ಬೆಂಗಳೂರು : ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸದ್ಯ ಸಿಐಡಿ ವಶದಲ್ಲಿದ್ದ ಸ್ಯಾಂಟ್ರೋ ರವಿ ಆರೋಗ್ಯದಲ್ಲಿ ಏರುಪೇರಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಐಡಿ ವಶದಲ್ಲಿದ್ದ ‘ಸ್ಯಾಂಟ್ರೋ ರವಿ’ ಆರೋಗ್ಯದಲ್ಲಿ ಏರುಪೇರಾಗಿದ್ದು, ಆತನನ್ನು ನಿನ್ನೆ ರಾತ್ರಿ ಚಿಕಿತ್ಸೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ ಎಂದು ತಿಳಿದು ಬಂದಿದೆ. ಸದ್ಯ, ಸ್ಯಾಂಟ್ರೋ ರವಿಗೆ ಚಿಕಿತ್ಸೆ ಮುಂದುವರೆದಿದ್ದು, ಇಂದು ಅಥವಾ ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗುತ್ತಿದೆ ಎನ್ನಲಾಗಿದೆ.
ಇನ್ನೂ, ಸಿಸಿಬಿ ಪೊಲೀಸರಿಂದ ಸ್ಯಾಂಟ್ರೋ ರವಿ ಪತ್ನಿ ವಿಚಾರಣೆ ಅಂತ್ಯವಾಗಿದೆ.ಸ್ಯಾಂಟ್ರೋ ರವಿ ಪತ್ನಿ ವಿರುದ್ಧ ಸುಳ್ಳು ಪ್ರಕರಣ ಸಂಬಂಧ ಸಿಸಿಬಿ ಎಸಿಪಿ ಧರ್ಮೇಂದ್ರ ನೇತೃತ್ವದಲ್ಲಿ ವಿಚಾರಣೆ ನಡೆದಿದೆ. ವಿಚಾರಣೆ ನಂತರ ಸ್ಯಾಂಟ್ರೋ ರವಿ ಪತ್ನಿ ಸುದ್ದಿಗಾರರಿಗೆ ಪ್ರತಿಕ್ರಿಯೆ ನೀಡಿದ್ದು, ಮೊದಲು ಪೊಲೀಸರ ಮೇಲೆ ನನಗೆ ನಂಬಿಕೆ ಇರಲಿಲ್ಲ, ಹಾಗಾಗಿ ಮೈಸೂರಿನಲ್ಲಿ ಮೊದಲು ದಾಖಲೆ ನೀಡಿರಲಿಲ್ಲ, ಇದೀಗ ಸಿಐಡಿಗೆ ಕೇಸ್ ವರ್ಗಾವಣೆಯಾಗಿದೆ, ಈಗ ಎಲ್ಲಾ ದಾಖಲೆಗಳನ್ನು ನೀಡಿದ್ದೇನೆ ಎಂದರು.
ಇದೀಗ ಸಿಐಡಿಗೆ ಕೇಸ್ ವರ್ಗಾವಣೆಯಾಗಿದೆ, ಹಾಗಾಗಿ ಸ್ಯಾಂಟ್ರೋ ರವಿಯ ಒಂದೊಂದೇ ವಿಚಾರ ಹೊರಬರುತ್ತಿದೆ ಎಂದು ಸ್ಯಾಂಟ್ರೋ ರವಿ ಪತ್ನಿ ಹೇಳಿದ್ದಾರೆ. ಕಾಟನ್ ಪೇಟೆ ಕೇಸ್ ಸಂಬಂಧ ಎಲ್ಲಾ ದಾಖಲೆ ನೀಡಿದ್ದೇನೆ, ಮತ್ತೆ ವಿಚಾರಣೆಗೆ ಬನ್ನಿ ಎಂದು ಪೊಲೀಸರು ಹೇಳಿಲ್ಲ. ರವಿಯ ವಿಗ್ ವಿಚಾರ ನನಗೆ ಏನೂ ಗೊತ್ತಿರಲಿಲ್ಲ, ಇಷ್ಟು ವರ್ಷ ಸಂಸಾರ ನಡೆಸಿದರೂ ಆತನ ಹಲವು ವಿಚಾರಗಳ ಬಗ್ಗೆ ನನಗೆ ಏನೂ ಗೊತ್ತಿರಲಿಲ್ಲ ಎಂದರು.
BIGG NEWS : 5ನೇ ದಿನಕ್ಕೆ ಕಾಲಿಟ್ಟ ಅಂಗನವಾಡಿ ಕಾರ್ಯಕರ್ತೆಯರ ಧರಣಿ : ಚಳಿಯಲ್ಲೂ ರಸ್ತೆಯಲ್ಲೇ ಮಲಗಿದ ಮಹಿಳೆಯರು
BIGG NEWS : ‘ಅನುಕಂಪ’ ಆಧಾರದ ಸರ್ಕಾರಿ ನೇಮಕಾತಿ : ರಾಜ್ಯ ಸರ್ಕಾರದಿಂದ ಮಹತ್ವದ ಆದೇಶ