ಶಿವಮೊಗ್ಗ : ದಕ್ಷಿಣ ಒಳನಾಡಿನ ಭಾಗದಲ್ಲಿ ಭಾರಿ ಮಳೆ ಆಗುತ್ತಿದ್ದು, ಮಂಗಳೂರು, ದಕ್ಷಿಣ ಕನ್ನಡ, ಚಿಕ್ಕಮಂಗಳೂರು, ಹಾಸನ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರಿ ಮಳೆ ಆಗುತ್ತಿದ್ದು ಇದೀಗ ಶಿವಮೊಗ್ಗ ಜಿಲ್ಲೆಯ ಆಗುಂಬೆಯಲ್ಲಿ ಭಾರಿ ಮಳೆಯಾಗಿದ್ದರಿಂದ, ಬೃಹತ್ ಗಾತ್ರದ ಮರ ಒಂದು ಕಾರಿನ ಮೇಲೆ ಬಿದ್ದ ಪರಿಣಾಮ, ಕಾರಿನಲ್ಲಿ ಸಂಚರಿಸುತ್ತಿದ್ದ ತಂದೆ ಮಗ ಗಂಭೀರವಾಗಿ ಕೈಗೊಂಡಿದ್ದಾರೆ.

ಹೌದು ಇಂದು ಆಗುಂಬೆಯ ಸುತ್ತಮುತ್ತ ಭಾರಿ ಮಳೆಯಾಗುತ್ತಿದ್ದೂ, ಈ ವೇಳೆ ಕಾರಿನ ಮೇಲೆ ಬೃಹತ್ ಗಾತ್ರದ ಮರ ಬಿದ್ದಿದೆ. ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಆಗುಂಬೆ ಘಾಟ್ ಬೃಹತ್ ಗಾತ್ರದ ಮರ ಉರುಳಿ ಬಿದಿದ್ದರಿಂದ ಕಾರು ನುಜ್ಜು ಗುಜ್ಜಾಗಿದೆ.

ಮಣಿಪಾಲದಿಂದ ಶಿವಮೊಗ್ಗದತ್ತ ಬರುತ್ತಿದ್ದ ಕಾರು ಸಂಪೂರ್ಣವಾಗಿ ಜಖಂಗೊಂಡಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ತಂದೆ ಮಗನಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಆಗುಂಬೆಯ ನಾಲ್ಕನೇ ತಿರುವಿನಲ್ಲಿ ಮರ ಊರುಳಿದರಿಂದ ಇದೀಗ ಸಂಚಾರ ವ್ಯತಯ ಉಂಟಾಗಿದೆ. ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಮರವನ್ನು ಇದೀಗ ಸಿಬ್ಬಂದಿ ತೆರವುಗೊಳಿಸುತ್ತಿದ್ದಾರೆ. ಅರಣ್ಯ ಇಲಾಖೆ ಸಿಬ್ಬಂದಿಗೆ ಸ್ಥಳೀಯ ನಿವಾಸಿಗಳು ಸಾಥ್ ನೀಡಿದ್ದಾರೆ.

Share.
Exit mobile version