Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿದ್ದವರಿಗೆ ಬಿಗ್ ಶಾಕ್: ಬಡ್ತಿಗೆ ಬ್ರೇಕ್

11/12/2025 6:26 PM

ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿ ಇಲ್ಲ: ಸಚಿವ ಕೆ.ಜೆ ಜಾರ್ಜ್

11/12/2025 6:22 PM

ಯುಜಿ ನೀಟ್: ಸ್ಟ್ರೇ ವೇಕೆನ್ಸಿ ಸುತ್ತು, ಆಪ್ಷನ್ಸ್ ದಾಖಲಿಸಲು ಡಿ.12 ಕೊನೆ ದಿನ

11/12/2025 6:19 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿ ಇಲ್ಲ: ಸಚಿವ ಕೆ.ಜೆ ಜಾರ್ಜ್
KARNATAKA

ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿ ಇಲ್ಲ: ಸಚಿವ ಕೆ.ಜೆ ಜಾರ್ಜ್

By kannadanewsnow0911/12/2025 6:22 PM

ಬೆಳಗಾವಿ ಸುವರ್ಣಸೌಧ: ಉತ್ತರ ಕನ್ನಡ ಜಿಲ್ಲೆಯ ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆಯಿಂದ 2,000 ಮೆ.ವ್ಯಾ. ವಿದ್ಯುತ್ ಉತ್ಪಾದಿಸಲು ಉದ್ದೇಶಿಸಲಾಗಿದ್ದು, ಈ ಯೋಜನೆಯಿಂದ ಪರಿಸರಕ್ಕೆ ಯಾವುದೇ ಹಾನಿ ಉಂಟಾಗುವುದಿಲ್ಲ ಎಂಬುದಾಗಿ ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟ ಪಡಿಸಿದ್ದಾರೆ.

ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ವಿಧಾನಸಭೆಯಲ್ಲಿ ಶಾಸಕ ದಿನಕರ್ ಕೇಶವ್ ಶೆಟ್ಟಿ ಅವರ ಪ್ರಶ್ನೆಗೆ ಇಂಧನ ಸಚಿವರಾದ ಕೆ. ಜೆ. ಜಾರ್ಜ್ ಅವರ ಉತ್ತರಿಸಿದರು.

ಶರಾವತಿ ಪಂಪ್ಡ್ ಸ್ಟೋರೇಜ್ ಜಲ ವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿಯಾಗುತ್ತದೆ ಎಂದು ಆರೋಪಿಸುವವರಿಗೆ ಮಾಹಿತಿಯ ಕೊರತೆ ಇದೆ. ಜನಪ್ರತಿನಿಧಿಗಳು, ಪರಿಸರವಾದಿಗಳ ತಕಾರರು ಬಂದಾಗ ಇದನ್ನು ಗಂಭೀರವಾಗಿ ಪರಿಗಣಿಸಿ, ಸಂಬಂಧಿಸಿದ ತಜ್ಞರು, ಅಧಿಕಾರಿಗಳಿಂದ ಪರಿಶೀಲಿಸಿ, ಅವರಿಂದ ವರದಿ ಪಡೆದುಕೊಂಡಿದ್ದೇನೆ. ಈಗಲೂ ಶಾಸಕರಿಗೆ ಪರಿಸರ ಹಾನಿ ಕುರಿತಂತೆ ಯಾವುದೇ ಸಂಶಯಗಳಿದ್ದಲ್ಲಿ, ಅವುಗಳನ್ನು ಪರಿಹರಿಸುವ ಕಾರ್ಯ ಮಾಡಲಾಗುವುದು. ಈ ಯೋಜನೆಯಲ್ಲಿ ಸುರಂಗ ಮಾರ್ಗವನ್ನು ಮಾಡಲಾಗುವುದಿಲ್ಲ, ಬದಲಿಗೆ ಪೈಪ್‍ಲೈನ್ ಅಳವಡಿಸಿ, ಆ ಪ್ರದೇಶವನ್ನು ಪುನಃ ಮೊದಲಿನ ಸ್ಥಿತಿಗೆ ತಂದು ಅರಣ್ಯೀಕರಣ ಮಾಡಲಾಗುವುದು. ಇದಕ್ಕಾಗಿ ಕೇವಲ 25 ಎಕರೆ ಭೂಮಿ ಮಾತ್ರ ಅಗತ್ಯವಿದ್ದು, ಹೀಗಾಗಿ ಪರಿಸರದ ಮೇಲೆ ಯಾವುದೇ ಹಾನಿಯಾಗುವ ಕೆಲಸ ಮಾಡುವುದಿಲ್ಲ ಎಂದು ತಿಳಿಸಿದರು.

1964ರಲ್ಲಿ ಶರಾವತಿ ಜಲಾಶಯದ ಯೋಜನೆ ಮಾಡಿದಾಗ 1 ಲಕ್ಷ ಹೆಕ್ಟೇರ್ ಪ್ರದೇಶ ಮುಳುಗಡೆಯಾಗಿತ್ತು, ಈಗ ವರಾಹಿಯೂ ಸೇರಿದಂತೆ 1400 ಮೆ.ವ್ಯಾ. ವಿದ್ಯುತ್ ಉತ್ಪಾದನೆ ಆಗುತ್ತಿದೆ. ಇದೀಗ ಉಪಯೋಗಿಸಿದ ನೀರನ್ನೇ ಪುನಃ ಪಂಪ್ ಮಾಡಿ, ಪುನಃ ವಿದ್ಯುತ್ ಉತ್ಪಾದನೆ ಮಾಡುವ ಯೋಜನೆಗೆ ಬಳಸಲು ಯೋಜನೆ ರೂಪಿಸಿದ್ದೇವೆ ಎಂದರು.

ಸೌರಶಕ್ತಿ, ಪವನಶಕ್ತಿ ಸೇರಿದಂತೆ ನವೀಕರಿಸಿದ ಇಂಧನ ಬಳಸುವ ಯೋಜನೆಗಳಲ್ಲಿ ನಮ್ಮ ರಾಜ್ಯ ದೇಶದಲ್ಲಿಯೇ 3ನೇ ಸ್ಥಾನದಲ್ಲಿದೆ. ಶೀಘ್ರವೇ ಮೊದಲನೆ ಸ್ಥಾನಕ್ಕೆ ಬರುವ ವಿಶ್ವಾಸವಿದೆ. ವರ್ಷದಿಂದ ವರ್ಷಕ್ಕೆ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದ್ದು, ನಮಗೆ ಹೆಚ್ಚಿನ ವಿದ್ಯುತ್‍ನ ಅಗತ್ಯವಿದೆ, ಕಳೆದ ವರ್ಷಕ್ಕಿಂತ ಈ ವರ್ಷ ಒಂದು ಸಾವಿರ ಮೆ.ವ್ಯಾ. ಹೆಚ್ಚಿನ ವಿದ್ಯುತ್ ಬೇಡಿಕೆ ಇದೆ. ಪವರ್ ಕಟ್ ಮಾಡದೆ ಕೃಷಿ ಪಂಪ್ ಸೆಟ್‍ಗಳಿಗೆ ವಿದ್ಯುತ್ ನೀಡುತ್ತಿದ್ದೇವೆ ಎಂಬುದಾಗಿ ಹೇಳಿದರು.

ಯುಜಿ ನೀಟ್: ಸ್ಟ್ರೇ ವೇಕೆನ್ಸಿ ಸುತ್ತು, ಆಪ್ಷನ್ಸ್ ದಾಖಲಿಸಲು ಡಿ.12 ಕೊನೆ ದಿನ

ಚಳಿಗಾಲದಲ್ಲಿಯೇ ಹೃದಯಾಘಾತ ಹೆಚ್ಚೇಕೆ? ಅಪಾಯಗಳನ್ನು ತಪ್ಪಿಸಲು ತಜ್ಞರು ನೀಡಿದ ಟಾಪ್ 5 ಸಲಹೆಗಳು!

Share. Facebook Twitter LinkedIn WhatsApp Email

Related Posts

ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿದ್ದವರಿಗೆ ಬಿಗ್ ಶಾಕ್: ಬಡ್ತಿಗೆ ಬ್ರೇಕ್

11/12/2025 6:26 PM1 Min Read

ಯುಜಿ ನೀಟ್: ಸ್ಟ್ರೇ ವೇಕೆನ್ಸಿ ಸುತ್ತು, ಆಪ್ಷನ್ಸ್ ದಾಖಲಿಸಲು ಡಿ.12 ಕೊನೆ ದಿನ

11/12/2025 6:19 PM1 Min Read

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಗುಲಾಬಿ ಮಾರ್ಗದ ಮೊಟ್ಟ ಮೊದಲ ‘ಚಾಲಕ ರಹಿತ’ ರೈಲು ಅನಾವರಣ

11/12/2025 6:17 PM1 Min Read
Recent News

ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿದ್ದವರಿಗೆ ಬಿಗ್ ಶಾಕ್: ಬಡ್ತಿಗೆ ಬ್ರೇಕ್

11/12/2025 6:26 PM

ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿ ಇಲ್ಲ: ಸಚಿವ ಕೆ.ಜೆ ಜಾರ್ಜ್

11/12/2025 6:22 PM

ಯುಜಿ ನೀಟ್: ಸ್ಟ್ರೇ ವೇಕೆನ್ಸಿ ಸುತ್ತು, ಆಪ್ಷನ್ಸ್ ದಾಖಲಿಸಲು ಡಿ.12 ಕೊನೆ ದಿನ

11/12/2025 6:19 PM

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಗುಲಾಬಿ ಮಾರ್ಗದ ಮೊಟ್ಟ ಮೊದಲ ‘ಚಾಲಕ ರಹಿತ’ ರೈಲು ಅನಾವರಣ

11/12/2025 6:17 PM
State News
KARNATAKA

ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿದ್ದವರಿಗೆ ಬಿಗ್ ಶಾಕ್: ಬಡ್ತಿಗೆ ಬ್ರೇಕ್

By kannadanewsnow0911/12/2025 6:26 PM KARNATAKA 1 Min Read

ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸಾರಿಗೆ ಇಲಾಖೆಯಲ್ಲಿ ನಕಲಿ ದಾಖಲೆ ನೀಡಿ ಬಡ್ತಿ ಪಡೆದಿದ್ದವರಿಗೆ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಬಿಗ್…

ಶರಾವತಿ ಪಂಪ್ಡ್ ಸ್ಟೋರೇಜ್ ಜಲವಿದ್ಯುತ್ ಯೋಜನೆಯಿಂದ ಪರಿಸರಕ್ಕೆ ಹಾನಿ ಇಲ್ಲ: ಸಚಿವ ಕೆ.ಜೆ ಜಾರ್ಜ್

11/12/2025 6:22 PM

ಯುಜಿ ನೀಟ್: ಸ್ಟ್ರೇ ವೇಕೆನ್ಸಿ ಸುತ್ತು, ಆಪ್ಷನ್ಸ್ ದಾಖಲಿಸಲು ಡಿ.12 ಕೊನೆ ದಿನ

11/12/2025 6:19 PM

‘ನಮ್ಮ ಮೆಟ್ರೋ’ ಪ್ರಯಾಣಿಕರಿಗೆ ಗುಡ್ ನ್ಯೂಸ್ : ಗುಲಾಬಿ ಮಾರ್ಗದ ಮೊಟ್ಟ ಮೊದಲ ‘ಚಾಲಕ ರಹಿತ’ ರೈಲು ಅನಾವರಣ

11/12/2025 6:17 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.