Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Facebook Twitter Instagram
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    • STATE
    • KARNATAKA
    • INDIA
    • WORLD
    • SPORTS
      • CRICKET
      • OTHER SPORTS
    • FILM
      • SANDALWOOD
      • BOLLYWOOD
      • OTHER FILM
    • LIFE STYLE
      • BEAUTY TIPS
    • BUSINESS
    • JOBS
    • CORONA VIRUS
    • AUTOMOBILE
      • BIKE-REVIEWS
      • CAR-REVIEWS
    Kannada News / Top Stories – ಮುಖ್ಯ ವಾರ್ತೆಗಳು, Kannada News, Kannada Breaking News, ಕನ್ನಡ, ಕನ್ನಡ ಸುದ್ದಿ, ಕರ್ನಾಟಕ ವಾರ್ತೆ, ಕನ್ನಡ ವಾರ್ತೆ, Kannada Live News, Karnataka News, ಕನ್ನಡ ಸುದ್ದಿ, Latest News in Kannada, Live news Kannada | Kannada News Now
    Home » ಶಿವಮೊಗ್ಗ: ಜಿಲ್ಲೆಯಲ್ಲಿ ಹರ್ ಘರ್ ತಿರಂಗ್ ಅಭಿಯಾನ ಯಶಸ್ವಿಗೆ ಸಿದ್ಧತೆ- ಜಿಲ್ಲಾಧಿಕಾರಿ ಆರ್.ಸೆಲ್ವಮಣಿ
    KARNATAKA

    ಶಿವಮೊಗ್ಗ: ಜಿಲ್ಲೆಯಲ್ಲಿ ಹರ್ ಘರ್ ತಿರಂಗ್ ಅಭಿಯಾನ ಯಶಸ್ವಿಗೆ ಸಿದ್ಧತೆ- ಜಿಲ್ಲಾಧಿಕಾರಿ ಆರ್.ಸೆಲ್ವಮಣಿ

    By Kannada NewsAugust 06, 4:15 pm

    ಶಿವಮೊಗ್ಗ : ಹರ್ ಘರ್ ತಿರಂಗ್ ಅಭಿಯಾನದ ಅಡಿಯಲ್ಲಿ ಆಗಸ್ಟ್ 13ರಿಂದ 15ರವರೆಗೆ ಜಿಲ್ಲೆಯ ಎಲ್ಲಾ ಮನೆ, ಸರ್ಕಾರಿ ಹಾಗೂ ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಹಾರಿಸಲು ಸಿದ್ಧತೆ ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ತಿಳಿಸಿದರು.

    ಅವರು ಶನಿವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಹರ್ ಘರ್ ತಿರಂಗ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲು ಕೈಗೊಂಡಿರುವ ಕ್ರಮಗಳ ಮಾಹಿತಿ ನೀಡಿದರು.

    ದೇಶದ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ದೇಶದ ಪ್ರತಿ ಮನೆ ಮನೆಯಲ್ಲೂ ಆಗಸ್ಟ್ 13ರಿಂದ 15ರವರೆಗೆ ರಾಷ್ಟ್ರಧ್ವಜವನ್ನು ಹಾರಿಸಿ, ರಾಷ್ಟ್ರಪ್ರೇಮವನ್ನು ಅಭಿವ್ಯಕ್ತಗೊಳಿಸಲು ಕೇಂದ್ರ ಸರ್ಕಾರ `ಹರ್ ಘರ್ ತಿರಂಗಾ’ ಘೋಷವಾಕ್ಯದಡಿ ಅಭಿಯಾನಕ್ಕೆ ಕರೆ ನೀಡಿದೆ. ಇದರಂತೆ ಜಿಲ್ಲೆಯ ಪ್ರತಿ ಮನೆಗಳ, ಸರ್ಕಾರಿ ಕಚೇರಿ ಕಟ್ಟಡಗಳು, ಸರ್ಕಾರೇತರ ಸಂಘ ಸಂಸ್ಥೆಗಳ ಕಟ್ಟಡಗಳ ಮೇಲೆ ತ್ರಿವರ್ಣ ಧ್ವಜವನ್ನು ಹಾರಿಸಲು ಎಲ್ಲಾ ಸಿದ್ಧತೆಗಳನ್ನು ಮಾಡಲಾಗಿದೆ. ರಾಷ್ಟ್ರಪ್ರೇಮದ ಪ್ರದರ್ಶನದ ಸಂಕೇತವಾದ ಈ ಅಭಿಯಾನವನ್ನು ಯಶಸ್ವಿಯಾಗಿ ಆಯೋಜಿಸಲು ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದರು.

    ಸಿಎಂ ಬಸವರಾಜ ಬೊಮ್ಮಾಯಿ ಅವರ ಆರೋಗ್ಯ ವಿಚಾರಿಸಿದ ಬಿ.ಎಸ್.ಯಡಿಯೂರಪ್ಪ

    ಜಿಲ್ಲೆಯಲ್ಲಿ ಅಭಿಯಾನವನ್ನು ಯಶಸ್ವಿಯಾಗಿ ನೆರವೇರಿಸಲು ಇಬ್ಬರು ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ನಗರ ಸ್ಥಳೀಯ ಸಂಸ್ಥೆ ವ್ಯಾಪ್ತಿಯಲ್ಲಿ ಹಾಗೂ ಗ್ರಾಮ ಪಂಚಾಯತ್ ಮಟ್ಟದಲ್ಲಿ ವ್ಯವಸ್ಥಿತವಾಗಿ ಪ್ರತಿಯೊಂದು ಮನೆಯಲ್ಲೂ ತ್ರಿವರ್ಣ ಧ್ವಜವನ್ನು ಹಾರಿಸಲು ಪ್ರೇರಣೆ ನೀಡುವ ಕಾರ್ಯ ಮಾಡಲಾಗಿದೆ.

    ಜಿಲ್ಲೆಯ ಪ್ರತಿಯೊಂದು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿರುವ ಮನೆಗಳ ಮೇಲೆ ತ್ರಿವರ್ಣ ಧ್ಜಜವನ್ನು ಹಾರಿಸಲು ಸಿದ್ಧತೆಗಳನ್ನು ಮಾಡಲಾಗಿದೆ. ಎನ್‍ಆರ್‍ಎಲ್‍ಎಂ ಯೋಜನೆಯಡಿ ಸ್ವಸಹಾಯ ಸಂಘಗಳ ಸದಸ್ಯರು ಸ್ಥಳೀಯವಾಗಿ ಈ ಧ್ವಜಗಳನ್ನು ಸಿದ್ಧಪಡಿಸಿರುವುದು ವಿಶೇಷವಾಗಿದೆ. ಗ್ರಾಮ ಪಂಚಾಯತ್‍ಗಳಿಗೆ ಪೂರೈಕೆ ಮಾಡಲು ಶಿವಮೊಗ್ಗ ತಾಲೂಕಿನಲ್ಲಿ 16,700, ಭದ್ರಾವತಿ ತಾಲೂಕು 17500, ತೀರ್ಥಹಳ್ಳಿ 15000, ಹೊಸನಗರ 15ಸಾವಿರ, ಸಾಗರ 12ಸಾವಿರ, ಸೊರಬ 14ಸಾವಿರ ಮತ್ತು ಶಿಕಾರಿಪುರ ತಾಲೂಕಿನಲ್ಲಿ 19ಸಾವಿರ ಒಟ್ಟು 1,09,200 ಧ್ವಜಗಳನ್ನು ಸಿದ್ಧಪಡಿಸಲಾಗಿದೆ.

    ಇದಲ್ಲದೆ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ವತಿಯಿಂದ ನಗರ ಸ್ಥಳೀಯ ಸಂಸ್ಥೆಗಳಿಗೆ ಒಟ್ಟು 80ಸಾವಿರ ತ್ರಿವರ್ಣ ಧ್ವಜಗಳನ್ನು ಪೂರೈಕೆ ಮಾಡಲಾಗಿದೆ. ಅಭಿಯಾನದ ಯಶಸ್ವಿಗೆ ಜಿಲ್ಲೆಯ ಎಲ್ಲಾ 11 ನಗರ ಸ್ಥಳೀಯ ಸಂಸ್ಥೆಗಳು ಸಭೆಗಳನ್ನು ನಡೆಸಿ ಪೂರ್ವ ಸಿದ್ಧತೆಯನ್ನು ಮಾಡಿಕೊಂಡಿವೆ. ಜನಪ್ರತಿನಿಧಿಗಳು, ಸ್ವ ಸಹಾಯ ಸಂಘಗಳು, ವಿವಿಧ ಸಂಘ ಸಂಸ್ಥೆಗಳು ಸಹ ಈ ಕಾರ್ಯದಲ್ಲಿ ಕೈಜೋಡಿಸಿವೆ. ತ್ರಿವರ್ಣ ಧ್ವಜಕ್ಕೆ ತಲಾ 22ರೂಪಾಯಿ ದರ ನಿಗದಿಪಡಿಸಲಾಗಿದೆ. ಸಾರ್ವಜನಿಕರು ಸ್ಥಳೀಯ ಸಂಸ್ಥೆಗಳಿಂದ ಧ್ವಜವನ್ನು ಖರೀದಿಸಿ ಸ್ವಯಂ ಪ್ರೇರಣೆಯಿಂದ ತಮ್ಮ ಮನೆಗಳ ಮೇಲೆ ಪ್ರದರ್ಶಿಸಲು ಕೋರಲಾಗಿದೆ.

    ಸಾರ್ವಜನಿಕರು ತ್ರಿವರ್ಣ ಧ್ವಜದ ಶಿಷ್ಟಾಚಾರಕ್ಕೆ ಚ್ಯುತಿ ಬಾರದಂತೆ ಎಚ್ಚರಿಕೆ ವಹಿಸಬೇಕು. ಸಾರ್ವಜನಿಕರು ಆಗಸ್ಟ್ 13ರಂದು ಹಾರಿಸಿದ ಬಾವುಟವನ್ನು ಪ್ರತಿದಿನ ಇಳಿಸುವ ಅಗತ್ಯವಿಲ್ಲ. ಹಾನಿಗೀಡಾದ ಧ್ವಜವನ್ನು ಮಾರಾಟ ಮಾಡಬಾರದು ಎಂದು ಅವರು ಸೂಚನೆ ನೀಡಿದರು.

    ಅಪರ ಜಿಲ್ಲಾಧಿಕಾರಿ ಡಾ.ನಾಗೇಂದ್ರ ಹೊನ್ನಳ್ಳಿ, ಯೋಜನಾ ನಿರ್ದೇಶಕ ಕರಿಭೀಮಣ್ಣ ಮೂಕಪ್ಪನವರ್, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಉಮೇಶ್ ಉಪಸ್ಥಿತರಿದ್ದರು.



    breaking news kannada latest news kannada news kannada news live kannada news now kannada online news kannadanews kannadanewsnow dot com kannadanewsnow.com kannadanewsnowdotcom karnataka latest news karnataka news latest news
    best web service company
    Share. Facebook Twitter LinkedIn WhatsApp Email

    Related Posts

    BIGG NEWS : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸಿದ್ದರಾಮಯ್ಯ ಪ್ರವಾಸ : ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ, ಬಿಗಿ ಭದ್ರತೆ

    August 19, 10:17 am
    BIG BREAKING NEWS: Two AK-47 rifles stolen from ITBT camp in Belagavi, raised concerns

    BIG BREAKING NEWS: ಬೆಳಗಾವಿಯ ಐಟಿಬಿಟಿ ಕ್ಯಾಂಪಿನಿಂದ ಎರಡು AK 47 ರೈಫಲ್​ ಕಳ್ಳತನ, ಹೆಚ್ಚಿದ ಆತಂಕ

    August 19, 10:06 am

    ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (14-08-2022)

    August 19, 9:56 am
    Recent News

    Video: ವಿಮಾನದೊಳಗೆ ಧಮ್‌ ಹೊಡೆದಾಯ್ತು, ಈಗ ನಡು ರಸ್ತೆಯಲ್ಲೇ ಲಿಕ್ಕರ್ ಸೇವನೆ: Social Media Influencer ʻಬಾಬಿ ಕಟಾರಿಯಾʼ ವಿರುದ್ಧ FIR ದಾಖಲು!

    August 19, 10:22 am

    BIGG BREAKING NEWS: ದೇಶದಲ್ಲಿ ಮತ್ತೆ ಏರಿಕೆ ಕಂಡ ಕೊರೊನಾ; ಕಳೆದ 24 ಗಂಟೆಗಳಲ್ಲಿ 15,754 ಹೊಸ ಪ್ರಕರಣ ಪತ್ತೆ| COVID CASE

    August 19, 10:22 am

    BIGG NEWS : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸಿದ್ದರಾಮಯ್ಯ ಪ್ರವಾಸ : ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ, ಬಿಗಿ ಭದ್ರತೆ

    August 19, 10:17 am
    BIG BREAKING NEWS: Two AK-47 rifles stolen from ITBT camp in Belagavi, raised concerns

    BIG BREAKING NEWS: ಬೆಳಗಾವಿಯ ಐಟಿಬಿಟಿ ಕ್ಯಾಂಪಿನಿಂದ ಎರಡು AK 47 ರೈಫಲ್​ ಕಳ್ಳತನ, ಹೆಚ್ಚಿದ ಆತಂಕ

    August 19, 10:06 am
    State News
    KARNATAKA

    BIGG NEWS : ಚಿಕ್ಕಮಗಳೂರು ಜಿಲ್ಲೆಯಾದ್ಯಂತ ಸಿದ್ದರಾಮಯ್ಯ ಪ್ರವಾಸ : ನೆರೆ ಪೀಡಿತ ಪ್ರದೇಶಗಳ ವೀಕ್ಷಣೆ, ಬಿಗಿ ಭದ್ರತೆ

    By kannadanewsnowAugust 19, 10:17 am0

    ಚಿಕ್ಕಮಗಳೂರು :  ಮಾಜಿ ಸಿಎಂ ಸಿದ್ದರಾಮಯ್ಯ ಇಂದು ಚಿಕ್ಕಮಗಳೂರು  ಜಿಲ್ಲೆಯಾದ್ಯಂತ ಪ್ರವಾಸ  ನಡೆಸಲಿದ್ದಾರೆ. ಶೃಂಗೇರಿ, ಮೂಡಿಗೆರೆ ಕ್ಷೇತ್ರಗಳಲ್ಲಿ ಓಡಾಟ ನಡೆಲಿದ್ದಾರೆ.…


    BIG BREAKING NEWS: Two AK-47 rifles stolen from ITBT camp in Belagavi, raised concerns

    BIG BREAKING NEWS: ಬೆಳಗಾವಿಯ ಐಟಿಬಿಟಿ ಕ್ಯಾಂಪಿನಿಂದ ಎರಡು AK 47 ರೈಫಲ್​ ಕಳ್ಳತನ, ಹೆಚ್ಚಿದ ಆತಂಕ

    August 19, 10:06 am

    ಇಂದಿನ ದಿನ ಭವಿಷ್ಯ ಹಾಗೂ ರಾಶಿಫಲ (14-08-2022)

    August 19, 9:56 am

    BIGG NEWS: ಶಿವಮೊಗ್ಗದಲ್ಲಿ ಬಿಗುವಿನ ವಾತಾವರಣ; ನಾಳೆ ಬೆಳಗ್ಗೆ 6ರವರೆಗೂ ನಿಷೇದಾಜ್ಞೆ ಮುಂದುವರಿಕೆ

    August 19, 9:52 am

    kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

    Quick Links
    • State
    • Karnataka
    • India
    • World
    • Sports
    • Film
    • Lifestyle
    • Business
    • Jobs
    • Corona Virus
    • Automobile
    contact us

    kannadanewsnow@gmail.com

    FOLLOW US

    breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

    • Home
    • Lifestyle
    • Buy Now
    Copyright © 2022 | All Right Reserved | kannadanewsnow.com
    Digital Partner Blueline Computers

    Type above and press Enter to search. Press Esc to cancel.