ಶಿವಮೊಗ್ಗ : ಜಿಲ್ಲಾ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯು ಅಂಗವಿಕಲರ ಗ್ರಾಮೀಣ ಪುನರ್ವಸತಿ ಕಾರ್ಯಕ್ರಮ ಯೋಜನೆಗೆ ಶಿವಮೊಗ್ಗ ಮಹಾನಗರ ಪಾಲಿಕೆಯಲ್ಲಿ ಯು.ಆರ್.ಡಬ್ಲ್ಯೂ 01 ಹುದ್ದೆ ಹಾಗೂ ಶಿವಮೊಗ್ಗ ತಾಲೂಕಿನ ಪಿಳ್ಳಂಗರೆ, ಅಬ್ಬಲಗೆರೆ, ಉಂಬ್ಳೆಬೈಲು, ಬಾಳೆಕೊಪ್ಪ, ಸೋಗಾನೆ ಮತ್ತು ಮಲ್ಲಾಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಗ್ರಾಮೀಣ ಪುನರ್ವಸತಿ ಕಾರ್ಯಕರ್ತರೆಂದು (ವಿ.ಆರ್.ಡಬ್ಲ್ಯೂ) ಆಯ್ಕೆ ಮಾಡಲು 18 ರಿಂದ 45 ವರ್ಷ ವಯೋಮಿತಿಯೊಳಗಿನ 10ನೇ ತರಗತಿ ಪಾಸಾಗಿರುವ ಸ್ಥಳೀಯ ಅರ್ಹ ವಿಕಲಚೇತನರಿಂದ ಅರ್ಜಿ ಆಹ್ವಾನಿಸಲಾಗಿದೆ.

BIG NEWS: ಬಡ್ತಿ ನಿರೀಕ್ಷೆಯಲ್ಲಿದ್ದ ತಹಶೀಲ್ದಾರ್ ಗಳಿಗೆ ಗುಡ್ ನ್ಯೂಸ್: ರಾಜ್ಯ ಸರ್ಕಾರದಿಂದ KAS ಹುದ್ದೆಗೆ ಬಡ್ತಿ ನೀಡಿ ಆದೇಶ

ಆಸಕ್ತರು ನಿಗಧಿತ ನಮೂನೆ ಅರ್ಜಿಗಳನ್ನು ಶಿವಮೊಗ್ಗ ತಾ.ಪಂ. ಕಚೇರಿಯ ಎಂ.ಆರ್.ಡಬ್ಲ್ಯೂ ಮಲ್ಲಿಕಾರ್ಜುನ ಮೊ.ಸಂ.: 9980150110 ಇವರಿಂದ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ದಿ: 23/12/2022 ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

BREAKING NEWS: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಜನರು, ಶಾಲಾ ವಿದ್ಯಾರ್ಥಿಗಳು

ನಿಗಧಿತ ನಮೂನೆ ಅರ್ಜಿ ಮತ್ತು ಮಾಹಿತಿಗಾಗಿ ಎಂ.ಆರ್.ಡಬ್ಲ್ಯೂ ಮಲ್ಲಿಕಾರ್ಜುನ ಮೊ.ಸಂ.: 9980150110 ನ್ನು ಸಂಪರ್ಕಿಸುವುದು.

Share.
Exit mobile version