BREAKING: ರಾಯಚೂರಲ್ಲಿ ‘ಶಾಲಾ ಮೇಲ್ಛಾವಣಿ’ ಕುಸಿದು ಹಲವು ವಿದ್ಯಾರ್ಥಿಗಳಿಗೆ ಗಾಯ

ರಾಯಚೂರು: ಮಳೆಗಾಲದಲ್ಲಿ ಶಿಥಿಲಾವಸ್ಥೆಯಲ್ಲಿರುವಂತ ಶಾಲಾ ಕೊಠಡಿಗಳಲ್ಲಿ ವಿದ್ಯಾರ್ಥಿಗಳನ್ನು ಕೂರಿಸಬಾರದು. ಬೇರೆ ಕಡೆ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಬೇಕು ಅಂತ ಶಿಕ್ಷಣ ಇಲಾಖೆ ಖಡಕ್ ಸೂಚಿಸಿದೆ. ಇದರ ನಡುವೆ ರಾಯಚೂರಲ್ಲಿ ಶಿಥಿಲಾವಸ್ಥೆಯ ಶಾಲಾ ಕಟ್ಟಡದಲ್ಲಿ ವಿದ್ಯಾರ್ಥಿಗಳಿಗೆ ಪಾಠ ಮಾಡುತ್ತಿದ್ದ ವೇಳೆಯಲ್ಲಿ, ಮೇಲ್ಛಾವಣಿ ಕುಸಿದು ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. ರಾಯಚೂರು ಜಿಲ್ಲೆಯ ಸಿರಿವಾರ ತಾಲೂಕಿನ ಪಾತಾಪುರ ಗ್ರಾಮದಲ್ಲಿ, ಪ್ರಾಥಮಿಕ ಶಾಲೆಯ ಮೇಲ್ಛಾವಣಿ ಕುಸಿತಗೊಂಡಿದೆ. ಮಳೆಯಿಂದ ನೆನೆದು, ಶಿಥಿಲಗೊಂಡಿದ್ದಂತ ಶಾಲಾ ಮೇಲ್ಛಾವಣಿ ಇಂದು ಕುಸಿತಗೊಂಡಿದೆ. ಈ ಘಟನೆಯಲ್ಲಿ ಶಾಲೆಯಲ್ಲಿ ವ್ಯಾಸಂಗದಲ್ಲಿ ತೊಡಗಿದ್ದಂತ ಹಲವು … Continue reading BREAKING: ರಾಯಚೂರಲ್ಲಿ ‘ಶಾಲಾ ಮೇಲ್ಛಾವಣಿ’ ಕುಸಿದು ಹಲವು ವಿದ್ಯಾರ್ಥಿಗಳಿಗೆ ಗಾಯ