ಶಿವಮೊಗ್ಗ: ಲೋಕಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದು ಇಂದು ಎಫ್‍ಎಸ್‍ಟಿ -2 ಬಿ ತಂಡದವರು ಶಿರಾಳಕೊಪ್ಪ-ಚಿತ್ರದಹಳ್ಳಿ ರಸ್ತೆ ಮಧ್ಯೆ ವಾಹನ ತಪಾಸಣೆ ಮಾಡುವ ವೇಳೆ ಸೊರಬ ವಾಸಿ ಮುನ್ನೀರ್ ಎಂಬವವರು ದಾಖಲೆ ಇಲ್ಲದೆ ವಾಹನದಲ್ಲಿ ರೂ.1,50,000 ಗಳನ್ನು ಸಾಗಿಸುತ್ತಿದ್ದು, ಅದನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ಅಕ್ರಮ ಮದ್ಯ ವಶ

ಲೋಕಸಭಾ ಚುನಾವಣೆ ಹಿನ್ನೆಲೆ ವಿವಿಧ ಚೆಕ್‍ಪೋಸ್ಟ್‍ಗಳಲ್ಲಿ ಅಕ್ರಮ ಮದ್ಯ ಸಾಗಾಣಿಕೆ ಮತ್ತು ಮಾರಾಟವನ್ನು ಪರಿಶೀಲಿಸಲಾಗುತ್ತಿದ್ದು ಮಾ.27 ರಂದು ಪೊಲೀಸ್ ಇಲಾಖೆ ವತಿಯಿಂದ ರೂ.1336.38 ಮೊತ್ತದ 3.81 ಲೀ., ಅಬಕಾರಿ ಇಲಾಖೆಯಿಂದ ರೂ.9487 ಮೊತ್ತದ 21.14 ಲೀ ಒಟ್ಟು ರೂ. 10823.68 ಮೌಲ್ಯದ 24.95 ಲೀ ಅಕ್ರಮ ಮದ್ಯವನ್ನು ವಶಪಡಿಸಿಕೊಂಡು ಪ್ರಕರಣ ದಾಖಲಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.

ದಾಖಲೆ ಇಲ್ಲದ ಹಣ ವಶ-ಅನುಮತಿ ಪಡೆಯದೆ ಊಟ ವ್ಯವಸ್ಥೆ : ಪ್ರಕರಣ ದಾಖಲು

ಲೋಕಸಭಾ ಚುನಾವಣೆ ಹಿನ್ನೆಲೆ ಮತಕ್ಷೇತ್ರವಾರು ಚೆಕ್‍ಪೋಸ್ಟ್‍ಗಳನ್ನು ಸ್ಥಾಪಿಸಿದ್ದು, ಮಾ.27 ರಂದು ಶಿಕಾರಿಪುರ-115 ಮತ ಕ್ಷೇತ್ರ ವ್ಯಾಪ್ತಿಯ ಕವಾಸ್‍ಪುರ ಚೆಕ್‍ಪೋಸ್ಟ್‍ನಲ್ಲಿ ಹನುಮಂತಪ್ಪ ಎಂಬುವವರು ದಾಖಲೆ ಇಲ್ಲದೆ ಹೊಂದಿದ್ದ ರೂ.73,736 ಗಳನ್ನು ಎಸ್‍ಎಸ್‍ಟಿ ತಂಡ ವಶಪಡಿಸಿಕೊಂಡಿದೆ.

ಭದ್ರಾವತಿ-112 ಮತಕ್ಷೇತ್ರ ವ್ಯಾಪ್ತಿಯ ಹಳ್ಳಿಕೆರೆ ಚೆಕ್‍ಪೋಸ್ಟ್‍ನಲ್ಲಿ ರಾಮು ಮತ್ತು ಕೆ.ತೀರ್ಥಕುಮಾರ್ ಎಂಬುವವರು ಹೊಂದಿದ್ದ ರೂ.1,25,000 ಗಳನ್ನು ವಶಕ್ಕೆ ಪಡೆದು ಮುಂದಿನ ಕ್ರಮಕ್ಕಾಗಿ ಸಲ್ಲಿಸಲಾಗಿದೆ.

ಹಾಗೂ ಸಾಗರ-117 ವ್ಯಾಪ್ತಿಯಲ್ಲಿ ಸಕ್ಷಮ ಪ್ರಾಧಿಕಾರದಿಂದ ಅನುಮತಿ ಪಡೆಯದೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರಿಗೆ ಊಟವನ್ನು ಸರಬರಾಜು ಮಾಡುವ ಮೂಲಕ ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಪಕ್ಷದ ವಿರುದ್ದ ಪ್ರಕರಣ ದಾಖಲಿಸಲಾಗಿದೆ.

ಭಾರತದ ಹೊಸ ಫೈಟರ್ ಜೆಟ್ ‘ತೇಜಸ್ MK-1A’ ಮೊದಲ ಹಾರಾಟ ಯಶಸ್ವಿ : ಹಿಂದಿನ ವಿಮಾನಕ್ಕಿಂತ ಹೆಚ್ಚು ಸುಧಾರಿತ, ಮಾರಕ

ಕರ್ನಾಟಕವು ಅತ್ಯಂತ ದುರ್ದೈವದ ಪರಿಸ್ಥಿತಿಯಲ್ಲಿದೆ- ಬಿಜೆಪಿ ರಾಜ್ಯ ಉಪಾಧ್ಯಕ್ಷೆ ಮಾಳವಿಕ ಅವಿನಾಶ್

Share.
Exit mobile version