Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಭಾರತ ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಪ್ರಧಾನಿ ಮೋದಿ

04/07/2025 9:59 AM

BREAKING : ಮಂಗಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಭೇಧಿಸಿದ ಪೊಲೀಸರು : 5.20 ಲಕ್ಷ ಮೌಲ್ಯದ ಡ್ರಗ್ಸ್ ವಶ, ಐವರು ಅರೆಸ್ಟ್!

04/07/2025 9:56 AM
Amarnath Yatra

ಅಮರನಾಥ ಯಾತ್ರೆ: ಮೊದಲ ದಿನ 12,000ಕ್ಕೂ ಹೆಚ್ಚು ಮಂದಿ ದರ್ಶನ | Amarnath Yatra

04/07/2025 9:49 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶಿವಮೊಗ್ಗ: ಮಲೆನಾಡಿನಲ್ಲಿ ‘ಜೆಜೆಎಂ ಕಾಮಗಾರಿ’: WTPಯ 11ನೇ ದಿನದ ‘ತಿಥಿ ಆಚರಿಸಿದ’ ಗ್ರಾಮಸ್ಥರು
KARNATAKA

ಶಿವಮೊಗ್ಗ: ಮಲೆನಾಡಿನಲ್ಲಿ ‘ಜೆಜೆಎಂ ಕಾಮಗಾರಿ’: WTPಯ 11ನೇ ದಿನದ ‘ತಿಥಿ ಆಚರಿಸಿದ’ ಗ್ರಾಮಸ್ಥರು

By kannadanewsnow0907/03/2024 7:31 PM

ಶಿವಮೊಗ್ಗ: ತೀರ್ಥಹಳ್ಳಿ ತಾಲೂಕಿನ ಕೋಡ್ಲು ಗ್ರಾಮದಲ್ಲಿ 11 ದಿನಗಳ ಹಿಂದೆ ಪೊಲೀಸ್ ಬಿಗಿ ಭದ್ರತೆಯಲ್ಲಿ ಆರಂಭಗೊಂಡ ಜಲ್‌ ಜೀವನ್‌ ಮಿಷನ್‌ನ ನೀರು ಶುದ್ಧೀಕರಣ ಘಟಕ (WTP)ದ ಕಾಮಗಾರಿ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ಗುರುವಾರ ಹೊಸ ಸ್ವರೂಪಕ್ಕೆ ತಿರುಗಿದೆ.

“ಜನರ ಸಲಹೆಗಳಿಗೆ ಬೆಲೆ ನೀಡದೆ, ಜನಾಭಿಪ್ರಾಯಯವನ್ನು ಪೊಲೀಸರ ಮೂಲಕ ಹತ್ತಿಕ್ಕಿದ ಸರಕಾರ ನೀರಿನ ಶುದ್ಧೀಕರಣ ಘಟಕದ ಕಾಮಗಾರಿಗೆ ಚಾಲನೆ ನೀಡಿ 11 ದಿನಗಳ ತುಂಬಿದೆ. ಹೀಗಾಗಿ, ಶಿವರಾತ್ರಿಯ ಮುನ್ನಾದಿನಾಗಿರುವ ಇವತ್ತು ಜನರ ಆಶಯಗಳ ಸಾವಿನ ಸಾಂಕೇತಿಕವಾಗಿ ಪ್ರತಿಭಟನಾ ಸ್ಥಳದಲ್ಲಿ ತಿಥಿಯನ್ನು ಆಚರಿಸಲಾಯಿತು,’’ ಎಂದು ಪ್ರತಿಭಟನೆಯ ಹೊಣೆ ಹೊತ್ತಿರುವ ಭೀಮೇಶ್ವರ ಸಂಗಮ ಉಳಿಸಿ ಹೋರಾಟ ಸಮಿತಿ ಹಾಗೂ ತಾಲೂಕು ರೈತ ಸಂಘ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿವೆ.

ತೀರ್ಥಹಳ್ಳಿ- ಶೃಂಗೇರಿ ಸಂಪರ್ಕಿಸುವ ಹೆದ್ದಾರಿಯಲ್ಲಿ ಬರುವ ಕೋಡ್ಲು ಗ್ರಾಮದಲ್ಲಿ ಗ್ರಾಮಸ್ಥರು ತಮಗೆ ತೋಚಿದ ರೀತಿಯಲ್ಲಿ ಸರಕಾರದ ಕಾಮಗಾರಿಗೆ ಅಪರ ಕರ್ಮಗಳನ್ನು ನೆರವೇರಿಸಿದ್ದಾರೆ. ಬಾಳೆ ಎಲೆಯ ಮೇಲೆ ಕಾಮಗಾರಿಯ ಲಂಚದ ಸಂಕೇತವಾಗಿ ಹಣದ ನೋಟುಗಳು, ಜತೆಗೆ, ಮೊಟ್ಟೆ, ಮಾಂಸ, ಮದ್ಯವನ್ನು ಎಡೆಯ ರೂಪದಲ್ಲಿ ಇಡುವ ಮೂಲಕ ಕಾಮಗಾರಿಯನ್ನು ಲೇವಡಿ ಮಾಡಿದ್ಧಾರೆ.

“ಎಡೆ ಇಡುವ ಸಮಯದಲ್ಲಿ ರೈತರು ಬಾಯಿ ಬಡಿದುಕೊಳ್ಳುತ್ತಾ, ಹೊಗಳಿಕೆಯ ವಿಡಂಬನೆಯ ಮೂಲಕ ಭ್ರಷ್ಟ ವ್ಯವಸ್ಥೆಗೆ ಶಾಂತಿಯುತವಾಗಿ ಅರ್ಥೈಸುವ ಕೆಲಸ ಮಾಡಿದ್ದೇವೆ. ಈಗಲೂ ಕಾಲ ಮಿಂಚಿಲ್ಲ. ಕುಡಿಯುವ ನೀರಿನ ವಿಚಾರದಲ್ಲಿ ಸರಕಾರ ಹುಡುಗಾಟಿಕೆ ತೋರಿಸಬಾರದು,’’ ಎಂದು ರೈತ ನಾಯಕರು ಈ ಸಮಯದಲ್ಲಿ ಹಿತವಚನವನ್ನು ನೀಡಿದ್ದಾರೆ.

“ಸಾಂಕೇತಿಕವಾಗಿ ತಿಥಿ ನೆರವೇರಿಸುವ ಮೂಲಕ ಜನ ವಿರೋಧಿ ಸರಕಾರದ ಸಾವಿನ ಸೂತಕವನ್ನೂ ಕಳೆದುಕೊಂಡಿದ್ದೇವೆ. ನಾಳೆಯಿಂದ ಹೋರಾಟ ಹೊಸ ಹಾದಿಯಲ್ಲಿ ಕ್ರಮಿಸಲಿದೆ. ಅಂತಿಮವಾಗಿ ತಾಲೂಕಿನ ಪ್ರತಿಮನೆಗೂ ವೈಜ್ಞಾನಿಕವಾಗಿ ಕುಡಿಯುವ ನೀರು ತಲುಪುವವರೆಗೂ ಹೋರಾಟ ನಿಲ್ಲುವುದಿಲ್ಲ,’’ ಎಂದು ಇದೇ ಸಮಯದಲ್ಲಿ ಸಮಿತಿ ಹಾಗೂ ರೈತ ಸಂಘದ ತಾಲೂಕು ಘಟಕ ತಿಳಿಸಿದೆ.

ಬೆಂಗಳೂರಿನ ‘ರಾಮೇಶ್ವರಂ ಕೆಫೆ ರೀ-ಓಪನ್’ಗೆ ಮುಹೂರ್ತ ಫಿಕ್ಸ್: ನಾಳೆ ‘ಶಿವರಾತ್ರಿ ಹಬ್ಬ’ದಂದೇ ಓಪನ್

‘ರಾಜ್ಯ ಸರ್ಕಾರ’ದಿಂದ ‘11,307 ಪೌರಕಾರ್ಮಿಕ’ರ ‘ಖಾಯಂ’ ಕುರಿತಂತೆ ಮಹತ್ವದ ಆದೇಶ

Share. Facebook Twitter LinkedIn WhatsApp Email

Related Posts

BREAKING : ಮಂಗಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಭೇಧಿಸಿದ ಪೊಲೀಸರು : 5.20 ಲಕ್ಷ ಮೌಲ್ಯದ ಡ್ರಗ್ಸ್ ವಶ, ಐವರು ಅರೆಸ್ಟ್!

04/07/2025 9:56 AM1 Min Read

GOOD NEWS : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

04/07/2025 9:41 AM2 Mins Read

SHOCKING : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ : ಸಾಲ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ಭೂಪ!

04/07/2025 9:30 AM1 Min Read
Recent News

ಭಾರತ ಶೀಘ್ರದಲ್ಲೇ ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಪ್ರಧಾನಿ ಮೋದಿ

04/07/2025 9:59 AM

BREAKING : ಮಂಗಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಭೇಧಿಸಿದ ಪೊಲೀಸರು : 5.20 ಲಕ್ಷ ಮೌಲ್ಯದ ಡ್ರಗ್ಸ್ ವಶ, ಐವರು ಅರೆಸ್ಟ್!

04/07/2025 9:56 AM
Amarnath Yatra

ಅಮರನಾಥ ಯಾತ್ರೆ: ಮೊದಲ ದಿನ 12,000ಕ್ಕೂ ಹೆಚ್ಚು ಮಂದಿ ದರ್ಶನ | Amarnath Yatra

04/07/2025 9:49 AM

GOOD NEWS : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

04/07/2025 9:41 AM
State News
KARNATAKA

BREAKING : ಮಂಗಳೂರಲ್ಲಿ ಬೃಹತ್ ಡ್ರಗ್ಸ್ ಜಾಲ ಭೇಧಿಸಿದ ಪೊಲೀಸರು : 5.20 ಲಕ್ಷ ಮೌಲ್ಯದ ಡ್ರಗ್ಸ್ ವಶ, ಐವರು ಅರೆಸ್ಟ್!

By kannadanewsnow0504/07/2025 9:56 AM KARNATAKA 1 Min Read

ಮಂಗಳೂರು : ಮಂಗಳೂರಿನಲ್ಲಿ ಬೃಹತ್ ಡ್ರಗ್ಸ್ ಮಾರಾಟದ ಜಾಲವನ್ನು ಪೊಲೀಸರು ಇದೀಗ ಭೇದಿಸಿದ್ದಾರೆ. ತಮ್ಮ ಮಕ್ಕಳ ಡ್ರಗ್ಸ್ ಅಡಿಕ್ಟ್ ಬಗ್ಗೆ…

GOOD NEWS : ನಿಮ್ಮ ಬಳಿ `ರೇಷನ್ ಕಾರ್ಡ್’ ಇದ್ರೆ `ಉಚಿತ ಹೊಲಿಗೆ ಯಂತ್ರ’ ಸೇರಿ ಸಿಗಲಿವೆ ಈ 8 ಸೌಲಭ್ಯಗಳು.!

04/07/2025 9:41 AM

SHOCKING : ಬೆಂಗಳೂರಿನಲ್ಲಿ ಆಘಾತಕಾರಿ ಘಟನೆ : ಸಾಲ ವಾಪಸ್ ಕೇಳಿದ್ದಕ್ಕೆ ಪೆಟ್ರೋಲ್ ಸುರಿದು ಮನೆಗೆ ಬೆಂಕಿ ಹಚ್ಚಿದ ಭೂಪ!

04/07/2025 9:30 AM

BREAKING : ಶಾಲಿನಿ ರಜನೀಶ್ ವಿರುದ್ಧ ಅಸಭ್ಯ ಹೇಳಿಕೆ : ಬಿಜೆಪಿ MLC ರವಿಕುಮಾರ್ ವಿರುದ್ಧ `FIR’ ದಾಖಲು

04/07/2025 9:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.