ನವದೆಹಲಿ : ಎಸ್ ಸಿ, ಎಸ್ ಟಿ ಪಟ್ಟಿ ಬದಲಾವಣೆ ಆಗಿದ್ದರೂ ಮೀಸಲಾತಿಯಡಿ ನೇಮಕಗೊಂಡಿದ್ದ ಸಿಬ್ಬಂದಿಯನ್ನು ಮುಂದುವರೆಸಲು ಸುಪ್ರೀಂಕೋರ್ಟ್ ಸೂಚನೆ ನೀಡಿದೆ.
ಈ ಹಿಂದೆ ಎಸ್ ಸಿ, ಎಸ್ ಟಿಯಾಗಿ ಪರಿಗಣಿಸಲ್ಪಟ್ಟಿದ್ದ ಕೆಲ ಜಾತಿಗಳನ್ನು ನಂತರ ಆ ಪಟ್ಟಿಯಿಂದ ಹೊರಗಿಟ್ಟು ಕರ್ನಾಟಕ ಸರ್ಕಾರದ ಕ್ರಮದಿಂದ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ ಕೇಂದ್ರ ಸರ್ಕಾರಿ ಸ್ವಾಮದ್ಯದ ಬ್ಯಾಂಕ್, ಸಂಸ್ಥೆಗಳ ನೌಕರರಿಗೆ ಸುಪ್ರೀಂಕೋರ್ಟ್ ಬಿಗ್ ರಿಲೀಫ್ ನೀಡಿದೆ.
ಸುಪ್ರೀಂಕೋರ್ಟ್ ನಲ್ಲಿ ಈ ಕುರಿತು ವಿಚಾರಣೆ ನಡೆದಿದ್ದು, ನ್ಯಾಯಮೂರ್ತಿ ಹಿಮಾ ಕೊಹ್ಲಿ ಹಾಗೂ ಸಂದೀಪ್ ಮೆಹ್ತಾ ಅವರಿದ್ದ ಪೀಠವು ಎಸ್ ಸಿ, ಎಸ್ ಟಿ ಮೀಸಲಾತಿಯಡಿ ನೇಮಕವಾದ ಈ ಸಿಬ್ಬಂದಿಗಲು ಅವರು ಕೆಲಸ ಮಾಡುತ್ತಿರುವ ಸರ್ಕಾರಿ ಸಂಸ್ಥೆಗಳು ನೀಡಿದ್ದ ನೋಟಿಸ್ ರದ್ದು ಮಾಡಿದೆ. ಈ ಮೂಲಕ ಕೆಲಸ ಕಳೆದುಕೊಳ್ಳುವ ಆತಂಕದಲ್ಲಿದ್ದ ಸರ್ಕಾರಿ ನೌಕರರಿಗೆ ಸುಪ್ರೀಂಕೋರ್ಟ್ ರಕ್ಷಣೆ ನೀಡಿದೆ.