ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿ ಮೇಲೆ ಕಾಲೇಜಿನ ಕ್ಲರ್ಕ್ ನಿಂದಲೇ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಈ ಆರೋಪದಡಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಕ್ಲರ್ಕ್ ನನ್ನು ಅಮಾನತುಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ.
ಚಿಕ್ಕಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಸ್ ಡಿ ಎ ಬಿ ಭೀಮರಾಜ್ ಎಂಬುವರೇ ಅಮಾನತುಗೊಂಡಿರುವಂತ ಅಧಿಕಾರಿಯಾಗಿದ್ದಾರೆ. ಇವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ.
ಚಿಕ್ಕಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಸ್ ಡಿ ಎ ಬಿ.ಭೀಮನರಾಜ್ ವಿರುದ್ಧ ವಿದ್ಯಾರ್ಥಿನಿಯೊಬ್ಬರು ಅತ್ಯಾಚಾರ ಆರೋಪದಡಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ನ್ಯಾಯಾಂಗ ಬಂಧನದಲ್ಲಿರುವಂತ ಅವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶಿಸಿದೆ.
Heart Attack: ತೀವ್ರ ಹೃದಯಾಘಾತದ ಪ್ರಕರಣಗಳಲ್ಲಿ ‘ಗೋಲ್ಡನ್ ಅವರ್’ ಏಕೆ ಮುಖ್ಯ? ಇಲ್ಲಿದೆ ಮಾಹಿತಿ
ಗೂಗಲ್ ಪೇ, ಪೋನ್ ಪೇನಲ್ಲಿ ಹಣ ಸ್ವೀಕರಿಸೋ ಮುನ್ನಾ ಅಂಗಡಿ-ಮುಂಗಟ್ಟು ಮಾಲೀಕರೇ ಈ ಸುದ್ದಿ ಓದಿ.! | UPI Transaction