ಕೆಎನ್‌ಎನ್‌ಸಿನಿಮಾಡೆಸ್ಕ್‌: ಸೂರ್ಯ ವಸಿಷ್ಠ ನಿರ್ದೇಶನದಲ್ಲಿ ಮೂಡಿ ಬಂದಿರುವ `ಸಾರಾಂಶ’ ಸಿನಿಮಾದ ಹಾಡು ಬಿಡುಡೆ ಮಾಡಿದೆ ಚಿತ್ರ ತಂಡ ಅಂದ ಹಾಗೇ, ಈ ಹಾಡು ನೋಡುಗರ ಸಮನ ಸೆಳೆಯುತ್ತಿದ್ದು ಒಂದಷ್ಟು ಚರ್ಚೆ, ನಿರೀಕ್ಷೆಗಳು ಮೂಡಿಕೊಂಡಿವೆ.

ಸಿನಿಮಾಕ್ಕೆ ಸಂಬಂಧಪಟ್ಟಂತೆ ಎಲ್ಲ ಕೆಲಸ ಕಾರ್ಯಗಳನ್ನು ಮುಗಿಸಿಕೊಂಡು ಬಿಡುಗಡೆಗೆ ಸಿದ್ದವಾಗಿದ್ದು, ಸದ್ಯದಲ್ಲೇ ತೆರೆ ಮೇಲೆ ಈ ಸಿನಿಮಾ ಕಾಣಿಸಿಕೊಳ್ಳಲಿದೆ. ಸಿನಿಮಾ ತಂಡ ಹೇಳಿಕೊಳ್ಳಿಕೊಳ್ಳುವ ಪ್ರಕಾರ ಈ ಸಿನಿಮಾವು ಅನುಭೂತಿಯೊಂದನ್ನು ತುಂಬುವ, ಸೂಕ್ಷ್ಮವಾಗಿ ಕಥಾ ಹಂದರದೊಳಗೆ ಕೈ ಹಿಡಿದು ಕರೆದೊಯ್ಯುತ್ತಲೇ ಕಾಡುವ ಗುಣ ಹೊಂದಿರುವ ಈ ಹಾಡು, ಸಾರಾಂಶದ ಭಿನ್ನ ಕಥಾನಕಕ್ಕೆ ಕನ್ನಡಿ ಹಿಡಿದಂತೆ ಭಾಸವಾಗುತ್ತವೆ ಎನ್ನಲಾಗಿದೆ.

ಅಪರಿಚಿತ ಲಾಲಿ ಹುಡುಕಿಹೆನು ನಿನ್ನಲಿ… ಅಂತ ಶುರುವಾಗುವ ಈ ಹಾಡು ಮೆಲ್ಲಗೆ ಆವರಿಸಿಕೊಳ್ಳುತ್ತಾ ಹೋಗುತ್ತದೆ. ಉದಿತ್ ಹರಿತಾಸ್ (ಅಜ್ಞಾತ) ಸಂಗೀತ ಸಂಯೋಜನೆಯಲ್ಲಿ ಮೂಡಿ ಬಂದಿದೆ. ಈ ಹಾಡು ದೆ. ಈ ಚಿತ್ರದ ನಿರ್ದೇಶಕರಾದ ಸೂರ್ಯ ವಸಿಷ್ಠ ಬರೆದಿರುವ ಹಾಡಿನ ಸಾಲುಗಳು ಭಿನ್ನವಾದ ಸಂಗೀತದ ಕುಸುರಿಯಲ್ಲಿ ಮತ್ತಷ್ಟು ಹೆಚ್ಚಳ ಮಾಡಿದೆ.

ಸೋಶಿಯಲ್ ಮೀಡಿಯಾದಲ್ಲಿ ಹವಾ ಸೃಷ್ಟಿಸಿರುವ ಮಾಧುರಿ ಶೇಷಾದ್ರಿ ಕಂಠಸಿರಿಯಲ್ಲಿ ಮೂಡಿ ಬಂದಿರುವ ಈ ಹಾಡು, ಸಾರಾಂಶದೊಳಗಿನ ಅಸಲೀ ಸಾರಾಂಶದತ್ತ ಕೇಳುಗರೆಲ್ಲ ತನ್ನ ಕಡೆ ಸೆಳೆಯುತ್ತಿದೆ. ಚಿತ್ರದಲ್ಲಿ ಒಟ್ಟು ಮೂರು ಹಾಡುಗಳಿದ್ದಾವೆ. ಇದೀಗ ಅದರಲ್ಲೊಂದು ಹಾಡು ಪ್ರೇಕ್ಷಕರನ್ನು ತಲುಪಿಕೊಂಡಿದೆ. ಅದರ ಒಟ್ಟಂದವೇ ಉಳಿದೆರಡು ಹಾಡುಗಳಿಗಾಗಿ ಕಾತರಿಸುವಂತೆ ಮಾಡಿದೆ. ಅದು ಈ ಚಿತ್ರತಂಡದ ಶ್ರಮಕ್ಕೆ ದಕ್ಕಿದ ನಿಜವಾದ ಗೆಲುವೆಂಬುದರಲ್ಲಿ ಯಾವ ಸಂದೇಹವೂ ಇಲ್ಲ ಎನ್ನುತ್ತದೆ ಚಿತ್ರ ತಂಡ.

ಸಿನಿಮಾದಲ್ಲಿ ದೀಪಕ್ ಸುಬ್ರಮಣ್ಯ, ಸೂರ್ಯ ವಸಿಷ್ಠ, ಶೃತಿ ಹರಿಹರನ್ ಮತ್ತು ಶ್ವೇತಾ ಗುಪ್ತ ಪ್ರಮುಖ ಪಾತ್ರಗಳಾಗಿ ನಟಿಸಿದ್ದಾರೆ. ಆಸಿಫ್ ಕ್ಷತ್ರಿಯಾ, ರವಿ ಭಟ್, ರಾಮ್ ಮಂಜುನಾಥ್, ಸತೀಶ್ ಕುಮಾರ್, ಪೃಥ್ವಿ ಬನವಾಸಿ ಮುಂತಾದವರ ತಾರಾಗಣವಿದೆ. ಸೂರ್ಯ ವಸಿಷ್ಠ ಮತ್ತು ಗಂಟುಮೂಟೆ ಖ್ಯಾತಿಯ ರೂಪಾ ರಾವ್ ಸಂಭಾಷಣೆ ಬರೆದಿದ್ದಾರೆ. ಅಪರಾಜಿತ್ ಹಿನ್ನೆಲೆ ಸಂಗೀತ, ಪ್ರದೀಪ್ ನಾಯಕ್ ಸಂಕಲನವಿರುವ ಈ ಚಿತ್ರವನ್ನು ರವಿ ಕಶ್ಯಪ್ ಮತ್ತು ಆರ್.ಕೆ ನಲ್ಲಮ್ ಅವರು ವಿಭಾ ಕಶ್ಯಪ್ ಪ್ರೊಡಕ್ಷನ್ಸ್ ಹಾಗೂ ಕ್ಲಾಪ್ಬೋರ್ಡ್ ಪ್ರೊಡಕ್ಷನ್ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ.

 

Share.
Exit mobile version