Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಾಳೆಯಿಂದ ಬೆಂಗಳೂರಿನಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ
KARNATAKA

ನಾಳೆಯಿಂದ ಬೆಂಗಳೂರಿನಲ್ಲಿ ದ್ವಿತೀಯ ಆಯುರ್ವೇದ ವಿಶ್ವ ಸಮ್ಮೇಳನ

By ಅವಿನಾಶ್‌ ಆರ್‌ ಭೀಮಸಂದ್ರ
World Ayurveda Conference
World Ayurveda Conference

ಬೆಂಗಳೂರು: ಬೆಂಗಳೂರಿನ ಅರಮನೆ ಮೈದಾನದಲ್ಲಿ ಇಂದಿನಿಂದ ನಾಲ್ಕು ದಿನಗಳ ಕಾಲ ಐತಿಹಾಸಿಕ ಆಯುರ್ವೇದ ವಿಶ್ವ ಸಮ್ಮೇಳನ ನಡೆಯಲಿದ್ದು, ರಾಜ್ಯ ರಾಜಧಾನಿಯಲ್ಲಿ ಪ್ರಾಚೀನ ಆಯುರ್ವೇದದ ಭವ್ಯಲೋಕ ಅನಾವರಣಗೊಳ್ಳಲಿದೆ.

ದಕ್ಷಿಣ ಭಾರತದ ಏಳು ರಾಜ್ಯಗಳನ್ನು ಸಂಚರಿಸಿ ಬಂದಿರುವ ಧನ್ವಂತರಿ ಜ್ಯೋತಿ ಯನ್ನು ಬೆಳಗುವುದರ ಮೂಲಕ ಐತಿಹಾಸಿಕ ವಿಶ್ವ ಸಮ್ಮೇಳನಕ್ಕೆ ಚಾಲನೆ ದೊರೆಯಲಿದ್ದು, ಉದ್ಘಾಟನಾ ಸಭೆಯಲ್ಲಿ ಶ್ರೀರಾಮಚಂದ್ರಾಪುರ ಮಠದ ಶ್ರೀಶ್ರೀ ರಾಘವೇಶ್ವರ ಭಾರತೀ ಮಹಾಸ್ವಾಮಿಗಳು, ಪೇಜಾವರ ಮಠದ ಶ್ರೀಶ್ರೀ ವಿಶ್ವಪ್ರಸನ್ನ ತೀರ್ಥ ಸ್ವಾಮಿಗಳು, ಸಿರಿಗೆರೆಯ ಶ್ರೀಶ್ರೀ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮಿಗಳು, ಧರ್ಮಸ್ಥಳದ ಧರ್ಮಾಧಿಕಾರಿ ಡಾ|| ಡಿ. ವೀರೇಂದ್ರ ಹೆಗ್ಗಡೆ, ಶ್ವಾಸಗುರು ಶ್ರೀಶ್ರೀ ವಚನಾನಂದ ಮಹಾಸ್ವಾಮಿಗಳು, ಬಿಹಾರದ ಶ್ರೀಶ್ರೀ ಸ್ವಾಮಿ ವೆಂಕಟೇಶ ಪ್ರಪನ್ನಾಚಾರ್ಯ ಕಾರ್ಯಕ್ರಮದ ದಿವ್ಯಸಾನ್ನಿಧ್ಯ ವಹಿಸಲಿದ್ದು, ಸರ್ವೋಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶ ಶ್ರೀ ಶಿವರಾಜ್ ಪಾಟೀಲ್, ಕೇಂದ್ರ ಸಚಿವೆ ಕು. ಶೋಭಾ ಕರಂದ್ಲಾಜೆ, ರಾಜ್ಯ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ, ಶಾಸಕ ಸಿ.ಟಿ. ರವಿ, ಹಿರಿಯ ಪತ್ರಕರ್ತ ರವಿ ಹೆಗಡೆ, ಹಿರಿಯ ಪತ್ರಕರ್ತ ರವೀಂದ್ರ ಭಟ್ ಐನಕೈ, ಕೇಂದ್ರ ಆಯುಷ್ ಮಂತ್ರಾಲಯದ ಸಲಹೆಗಾರ ಡಾ. ಕೌಸ್ತುಭ ಉಪಾಧ್ಯಾಯ, ಹಿಮಾಲಯ ಕಂಪನಿಯ ಸಿ.ಎಫ್.ಓ ಜಯಶ್ರೀ ಉಳ್ಳಾಲ್ ಸಮಾರಂಭದಲ್ಲಿ ಉಪಸ್ಥಿತರಿರಲಿದ್ದಾರೆ.

World Ayurveda Conference
World Ayurveda Conference

ಅಮೇರಿಕಾದ ಆಯುರ್ವೇದ ತಜ್ಞೆ ಡಾ. ಭಾಸ್ವತಿ ಭಟ್ಟಾಚಾರ್ಯ ದಿಕ್ಸೂಚಿ ಭಾಷಣ ಮಾಡಲಿದ್ದು, ಶತಾವದಾನಿ ಆರ್ ಗಣೇಶ್, ಲೆಫ್ಟಿನೆಂಟ್ ಜನರಲ್ ಬಿ.ಎನ್.ಬಿ.ಎಮ್ ಪ್ರಸಾದ್, ಲಂಡನ್’ನ ಆಯುರ್ವೇದ ತಜ್ಞ ಡಾ. ವಿಜಯ್ ಮೂರ್ತಿ ಸೂರ್ತಿಯ ನುಡಿಗಳನ್ನು ಆಡಲಿದ್ದಾರೆ. ನವದೆಹಲಿಯ AIIA ನಿರ್ದೇಶಕ ಪ್ರೊಫೆಸರ್ ಪ್ರದೀಪ್ ಕುಮಾರ್ ಪ್ರಜಾಪತಿ, WHO ನ ಡಾ. ಪವನ್ ಕುಮಾರ್ ಆಯುರ್ವೇದ ಜಾಗೃತಿಯ ಸಂದೇಶವನ್ನು ನೀಡಲಿದ್ದಾರೆ. 100 ಆಯುರ್ವೇದ ಸಾಧಕರಿಗೆ ‘ ಆಯುರ್ವೇದ ವಿಶ್ವ ರತ್ನ’ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ಡಾ| ಗುರುರಾಜ ಕರ್ಜಗಿ ಸೇರಿದಂತೆ ಗಣ್ಯರು ಈ ಪ್ರಶಸ್ತಿಯನ್ನು ಸಾಧಕರಿಗೆ ನೀಡಲಿದ್ದಾರೆ.

World Ayurveda Conference
World Ayurveda Conference

ಸಂಜೆ ಆಳ್ವಾಸ್ ಸಾಂಸ್ಕೃತಿಕ ಸಂಭ್ರಮದಲ್ಲಿ 350 ವಿದ್ಯಾರ್ಥಿಗಳು ವಿಶಿಷ್ಟ ರೂಪಕವನ್ನು ಪ್ರದರ್ಶಿಸಲಿದ್ದು, ಆಯುರ್ವೇದ ಲೇಸರ್ ಬೀಮ್ ಶೋ ನಡೆಯಲಿದೆ. ಚರಕ ಸಭಾದಲ್ಲಿ ದೇಶ ವಿದೇಶಗಳ ಹಲವಾರು ಆಯುರ್ವೇದ ತಜ್ಞರು ವೈಜ್ಞಾನಿಕ ಪ್ರಬಂಧ ಮಂಡನೆಯನ್ನು ಮಾಡಲಿದ್ದಾರೆ.

ವಿಶ್ವದ ನಾನಾ ಭಾಗಗಳ 6000+ ಪ್ರತಿನಿಧಿಗಳು ಈಗಾಗಲೇ ರಾಜಧಾನಿಗೆ ಆಗಮಿಸುತ್ತಿದ್ದು, ಆಯುರ್ವೇದ ಅನುಭವ ಕೇಂದ್ರಗಳು, ಆಯುರ್ವೇದ ವಸ್ತು ಪ್ರದರ್ಶನ, ಧನ್ವಂತರಿ ರಥೋತ್ಸವ, ಆಯುರ್ವೇದ ಆಹಾರ ಪ್ರದರ್ಶನಿ, ಆಯುರ್ವೇದ ಪಾಕೋತ್ಸವ, ಮೆಗಾ ಆಯುರ್ವೇದ ಎಕ್ಸ್‌ಪೋ, ಔಷಧೀಯ ಸಸ್ಯಗಳ ಉಚಿತ ವಿತರಣೆ, ಸ್ವದೇಶಿ ಮೇಳ ಸೇರಿದಂತೆ ವೈವಿಧ್ಯಮಯ ಕಾರ್ಯಕ್ರಮಗಳು ವಿಶಿಷ್ಟವಾದ ಆಯುರ್ವೇದ ಲೋಕವನ್ನು ನಾಡಿನ ಜನತೆಗೆ ತೆರೆದಿಡಲಿವೆ.

ಆಯುರ್ವೇದ ವಿಶ್ವ ಸಮ್ಮೇಳನ
Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

2 Mins Read

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

2 Mins Read

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

2 Mins Read
Recent News

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

ಸ್ಮಾರ್ಟ್‌ಫೋನ್ ಖರೀದಿಸುವಾಗ ಜಾಗ್ರತೆ! ಅಸಲಿ ಮತ್ತು ನಕಲಿ ಮೊಬೈಲ್ ಪತ್ತೆಹಚ್ಚಲು ಪ್ರತಿಯೊಬ್ಬರೂ ತಿಳಿಯಬೇಕಾದ 5 ಸುಲಭ ವಿಧಾನಗಳು ಇಲ್ಲಿವೆ!

BREAKING: ಬೆಳ್ಳಿಯ ಆಮದಿಗೆ ನಿರ್ಬಂಧ ಹೇರಿದ ಕೇಂದ್ರ ಸರ್ಕಾರ | silver bar imports

Shocking: ಕೇವಲ 2,000 ರೂ. ಮನೆ ಬಾಡಿಗೆ ಕೊಡಲಾಗದಿದ್ದಕ್ಕೆ ಪತ್ನಿ, ಅಪ್ರಾಪ್ತ ಮಗಳ ಮೇಲಿನ ಅತ್ಯಾಚಾರಕ್ಕೆ ಸಾಥ್ ನೀಡಿದ ಪಾಪಿ ಪತಿ!

State News
KARNATAKA

ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ವೇಳೆ ಅರ್ಹರು ಕೈಬಿಡದಂತೆ ಚುನಾವಣಾ ಆಯೋಗಕ್ಕೆ MLC ರಮೇಶ್ ಬಾಬು ಪತ್ರ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು: ಕೇಂದ್ರ ಚುನಾವಣಾ ಆಯೋಗವು ಮೂರನೇ ಹಂತದ ವಿಶೇಷ ಸಮಗ್ರ ಪರಿಷ್ಕರಣೆ (SIR) ಅಡಿಯಲ್ಲಿ ದೇಶದ 16 ರಾಜ್ಯಗಳು ಹಾಗೂ…

ಬೆಲೆ ಏರಿಕೆ ವಿರುದ್ಧ ಮಂಡ್ಯದಲ್ಲಿ ವಾಟಾಳ್ ನಾಗರಾಜ್ ಎತ್ತಿನಗಾಡಿ ಚಳುವಳಿ: ‘ಕರ್ನಾಟಕ ಬಂದ್’ ಎಚ್ಚರಿಕೆ!

ಮಂಡ್ಯದ ಗೆಜ್ಜಲಗೆರೆ ಹೋರಾಟ: ರೈತ ಮುಖಂಡರ ಜೊತೆಗೆ ಶಾಸಕ ಕೆ.ಎಂ. ಉದಯ್ ಚರ್ಚೆ

ಬಿಡದಿ ಟೌನ್‌ಶಿಪ್ ಪ್ರಾಜೆಕ್ಟ್ ಬಿಟ್ಟುಬಿಡಿ: ಹೆಚ್.ಡಿ. ಕುಮಾರಸ್ವಾಮಿ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯಗೆ ಮಾಜಿ ಪ್ರಧಾನಿ ಹೆಚ್‌ಡಿಡಿ ಪತ್ರ!

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.