ್ವಕ್ಕೆ ‘ಶಾಸಕ ಗೋಪಾಲಕೃಷ್ಣ ಬೇಳೂರು’ ನಾಂದಿ: 1 ಕೋಟಿ ವೆಚ್ಚದಲ್ಲಿ ವಿವಿಧ ಕಾಮಗಾರಿ

20/08/2025 1:58 PM

ಅರಸಾಳು, ಕುಂಸಿ ನಿಲ್ದಾಣಗಳಲ್ಲಿ ಈ ರೈಲುಗಳನ್ನು ತಾತ್ಕಾಲಿಕವಾಗಿ ನಿಲುಗಡೆ ಮುಂದುವರಿಕೆ

20/08/2025 1:32 PM

ರಾಜ್ಯದ ಜನತೆಗೆ ಗುಡ್ ನ್ಯೂಸ್ : `ಗಂಗಾ ಕಲ್ಯಾಣ, ಸ್ವಾವಲಂಬಿ ಸಾರಥಿ’ ಸೇರಿ ವಿವಿಧ ಯೋಜನೆಗಳಿಗೆ ಅರ್ಜಿ ಆಹ್ವಾನ

20/08/2025 1:28 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.