ಶಿವಮೊಗ್ಗ : ಜಿಲ್ಲೆಯ ಸಾಗರ ತಾಲೂಕಿನ ಪ್ರಸಿದ್ಧ ಜೋಗ ಪ್ರವಾಸಕ್ಕೆ ಬಂದಿದ್ದ ಮಹಿಳೆಯೊಬ್ಬರು ಜೋಗ್ ಜಲಪಾತದ ಹಿನ್ನೀರಿನಲ್ಲಿ ಕಾಲು ಜಾರಿ ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ.
ಶಿವಮೊಗ್ಗ ಜಿಲ್ಲೆಯ ಸಾಗರ ತಾಲೂಕಿನ ಜೋಗದ ಜಂಗಲ್ ರೆಸಾರ್ಟ್ ಹಿನ್ನಿರಿನ ಬಳಿ ಕಾಲು ಜಾರಿ ಬಿದ್ದು, ಇಂದು ಸಾವನ್ನಪ್ಪಿದ್ದಾರೆ. ಬೆಂಗಳೂರು ಮೂಲದ ನಿಶಾ(24) ಮೃತ ದುರ್ಧೈವಿಯಾಗಿದ್ದಾರೆ.
BREAKING NEWS: ಚಂದ್ರಶೇಖರ್ ಗುರೂಜಿ ಕೊಲೆ ಪ್ರಕರಣ: ಆಪ್ತ ಮಹಾಂತೇಶ್, ಮಂಜುನಾಥ್ ಅರೆಸ್ಟ್
ಕಳೆದ ಒಂದು ವರ್ಷದ ಹಿಂದೆಯಷ್ಟೇ ನಾಗೇಶ್ ಎಂಬುವವರ ಜೊತೆ ವಿವಾಹವಾಗಿದ್ದ ನಿಶಾ, ಪತಿ ನಾಗೇಶ್ ಅವರೊಂದಿಗೆ ಜೋಗ ಜಲಪಾತ ವೀಕ್ಷಿಸಲು ಬಂದಿದ್ದರು.
ಜೋಗದ ಜಂಗಲ್ ರೆಸಾರ್ಟ್ ಸಮೀಪದ ಹಿನ್ನೀರಿನ ಬಳಿ ನಿಶಾ ಕಾಲು ಜಾರಿ ಬಿದ್ದಿದ್ದು, ತಕ್ಷಣವೇ ಸ್ಥಳೀಯರ ಸಹಾಯದಿಂದ ನಾಗೇಶ್ ಪತ್ನಿಯನ್ನು ಆಸ್ಪತ್ರೆಗೆ ದಾಖಲಿಸಿದ್ದಾರೆ. ದುರಾದೃಷ್ಟವಶಾತ್ ನಿಶಾ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ.
ನಿಶಾ ಸಾವಿನ ಬಗ್ಗೆ ಕುಟುಂಬಸ್ಥರು ಅನುಮಾನ ವ್ಯಕ್ತಪಡಿಸಿದ್ದು, ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ಮುಂದುವರಿದಿದೆ.
ವರದಿ : ಉಮೇಶ್ ಮೊಗವೀರ, ಸಾಗರ
ಮೈಸೂರಿನಲ್ಲಿ ಶಾಸಕ ಜಮೀರ್ ಅಹ್ಮದ್ ನಿವಾಸದ ಮೇಲೆ ಎಸಿಬಿ ದಾಳಿ ಖಂಡಿಸಿ, ಕಾಂಗ್ರೆಸ್ ಕಾರ್ಯಕರ್ತರ ಪ್ರತಿಭಟನೆ