Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BREAKING : ಹಾವೇರಿಯಲ್ಲಿ ಹಾಡು ಹಗಲೇ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ಗ್ರಾಮಸ್ಥರು!

27/11/2025 10:40 AM

SHOCKING : ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ : ಪೋಕ್ಸೋ ಕೇಸ್ ದಾಖಲು, ಓರ್ವ ಅರೆಸ್ಟ್!

27/11/2025 10:35 AM

BREAKING : ಬೆಳ್ಳಂಬೆಳಗ್ಗೆ ಚೀನಾದಲ್ಲಿ ಘೋರ ದುರಂತ : ರೈಲು ಡಿಕ್ಕಿಯಾಗಿ 11 ಕಾರ್ಮಿಕರು ಸ್ಥಳದಲ್ಲೇ ಸಾವು.!

27/11/2025 10:30 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಒಳಮೀಸಲಾತಿಗೆ ಆಯೋಗ ರಚನೆಯು ವಿಳಂಬ ನೀತಿ ಅಲ್ಲ: ಸಿಎಂ ಸಿದ್ದರಾಮಯ್ಯ
KARNATAKA

ಒಳಮೀಸಲಾತಿಗೆ ಆಯೋಗ ರಚನೆಯು ವಿಳಂಬ ನೀತಿ ಅಲ್ಲ: ಸಿಎಂ ಸಿದ್ದರಾಮಯ್ಯ

By kannadanewsnow0931/10/2024 3:01 PM

ಬೆಂಗಳೂರು: ರಾಜ್ಯದಲ್ಲಿ ಒಳ ಮೀಸಲಾತಿ ಕುರಿತು 3 ದಶಕಗಳ ನಿರಂತರ ಬೇಡಿಕೆ, ಒತ್ತಾಯಗಳ ಹಿನ್ನೆಲೆಯಲ್ಲಿ ರಾಜ್ಯ ಸಚಿವ ಸಂಪುಟವು ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ತಾತ್ವಿಕವಾಗಿ ಒಪ್ಪಿಗೆ ನೀಡಿದೆ. ಪರಿಶಿಷ್ಟ ಜಾತಿಗಳಲ್ಲಿ 101 ಒಳ ಪಂಗಡಗಳಿದ್ದು, ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ವೈಜ್ಞಾನಿಕವಾಗಿ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಸರ್ಕಾರ ನಿರ್ಧರಿಸಿದೆ ಎಂಬುದಾಗಿ ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ.

ಈ ಕುರಿತು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು,  ರಾಜ್ಯ ಹೈಕೋರ್ಟ್‌ ನ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಕಮಿಷನ್‌ ಆಫ್‌ ಇನ್‌ಕ್ವೈರಿ ಅಕ್ಟ್‌ 1952 ಅನ್ವಯ ಆಯೋಗವನ್ನು ರಚಿಸಲು ನಿರ್ಧರಿಸಲಾಗಿದೆ. ಸದರಿ ಆಯೋಗವು ಎರಡು ತಿಂಗಳ ಒಳಗಾಗಿ ವರದಿ ಸಲ್ಲಿಸುವ ಷರತ್ತು ವಿಧಿಸಲು ರಾಜ್ಯ ಸಚಿವ ಸಂಪುಟ ತೀರ್ಮಾನಿಸಿದೆ. ಮುಂದಿನ ತೀರ್ಮಾನದವರೆಗೆ ರಾಜ್ಯ ಸರ್ಕಾರದ ಅಧೀನದ ಸಿವಿಲ್‌ ಸೇವೆಗಳಲ್ಲಿನ ಹಾಗೂ ಮೀಸಲಾತಿ ಅನ್ವಯವಾಗುವ ವೃಂದಗಳ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಹೊರಡಿಸದಿರುವ ನಿರ್ಧಾರವನ್ನು ಸಹ ಕೈಗೊಳ್ಳಲಾಗಿದೆ ಎಂದಿದ್ದಾರೆ.

ತೆಲಂಗಾಣ ಸರ್ಕಾರ ಸಹ ಒಳ ಮೀಸಲಾತಿ ಜಾರಿ ಸಂಬಂಧ ಈಗಾಗಲೇ ಇದೇ ಮಾದರಿಯಲ್ಲಿ ಒಂದು ಆಯೋಗ ರಚನೆ ಮಾಡಿದೆ ಎಂದು ತಿಳಿಸಿದ್ದಾರೆ.

ಸರ್ವೋಚ್ಛ ನ್ಯಾಯಾಲಯದ ಆದೇಶದಂತೆ ಒಳ ಮೀಸಲಾತಿಯನ್ನು ವೈಜ್ಞಾನಿಕವಾಗಿ, ಸಮರ್ಪಕವಾಗಿ ಅನುಷ್ಠಾನಗೊಳಿಸಲು ಸೂಕ್ತ ಅಂಕಿ ಅಂಶಗಳ ಅಗತ್ಯವಿರುತ್ತದೆ. ಈ ಅಂಕಿ ಅಂಶಗಳನ್ನು ವೈಜ್ಞಾನಿಕವಾಗಿ ನಿರ್ಧರಿಸಲು ರಾಜ್ಯ ಸರ್ಕಾರವು ಆಯೋಗವನ್ನು ರಚನೆ ಮಾಡಲು ನಿರ್ಧರಿಸಿದೆ. ಆಯೋಗವು ನಿಗಧಿತ ಗಡುವಿನೊಳಗೆ ವರದಿಯನ್ನು ಸಲ್ಲಿಸಲು ಬೇಕಾದ ಅಗತ್ಯ ಕ್ರಮಗಳನ್ನು ಸರ್ಕಾರವು ತೆಗೆದುಕೊಳ್ಳಲಿದೆ. ಆಯೋಗದ ವರದಿ ಬಂದ ತಕ್ಷಣ ಒಳ ಮೀಸಲಾತಿಯನ್ನು ಜಾರಿಗೊಳಿಸಲು ಕ್ರಮವಹಿಸಲಾಗುವುದು ಎಂದಿದ್ದಾರೆ.

ಒಳ ಮೀಸಲಾತಿ ನೀಡುವುದು ಸಂವಿಧಾನ ಬದ್ಧವಾದ ಕ್ರಮ ಎಂದು ಸುಪ್ರೀಂಕೋರ್ಟ್‌ ಇತ್ತೀಚೆಗೆ ತಿಳಿಸಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಒಳ ಮೀಸಲಾತಿ ಜಾರಿಗೊಳಿಸುವ ಕ್ರಾಂತಿಕಾರಿ ನಿರ್ಣಯ ಕೈಗೊಂಡಿದೆ. ಸಮರ್ಪಕವಾಗಿ, ವೈಜ್ಞಾನಿಕವಾಗಿ ಹಾಗೂ ವಿವಾದಗಳಿಗೆ ಆಸ್ಪದ ನೀಡದಂತೆ ಒಳ ಮೀಸಲಾತಿಯನ್ನು ಅನುಷ್ಠಾನಗೊಳಿಸಬೇಕೆಂಬ ಉದ್ದೇಶದಿಂದ ಸರ್ಕಾರ ಆಯೋಗ ಸರ್ಕಾರ ರಚಿಸಿದ್ದು, ಇದರಲ್ಲಿ ಯಾವುದೇ ವಿಳಂಬ ನೀತಿ ಅಥವಾ ಕಾಲಹರಣ ತಂತ್ರ ಇರುವುದಿಲ್ಲ. ಸಾಮಾಜಿಕ ನ್ಯಾಯದ ವಿಷಯದಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೆ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಸರ್ಕಾರ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದ್ದಾರೆ.

Share. Facebook Twitter LinkedIn WhatsApp Email

Related Posts

BREAKING : ಹಾವೇರಿಯಲ್ಲಿ ಹಾಡು ಹಗಲೇ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ಗ್ರಾಮಸ್ಥರು!

27/11/2025 10:40 AM1 Min Read

SHOCKING : ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ : ಪೋಕ್ಸೋ ಕೇಸ್ ದಾಖಲು, ಓರ್ವ ಅರೆಸ್ಟ್!

27/11/2025 10:35 AM1 Min Read

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

27/11/2025 10:30 AM1 Min Read
Recent News

BREAKING : ಹಾವೇರಿಯಲ್ಲಿ ಹಾಡು ಹಗಲೇ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ಗ್ರಾಮಸ್ಥರು!

27/11/2025 10:40 AM

SHOCKING : ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ : ಪೋಕ್ಸೋ ಕೇಸ್ ದಾಖಲು, ಓರ್ವ ಅರೆಸ್ಟ್!

27/11/2025 10:35 AM

BREAKING : ಬೆಳ್ಳಂಬೆಳಗ್ಗೆ ಚೀನಾದಲ್ಲಿ ಘೋರ ದುರಂತ : ರೈಲು ಡಿಕ್ಕಿಯಾಗಿ 11 ಕಾರ್ಮಿಕರು ಸ್ಥಳದಲ್ಲೇ ಸಾವು.!

27/11/2025 10:30 AM

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

27/11/2025 10:30 AM
State News
KARNATAKA

BREAKING : ಹಾವೇರಿಯಲ್ಲಿ ಹಾಡು ಹಗಲೇ ಚಿರತೆ ಪ್ರತ್ಯಕ್ಷ : ಆತಂಕದಲ್ಲಿ ಗ್ರಾಮಸ್ಥರು!

By kannadanewsnow0527/11/2025 10:40 AM KARNATAKA 1 Min Read

ಹಾವೇರಿ : ಎಷ್ಟು ದಿನ ಬೆಂಗಳೂರು ಸೇರಿದಂತೆ ದಕ್ಷಿಣ ಕರ್ನಾಟಕ ಭಾಗದಲ್ಲಿ ಚಿರತೆ ಹುಲಿಗಳ ಹಾವಳಿ ಹೆಚ್ಚಾಗಿತ್ತು. ಇದರಿಂದ ಜನರು…

SHOCKING : ಗಂಡು ಮಗುವಿಗೆ ಜನ್ಮ ನೀಡಿದ 10ನೇ ತರಗತಿ ವಿದ್ಯಾರ್ಥಿನಿ : ಪೋಕ್ಸೋ ಕೇಸ್ ದಾಖಲು, ಓರ್ವ ಅರೆಸ್ಟ್!

27/11/2025 10:35 AM

ನಾಳೆ ಉಡುಪಿಗೆ ಪ್ರಧಾನಿ ಮೋದಿ ಭೇಟಿ ಹಿನ್ನೆಲೆ : ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆಗಳಿಗೆ ರಜೆ ಘೋಷಣೆ

27/11/2025 10:30 AM

BIG NEWS : ‘ಕಾವೇರಿ 2.0’ ತಂತ್ರಾಂಶದ ಕಾನೂನು ಗೊಂದಲಗಳ ಪರಿಷ್ಕರಣೆ ಮಾಡಿ : ಸರ್ಕಾರಕ್ಕೆ ಹೈಕೋರ್ಟ್ ಸೂಚನೆ

27/11/2025 10:29 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.