ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸಿರುವ ವಿಚಾರಣಾ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ದೆಹಲಿ ಸಚಿವ ಸತ್ಯೇಂದ್ರ ಜೈನ್ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ವಜಾಗೊಳಿಸಿದೆ.
BIG NEWS: ನಾಳೆ ‘ವೀರ ಜ್ಯೋತಿ ಯಾತ್ರೆ’ಗೆ ಸಿಎಂ ಬೊಮ್ಮಾಯಿ ಚಾಲನೆ – ಸಚಿವ ಗೋವಿಂದ ಕಾರಜೋಳ
ತಅಕ್ರಮ ಹಣ ವರ್ಗಾವಣೆ ಪ್ರಕರಣವನ್ನು ಒಂದು ನ್ಯಾಯಾಲಯದಿಂದ ಇನ್ನೊಂದು ನ್ಯಾಯಾಲಯಕ್ಕೆ ವರ್ಗಾಯಿಸಿ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಧೀಶರು ನೀಡಿದ ಸೆಪ್ಟೆಂಬರ್ 23, 2022 ರ ಆದೇಶವನ್ನು ಪ್ರಶ್ನಿಸಿ ಜೈನ್ ಸಲ್ಲಿಸಿದ ಮನವಿಯನ್ನು ನ್ಯಾಯಮೂರ್ತಿ ಯೋಗೇಶ್ ಖನ್ನಾ ವಜಾಗೊಳಿಸಿದ್ದಾರೆ.
ಪ್ರಕರಣವನ್ನು ವರ್ಗಾವಣೆ ಮಾಡುವಾಗ ಜಿಲ್ಲಾ ನ್ಯಾಯಾಧೀಶರು ಎಲ್ಲಾ ಅಂಶಗಳನ್ನು ಪರಿಗಣಿಸಿದ್ದು, ಯಾವುದೇ ಹಸ್ತಕ್ಷೇಪದ ಅಗತ್ಯವಿಲ್ಲ ಎಂದು ನ್ಯಾಯಾಲಯ ಹೇಳಿದೆ.
ತನ್ನ ಪ್ರಕರಣವನ್ನು ಮತ್ತೊಬ್ಬ ನ್ಯಾಯಾಧೀಶರಿಗೆ ವರ್ಗಾಯಿಸಲು ಇಡಿ ಅರ್ಜಿಯನ್ನು ಅನುಮತಿಸಿದ ರೂಸ್ ಅವೆನ್ಯೂ ನ್ಯಾಯಾಲಯದ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಚಿವರು ದೆಹಲಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು.
Delhi High Court dismisses the petition of minister Satyendar Jain. He had challenged the transfer of his alleged money laundering case to another court. pic.twitter.com/CbPUSdL5jd
— ANI (@ANI) October 1, 2022
ಮೇ 30 ರಂದು ಮನಿ ಲಾಂಡರಿಂಗ್ ತಡೆ ಕಾಯ್ದೆಯ (ಪಿಎಂಎಲ್ಎ) ಕ್ರಿಮಿನಲ್ ಸೆಕ್ಷನ್ಗಳ ಅಡಿಯಲ್ಲಿ ಇಡಿ ಆಮ್ ಆದ್ಮಿ ಪಕ್ಷದ ನಾಯಕ ಸತ್ಯೇಂದ್ರ ಜೈನ್ ಅವರನ್ನು ಬಂಧಿಸಿತ್ತು.
ಸಚಿವ ಸತ್ಯೇಂದ್ರ ಜೈನ್, ಹವಾಲಾ ವ್ಯವಹಾರದ ಆರೋಪದ ಮೇಲೆ ಪಿಎಂಎಲ್ಎ ಅಡಿಯಲ್ಲಿ ಏಜೆನ್ಸಿಯಿಂದ ತನಿಖೆ ನಡೆಸುತ್ತಿದೆ. ಸಚಿವರಿಗೆ ನಂಟು ಇದೆ ಎನ್ನಲಾದ ನಾಲ್ಕು ಕಂಪನಿಗಳ ಮೂಲಕ ಹಣ ಲಪಟಾಯಿಸಿದ್ದಾರೆ ಎಂಬ ಆರೋಪ ಕೇಳಿಬಂದಿದೆ.
ದೆಹಲಿ ಮುಖ್ಯಮಂತ್ರಿ ಮತ್ತು ಆಮ್ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರು ಜೈನ್ ಅವರನ್ನು ಪಕ್ಷದ ಪ್ರಾಮಾಣಿಕ ದೇಶಭಕ್ತಎಂದು ಸಮರ್ಥಿಸಿಕೊಂಡಿದ್ದು, ಅವರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸಲಾಗಿದೆ ಎಂದು ಆರೋಪಿಸಿದ್ದಾರೆ.
ಚಿತ್ರಮಂದಿರಗಳಲ್ಲಿ ನಾಡಗೀತೆ ಮೊಳಗುವಂತೆ ಮಾಡಿ: ‘ನಟ ಜೈದ್ ಖಾನ್’ರಿಂದ ಸಿಎಂ ಬೊಮ್ಮಾಯಿಗೆ ಮನವಿ