ಚಿಕ್ಕಬಳ್ಳಾಪುರ: ತಾಲೂಕಿನ ಮೆಳೇಕೋಟೆ ಗ್ರಾಮದಲ್ಲಿ ಶಾಲೆಗೆ ನೀರು ಪೂರೈಸದ ಗ್ರಾಮ ಪಂಚಾಯಿತಿ ವಿರುದ್ಧ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದ್ದಾರೆ.
BIGG NEWS: ಇಪಿಎಸ್-ಒಪಿಎಸ್ ಜಟಾಪಟಿ: ಬೆಂಬಲಿಗರ ತಿಕ್ಕಾಟದ ನಡುವೆ ಎಐಎಡಿಎಂಕೆ ಸಭೆಗೆ ಮದ್ರಾಸ್ ಹೈಕೋರ್ಟ್ ಅನುಮತಿ
ಮೆಳೇಕೋಟೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ ವಿದ್ಯಾರ್ಥಿಗಳ ಬಳಕೆ ಹಾಗೂ ಅಡುಗೆಗೆ ನೀರಿನ ಸರಬರಾಜು ಇಲ್ಲದೆ, ಶಾಲೆ ಆರಂಭದಿಂದಲೂ ಬಸವಳಿಯುವಂತಾಗಿತ್ತು. ಇದರಿಂದ ಪಕ್ಕದ ಜಮೀನಿನಲ್ಲಿ ನೀರನ್ನು ತರಬೇಕಾದ ಅನಿವಾರ್ಯತೆ ಉಂಟಾಗಿದೆ. ಈ ಕುರಿತಂತೆ ಗ್ರಾಮ ಪಂಚಾಯಿತಿ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ, ಯಾವುದೇ ಪ್ರಯೋಜನೆ ಆಗಿಲ್ಲ ಎಂದು ಆರೋಪಿಸಿದ್ದಾರೆ.
BIGG NEWS: ಇಪಿಎಸ್-ಒಪಿಎಸ್ ಜಟಾಪಟಿ: ಬೆಂಬಲಿಗರ ತಿಕ್ಕಾಟದ ನಡುವೆ ಎಐಎಡಿಎಂಕೆ ಸಭೆಗೆ ಮದ್ರಾಸ್ ಹೈಕೋರ್ಟ್ ಅನುಮತಿ
ಅಲ್ಲದೆ ಶಾಲಾ ಶಿಕ್ಷಕರು ಮಕ್ಕಳ ಶೌಚಾಲಯಕ್ಕೂ ನೀರಿಲ್ಲದೆ ಪರಿತಪಿಸುತ್ತಿದರೂ, ಗ್ರಾಮ ಪಂಚಾಯತಿ ಅಧಿಕಾರಿ ಸಿಬ್ಬಂದಿ ಯಾರೂ ಮನವಿಗೂ ಸ್ಪಂದಿಸುತ್ತಿಲ್ಲ ಎಂದು ಸ್ಥಳೀಯರು ದೂರಿದ್ದಾರೆ. ಇದರಿಂದ ಬೇಸತ್ತ ವಿದ್ಯಾರ್ಥಿಗಳು ಇಂದು ಗ್ರಾಮ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದ್ದು, ತಟ್ಟೆ ಲೋಟ ಬಡಿದು ಆಕ್ರೋಶ ವ್ಯಕ್ತಪಡಿಸಿದ್ದಾರೆ.