ಶಿವಮೊಗ್ಗ: ನಗರಲ್ಲಿ ಶಂಕಿತ ಉಗ್ರರನ್ನು ಬಂಧಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಾಂಬ್ ತಯಾರಿಗೆ ಬೇಕಿರುವ ಕಚ್ಚಾ ಸಾಮಗ್ರಿಗಳೂ ಸೇರಿದಂತೆ ಕೆಲ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎಸ್ಪಿ ಲಕ್ಷ್ಮೀ ಪ್ರಸಾದ್ ಹೇಳಿದ್ದಾರೆ.

BIGG NEWS: ಕಲಬುರಗಿಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತರ ಬಲೆಗೆ

ನಗರದಲ್ಲಿ ಸುದ್ದಿಗೋಷ್ಠಿ ನಡೆಸಿದ ಅವರು, ಇತ್ತೀಚೆಗೆ ಶಂಕಿತ ಉಗ್ರರನ್ನು ಬಂಧಿಸಲಾಗಿದೆ. ಪ್ರೇಮ್​ಸಿಂಗ್ ಹತ್ಯೆ ಪ್ರಕರಣದಲ್ಲಿ ಜಬೀ ಬಂಧನವಾಗಿತ್ತು. ಜಬೀ ವಿಚಾರಣೆ ಮಾಡಿದಾಗ ಶಾರಿಕ್ ವಿಚಾರ ಬೆಳಕಿಗೆ ಬಂತು. ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಇಬ್ಬರನ್ನು ಬಂಧಿಸಲಾಗಿದೆ. ಈವರೆಗೆ 11 ಸ್ಥಳಗಳಲ್ಲಿ ದಾಳಿ ಮಾಡಿ ಹಲವು ವಸ್ತುಗಳನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ. ಬಂಧಿತರಿಂದ 14 ಮೊಬೈಲ್‌ ಮತ್ತು 1 ಡಾಂಗಲ್ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

BIGG NEWS: ಕಲಬುರಗಿಯಲ್ಲಿ ಮರಳು‌ ಸಾಗಣೆಗೆ ಲಂಚ ಪಡೆಯುತ್ತಿದ್ದ ಮೂವರು ಲೋಕಾಯುಕ್ತರ ಬಲೆಗೆ

ಬಂಧಿತರಿಂದ ಎರಡು ಲ್ಯಾಪ್‌ಟಾಪ್‌, ಒಂದು ಪೆನ್‌ಡ್ರೈವ್ ಹಾಗೂ ಇತರ ಎಲೆಕ್ಟ್ರಾನಿಕ್ ವಸ್ತುಗಳನ್ನು ಜಪ್ತಿ ಮಾಡಲಾಗಿದೆ. ಸ್ಫೋಟದ ಸ್ಥಳದಲ್ಲಿ ಬಾಂಬ್‌ನ ಅವಶೇಷಗಳು ಪತ್ತೆಯಾಗಿವೆ. ಆಗಸ್ಟ್​​ ತಿಂಗಳಲ್ಲಿ ರಾಷ್ಟ್ರಧ್ವಜ ಸುಟ್ಟಿರುವ ಮಾಹಿತಿಯೂ ಲಭ್ಯವಾಗಿದೆ. ಬಂಧಿತರಿಂದ ಬಾಂಬ್ ತಯಾರಿಸಲು ಬೇಕಾದ ಸಾಮಗ್ರಿಗಳನ್ನೂ ವಶಪಡಿಸಿಕೊಂಡಿದ್ದೇವೆ ಎಂದು ತಿಳಿಸಿದರು.

Share.
Exit mobile version