Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಾಗರ ಜನತೆ ಸಮಸ್ಯೆ ಪರಿಹಾರಕ್ಕೆ ‘ದೇಶಿ ಸೇವಾ ಬ್ರಿಗೇಡ್’ ಮೂಲಕ ಹೋರಾಟ: ಅಧ್ಯಕ್ಷ ಎಂ.ಶ್ರೀಧರ ಮೂರ್ತಿ
KARNATAKA

ಸಾಗರ ಜನತೆ ಸಮಸ್ಯೆ ಪರಿಹಾರಕ್ಕೆ ‘ದೇಶಿ ಸೇವಾ ಬ್ರಿಗೇಡ್’ ಮೂಲಕ ಹೋರಾಟ: ಅಧ್ಯಕ್ಷ ಎಂ.ಶ್ರೀಧರ ಮೂರ್ತಿ

By kannadanewsnow0913/01/2025 9:29 PM

ಶಿವಮೊಗ್ಗ: ಸಾಗರ ತಾಲ್ಲೂಕಿನ ಸಾರ್ವಜನಿಕರ ಸಮಸ್ಯೆ ಬಗ್ಗೆ ದೇಶಿ ಸೇವಾ ಬ್ರಿಗೆಡ್ ಸಂಘಟನೆ ಮೂಲಕ ಉಪ ವಿಭಾಗಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೂ ಸಮಸ್ಯೆ ಪರಿಹಾರವಾಗಿಲ್ಲ. ಹೀಗಾಗಿ ದೇಶಿ ಸೇವಾ ಬ್ರಿಗೇಡ್ ಮೂಲಕ ಪ್ರತಿಭಟನೆಯ ಹೋರಾಟಕ್ಕೆ ಇಳಿಯುವುದಾಗಿ ಅಧ್ಯಕ್ಷ ಶ್ರೀಧರ್ ಮೂರ್ತಿ ಎಚ್ಚರಿಸಿದ್ದಾರೆ.

ಇಂದು ಸಾಗರ ನಗರದ ಅಣಲೆಕೊಪ್ಪದಲ್ಲಿರುವಂತ ಕರ್ನಾಟಕ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಸಾರ್ವಜನಿಕರ ಸಮಸ್ಯೆ ನಿವಾರಿಸುವ ನಿಟ್ಟಿನಲ್ಲಿ ದೇಶಿ ಸೇವಾ ಬ್ರಿಗೇಡ್ ಸಂಘಟನೆಯನ್ನು ಹುಟ್ಟು ಹಾಕಲಾಗಿದೆ. ಈ ಸಂಘಟನೆಯ ಮೂಲಕ ಸರ್ಕಾರಿ ಕಚೇರಿಯಲ್ಲಿನ ಲಂಚಾವತಾರ, ಜನರ ಸಮಸ್ಯೆಗಳ ಬಗ್ಗೆ ಧ್ವನಿಯಾಗುವ ಕೆಲಸ ಮಾಡಲಾಗುತ್ತದೆ. ಆ ನಿಟ್ಟಿನಲ್ಲಿ ನಾವು ಸ್ವಯಂ ಸೇವಕರಂತೆ ಕೆಲಸ ಮಾಡುವುದಾಗಿ ಹೇಳಿದರು.

ಸಾಗರದ ಎಸಿ ಅವರ ಮೂಲಕ ಈಗಾಗಲೇ ಬಹಳಷ್ಟು ಸಮಸ್ಯೆಗಳನ್ನು ಪರಿಹರಿಸುವಂತೆ ಮನವಿ ಮಾಡಲಾಗಿತ್ತು. ಆದರೇ ಈವರೆಗೆ ಅನೇಕ ಸಮಸ್ಯೆ ಪರಿಹರಿಸುವಂತ ಕೆಲಸವನ್ನು ಸಾಗರದ ಉಪವಿಭಾಗಾಧಿಕಾರಿಗಳು ಮಾಡಿಲ್ಲ. ಸಾಗರದ ಆಡಳಿತ ವ್ಯವಸ್ಥೆ ಅಸಾಯಕವಾಗಿದೆ. ಹೀಗಾಗಿ ಇದಕ್ಕೆ ಚುರುಕು ಮುಟ್ಟಿಸುವ ಕೆಲಸವನ್ನು ನಮ್ಮ ಸಂಘಟನೆಯು ಮಾಡಲಿದೆ ಎಂದರು.

ಕರೂರು ಹೋಬಳಿಯಲ್ಲಿ ಶೌಚಾಲಯದ ಕೊರತೆಯಿದೆ. ಬಯಲು ಶೌಚಕ್ಕೆ ಜನರು ಹೋಗುತ್ತಿದ್ದಾರೆ. ಈ ಬಗ್ಗೆ ಮುಖ್ಯಮಂತ್ರಿಗಳಿಗೆ ಎಸಿ ಮೂಲಕ ಮನವಿ ಮಾಡಲಾಗಿದೆ. ಇ-ಖಾತಾ ಸಮಸ್ಯೆ ಬಗೆ ಹರಿಸಲು ಕ್ರಮಕ್ಕೆ ಒತ್ತಾಯಿಸಲಾಗುತ್ತಿದೆ. ಸಾಗರದ ಸರ್ಕಾರಿ ಕಚೇರಿಗಳಲ್ಲಿ ಲಂಚಾವತಾರ ನಡೆಯುತ್ತಿದೆ. ಈ ಬಗ್ಗೆ ಉನ್ನತ ಮಟ್ಟದ ತನಿಖೆ ಮಾಡುವಂತೆ ಒತ್ತಾಯಿಸಿದರು.

ಸಾಗರದ ಸರ್ಕಾರಿ ಜ್ಯೂನಿಯರ್ ಕಾಲೇಜಿನಲ್ಲಿ ಮೂಲಭೂತ ಸೌಕರ್ಯಗಳ ಕೊರತೆಯಿದೆ. ಅಲ್ಲಿ ವ್ಯಾಸಂಗ ಮಾಡುತ್ತಿರುವಂತ ವಿದ್ಯಾರ್ಥಿಗಳಿಗೆ ರೋಗ ರುಚಿನಗಳಿಗೆ ಆಹ್ವಾನಿ ನೀಡುವಂತೆ ಚರಂಡಿ ವ್ಯವಸ್ಥೆಯಿದೆ. ಕೊಠಡಿಗಳ ಅಕ್ಕಪಕ್ಕದಲ್ಲೇ ಗಲೀಜು. ಈ ಸಮಸ್ಯೆಯನ್ನು ಸರಿ ಪಡಿಸುವಂತ ಕೆಲಸ ಮಾಡಬೇಕು ಎಂದರು.

ಸಾಗರ ಮೈಸೂರು ಕೆಫೆ ರಸ್ತೆಯಲ್ಲಿನ ಚರಂಡಿ ಮೇಲಿನ ಚಪ್ಪಡಿ ಕಲ್ಲುಗಳನ್ನು ಕಿತ್ತು ಹಾಕಲಾಗಿದೆ. ಇದರಿಂದ ಅಲ್ಲಿನ ನಿವಾಸಿಗಳು ಗಬ್ಬು ವಾಸನೆಯ ಜೊತೆಗೆ ಬದುಕುವಂತೆ ಆಗಿದೆ. ಒಂದೂವರೆ ತಿಂಗಳಾದರೂ ಚರಂಡಿಯನ್ನು ಸರಿಪಡಿಸಿ ಮೇಲೆ ಕಲ್ಲು ಮುಚ್ಚುವ ಕೆಲಸ ಮಾಡಿಲ್ಲ. ಇದರಿಂದ ಸಾರ್ವಜನಿಕರಿಗೆ, ವಾಹನ ಸವಾರರಿಗೆ, ಸ್ಥಳೀಯ ನಿವಾಸಿಗಳಿಗೆ ಸಮಸ್ಯೆಯಾಗುತ್ತಿದೆ ಎಂಬುದಾಗಿ ಆಕ್ರೋಶ ವ್ಯಕ್ತ ಪಡಿಸಿದರು.

ಸಾಗರ ತಾಲ್ಲೂಕಿನ ಬಿಚ್ಚುಗೋಡು ಗ್ರಾಮದಲ್ಲಿ ನೀರಿನ ಸಮಸ್ಯೆ ಕೂಡ ಇದೆ. ಅದನ್ನು ಸರಿಪಡಿಸುವಂತೆಯೂ ಜನಪ್ರತಿನಿಧಿಗಳು, ಅಧಿಕಾರಿಗಳಿಗೂ ಮನವಿ ಮಾಡಲಾಗಿತ್ತು. ಆದರೂ ಈವರೆಗೆ ಸಮಸ್ಯೆ ಪರಿಹರಿಸುವಂತ ಕೆಲಸ ಮಾಡಿಲ್ಲ. ಮುಂದಿನ ದಿನಗಳಲ್ಲಿ ಎಸಿ ಕಚೇರಿಯ ಮುಂದೆ ಈ ಸಮಸ್ಯೆಗಳನ್ನಿಟ್ಟುಕೊಂಡು ಧರಣಿ, ಪ್ರತಿಭಟನೆಗೆ ಕೂರುವುದಾಗಿ ದೇಶಿ ಸೇವಾ ಬ್ರಿಗೇಡ್ ಅಧ್ಯಕ್ಷ ಎಂ.ಶ್ರೀಧರ್ ಮೂರ್ತಿ ಎಚ್ಚರಿಕೆ ನೀಡಿದರು.

ಈ ಸಂದರ್ಭದಲ್ಲಿ ರಾಮಕೃಷ್ಣಪ್ಪ, ರಾಜು, ಶ್ರೀಪಾದ ಹೆಗಡೆ, ಮಹಭಲೇಶ್, ಬಿಜೆ ಸ್ವಾಮಿ, ನಾಗಪ್ಪ, ಸರೋಜಮ್ಮ, ಮಧು, ಸ್ವಾಮಿ, ಸ್ವಾಮಿ.ಬಿಎಂ, ಜನಾರ್ಧನ್ ಬಿಚ್ಚುಗೋಡು ಉಪಸ್ಥಿತರಿದ್ದರು.

ವರದಿ: ವಸಂತ ಬಿ ಈಶ್ವರಗೆರೆ, ಸಂಪಾದಕರು

BREAKING: ಶಾಸಕರಿಗೆ ‘ತಲಾ 10 ಕೋಟಿ ಅನುದಾನ’ ಘೋಷಿಸಿದ ‘ಸಿಎಂ ಸಿದ್ಧರಾಮಯ್ಯ’

BIG NEWS: ಬೆಂಗಳೂರಲ್ಲಿ ಅನಧಿಕೃತ ಜಾಹೀರಾತು ಅಳವಡಿಸುವವರ ಮೇಲೆ ‘FIR’ ದಾಖಲಿಸಿ: ತುಷಾರ್ ಗಿರಿನಾಥ್ ಖಡಕ್ ಸೂಚನೆ

Share. Facebook Twitter LinkedIn WhatsApp Email

Related Posts

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

16/02/2026 9:19 PM1 Min Read

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM1 Min Read

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM1 Min Read
Recent News

BREAKING : ಬಾಂಗ್ಲಾದೇಶದ ಮಧ್ಯಂತರ ನಾಯಕ ಸ್ಥಾನಕ್ಕೆ ‘ರೆಹಮಾನ್ ಯೂನಸ್’ ರಾಜೀನಾಮೆ

16/02/2026 10:02 PM

BIGG NEWS : ಭಾರತ-ಬ್ರೆಜಿಲ್ 10 ವರ್ಷಗಳ ವೀಸಾಗಳಿಗೆ ಅನುಮೋದನೆ ; ದೀರ್ಘಾವಧಿಯ ಪ್ರವೇಶ ಈಗ ಸುಲಭ!

16/02/2026 9:57 PM

BREAKING : ಫೆ.25-26ರಂದು ಪ್ರಧಾನಿ ಮೋದಿ ಇಸ್ರೇಲ್’ಗೆ ಭೇಟಿ ; ಪ್ರಧಾನಿ ‘ಬೆಂಜಮಿನ್ ನೆತನ್ಯಾಹು’ ಘೋಷಣೆ!

16/02/2026 9:51 PM

ನಿಮ್ಗೆ ಗೊತ್ತಾ.? ‘ಎಂ.ಎಸ್ ಧೋನಿ’ಗೆ ಪ್ರತಿ ತಿಂಗಳು 70,000 ರೂ. ಪಿಂಚಣಿ ; ‘BCCI’ ನೀಡುವ ನಿವೃತ್ತಿ ಸೌಲಭ್ಯಗಳಿವು.!

16/02/2026 9:42 PM
State News
KARNATAKA

‘ನಂದಿನಿ ಉತ್ಪನ್ನ’ಗಳನ್ನು ‘FSSAI’ ಎಲ್ಲಾ ಸುರಕ್ಷತಾ ಮಾನದಂಡ ಪಾಲಿಸಿ ತಯಾರಿಕೆ: KMF ಸ್ಪಷ್ಟನೆ | Nandini Products

By kannadanewsnow0916/02/2026 9:19 PM KARNATAKA 1 Min Read

ಬೆಂಗಳೂರು: ನಂದಿನಿ ಉತ್ಪನ್ನಗಳನ್ನು ಭಾರತೀಯ ಆಹಾರ ಸುರಕ್ಷತಾ ಮತ್ತು ಮಾನದಂಡ ಪ್ರಾಧಿಕಾರದ ಎಲ್ಲಾ ಸುರಕ್ಷತಾ ಮಾನದಂಡಗಳನ್ನು ಪಾಲಿಸಿ ತಯಾರಿಸಲಾಗುತ್ತಿದೆ. ಸಾಮಾಜಿಕ…

BREAKING: ಈಸೂರು ದಂಗೆಯ ಕೊನೆಯ ಕೊಂಡಿ, ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಟಿ.ಕೆ.ದೇವೇಂದ್ರಪ್ಪ ನಿಧನ

16/02/2026 8:25 PM

ಪತ್ರಕರ್ತರಿಗೆ ಸರ್ಕಾರಿ ನಿವೇಶನ ಹಂಚಿಕೆಯ ವೇಳೆ ಶೇ.5ರಷ್ಟು ಮೀಸಲಾತಿ ನೀಡಿ: ಸಿಎಂಗೆ KUWJ ಮನವಿ

16/02/2026 8:19 PM

ಕುಲದೇವರ ದೇವಸ್ಥಾನಕ್ಕೆ ಹೋಗುವಾಗ ತಪ್ಪದೇ ಹೀಗೆ ಮಾಡಿ, ನಿಮ್ಮ ಸಮಸ್ಯೆಗಳೆಲ್ಲ ದೂರ ಗ್ಯಾರಂಟಿ

16/02/2026 8:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.