Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

AI ಪವಾಡ : ಕೃತಕ ಬುದ್ಧಿಮತ್ತೆಯಿಂದ 19 ವರ್ಷಗಳ ನಂತರ ಸಂತಾನ ಭಾಗ್ಯ!

05/11/2025 6:52 AM

SHOCKING : ಭಾರತದಲ್ಲಿ `ಓವರ್ ಡೋಸ್ ಡ್ರಗ್’ನಿಂದ ಪ್ರತಿ ವಾರ 12 ಮಂದಿ ಬಲಿ : NCRB ವರದಿ

05/11/2025 6:49 AM

BIG NEWS : ರಾಜ್ಯದಲ್ಲಿ ನವೆಂಬ‌ರ್ ತಿಂಗಳನ್ನು `ಮಕ್ಕಳ ಮಾಸ’ವೆಂದು ಘೋಷಣೆ : ಮಕ್ಕಳ ರಕ್ಷಣಾ ನಿರ್ದೇಶನಾಲಯ ಆದೇಶ

05/11/2025 6:47 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಸಹದೇವ್ ಕೆಲವಡಿಗೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಅವಾರ್ಡ್ ಪುಳಕ!
FILM

ಸಹದೇವ್ ಕೆಲವಡಿಗೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಅವಾರ್ಡ್ ಪುಳಕ!

By kannadanewsnow0704/05/2024 8:05 PM

ಕೆಎನ್‌ಡಿಜಿಟಲ್‌ಡೆಸ್ಕ್‌:ಮೊದಲ ಹೆಜ್ಜೆಯಲ್ಲಿಯೇ `ಕೆಂಡ’ ನಿರ್ದೇಶಕ ಸಹದೇವ್ ಕೆಲವಡಿ ಪಾಲಿಗೆ ರೋಮಾಂಚಕ ಗೆಲುವು ಸಿಕ್ಕಿದೆ. ಸಿನಿಮಾವಿನ್ನೂ ಬಿಡುಗಡೆಯ ಹಂತದಲ್ಲಿರುವಾಗಲೇ ಈ ಸಿನಿಮಾ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್ ಗೆ ಪ್ರವೇಶ ಪಡೆದಿರುವ ಬಗ್ಗೆ ಸುದ್ದಿ ಹೊರಬಿದ್ದಿತ್ತು. ಇದೀಗ ಮತ್ತೊಂದು ಸಂಭ್ರಮದ ಸಂಗತಿಯನ್ನು ಚಿತ್ರ ತಂಡ ಹಂಚಿಕೊಂಡಿದೆ. ಈ ಚಿತ್ರಕ್ಕೆ ಬೆಸ್ಟ್ ಡೆಬ್ಯೂ ಡೈರೆಕ್ಟರ್ ಜ್ಯೂರಿ ಅವಾರ್ಡ್ ಲಭಿಸಿದೆ. ಈ ಮೂಲಕ ಸಹದೇವ್ ಕೆಲವಡಿ ಮೊದಲ ಪ್ರಯತ್ನದಲ್ಲಿಯೇ ತಮ್ಮ ನಿರ್ದೇಶನದ ಕಸುವನ್ನು ಸಾಬೀತುಪಡಿಸಿದ್ದಾರೆ. ಈ ಸುದ್ದಿಯೊಂದಿಗೆ ಕೆಂಡದ ಸುತ್ತ ಹಬ್ಬಿಕೊಂಡಿರುವ ನಿರೀಕ್ಷೆಗಳಿಗೆ ಮತ್ತೊಂದಷ್ಟು ಆವೇಗ ಬಂದಂತಾಗಿದೆ.

 

ದೆಹಲಿಯಲ್ಲಿ ನಡೆಯಲಿರುವ 14ನೇ ದಾದಾ ಸಾಹೇಬ್ ಫಾಲ್ಕೆ ಫಿಲಂ ಫೆಸ್ಟಿವಲ್-24ಕ್ಕೆ ಕೆಂಡ ಪ್ರವೇಶ ಪಡೆದುಕೊಂಡಿತ್ತು. ಈ ಹಂತದಲ್ಲಿ ಅಟತ್ಯಂತ ಕ್ಲಿಷ್ಟಕರ ಸ್ಪರ್ಧೆಯನ್ನು ದಾಟಿಕೊಂಡಿದ್ದ `ಕೆಂಡ’ ಚಿತ್ರ ಕಡೆಗೂ ಅತ್ಯುತ್ತಮ ಚೊಚ್ಚಲ ನಿರ್ದೇಶನ ವಿಭಾಗದ ಜ್ಯೂರಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿದೆ. ಈ ಸುತ್ತಿನಲ್ಲಿ ನಾನಾ ಭಾಷೆಗಳ: ಚಿತ್ರಗಳ ನಡುವೆ ಕನ್ನಡ ಚಿತ್ರ ಕೆಂಡ ಸ್ಪರ್ಧೆಗೆ ಒಡ್ಡಿಕೊಂಡಿತ್ತು. ಅಂತಿಮವಾಗಿ ಈ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಕನ್ನಡ ಚಿತ್ರರಂಗಕ್ಕೆರ ಮತ್ತೊಂದು ಗರಿ ಮೂಡಿಸಿರೋದಂತೂ ಸತ್ಯ.

 

ಈ ಫಿಲಂ ಫೆಸ್ಟಿವಲ್ ಅಂತಾರಾಷ್ಟ್ರೀಯ ಮಟ್ಟದಲ್ಲಿ ಘನತೆ ಪ್ರತಿಷ್ಠೆಯನ್ನು ಉಳಿಸಿಕೊಂಡಿದೆ. ಇದಕ್ಕೆ ಪ್ರವೇಶ ಪಡೆದುಕೊಳ್ಳೋದೇ ದೊಡ್ಡ ಸಂಗತಿ ಎಂಬಂಥಾ ವಾತಾವರಣವಿಒದೆ. ಹಾಗೊಂದು ವೇಳೆ ಪ್ರವೇಶ ಸಿಕ್ಕರೂ ಕೂಡಾ ಸ್ಪರ್ಧೆಯಲ್ಲಿ ಉಳಿದುಕೊಳ್ಳುವುದು ಸಾಮಾನ್ಯದ ಸಂಗತಿಯಲ್ಲ. ಅದೆಲ್ಲವನ್ನೂ ದಾಟಿಕೊಂಡು ಸದರಿ ಮಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿರೋದೇ ಕೆಂಡದ ಅಸಲೀ ಕಸುವಿಗೊಂದು ಸಾಕ್ಷಿ. ಅದರಲ್ಲಿಯೇ ನಿರ್ದೇಶನದಲ್ಲಿ ಮೊದಲ ಹೆಜ್ಜೆಯಲ್ಲಿಯೇ ಈ ಪ್ರತಿಷ್ಠಿತ ಪ್ರಶಸ್ತಿ ಪಡೆದುಕೊಳ್ಳುವ ಮೂಲಕ ಸಹದೇವ್ ಕೆಲವಡಿ ಅಚ್ಚರಿ ಮೂಡಿಸಿದ್ದಾರೆ.

ಹೀಗೆ ಸದ್ದು ಮಾಡುತ್ತಿರುವ ಈ ಚಿತ್ರವನ್ನು ಅಮೇಯುಕ್ತಿ ಸ್ಟುಡಿಯೋಸ್ ಬ್ಯಾನರಿನಡಿಯಲ್ಲಿ ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ಈಗಾಗಲೇ ಸಾಕಷ್ಟು ನಿರೀಕ್ಷೆ ಮೂಡಿಸಿರುವ ಕೆಂಡ ಇದೇ ಜೂನ್ ತಿಂಗಳಿನಲ್ಲಿ ತೆರೆಗಾಣಲಿದೆ. ಅಮೇಯುಕ್ತಿ ಸ್ಟುಡಿಯೋಸ್ ಮೂಲಕ ಕೆಂಡವನ್ನು ರೂಪಾ ರಾವ್ ನಿರ್ಮಾಣ ಮಾಡಿದ್ದಾರೆ. ರಿತ್ವಿಕ್ ಕಾಯ್ಕಿಣಿ ಸಂಗೀತ ನಿರ್ದೇಶನ, ಪ್ರದೀಪ್ ನಾಯಕ್ ಸಂಕಲನ, ಲಕ್ಷ್ಮಿಕಾಂತ್ ಜೋಶಿ ಕಲಾ ನಿರ್ದೇಶನವಿರುವ ಈ ಚಿತ್ರದಲ್ಲಿ ಬಿ.ವಿ ಭರತ್, ಪ್ರಣವ್ ಶ್ರೀಧರ್, ವಿನೋದ್ ಸುಶೀಲ, ಗೋಪಾಲಕೃಷ್ಣ ದೇಶಪಾಂಡೆ, ಸಚಿನ್ ಶ್ರೀನಾಥ್, ಬಿಂದು ರಕ್ಷಿದಿ, ಶರತ್ ಗೌಡ, ಸತೀಶ್ ಕುಮಾರ್, ಅರ್ಚನ ಶ್ಯಾಮ್, ಪೃಥ್ವಿ ಬನವಾಸಿ, ದೀಪ್ತಿ ನಾಗೇಂದ್ರ ಮುಂತಾದವರ ತಾರಾಗಣವಿದೆ.

Sahdev Kelavadi wins best debut director award
Share. Facebook Twitter LinkedIn WhatsApp Email

Related Posts

ದೇಶದ ರೈತರಿಗೆ ದೀಪಾವಳಿ ಗಿಫ್ಟ್ ; ದಸರಾ ಬಳಿಕ ಪಿಎಂ ಕಿಸಾನ್ 21ನೇ ಕಂತು ಬಿಡುಗಡೆ?

23/09/2025 4:03 PM2 Mins Read

ನಾಳೆ ರಾಜ್ಯಾಧ್ಯಂತ ‘ಗಾಂಧಿ ಮತ್ತು ನೋಟು’ ಚಿತ್ರ ಬಿಡುಗಡೆ: ತಪ್ಪದೇ ನೋಡುವಂತೆ ವಿ.ನಾಗೇಂದ್ರ ಪ್ರಸಾದ್ ಮನವಿ

28/08/2025 4:23 PM1 Min Read

‘ಅಪ್ಪು’ ನಮ್ಮನ್ನು ಸೇರಿಸಿದ್ರು; ವಿವಾಹದ ಬಳಿಕ ಆಂಕರ್ ಅನುಶ್ರೀ ಮೊದಲ ರಿಯಾಕ್ಷನ್

28/08/2025 2:38 PM1 Min Read
Recent News

AI ಪವಾಡ : ಕೃತಕ ಬುದ್ಧಿಮತ್ತೆಯಿಂದ 19 ವರ್ಷಗಳ ನಂತರ ಸಂತಾನ ಭಾಗ್ಯ!

05/11/2025 6:52 AM

SHOCKING : ಭಾರತದಲ್ಲಿ `ಓವರ್ ಡೋಸ್ ಡ್ರಗ್’ನಿಂದ ಪ್ರತಿ ವಾರ 12 ಮಂದಿ ಬಲಿ : NCRB ವರದಿ

05/11/2025 6:49 AM

BIG NEWS : ರಾಜ್ಯದಲ್ಲಿ ನವೆಂಬ‌ರ್ ತಿಂಗಳನ್ನು `ಮಕ್ಕಳ ಮಾಸ’ವೆಂದು ಘೋಷಣೆ : ಮಕ್ಕಳ ರಕ್ಷಣಾ ನಿರ್ದೇಶನಾಲಯ ಆದೇಶ

05/11/2025 6:47 AM

ಕೆನಡಾದ ಸಾಮೂಹಿಕ ವೀಸಾ ರದ್ದತಿ ಯೋಜನೆ : ಭಾರತೀಯರಿಗೆ ಸಂಕಷ್ಟ !

05/11/2025 6:42 AM
State News
KARNATAKA

BIG NEWS : ರಾಜ್ಯದಲ್ಲಿ ನವೆಂಬ‌ರ್ ತಿಂಗಳನ್ನು `ಮಕ್ಕಳ ಮಾಸ’ವೆಂದು ಘೋಷಣೆ : ಮಕ್ಕಳ ರಕ್ಷಣಾ ನಿರ್ದೇಶನಾಲಯ ಆದೇಶ

By kannadanewsnow5705/11/2025 6:47 AM KARNATAKA 1 Min Read

ಬೆಂಗಳೂರು : ರಾಜ್ಯದಲ್ಲಿ ನವೆಂಬ‌ರ್ ತಿಂಗಳನ್ನು ಮಕ್ಕಳ ಮಾಸ ಎಂದು ಘೋಷಿಸುವ ಕುರಿತು ಮಕ್ಕಳ ರಕ್ಷಣಾ ನಿರ್ದೇಶನಾಲಯ ಮಹತ್ವದ ಆದೇಶ…

ರಾಜ್ಯದ ವಿದ್ಯಾರ್ಥಿಗಳೇ ಗಮನಿಸಿ : `SSLC ಪರೀಕ್ಷೆ-1’ ನೋಂದಣಿ ಅವಧಿ ನ.15ರವರೆಗೆ ವಿಸ್ತರಣೆ

05/11/2025 6:41 AM

‘ರಾಜ್ಯದ ಸರ್ಕಾರಿ ನೌಕರ’ರಿಗೆ ‘ಆರೋಗ್ಯ ಸಂಜೀವಿನಿ ಯೋಜನೆ’ಗೆ ನೋಂದಣಿ ಕುರಿತು ಮಹತ್ವದ ಮಾಹಿತಿ

05/11/2025 6:35 AM

Rain Alert : ರಾಜ್ಯದಲ್ಲಿ ಇಂದಿನಿಂದ ಮತ್ತೆ 4-5 ದಿನ ಭಾರೀ ಮಳೆ : ಹವಾಮಾನ ಇಲಾಖೆ ಮುನ್ಸೂಚನೆ

05/11/2025 6:31 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.